Homeಕರೋನಾ ತಲ್ಲಣಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

"ಜನರು ಏನನ್ನಾದರೂ ಒಳ್ಳೆಯದನ್ನು ನಿರೀಕ್ಷಿಸುತ್ತಿರಬಹುದು. ನಮ್ಮ ಭಾರತದಲ್ಲಿ ಜನರು ಸಾಕಷ್ಟು ಭರವಸೆ ಹೊಂದಿದ್ದಾರೆ. ಜನ ಕೆಲವೊಮ್ಮೆ ಎಂಥವರಿಗೂ ಎರಡನೇ, ಮೂರನೆಯ ಅವಕಾಶವನ್ನು ನೀಡುತ್ತಾರೆ.’

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಹಿನ್ನೆಲೆ ಹಠಾತ್ತನೆ ಘೋಷಿಸಲಾದ ರಾಷ್ಟ್ರವಾಪಿ ಲಾಕ್‌ಡೌನ್‌ನಿಂದ ತೀವ್ರ ತೊಂದರೆಗೆ ಒಳಗಾದವರು ಬಿಹಾರ, ಉತ್ತರಪ್ರದೇಶದ ವಲಸೆ ಕಾರ್ಮಿಕರು. ಆಗ ವಲಸೆ ಕಾರ್ಮಿಕರು, ಜನ ಸಾಮಾನ್ಯರು ಆಢಳಿತರೂಢ ಎನ್‌ಡಿಎ ಸರ್ಕಾರದ ವಿರುದ್ಧ ಹಿಡಿ ಶಾಪ ಹಾಕಿದ್ದರು. ಆ ಸಮಯದಲ್ಲಿ ಇವರ ಸಹಾಯಕ್ಕೆ ನಿಂತು ತಮ್ಮ ತಮ್ಮ ಸ್ವಂತ ಸ್ಥಳಗಳಿಗೆ ಮರಳಲು ಸಹಾಯ ಮಾಡಿ ನಿಜ ಹೀರೋ ಎನಿಸಿಕೊಂಡಿದ್ದು ನಟ ಸೋನು ಸೂದ್. ಅವರೀಗ ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ್ದಾರೆ.

ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ನಟ ಸೋನು ಸೂದ್ ವಿವರಿಸಿದ್ದು ಹೀಗೆ, “ಬಿಹಾರದ ಜನರು ಸರ್ಕಾರ ಲಾಕ್‌ಡೌನ್ ಸಮಯದಲ್ಲಿ ಅವರಿಗೆ ಏನು ಮಾಡಿತೋ ಅದರಲ್ಲೂ ಏನೋ ಒಳ್ಳೆಯದನ್ನೇ ನೋಡಿರಬೇಕು” ಎಂದು ಹೇಳಿದ್ದಾರೆ.

“ಜನರು ಏನನ್ನಾದರೂ ಒಳ್ಳೆಯದನ್ನು ನಿರೀಕ್ಷಿಸುತ್ತಿರಬಹುದು. ನಮ್ಮ ಭಾರತದಲ್ಲಿ ಜನರು ಸಾಕಷ್ಟು ಭರವಸೆ ಹೊಂದಿದ್ದಾರೆ. ಜನ ಕೆಲವೊಮ್ಮೆ ಎಂಥವರಿಗೂ ಎರಡನೇ, ಮೂರನೆಯ ಅವಕಾಶವನ್ನು ನೀಡುತ್ತಾರೆ. ಜೊತೆಗೆ ತಮ್ಮ ಜೀವನಕ್ಕೆ ಭದ್ರ ಬುನಾದಿ ಬೇಕೆಂದು ಬಯಸುತ್ತಾರೆ” ಎಂದು ಸೂದ್ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ ವಿರುದ್ಧ ಆಕ್ರೋಶ

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) 43 ಸ್ಥಾನಗಳನ್ನು ಗೆದ್ದಿದ್ದರೂ ಸಹ, ಮಿತ್ರಪಕ್ಷ ಬಿಜೆಪಿಯ 74 ಸ್ಥಾನಗಳೊಂದಿಗೆ, ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)  125 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಮರಳಿದೆ.

