Homeಮುಖಪುಟಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಿರಂತರವಗಿ ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ದ ಮಾತನಾಡುತ್ತಾ ಅವರ ಕಾರ್ಯತಂತ್ರಗಳ ವಿರುದ್ದ ಕಾನೂನಾತ್ಮಕವಾಗಿ ಹೋರಾಡುತ್ತಿರುವ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಮರಿ ಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರ ಫೇಸ್‌‌ಬುಕ್ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಸಿದೆ.

ಸಂವಿಧಾನದ ಎಲ್ಲಾ ಅಂಗಗಳು ಆರೆಸ್ಸೆಸ್ಸ್‌ ವಶಪಡಿಸಿಕೊಂಡಿರುವ ಸಮಯದಲ್ಲಿ ಅವರ ವಿರುದ್ದವಾಗಿ ಮಾತನಾಡುವ ನನ್ನ ಪೇಜನ್ನು ಫೇಸ್‌‌ಬುಕ್ ಡಿಲಿಟ್ ಮಾಡುತ್ತಿದೆ ಎಂದು ನಿನ್ನೆ ವಿಡಿಯೋ ಮಾಡಿ ಆರೋಪಿಸಿದ್ದ ಅವರು, ಇಂದು ಮತ್ತೊಂದು ವಿಡಿಯೋ ತಮ್ಮ ಪೇಜ್‌ನಲ್ಲಿ ಅಪ್ಲೋಡ್ ಮಾಡಿದ್ದು ಅದರಲ್ಲಿ ತನ್ನ ಐಟಿ ಸ್ನೇಹಿತರು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತ ಕುಟುಂಬದ ಪರವಾಗಿ ಹೈಕೋರ್ಟ್ ಮೆಟ್ಟಿಲೇರಿದ ರಾಜರತ್ನ ಅಂಬೇಡ್ಕರ್

ತಮ್ಮ ಫೇಸ್‌‌ಬುಕ್‌ ಪೇಜ್‌‌ನ ವಿಡಿಯೋದಲ್ಲಿ ನಿನ್ನೆ ಮಾಹಿತಿ ನೀಡಿರುವ ’ಭಾರತೀಯ ಬೌದ್ದ ಸಮಾಜ’ದ ಅಧ್ಯಕ್ಷರೂ ಆಗಿರುವ ರಾಜರತ್ನ ಅಂಬೇಡ್ಕರ್‌, “ಇದು ನನ್ನ ಕೊನೆಯ ವಿಡಿಯೋವಾಗಿದೆ, ಯಾಕೆಂದರೆ ನೆವೆಂಬರ್‌ 12 ರಂದು ನನ್ನ ಪೇಜನ್ನು ಡಿಲೀಟ್ ಮಾಡುವುದಾಗಿ ಪೇಸ್‌‌ಬುಕ್ ಈ ಮೈಲ್ ಮಾಡಿದೆ. ಪೇಜ್‌‌ನಲ್ಲಿ ಯಾವುದಾದರು ಸಾಮುದಾಯಿಕ ನಿಯಮದ ಉಲ್ಲಂಘನೆ ಮೀರಿರುವ ವಿಷಯವನ್ನು ಹಾಕಿದ್ದರೆ, ಅವರು ಅದರ ವಿರುದ್ದ ಕ್ರಮಗಳನ್ನು ತೆಗೆದುಕೊಳ್ಳಬೇಕು, ಆದರೆ ಇಲ್ಲಿ ನನ್ನ ಇಡಿ ಪೇಜನ್ನೆ ಡಿಲಿಟ್ ಮಾಡುತ್ತಿದ್ದಾರೆ. ನನ್ನ ಪೇಜ್‌‌ನಲ್ಲಿ ಒಂದು ವಿಡಿಯೋ ಹಾಕಿದರೆ 8 ನಿಮಿಷಕ್ಕೆ ಸುಮಾರು 56 ಲಕ್ಷ ಜನರನ್ನು ತಲುಪುತ್ತದೆ. ಇದು ಒಂದೇ ದಿನದಲ್ಲಿ ಹೆಚ್ಚಿದ್ದಲ್ಲ ಮೂರು ನಾಲ್ಕು ವರ್ಷದಿಂದ ಈ ಬೆಳವಣಿಗೆ ಆಗಿದೆ, ಆದರೆ ಪೇಸ್‌‌ಬುಕ್ ಈಗ ಪೇಜ್ ಡಿಲೀಟ್ ಮಾಡುವುದಾಗಿ ನೋಟಿಸ್ ನೀಡಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದರು.
“ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು. ನನ್ನ ಪೇಜ್‌ಅನ್ನು ಭಾರತ ಮಾತ್ರವಲ್ಲದೆ ವಿಶ್ವದ 18 ದೇಶಗಳಲ್ಲಿ ವೀಕ್ಷಿಸುತ್ತಿದ್ದರು, ಈಗ ಇದನ್ನು ಅನಿರೀಕ್ಷಿತವಾಗಿ ಡಿಲೀಟ್ ಮಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದರು.

ಇದೀಗ ಮತ್ತೆ ಇನ್ನೊಂದು ವಿಡಿಯೋ ಹಾಕಿರುವ ಅವರು ಹಲವಾರು ಐಟಿ ಕ್ಷೇತ್ರದ ತಜ್ಞರು ನಿನ್ನೆ ರಾತ್ರಿ ಪೂರ್ತಿ ಕುಳಿತು ಕೊಂಡು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದು, ಪ್ರಸ್ತುತ ನನ್ನ ಫೇಸ್‌‌ಬುಕ್ ಪೇಜ್ ಉಳಿದೆ ಎಂದಿರುವ ಅವರು, “ಈ ಪುಟವನ್ನು ಉಳಿಸಿದ್ದಕ್ಕಾಗಿ ಎಲ್ಲಾ ಐಟಿ ವೃತ್ತಿಪರರಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

ಇದನ್ನೂಓದಿ: ಪಟ್ಟು ಬಿಡದೇ ಕೊನೆಗೂ ಹತ್ರಾಸ್‌ ಸಂತ್ರಸ್ತ ಕುಟುಂಬ ಭೇಟಿಗೆ ಹೊರಟ ರಾಹುಲ್, ಪ್ರಿಯಾಂಕ ಗಾಂಧಿ

ವಡಾಲಾದ ಡಾ.ಅಂಬೇಡ್ಕರ್ ಕಾಲೇಜಿನ ಪ್ರಾಧ್ಯಾಪಕರೂ ಆಗಿರುವ ರಾಜರತ್ನ ಅಂಬೇಡ್ಕರ್, ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡುವಂತೆ ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಮತ್ತು ಪರಿಹಾರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅಲಹಾಬಾದ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಭಾರತದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್‌ನ ಕಡು ಟೀಕಾಕಾರರಾಗಿರುವ ರಾಜರತ್ನ, ಆರೆಸ್ಸೆಸ್ ಒಂದು ಭಯೋತ್ಪಾದನಾ ಸಂಘಟನೆ ಹಾಗೂ ಅದನ್ನು ಬ್ಯಾನ್ ಮಾಡಬೇಕಾಗಿದೆ, ಅದರ ವಿಚಾರದಾರೆಯನ್ನು ಧ್ವಂಸಗೊಳಿಸಿ ಎಂದು ಈ ಹಿಂದೆ ಅವರು ಕರೆ ನೀಡಿದ್ದರು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...