Homeಎಕಾನಮಿಆತ್ಮನಿರ್ಭರ ಭಾರತ: ಹೊಸ ಆರ್ಥಿಕ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್

ಆತ್ಮನಿರ್ಭರ ಭಾರತ: ಹೊಸ ಆರ್ಥಿಕ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್

'ಆತ್ಮನಿರ್ಭರ್ ಭಾರತ್ ರೋಜ್‌ ಗಾರ್ ಯೋಜನೆ'ಯನ್ನು ಘೋಷಣೆ ಮಾಡಿ, ಹೊಸ ಉದ್ಯೋಗ ಸೃಷ್ಟಿಗೆ ಈ ಯೋಜನೆ ಸಹಕಾರಿಯಾಗಲಿದೆ ಎಂದರು.

- Advertisement -
- Advertisement -

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಆತ್ಮನಿರ್ಭರತೆಯ ಭಾಗವಾಗಿ (3.0) ಹೊಸ ಆರ್ಥಿಕ ಪ್ಯಾಕೇಜ್ ಘೋಷಿಸಿ, ಭಾರತದ ಆರ್ಥಿಕತೆಯಲ್ಲಿ ಚೇತರಿಕೆ ಕಾಣುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಆತ್ಮನಿರ್ಭರ್ ಭಾರತ್ ರೋಜ್‌ ಗಾರ್ ಯೋಜನೆ’ಯನ್ನು ಘೋಷಣೆ ಮಾಡಿ, “ಹೊಸ ಉದ್ಯೋಗ ಸೃಷ್ಟಿಗೆ ಈ ಯೋಜನೆ ಸಹಕಾರಿಯಾಗಲಿದೆ. ಹೊಸ ಯೋಜನೆಯಲ್ಲಿ ನೌಕರರಿಗೆ ಇಪಿಎಫ್ ಸೌಲಭ್ಯ ಸಿಗಲಿದೆ. ಮಾರ್ಚ್‌ನಿಂದ ಸೆಪ್ಟಂಬರ್ ಒಳಗೆ ಕೆಲಸ ಕಳೆದುಕೊಂಡವರಿಗೂ ಇಪಿಎಫ್ ಸೌಲಭ್ಯ ಸಿಗಲಿದೆ” ಎಂದು ಹೇಳಿದರು.

ಇದನ್ನೂ ಓದಿ: ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ!

ಕೊರೊನಾ ಬಿಕ್ಕಟ್ಟಿನ ನಡುವೆ ಕುಸಿದಿದ್ದ ಆರ್ಥಿಕತೆಯನ್ನು ಮೇಲೆತ್ತಲು ಈಗಾಗಲೇ ಕೈಗೊಂಡಿರುವ ಕ್ರಮಗಳನ್ನು ಉತ್ತೇಜಿಸಲು ಹೊಸ ಕ್ರಮಗಳನ್ನು ಘೋಷಿಸಿ, ದೆಹಲಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, “ಆರ್ಥಿಕತೆಯಲ್ಲಿ ವಿಶಿಷ್ಟ ಚೇತರಿಕೆಯನ್ನು ಬಿಂಬಿಸುವ ಕೆಲವು ಸೂಚಕಗಳು ಇವೆ” ಎಂದು ಹೇಳಿದರು.

ದೇಶದಲ್ಲಿ ಕೊರೊನಾ ಪ್ರಕರಣಗಳ ಬಗ್ಗೆ ಮಾತನಾಡಿದ ಅವರು, “ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 10 ಲಕ್ಷದಿಂದ 4.89 ಲಕ್ಷಕ್ಕೆ ಇಳಿಕೆಯಾಗಿದೆ. ಒಟ್ಟು ಸಾವಿನ ಪ್ರಮಾಣವು ಶೇಕಡ 1.47 ರಷ್ಟಿದೆ” ಎಂದು ಹೇಳಿದರು.

ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ಇದರ ನಡುವೆಯೇ, 2020ರ ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಸಕಾರಾತ್ಮಕ ಬೆಳವಣಿಗೆಗೆ ಮರಳುವ ಸಾಧ್ಯತೆಯಿದೆ ಎಂದು ಆರ್‌ಬಿಐ ಊಹಿಸಿ ಹೇಳಿಕೆ ನೀಡಿದೆ.

ಜುಲೈ-ಸೆಪ್ಟೆಂಬರ್ ಅವಧಿಯ ಜಿಡಿಪಿಯು ಶೇಕಡಾ 8.6 ರಷ್ಟು ಕುಗ್ಗುವ ಸಾಧ್ಯತೆಯಿದೆ ಎಂದು ಆರ್‌ಬಿಐ ಅಧಿಕಾರಿಯೊಬ್ಬರು ಈ ಹಿಂದೆ ಪಿಟಿಐಗೆ ತಿಳಿಸಿದ್ದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ಆರ್ಥಿಕತೆಯ ಚೇತರಿಕೆಯ ಸೂಚಕಗಳ ಕುರಿತು ಕೆಲವು ವಿವರಗಳು:

