Homeಮುಖಪುಟಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ಚಿರಾಗ್ ಪಾಸ್ವಾನ್ ಅವರ ಅಭಿಯಾನವು ನಿತೀಶ್ ಕುಮಾರ್ ವಿರುದ್ಧವಾಗಿದ್ದರೂ ಕೂಡಾ, ಪ್ರಧಾನಿ ಮೋದಿ ಎಂದಿಗೂ ಚಿರಾಗ್ ಪಾಸ್ವಾನ್ ಅವರೊಂದಿಗೆ ಈ ಬಗ್ಗೆ ಮಾತನಾಡಲಿಲ್ಲ ಎಂದು ಶಿವಸೇನೆ ಸೂಚಿಸಿದೆ

- Advertisement -
- Advertisement -

ಸಂಖ್ಯಾಶಾಸ್ತ್ರೀಯ ಆಟದಲ್ಲಿ, ಎನ್‌ಡಿಎ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಯ ಸಾಧಿಸಿರಬಹುದು ಆದರೆ ನಿಜವಾದ ವಿಜೇತ ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ ಯಾದವ್ ಆಗಿದ್ದಾರೆ, ಅವರ ಪಕ್ಷವು ರಾಜ್ಯದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಶಿವಸೇನೆ ತಿಳಿಸಿದೆ .

ಶಿವಸೇನೆ, ಪಕ್ಷದ ಮುಖವಾಣಿ ಸಾಮ್ನಾ ಮೂಲಕ, “ಬಿಹಾರದ ನಾಯಕತ್ವವು ಅಂತಿಮವಾಗಿ ಬಿಜೆಪಿ ಕೈಗೆ ಸಿಕ್ಕಿದೆ. ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ. ಬಿಹಾರದಲ್ಲಿ ಬಿಜೆಪಿ ದೊಡ್ಡ ಜಯ ಸಾಧಿಸಿದೆ. ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರಣ. ಅಂಕಿಅಂಶಗಳ ಆಟದಲ್ಲಿ, ’ಎನ್‌ಡಿಎ’ ವಿಜಯಶಾಲಿಯಾಗಿದೆ ಆದರೆ ನಿಜವಾದ ವಿಜೇತ 31 ವರ್ಷದ ತೇಜಶ್ವಿ ಯಾದವ್” ಎಂದು ಹೇಳಿದೆ.

ಇದನ್ನೂ ಓದಿ: ಬಿಹಾರ ಫಲಿತಾಂಶ ವಿಶ್ಲೇಷಣೆ: ನಿತೀಶ್ ಕಳೆದುಕೊಂಡದ್ದೇನು? ತೇಜಸ್ವಿ ಗಳಿಸಿದ್ದೇನು?

“ತೇಜಸ್ವಿಯ ರಾಷ್ಟ್ರೀಯ ಜನತಾದಳ ಪಕ್ಷವು ಬಿಹಾರದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಸಾಬೀತಾಯಿತು. ಬಿಜೆಪಿಗೆ ಈ ಅದೃಷ್ಟವನ್ನು ಪಡೆಯಲು ಸಾಧ್ಯವಾಗಲಿಲ್ಲ, ಆದ್ದರಿಂದ ಅಧಿಕಾರವನ್ನು ಉಳಿಸಿದ ಸಂತೋಷವನ್ನು ಆಚರಿಸಬಹುದು ಆದರೆ ಗೆಲುವು ತೇಜಶ್ವಿ ಯಾದವ್ ಅವರ ತಲೆಯ ಮೇಲಿದೆ” ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.

243 ಶಾಸಕರಿರುವ ವಿಧಾನ ಸಭೆಯಲ್ಲಿ, ಎನ್‌ಡಿಎಗೆ 125 ಸ್ಥಾನಗಳು ದೊರೆತಿದೆ, ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಅವರ ಗೆಲುವು ಎಷ್ಟು ಉತ್ತಮವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದು ಅದು ಹೇಳಿದೆ.

