Homeಕರೋನಾ ತಲ್ಲಣಕರ್ನಾಟಕದ ಕೊರೊನಾ ಸಾವುಗಳು: ರಕ್ತದೊತ್ತಡ ಮತ್ತು ಮಧುಮೇಹಿ ರೋಗಿಗಳೆ ಹೆಚ್ಚೆಂದ ವರದಿ!

ಕರ್ನಾಟಕದ ಕೊರೊನಾ ಸಾವುಗಳು: ರಕ್ತದೊತ್ತಡ ಮತ್ತು ಮಧುಮೇಹಿ ರೋಗಿಗಳೆ ಹೆಚ್ಚೆಂದ ವರದಿ!

"ಮಧುಮೇಹವು ಯಾವುದೇ ಸೋಂಕಿಗೂ ಅಪಾಯಕಾರಿ ಅಂಶವಾಗಿದೆ. ಮಧುಮೇಹದಿಂದಾಗಿ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವವರು ಕೊರೊನಾ ವೈರಸ್ ವಿರುದ್ಧ ಸುದೀರ್ಘ ಯುದ್ಧ ಮಾಡಬೇಕಾಗುತ್ತದೆ"

- Advertisement -
- Advertisement -

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕೊರೊನಾ ಕಾರಣದಿಂದ ಮೃತಪಟ್ಟವರಿಗೆ ಅಧಿಕ ರಕ್ತದೊತ್ತಡ ಸಮಸ್ಯೆ ಇತ್ತು ಎಂಬ ಅಂಶ ಬೆಳಕಿಗೆ ಬಂದಿದೆ. ನವೆಂಬರ್ 10 ರವರೆಗೆ ಕರ್ನಾಟಕದಲ್ಲಿ ದಾಖಲಾದ 11,430 ಕೋವಿಡ್ ಸಾವುಗಳಲ್ಲಿ 5,572 ಜನರಿಗೆ ಅಧಿಕ ರಕ್ತದೊತ್ತಡ ಮತ್ತು 4,167 ಜನರಿಗೆ ಮಧುಮೇಹವಿರುವುದು ವರದಿಯಲ್ಲಿ ತಿಳಿದುಬಂದಿದೆ.

ಈ ರೀತಿಯ ಸಾಂಕ್ರಾಮಿಕವಲ್ಲದ ಕಾಯಿಲೆಗಳು ಈಗಾಗಲೇ ಕೊರೊನಾ, ನ್ಯುಮೋನಿಯಾದಂತಹ ಸಾಂಕ್ರಾಮಿಕ ಕಾಯಿಲೆಗಳಿಂದ ಉಂಟಾಗಿರುವ ಭೀತಿಯನ್ನು ಹೆಚ್ಚಿಸುತ್ತಿವೆ ಎಂದು ವೈದ್ಯರು ಹೇಳಿದ್ದಾರೆ. ಮಂಗಳವಾರ, ಮೃತಪಟ್ಟ 20 ಕೊರೊನಾ ರೋಗಿಗಳಲ್ಲಿ 11 ಜನರಿಗೆ ಅಧಿಕ ರಕ್ತದೊತ್ತಡ ಮತ್ತು 10 ಮಂದಿ ಮಧುಮೇಹ ರೋಗಿಗಳಾಗಿದ್ದರು. ಕೊರೊನಾ ಕಾರಣದಿಂದಾಗಿ ನ್ಯುಮೋನಿಯಾ ಮತ್ತೆ ವಿಶ್ವದಾದ್ಯಂತ ಹೆಚ್ಚಾಗುತ್ತಿದೆ ಎಂದು ಟೈಮ್ಸ್‌ ನೌ ವರದಿ ಮಾಡಿದೆ.

“ಮಧುಮೇಹವು ಯಾವುದೇ ಸೋಂಕಿಗೂ ಅಪಾಯಕಾರಿ ಅಂಶವಾಗಿದೆ. ಮಧುಮೇಹದಿಂದಾಗಿ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವವರು ಕೊರೊನಾ ವೈರಸ್ ವಿರುದ್ಧ ಸುದೀರ್ಘ ಯುದ್ಧ ಮಾಡಬೇಕಾಗುತ್ತದೆ” ಎಂದು ರಾಮಯ್ಯ ಆಸ್ಪತ್ರೆಯ ಶ್ವಾಸಕೋಶಶಾಸ್ತ್ರಜ್ಞ ಡಾ.ಪ್ರಸನ್ನ ಕುಮಾರ್ ಟಿ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಮರೆತ ಜನರಿಂದ ದೀಪಾವಳಿ ಶಾಪಿಂಗ್‌ ಫುಲ್ ಜೋರು!

ಮಧುಮೇಹಿಗಳಂತೆ ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು, ಅಧಿಕ ರಕ್ತದೊತ್ತಡ, ದೀರ್ಘಕಾಲದ ಮೂತ್ರಪಿಂಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರು ಕೊರೊನಾ ನ್ಯುಮೋನಿಯಾಕ್ಕೆ ಹೆಚ್ಚು ಒಳಗಾಗುತ್ತಾರೆ. ನ್ಯುಮೋನಿಯಾವನ್ನು ತಡೆಗಟ್ಟಲು ಈ ರೋಗಗಳನ್ನು ನಿಯಂತ್ರಣದಲ್ಲಿಡುವುದು ಅವಶ್ಯಕ ಎಂದು ವಿಕ್ರಮ್ ಆಸ್ಪತ್ರೆಯ ಸಲಹೆಗಾರ ಹೃದಯರೋಗ ತಜ್ಞ ಡಾ.ವಾಸುನೇತ್ರ ಕಾಸರಗೋಡ್ ತಿಳಿಸಿದ್ದಾರೆ.

ಇಂತಹ ರೋಗಿಗಳನ್ನು ಆಸ್ಪತ್ರೆಗಳಿಗೆ ಸೇರಿಸುವಲ್ಲಿ ವಿಳಂಬ ಮಾಡುವುದು ಅಪಾಯವನ್ನು ಹೆಚ್ಚಿಸುತ್ತದೆ. ಆದರೆ ಸರಿಯಾದ ಚಿಕಿತ್ಸೆ ಪಡೆದರೆ ಗುಣವಾಗುತ್ತಾರೆ. “91 ವರ್ಷ ವಯಸ್ಸಿನ ಮಧುಮೇಹ ಮತ್ತು ಕೋವಿಡ್ ನ್ಯುಮೋನಿಯಾ ಇದ್ದ ರೋಗಿ ಕೂಡ ಚಿಕಿತ್ಸೆ ಪಡೆದು ಚೆನ್ನಾಗಿ ಚೇತರಿಸಿಕೊಂಡಿರುವುದನ್ನು ನಾವು ನೋಡಿದ್ದೇವೆ” ಎಂದು ಮಣಿಪಾಲ್ ಆಸ್ಪತ್ರೆಯ ಡಾ.ಸತ್ಯನಾರಾಯಣ ಮೈಸೂರು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...