Homeಮುಖಪುಟಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಿರಂತರವಗಿ ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ದ ಮಾತನಾಡುತ್ತಾ ಅವರ ಕಾರ್ಯತಂತ್ರಗಳ ವಿರುದ್ದ ಕಾನೂನಾತ್ಮಕವಾಗಿ ಹೋರಾಡುತ್ತಿರುವ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಮರಿ ಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರ ಫೇಸ್‌‌ಬುಕ್ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಸಿದೆ.

ಸಂವಿಧಾನದ ಎಲ್ಲಾ ಅಂಗಗಳು ಆರೆಸ್ಸೆಸ್ಸ್‌ ವಶಪಡಿಸಿಕೊಂಡಿರುವ ಸಮಯದಲ್ಲಿ ಅವರ ವಿರುದ್ದವಾಗಿ ಮಾತನಾಡುವ ನನ್ನ ಪೇಜನ್ನು ಫೇಸ್‌‌ಬುಕ್ ಡಿಲಿಟ್ ಮಾಡುತ್ತಿದೆ ಎಂದು ನಿನ್ನೆ ವಿಡಿಯೋ ಮಾಡಿ ಆರೋಪಿಸಿದ್ದ ಅವರು, ಇಂದು ಮತ್ತೊಂದು ವಿಡಿಯೋ ತಮ್ಮ ಪೇಜ್‌ನಲ್ಲಿ ಅಪ್ಲೋಡ್ ಮಾಡಿದ್ದು ಅದರಲ್ಲಿ ತನ್ನ ಐಟಿ ಸ್ನೇಹಿತರು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತ ಕುಟುಂಬದ ಪರವಾಗಿ ಹೈಕೋರ್ಟ್ ಮೆಟ್ಟಿಲೇರಿದ ರಾಜರತ್ನ ಅಂಬೇಡ್ಕರ್

ತಮ್ಮ ಫೇಸ್‌‌ಬುಕ್‌ ಪೇಜ್‌‌ನ ವಿಡಿಯೋದಲ್ಲಿ ನಿನ್ನೆ ಮಾಹಿತಿ ನೀಡಿರುವ ’ಭಾರತೀಯ ಬೌದ್ದ ಸಮಾಜ’ದ ಅಧ್ಯಕ್ಷರೂ ಆಗಿರುವ ರಾಜರತ್ನ ಅಂಬೇಡ್ಕರ್‌, “ಇದು ನನ್ನ ಕೊನೆಯ ವಿಡಿಯೋವಾಗಿದೆ, ಯಾಕೆಂದರೆ ನೆವೆಂಬರ್‌ 12 ರಂದು ನನ್ನ ಪೇಜನ್ನು ಡಿಲೀಟ್ ಮಾಡುವುದಾಗಿ ಪೇಸ್‌‌ಬುಕ್ ಈ ಮೈಲ್ ಮಾಡಿದೆ. ಪೇಜ್‌‌ನಲ್ಲಿ ಯಾವುದಾದರು ಸಾಮುದಾಯಿಕ ನಿಯಮದ ಉಲ್ಲಂಘನೆ ಮೀರಿರುವ ವಿಷಯವನ್ನು ಹಾಕಿದ್ದರೆ, ಅವರು ಅದರ ವಿರುದ್ದ ಕ್ರಮಗಳನ್ನು ತೆಗೆದುಕೊಳ್ಳಬೇಕು, ಆದರೆ ಇಲ್ಲಿ ನನ್ನ ಇಡಿ ಪೇಜನ್ನೆ ಡಿಲಿಟ್ ಮಾಡುತ್ತಿದ್ದಾರೆ. ನನ್ನ ಪೇಜ್‌‌ನಲ್ಲಿ ಒಂದು ವಿಡಿಯೋ ಹಾಕಿದರೆ 8 ನಿಮಿಷಕ್ಕೆ ಸುಮಾರು 56 ಲಕ್ಷ ಜನರನ್ನು ತಲುಪುತ್ತದೆ. ಇದು ಒಂದೇ ದಿನದಲ್ಲಿ ಹೆಚ್ಚಿದ್ದಲ್ಲ ಮೂರು ನಾಲ್ಕು ವರ್ಷದಿಂದ ಈ ಬೆಳವಣಿಗೆ ಆಗಿದೆ, ಆದರೆ ಪೇಸ್‌‌ಬುಕ್ ಈಗ ಪೇಜ್ ಡಿಲೀಟ್ ಮಾಡುವುದಾಗಿ ನೋಟಿಸ್ ನೀಡಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದರು.
“ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು. ನನ್ನ ಪೇಜ್‌ಅನ್ನು ಭಾರತ ಮಾತ್ರವಲ್ಲದೆ ವಿಶ್ವದ 18 ದೇಶಗಳಲ್ಲಿ ವೀಕ್ಷಿಸುತ್ತಿದ್ದರು, ಈಗ ಇದನ್ನು ಅನಿರೀಕ್ಷಿತವಾಗಿ ಡಿಲೀಟ್ ಮಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದರು.

ಇದೀಗ ಮತ್ತೆ ಇನ್ನೊಂದು ವಿಡಿಯೋ ಹಾಕಿರುವ ಅವರು ಹಲವಾರು ಐಟಿ ಕ್ಷೇತ್ರದ ತಜ್ಞರು ನಿನ್ನೆ ರಾತ್ರಿ ಪೂರ್ತಿ ಕುಳಿತು ಕೊಂಡು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದು, ಪ್ರಸ್ತುತ ನನ್ನ ಫೇಸ್‌‌ಬುಕ್ ಪೇಜ್ ಉಳಿದೆ ಎಂದಿರುವ ಅವರು, “ಈ ಪುಟವನ್ನು ಉಳಿಸಿದ್ದಕ್ಕಾಗಿ ಎಲ್ಲಾ ಐಟಿ ವೃತ್ತಿಪರರಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

ಇದನ್ನೂಓದಿ: ಪಟ್ಟು ಬಿಡದೇ ಕೊನೆಗೂ ಹತ್ರಾಸ್‌ ಸಂತ್ರಸ್ತ ಕುಟುಂಬ ಭೇಟಿಗೆ ಹೊರಟ ರಾಹುಲ್, ಪ್ರಿಯಾಂಕ ಗಾಂಧಿ

ವಡಾಲಾದ ಡಾ.ಅಂಬೇಡ್ಕರ್ ಕಾಲೇಜಿನ ಪ್ರಾಧ್ಯಾಪಕರೂ ಆಗಿರುವ ರಾಜರತ್ನ ಅಂಬೇಡ್ಕರ್, ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡುವಂತೆ ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಮತ್ತು ಪರಿಹಾರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅಲಹಾಬಾದ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಭಾರತದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್‌ನ ಕಡು ಟೀಕಾಕಾರರಾಗಿರುವ ರಾಜರತ್ನ, ಆರೆಸ್ಸೆಸ್ ಒಂದು ಭಯೋತ್ಪಾದನಾ ಸಂಘಟನೆ ಹಾಗೂ ಅದನ್ನು ಬ್ಯಾನ್ ಮಾಡಬೇಕಾಗಿದೆ, ಅದರ ವಿಚಾರದಾರೆಯನ್ನು ಧ್ವಂಸಗೊಳಿಸಿ ಎಂದು ಈ ಹಿಂದೆ ಅವರು ಕರೆ ನೀಡಿದ್ದರು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...