“ತೇಜಶ್ವಿ ಯಾದವ್ ಅವರ ಮಹಾಘಟಬಂಧನ್ 110 ಸ್ಥಾನಗಳನ್ನು ಪಡೆದಿದ್ದಾರೆ. ಮತ ಎಣಿಕೆಯ ಕೊನೆಯ ಹಂತದಲ್ಲಿ ಕೆಲವು ಕ್ಷೇತ್ರಗಳಲ್ಲಿ ಮತಗಳನ್ನು ತಿರುಚಲಾಗಿದೆ ಎಂದು ತೇಜಸ್ವಿ ಅವರ ಪಕ್ಷ ಆರೋಪಿಸಿದೆ. ಆರ್‌‌ಜೆಡಿ 119 ವಿಜೇತ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದ್ದು, ಆದರೆ ಚುನಾವಣಾ ಅಧಿಕಾರಿಗಳು ನಿತೀಶ್  ಕುಮಾರ್‌ ಸೂಚನೆಗಳನ್ನು ಅನುಸರಿಸುತ್ತಿದ್ದಾರೆ ಎಂದು ತೇಜಶ್ವಿ ಯಾದವ್ ಆರೋಪಿಸಿದ್ದಾರೆ. ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತೆ ಅಧಿಕಾರಕ್ಕೆ ಬರುತ್ತಿದ್ದಾರೆ, ಆದರೆ ಜನರ ನಡುವಿನ ಟ್ರೆಂಡ್ ಏನು?” ಎಂದು ಶಿವಸೇನೆ ಬಿಹಾರದ ಜನತೆ ತೇಜಸ್ವಿ ಯಾದವ್ ಪರ ಇದ್ದಾರೆ ಎಂದು ಸೂಚಿಸಿದೆ.

ಇದನ್ನೂ ಓದಿ: ಬಿಹಾರ: ನಿತೀಶ್ ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು- ಚಿರಾಗ್ ಪಾಸ್ವಾನ್!

“ಸ್ಪಷ್ಟವಾಗಿ ಹೇಳುವುದಾದರೆ, ಬಿಹಾರದಲ್ಲಿ ಈ ಎರಡು ವಿರುದ್ಧ ಮನಸ್ಸಿನ ಪಕ್ಷಗಳಾದ ಬಿಜೆಪಿ ಮತ್ತು ರಾಷ್ಟ್ರೀಯ ಜನತಾದಳ ಯಶಸ್ಸು ಗಳಿಸಿವೆ. ಇದರಲ್ಲಿ ನಿತೀಶ್ ಕುಮಾರ್ ಮತ್ತು ಅವರ ಪಕ್ಷ ಎಲ್ಲಿಯೂ ಕಾಣುವುದಿಲ್ಲ. ಜನರು ನಿತೀಶ್ ಕುಮಾರ್ ಅವರನ್ನು ತಿರಸ್ಕರಿಸಿದ್ದಾರೆ, ಆದರೆ ಅವರು ಮುಖ್ಯಮಂತ್ರಿ ಹುದ್ದೆಯತ್ತ ಹೊರಟಿದ್ದಾರೆ, ಇದು ಜನಾಭಿಪ್ರಾಯಕ್ಕೆ ಮಾಡುವ ಅವಮಾನ” ಎಂದು ಶಿವಸೇನೆ ಹೇಳಿದೆ.

ಜೆಡಿಯು ಅಭ್ಯರ್ಥಿಗಳ ವಿರುದ್ಧ ನಿಂತಿದ್ದ ಎಲ್‌ಜೆಪಿ ಅಭ್ಯರ್ಥಿಗಳಿಂದಾಗಿ ನಿತೀಶ್ ಕುಮಾರ್ ಅವರ ಇಪ್ಪತ್ತು ಅಭ್ಯರ್ಥಿಗಳು ಸೋಲನ್ನು ಎದುರಿಸಬೇಕಾಯಿತು.

“ಚಿರಾಗ್ ಪಾಸ್ವಾನ್ ಅವರ ಅಭಿಯಾನವು ನಿತೀಶ್ ಕುಮಾರ್ ವಿರುದ್ಧವಾಗಿದ್ದರೂ ಕೂಡಾ, ಪ್ರಧಾನಿ ಮೋದಿ ಎಂದಿಗೂ ಚಿರಾಗ್ ಪಾಸ್ವಾನ್ ಅವರೊಂದಿಗೆ ಈ ಬಗ್ಗೆ ಮಾತನಾಡಲಿಲ್ಲ ಮತ್ತು ಚಿರಾಗ್ ಇನ್ನೂ ಎನ್‌ಡಿಎಯ ಮಿತ್ರರಾಗಿದ್ದಾರೆ” ಎಂದಿರುವ ಶಿವಸೇನೆ ಜೆಡಿಯು ಸೋಲಿಗೆ ಬಿಜೆಪಿ ತಂತ್ರ ರೂಪಿಸಿತ್ತು ಎಂದು ಸೂಚಿಸಿದೆ.

2020 ರ ಬಿಹಾರ ಚುನಾವಣೆಯ 243 ಸ್ಥಾನಗಳಲ್ಲಿ 125 ಸ್ಥಾನಗಳು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಪಡೆದಿದ್ದರೆ, 110 ಸ್ಥಾನಗಳಲ್ಲಿ ಪ್ರತಿಸ್ಪರ್ಧಿ ಮಹಾಘಟಬಂಧನ್ ಪಡೆಯಿತು. ಇದರಲ್ಲಿ ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾದಳವು 75 ಸ್ಥಾನಗಳನ್ನು ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ಇದನ್ನೂಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...