Homeಕರೋನಾ ತಲ್ಲಣಕರ್ನಾಟಕದ ಕೊರೊನಾ ಸಾವುಗಳು: ರಕ್ತದೊತ್ತಡ ಮತ್ತು ಮಧುಮೇಹಿ ರೋಗಿಗಳೆ ಹೆಚ್ಚೆಂದ ವರದಿ!

ಕರ್ನಾಟಕದ ಕೊರೊನಾ ಸಾವುಗಳು: ರಕ್ತದೊತ್ತಡ ಮತ್ತು ಮಧುಮೇಹಿ ರೋಗಿಗಳೆ ಹೆಚ್ಚೆಂದ ವರದಿ!

"ಮಧುಮೇಹವು ಯಾವುದೇ ಸೋಂಕಿಗೂ ಅಪಾಯಕಾರಿ ಅಂಶವಾಗಿದೆ. ಮಧುಮೇಹದಿಂದಾಗಿ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವವರು ಕೊರೊನಾ ವೈರಸ್ ವಿರುದ್ಧ ಸುದೀರ್ಘ ಯುದ್ಧ ಮಾಡಬೇಕಾಗುತ್ತದೆ"

- Advertisement -
- Advertisement -

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕೊರೊನಾ ಕಾರಣದಿಂದ ಮೃತಪಟ್ಟವರಿಗೆ ಅಧಿಕ ರಕ್ತದೊತ್ತಡ ಸಮಸ್ಯೆ ಇತ್ತು ಎಂಬ ಅಂಶ ಬೆಳಕಿಗೆ ಬಂದಿದೆ. ನವೆಂಬರ್ 10 ರವರೆಗೆ ಕರ್ನಾಟಕದಲ್ಲಿ ದಾಖಲಾದ 11,430 ಕೋವಿಡ್ ಸಾವುಗಳಲ್ಲಿ 5,572 ಜನರಿಗೆ ಅಧಿಕ ರಕ್ತದೊತ್ತಡ ಮತ್ತು 4,167 ಜನರಿಗೆ ಮಧುಮೇಹವಿರುವುದು ವರದಿಯಲ್ಲಿ ತಿಳಿದುಬಂದಿದೆ.

ಈ ರೀತಿಯ ಸಾಂಕ್ರಾಮಿಕವಲ್ಲದ ಕಾಯಿಲೆಗಳು ಈಗಾಗಲೇ ಕೊರೊನಾ, ನ್ಯುಮೋನಿಯಾದಂತಹ ಸಾಂಕ್ರಾಮಿಕ ಕಾಯಿಲೆಗಳಿಂದ ಉಂಟಾಗಿರುವ ಭೀತಿಯನ್ನು ಹೆಚ್ಚಿಸುತ್ತಿವೆ ಎಂದು ವೈದ್ಯರು ಹೇಳಿದ್ದಾರೆ. ಮಂಗಳವಾರ, ಮೃತಪಟ್ಟ 20 ಕೊರೊನಾ ರೋಗಿಗಳಲ್ಲಿ 11 ಜನರಿಗೆ ಅಧಿಕ ರಕ್ತದೊತ್ತಡ ಮತ್ತು 10 ಮಂದಿ ಮಧುಮೇಹ ರೋಗಿಗಳಾಗಿದ್ದರು. ಕೊರೊನಾ ಕಾರಣದಿಂದಾಗಿ ನ್ಯುಮೋನಿಯಾ ಮತ್ತೆ ವಿಶ್ವದಾದ್ಯಂತ ಹೆಚ್ಚಾಗುತ್ತಿದೆ ಎಂದು ಟೈಮ್ಸ್‌ ನೌ ವರದಿ ಮಾಡಿದೆ.

“ಮಧುಮೇಹವು ಯಾವುದೇ ಸೋಂಕಿಗೂ ಅಪಾಯಕಾರಿ ಅಂಶವಾಗಿದೆ. ಮಧುಮೇಹದಿಂದಾಗಿ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವವರು ಕೊರೊನಾ ವೈರಸ್ ವಿರುದ್ಧ ಸುದೀರ್ಘ ಯುದ್ಧ ಮಾಡಬೇಕಾಗುತ್ತದೆ” ಎಂದು ರಾಮಯ್ಯ ಆಸ್ಪತ್ರೆಯ ಶ್ವಾಸಕೋಶಶಾಸ್ತ್ರಜ್ಞ ಡಾ.ಪ್ರಸನ್ನ ಕುಮಾರ್ ಟಿ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಮರೆತ ಜನರಿಂದ ದೀಪಾವಳಿ ಶಾಪಿಂಗ್‌ ಫುಲ್ ಜೋರು!

ಮಧುಮೇಹಿಗಳಂತೆ ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು, ಅಧಿಕ ರಕ್ತದೊತ್ತಡ, ದೀರ್ಘಕಾಲದ ಮೂತ್ರಪಿಂಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರು ಕೊರೊನಾ ನ್ಯುಮೋನಿಯಾಕ್ಕೆ ಹೆಚ್ಚು ಒಳಗಾಗುತ್ತಾರೆ. ನ್ಯುಮೋನಿಯಾವನ್ನು ತಡೆಗಟ್ಟಲು ಈ ರೋಗಗಳನ್ನು ನಿಯಂತ್ರಣದಲ್ಲಿಡುವುದು ಅವಶ್ಯಕ ಎಂದು ವಿಕ್ರಮ್ ಆಸ್ಪತ್ರೆಯ ಸಲಹೆಗಾರ ಹೃದಯರೋಗ ತಜ್ಞ ಡಾ.ವಾಸುನೇತ್ರ ಕಾಸರಗೋಡ್ ತಿಳಿಸಿದ್ದಾರೆ.

ಇಂತಹ ರೋಗಿಗಳನ್ನು ಆಸ್ಪತ್ರೆಗಳಿಗೆ ಸೇರಿಸುವಲ್ಲಿ ವಿಳಂಬ ಮಾಡುವುದು ಅಪಾಯವನ್ನು ಹೆಚ್ಚಿಸುತ್ತದೆ. ಆದರೆ ಸರಿಯಾದ ಚಿಕಿತ್ಸೆ ಪಡೆದರೆ ಗುಣವಾಗುತ್ತಾರೆ. “91 ವರ್ಷ ವಯಸ್ಸಿನ ಮಧುಮೇಹ ಮತ್ತು ಕೋವಿಡ್ ನ್ಯುಮೋನಿಯಾ ಇದ್ದ ರೋಗಿ ಕೂಡ ಚಿಕಿತ್ಸೆ ಪಡೆದು ಚೆನ್ನಾಗಿ ಚೇತರಿಸಿಕೊಂಡಿರುವುದನ್ನು ನಾವು ನೋಡಿದ್ದೇವೆ” ಎಂದು ಮಣಿಪಾಲ್ ಆಸ್ಪತ್ರೆಯ ಡಾ.ಸತ್ಯನಾರಾಯಣ ಮೈಸೂರು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...