Homeಮುಖಪುಟನಿತೀಶ್ ಕುಮಾರ್ ಸಂಪುಟ ಸೇರುವುದಿಲ್ಲ: ಮಾಜಿ ಸಿಎಂ ಜಿತಾನ್ ರಾಮ್ ಮಾಂಜಿ

ನಿತೀಶ್ ಕುಮಾರ್ ಸಂಪುಟ ಸೇರುವುದಿಲ್ಲ: ಮಾಜಿ ಸಿಎಂ ಜಿತಾನ್ ರಾಮ್ ಮಾಂಜಿ

ಜೆಡಿಯು ಕೋಟಾದ 07 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಹಿಂದುಸ್ಥಾನಿ ಅವಾಮ್ ಮೋರ್ಚಾ ಪಕ್ಷವು 04 ಸ್ಥಾನಗಳಲ್ಲಿ ಜಯಗಳಿಸಿ ಎನ್‌ಡಿಎ ಸರಳ ಬಹುಮತ ಮುಟ್ಟಲು ಸಹಕಾರಿಯಾಗಿದೆ.

- Advertisement -
- Advertisement -

ಮಾಜಿ ಸಿಎಂ ಜಿತಾನ್ ರಾಮ್ ಮಾಂಜಿಯವರು ಹಿಂದುಸ್ಥಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಪಕ್ಷದ ಶಾಸಕಾಂಗ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿರುವ ಅವರು ತಾವು ನಿತೀಶ್ ಕುಮಾರ್ ಸಂಪುಟ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಾಂಜಿ ಸೇರಿ ಅವರ ಪಕ್ಷದಿಂದ ನೂತನವಾಗಿ ಆಯ್ಕೆಯಾದ ಇತರ ಮೂವರು ಮಾಂಜಿಯವರ ನಿವಾಸದಲ್ಲಿ ಸಭೆ ಸೇರಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಮೊದಲು ಪಕ್ಷದಿಂದ ಮಾಂಜಿ ಮಾತ್ರ ಶಾಸಕರಾಗಿದ್ದರು. ಈ ಚುನಾವಣೆಯಲ್ಲಿ ಅವರೊಂದಿಗೆ ಇತರ ಮೂವರು ಸೇರ್ಪಡೆಯಾಗಿದ್ದಾರೆ.

“ನಾನು ಈಗಾಗಲೇ ಒಮ್ಮೆ ಮುಖ್ಯಮಂತ್ರಿಯಾಗಿದ್ದವನು. ಹಾಗಾಗಿ ಸಚಿವನಾಗಲು ಬಯಸುವುದಿಲ್ಲ. ಹಾಗಾಗಿ ನಾನು ನಿತೀಶ್ ಸಂಪುಟ ಸೇರುವುದಿಲ್ಲ. ಆದರೆ ಈ ಸರ್ಕಾರದಿಂದ ಬಿಹಾರದ ಅಭಿವೃದ್ದಿಯಾಗುತ್ತದೆ. ಹಾಗಾಗಿ ಕಾಂಗ್ರೆಸ್‌ನಿಂದ ಆಯ್ಕೆಯಾದ ಶಾಸಕರು ಸಹ ಎನ್‌ಡಿಎ ಸೇರಿ ಎಂದು ಮನವಿ ಮಾಡುತ್ತೇನೆ” ಎಂದಿದ್ದಾರೆ.

ನಿತೀಶ್ ಕುಮಾರ್‌ರವರ ಅಭಿವೃದ್ದಿ ಯೋಜನೆಗಳು ಕಾಂಗ್ರೆಸ್‌ಗಿಂತ ಭಿನ್ನವಾಗಿಲ್ಲ. ಆದರೂ ರಾಜ್ಯದ ಹಿತಾಸಕ್ತಿ ವಿಷಯದಲ್ಲಿ ಅವರು ಕೆಲವು ವಿಷಯಗಳಿಂದ ಅಂತರ ಕಾಯ್ದುಕೊಳ್ಳುತ್ತಾರೆ. ಹಾಗಾಗಿ ನೀವು ಎನ್‌ಡಿಎ ಸೇರಿ ರಾಜ್ಯದ ಅಭಿವೃದ್ದಿಗೆ ಸಹಕರಿಸಿ ಮಾಂಜಿ ಮನವಿ ಮಾಡಿದ್ದಾರೆ. 