  • ಸಂಯೋಜಿತ ಖರೀದಿ ವ್ಯವಸ್ಥಾಪಕರ ಸೂಚ್ಯಂಕ (ಪಿಎಂಐ) ಅಕ್ಟೋಬರ್‌ನಲ್ಲಿ ಶೇ 58.9 ಕ್ಕೆ ಏರಿದ್ದು, ಹಿಂದಿನ ತಿಂಗಳಲ್ಲಿ ಇದು 54.6 ರಷ್ಟಿತ್ತು. ಇದು ಕಳೆದ ಒಂಬತ್ತು ವರ್ಷಗಳಲ್ಲಿ ಉತ್ಪಾದನೆಯಲ್ಲಿ ಪ್ರಬಲ ಹೆಚ್ಚಳವನ್ನು ದಾಖಲಿಸಿದೆ.
  • ಇಂಧನ ಬಳಕೆಯ ಬೆಳವಣಿಗೆಯು ವರ್ಷದಿಂದ ವರ್ಷಕ್ಕೆ ಶೇ 12 ಕ್ಕೆ ಏರಿಕೆಯಾಗುತ್ತಿದ್ದು, ಅಕ್ಟೋಬರ್‌ನಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ಶೇಕಡಾ 10 ರಷ್ಟು ಏರಿಕೆಯಾಗಿ 1.05 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ.
  • ದೈನಂದಿನ ರೈಲ್ವೆ ಸರಕು ಸಾಗಣೆ ವರ್ಷದಿಂದ ವರ್ಷಕ್ಕೆ ಸರಾಸರಿ 20 ಶೇಕಡ ಮತ್ತು 12 ಪ್ರತಿಶತದಷ್ಟು ಹೆಚ್ಚಾಗಿದೆ. ಬ್ಯಾಂಕ್ ಸಾಲವನ್ನು 5.1 ಶೇಕಡಾ ಸುಧಾರಿಸಿದೆ.
  • ವಿದೇಶಿ ನೇರ ಹೂಡಿಕೆಯ (ಎಫ್‌ಡಿಐ) ಒಳಹರಿವು ಏಪ್ರಿಲ್-ಆಗಸ್ಟ್‌ನಲ್ಲಿ 35.37 ಬಿಲಿಯನ್ ಡಾಲರ್‌ಗೆ ತಲುಪಿದ್ದು, ವರ್ಷದಿಂದ ವರ್ಷಕ್ಕೆ ಶೇ 13 ರಷ್ಟು ಏರಿಕೆ ಕಂಡಿದೆ.
  • ಒಂದು ದೇಶ ಒಂದು ಪಡಿತರ ಚೀಟಿ ಯೋಜನೆ ಯಶಸ್ವಿಯಾಗಿದೆ. ಸ್ವನಿಧಿ ಯೋಜನೆಯಡಿ 26.26 ಕೋ.ರೂ. ಸಾಲ ನೀಡಲಾಗಿದೆ ಎಂದಿರುವ ನಿರ್ಮಲಾ ದೇಶ ಅಭಿವೃದ್ಧಿಯತ್ತ ಸಾಗಿದೆ.
  • ಬೀದಿಬದಿ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿ ಯೋಜನೆ ಸಾಲ ನೀಡಲಾಗಿದೆ. 26.62 ಲಕ್ಷ ಅರ್ಜಿಗಳು ಬಂದಿದ್ದವು. ಈವರೆಗೆ ಒಟ್ಟು 1373 ಕೋಟಿ ರೂ.ಸಾಲ ನೀಡಲಾಗಿದೆ. ವಲಸೆ ಕಾರ್ಮಿಕರ ವಿಚಾರದಲ್ಲಿ ಪೋರ್ಟಲ್ ತಯಾರು ಮಾಡುತ್ತಿದ್ದು, ಇದಕ್ಕೆ ರಾಜ್ಯ ಸರಕಾರಗಳ ಸಹಾಯ ಪಡೆಯುತ್ತಿದ್ದೇವೆ.

ಈಗಾಗಲೇ ಘೋಷಿಸಿರುವ ಯೋಜನೆಗಳೇ ಇನ್ನೂ ಜನಸಾಮಾನ್ಯರನ್ನು ತಲುಪಿಲ್ಲ. ಕೊರೊನಾ ಸಂದರ್ಭದಲ್ಲಿ ಪ್ರಧಾನಿ ಘೋಷಿಸಿದ 20 ಲಕ್ಷ ಕೋಟಿ ಪ್ಯಾಕೇಜ್ ಏನಾಗಿದೆ ಎಂಬುದು ಯಾರಿಗೂ ತಿಳಿದಿಲ್ಲ. ಈ ಹಿಂದೆ ಆರ್‌ಬಿಐ ಉಪ ಗವರ್ನರ್ ಮಾತನಾಡಿ, ಭಾರತದ ಆರ್ಥಿಕತೆ ಚೇತರಿಸಿಕೊಳ್ಳಲು ಇನ್ನೂ ಕೆಲವು ವರ್ಷಗಳೇ ಬೇಕಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಹೀಗಿರುವಾಗ ಈ ಅಂಕಿ ಅಂಶಗಳು ಏನನ್ನು ಹೇಳುತ್ತಿವೆ ಎಂಬುದು ಎಲ್ಲರಿಗೂ ಕಾಡುವ ಪ್ರಶ್ನೆಯಾಗಿದೆ. ಆದರೆ ಈ ಅಂಕಿ ಅಂಶಗಳಲ್ಲಿನ ಬದಲಾವಣೆ ದೇಶದ ಕಟ್ಟಕಡೆಯ ವ್ಯಕ್ತಿಯ ಜೀವನಮಟ್ಟದಲ್ಲಿ ಯಾವುದೇ ಗುರುತರವಾದ ಬದಲಾವಣೆಯನ್ನು ತರಲಾರದು ಎನ್ನುವುದಂತೂ ಖಚಿತ.


ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...