Homeಮುಖಪುಟಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ಚಿರಾಗ್ ಪಾಸ್ವಾನ್ ಅವರ ಅಭಿಯಾನವು ನಿತೀಶ್ ಕುಮಾರ್ ವಿರುದ್ಧವಾಗಿದ್ದರೂ ಕೂಡಾ, ಪ್ರಧಾನಿ ಮೋದಿ ಎಂದಿಗೂ ಚಿರಾಗ್ ಪಾಸ್ವಾನ್ ಅವರೊಂದಿಗೆ ಈ ಬಗ್ಗೆ ಮಾತನಾಡಲಿಲ್ಲ ಎಂದು ಶಿವಸೇನೆ ಸೂಚಿಸಿದೆ

- Advertisement -
- Advertisement -

ಸಂಖ್ಯಾಶಾಸ್ತ್ರೀಯ ಆಟದಲ್ಲಿ, ಎನ್‌ಡಿಎ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಯ ಸಾಧಿಸಿರಬಹುದು ಆದರೆ ನಿಜವಾದ ವಿಜೇತ ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ ಯಾದವ್ ಆಗಿದ್ದಾರೆ, ಅವರ ಪಕ್ಷವು ರಾಜ್ಯದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಶಿವಸೇನೆ ತಿಳಿಸಿದೆ .

ಶಿವಸೇನೆ, ಪಕ್ಷದ ಮುಖವಾಣಿ ಸಾಮ್ನಾ ಮೂಲಕ, “ಬಿಹಾರದ ನಾಯಕತ್ವವು ಅಂತಿಮವಾಗಿ ಬಿಜೆಪಿ ಕೈಗೆ ಸಿಕ್ಕಿದೆ. ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ. ಬಿಹಾರದಲ್ಲಿ ಬಿಜೆಪಿ ದೊಡ್ಡ ಜಯ ಸಾಧಿಸಿದೆ. ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರಣ. ಅಂಕಿಅಂಶಗಳ ಆಟದಲ್ಲಿ, ’ಎನ್‌ಡಿಎ’ ವಿಜಯಶಾಲಿಯಾಗಿದೆ ಆದರೆ ನಿಜವಾದ ವಿಜೇತ 31 ವರ್ಷದ ತೇಜಶ್ವಿ ಯಾದವ್” ಎಂದು ಹೇಳಿದೆ.

ಇದನ್ನೂ ಓದಿ: ಬಿಹಾರ ಫಲಿತಾಂಶ ವಿಶ್ಲೇಷಣೆ: ನಿತೀಶ್ ಕಳೆದುಕೊಂಡದ್ದೇನು? ತೇಜಸ್ವಿ ಗಳಿಸಿದ್ದೇನು?

“ತೇಜಸ್ವಿಯ ರಾಷ್ಟ್ರೀಯ ಜನತಾದಳ ಪಕ್ಷವು ಬಿಹಾರದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಸಾಬೀತಾಯಿತು. ಬಿಜೆಪಿಗೆ ಈ ಅದೃಷ್ಟವನ್ನು ಪಡೆಯಲು ಸಾಧ್ಯವಾಗಲಿಲ್ಲ, ಆದ್ದರಿಂದ ಅಧಿಕಾರವನ್ನು ಉಳಿಸಿದ ಸಂತೋಷವನ್ನು ಆಚರಿಸಬಹುದು ಆದರೆ ಗೆಲುವು ತೇಜಶ್ವಿ ಯಾದವ್ ಅವರ ತಲೆಯ ಮೇಲಿದೆ” ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.

243 ಶಾಸಕರಿರುವ ವಿಧಾನ ಸಭೆಯಲ್ಲಿ, ಎನ್‌ಡಿಎಗೆ 125 ಸ್ಥಾನಗಳು ದೊರೆತಿದೆ, ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಅವರ ಗೆಲುವು ಎಷ್ಟು ಉತ್ತಮವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದು ಅದು ಹೇಳಿದೆ.