ಮಾಂಜಿಯವರ ರಾಜಕೀಯ ಪಯಣ

ದಲಿತ ನಾಯಕ ಜತಿನ್ ರಾಮ್ ಮಾಂಜಿ 1980ರಲ್ಲಿ ಕಾಂಗ್ರೆಸ್ ಸೇರುವುದರೊಂದಿಗೆ ತಮ್ಮ ರಾಜಕೀಯ ಜೀವನ ಆರಂಭಿಸಿದರು. ಆದರೆ ನಂತರ ಅವರು ಆರ್‌ಜೆಡಿ ಸೇರಿದರು. ಅಲ್ಲಿಂದಲೂ ಬಿಟ್ಟು ಜೆಡಿಯು ಸೇರಿದರು. ಈ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಅವರಿಗೆ ಮುಖ್ಯಮಂತ್ರಿ ಆಗುವ ಅದೃಷ್ಟ ಒಲಿದು ಬಂತು.

2014 ರಲ್ಲಿ ಅವರು ನಿತೀಶ್ ಕುಮಾರ್‌ರವರ ಜೆಡಿಯು ಪಕ್ಷದಲ್ಲಿದ್ದರು. ಆಗ ನಿತೀಶ್‌ ನರೇಂದ್ರ ಮೋದಿಯವರು ಕಟ್ಟಾ ವಿರೋಧಿಯಾಗಿದ್ದರು. ಅಂತಹ ಸಂದರ್ಭದಲ್ಲಿ 2014ರ ಲೋಕಸಭಾ ಚುನಾವಣೆಯನ್ನು ನಿತೀಶ್ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದರು. ಆದರೆ ಅವರ ಪಕ್ಷದಿಂದ ಕೇವಲ 02 ಅಭ್ಯರ್ಥಿಗಳು ಮಾತ್ರ ಗೆದ್ದು ಜೆಡಿಯು ಸೋಲನ್ನು ಅನುಭವಿಸಿತ್ತು. ಸೋಲಿನ ನೈತಿಕ ಹೊಣೆ ಹೊತ್ತ ನಿತೀಶ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾಂಜಿಯವರನ್ನು ಸಿಎಂ ಕುರ್ಚಿಯಲ್ಲಿ ಕುಳ್ಳಿರಿಸಿದರು.

ಆದರೆ ಸ್ವಲ್ಪ ಸಮಯದಲ್ಲಿ ನಿತೀಶ್ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ವಾಪಸ್ ಬಯಸಿದಾಗ ಆರಂಭದಲ್ಲಿ ಮಾಂಜಿ ನಿರಾಕರಿಸಿದರು. ನಂತರ ಬಲವಂತವಾಗಿ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟರು. ಆಗ ಮಾಂಜಿ ಜೆಡಿಯು ತೊರೆದು ಹಿಂದುಸ್ಥಾನಿ ಅವಾಮ್ ಮೋರ್ಚಾ ಪಕ್ಷ ಕಟ್ಟಿದರು.

2015ರ ಬಿಹಾರ ವಿಧಾನಸಭಾ ಚುನಾವಣೆಯ ನಂತರ ಮಹಾಘಟಬಂಧನ್‌ ಮೈತ್ರಿಯಲ್ಲಿದ್ದ ಮಾಂಜಿ ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಾಗಿ ಮಹಾಘಟಬಂಧನ್ ತೊರೆದರು. ಇತ್ತ ಎನ್‌ಡಿಎ ಮೈತ್ರಿಕೂಟದಿಂದ ಮತ್ತೊಬ್ಬ ದಲಿತ ನಾಯಕ ಚಿರಾಗ್ ಪಾಸ್ವಾನ್ ಹೊರನಡೆದ ಕೂಡಲೇ ನಿತೀಶ್ ಕುಮಾರ್‌ರವರು ಮಾಂಜಿಯವರೊಡನೆ ಮಾತುಕತೆ ನಡೆಸಿ ಜೆಡಿಯು ಕೋಟಾದ 07 ಸ್ಥಾನಗಳನ್ನು ಹಿಂದುಸ್ಥಾನಿ ಅವಾಮ್ ಮೋರ್ಚಾಗೆ ಬಿಟ್ಟುಕೊಟ್ಟರು. ಅದರಲ್ಲಿ ಪಕ್ಷ 04 ಸ್ಥಾನಗಳಲ್ಲಿ ಜಯಗಳಿಸಿ ಎನ್‌ಡಿಎ ಸರಳ ಬಹುಮತ ಮುಟ್ಟಲು ಸಹಕಾರಿಯಾಗಿದೆ.


ಇದನ್ನೂ ಓದಿ: ಬಿಹಾರ ಫಲಿತಾಂಶ ವಿಶ್ಲೇಷಣೆ: ನಿತೀಶ್ ಕಳೆದುಕೊಂಡದ್ದೇನು? ತೇಜಸ್ವಿ ಗಳಿಸಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...