ಮುಂಬೈ ಮತ್ತು ಮಹಾರಾಷ್ಟ್ರದ ಇತರ ಭಾಗಗಳಿಂದ ಬಸ್ಸುಗಳನ್ನು ಬಾಡಿಗೆಗೆ ಪಡೆಯುವ ಮೂಲಕ ಹೆಚ್ಚಿನ ಸಂಖ್ಯೆಯ ವಲಸಿಗರು ಅದರಲ್ಲೂ ಮುಖ್ಯವಾಗಿ ಬಿಹಾರ ಮತ್ತು ಉತ್ತರ ಪ್ರದೇಶಕದ ಕಾರ್ಮಿಕರು ತಮ್ಮ ಊರಿಗೆ  ಮರಳಲು ಸೋನು ಸೂದ್ ಸಹಾಯ ಮಾಡಿದ್ದರು. “ನಾನು ಬಿಹಾರದ ಬಹಳಷ್ಟು ಜನರೊಂದಿಗೆ ಸಂಪರ್ಕ ಹೊಂದಿದ್ದೇನೆ. ನೀವು ಶಿಕ್ಷಣ ಅಥವಾ ಮೂಲಸೌಕರ್ಯ ಸೌಲಭ್ಯಗಳ ಬಗ್ಗೆ ಮಾತನಾಡಿದರೇ ನಿಜಕ್ಕೂ ಅವರು ತೀರಾ ಕೆಟ್ಟ ಸ್ಥಿತಿಯಲ್ಲಿದ್ದಾರೆ” ಎಂದು ನಟ ಎನ್‌ಡಿಟಿವಿ ಜೊತೆಗೆ ಮಾತನಾಡುತ್ತಾ ತಿಳಿಸುತ್ತಾರೆ.

ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

“ಯಾರು ಗೆದ್ದರು ಎಂಬುದು ಮುಖ್ಯವಲ್ಲ, ಐದು ವರ್ಷಗಳ ನಂತರ ನಾವು ಬೇರೆ ಬಿಹಾರವನ್ನು ಹೊಂದಿರಬೇಕು ಎಂಬುದು ಮುಖ್ಯ ಎಂದು ನಾನು ಭಾವಿಸುತ್ತೇನೆ ಮತ್ತು ನಂಬುತ್ತೇನೆ. ಜನರು ತಾವು ಆಯ್ಕೆ ಮಾಡಿದ  ಸರ್ಕಾರದ ಬಗ್ಗೆ ಅವರು ಹೆಮ್ಮೆ ಪಡಬೇಕು” ಎಂದು ತಿಳಿಸಿದರು.

ಕೊರೊನಾವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ಜನರ ನೆರವಿಗೆ ನಿಂತ ಸೋನು ಸೂದ್ ಪ್ರಯತ್ನಗಳಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅವರ ಮಾನವೀಯ ಪ್ರಯತ್ನಗಳಿಗಾಗಿ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ. ಸಾಂಕ್ರಾಮಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಸಹಾಯದ ಅಗತ್ಯವಿರುವವರಿಗೆ ಸಹಾಯ ಮಾಡಲು ಲಾಕ್‌ಡೌನ್ ಸಮಯದಲ್ಲಿ ಟೋಲ್-ಫ್ರೀ ಸಹಾಯವಾಣಿಯನ್ನು ಸಹ ಪ್ರಾರಂಭಿಸಿದ್ದರು.


ಇದನ್ನೂ ಓದಿ: ಬಿಹಾರ: ‘ವಲಸೆ ಕಾರ್ಮಿಕರು’ ನಿತೀಶ್‌ ಕುಮಾರ್ ವಿರುದ್ಧ ಮತಚಲಾಯಿಸಿದ್ದಾರೆ- ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...