“ತೇಜಶ್ವಿ ಯಾದವ್ ಅವರ ಮಹಾಘಟಬಂಧನ್ 110 ಸ್ಥಾನಗಳನ್ನು ಪಡೆದಿದ್ದಾರೆ. ಮತ ಎಣಿಕೆಯ ಕೊನೆಯ ಹಂತದಲ್ಲಿ ಕೆಲವು ಕ್ಷೇತ್ರಗಳಲ್ಲಿ ಮತಗಳನ್ನು ತಿರುಚಲಾಗಿದೆ ಎಂದು ತೇಜಸ್ವಿ ಅವರ ಪಕ್ಷ ಆರೋಪಿಸಿದೆ. ಆರ್‌‌ಜೆಡಿ 119 ವಿಜೇತ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದ್ದು, ಆದರೆ ಚುನಾವಣಾ ಅಧಿಕಾರಿಗಳು ನಿತೀಶ್  ಕುಮಾರ್‌ ಸೂಚನೆಗಳನ್ನು ಅನುಸರಿಸುತ್ತಿದ್ದಾರೆ ಎಂದು ತೇಜಶ್ವಿ ಯಾದವ್ ಆರೋಪಿಸಿದ್ದಾರೆ. ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತೆ ಅಧಿಕಾರಕ್ಕೆ ಬರುತ್ತಿದ್ದಾರೆ, ಆದರೆ ಜನರ ನಡುವಿನ ಟ್ರೆಂಡ್ ಏನು?” ಎಂದು ಶಿವಸೇನೆ ಬಿಹಾರದ ಜನತೆ ತೇಜಸ್ವಿ ಯಾದವ್ ಪರ ಇದ್ದಾರೆ ಎಂದು ಸೂಚಿಸಿದೆ.

ಇದನ್ನೂ ಓದಿ: ಬಿಹಾರ: ನಿತೀಶ್ ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು- ಚಿರಾಗ್ ಪಾಸ್ವಾನ್!

“ಸ್ಪಷ್ಟವಾಗಿ ಹೇಳುವುದಾದರೆ, ಬಿಹಾರದಲ್ಲಿ ಈ ಎರಡು ವಿರುದ್ಧ ಮನಸ್ಸಿನ ಪಕ್ಷಗಳಾದ ಬಿಜೆಪಿ ಮತ್ತು ರಾಷ್ಟ್ರೀಯ ಜನತಾದಳ ಯಶಸ್ಸು ಗಳಿಸಿವೆ. ಇದರಲ್ಲಿ ನಿತೀಶ್ ಕುಮಾರ್ ಮತ್ತು ಅವರ ಪಕ್ಷ ಎಲ್ಲಿಯೂ ಕಾಣುವುದಿಲ್ಲ. ಜನರು ನಿತೀಶ್ ಕುಮಾರ್ ಅವರನ್ನು ತಿರಸ್ಕರಿಸಿದ್ದಾರೆ, ಆದರೆ ಅವರು ಮುಖ್ಯಮಂತ್ರಿ ಹುದ್ದೆಯತ್ತ ಹೊರಟಿದ್ದಾರೆ, ಇದು ಜನಾಭಿಪ್ರಾಯಕ್ಕೆ ಮಾಡುವ ಅವಮಾನ” ಎಂದು ಶಿವಸೇನೆ ಹೇಳಿದೆ.

ಜೆಡಿಯು ಅಭ್ಯರ್ಥಿಗಳ ವಿರುದ್ಧ ನಿಂತಿದ್ದ ಎಲ್‌ಜೆಪಿ ಅಭ್ಯರ್ಥಿಗಳಿಂದಾಗಿ ನಿತೀಶ್ ಕುಮಾರ್ ಅವರ ಇಪ್ಪತ್ತು ಅಭ್ಯರ್ಥಿಗಳು ಸೋಲನ್ನು ಎದುರಿಸಬೇಕಾಯಿತು.

“ಚಿರಾಗ್ ಪಾಸ್ವಾನ್ ಅವರ ಅಭಿಯಾನವು ನಿತೀಶ್ ಕುಮಾರ್ ವಿರುದ್ಧವಾಗಿದ್ದರೂ ಕೂಡಾ, ಪ್ರಧಾನಿ ಮೋದಿ ಎಂದಿಗೂ ಚಿರಾಗ್ ಪಾಸ್ವಾನ್ ಅವರೊಂದಿಗೆ ಈ ಬಗ್ಗೆ ಮಾತನಾಡಲಿಲ್ಲ ಮತ್ತು ಚಿರಾಗ್ ಇನ್ನೂ ಎನ್‌ಡಿಎಯ ಮಿತ್ರರಾಗಿದ್ದಾರೆ” ಎಂದಿರುವ ಶಿವಸೇನೆ ಜೆಡಿಯು ಸೋಲಿಗೆ ಬಿಜೆಪಿ ತಂತ್ರ ರೂಪಿಸಿತ್ತು ಎಂದು ಸೂಚಿಸಿದೆ.

2020 ರ ಬಿಹಾರ ಚುನಾವಣೆಯ 243 ಸ್ಥಾನಗಳಲ್ಲಿ 125 ಸ್ಥಾನಗಳು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಪಡೆದಿದ್ದರೆ, 110 ಸ್ಥಾನಗಳಲ್ಲಿ ಪ್ರತಿಸ್ಪರ್ಧಿ ಮಹಾಘಟಬಂಧನ್ ಪಡೆಯಿತು. ಇದರಲ್ಲಿ ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾದಳವು 75 ಸ್ಥಾನಗಳನ್ನು ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ಇದನ್ನೂಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...