Homeಮುಖಪುಟನಿತೀಶ್ ಕುಮಾರ್ ಸಂಪುಟ ಸೇರುವುದಿಲ್ಲ: ಮಾಜಿ ಸಿಎಂ ಜಿತಾನ್ ರಾಮ್ ಮಾಂಜಿ

ನಿತೀಶ್ ಕುಮಾರ್ ಸಂಪುಟ ಸೇರುವುದಿಲ್ಲ: ಮಾಜಿ ಸಿಎಂ ಜಿತಾನ್ ರಾಮ್ ಮಾಂಜಿ

ಜೆಡಿಯು ಕೋಟಾದ 07 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಹಿಂದುಸ್ಥಾನಿ ಅವಾಮ್ ಮೋರ್ಚಾ ಪಕ್ಷವು 04 ಸ್ಥಾನಗಳಲ್ಲಿ ಜಯಗಳಿಸಿ ಎನ್‌ಡಿಎ ಸರಳ ಬಹುಮತ ಮುಟ್ಟಲು ಸಹಕಾರಿಯಾಗಿದೆ.

- Advertisement -
- Advertisement -

ಮಾಜಿ ಸಿಎಂ ಜಿತಾನ್ ರಾಮ್ ಮಾಂಜಿಯವರು ಹಿಂದುಸ್ಥಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಪಕ್ಷದ ಶಾಸಕಾಂಗ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿರುವ ಅವರು ತಾವು ನಿತೀಶ್ ಕುಮಾರ್ ಸಂಪುಟ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಾಂಜಿ ಸೇರಿ ಅವರ ಪಕ್ಷದಿಂದ ನೂತನವಾಗಿ ಆಯ್ಕೆಯಾದ ಇತರ ಮೂವರು ಮಾಂಜಿಯವರ ನಿವಾಸದಲ್ಲಿ ಸಭೆ ಸೇರಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಮೊದಲು ಪಕ್ಷದಿಂದ ಮಾಂಜಿ ಮಾತ್ರ ಶಾಸಕರಾಗಿದ್ದರು. ಈ ಚುನಾವಣೆಯಲ್ಲಿ ಅವರೊಂದಿಗೆ ಇತರ ಮೂವರು ಸೇರ್ಪಡೆಯಾಗಿದ್ದಾರೆ.

“ನಾನು ಈಗಾಗಲೇ ಒಮ್ಮೆ ಮುಖ್ಯಮಂತ್ರಿಯಾಗಿದ್ದವನು. ಹಾಗಾಗಿ ಸಚಿವನಾಗಲು ಬಯಸುವುದಿಲ್ಲ. ಹಾಗಾಗಿ ನಾನು ನಿತೀಶ್ ಸಂಪುಟ ಸೇರುವುದಿಲ್ಲ. ಆದರೆ ಈ ಸರ್ಕಾರದಿಂದ ಬಿಹಾರದ ಅಭಿವೃದ್ದಿಯಾಗುತ್ತದೆ. ಹಾಗಾಗಿ ಕಾಂಗ್ರೆಸ್‌ನಿಂದ ಆಯ್ಕೆಯಾದ ಶಾಸಕರು ಸಹ ಎನ್‌ಡಿಎ ಸೇರಿ ಎಂದು ಮನವಿ ಮಾಡುತ್ತೇನೆ” ಎಂದಿದ್ದಾರೆ.

ನಿತೀಶ್ ಕುಮಾರ್‌ರವರ ಅಭಿವೃದ್ದಿ ಯೋಜನೆಗಳು ಕಾಂಗ್ರೆಸ್‌ಗಿಂತ ಭಿನ್ನವಾಗಿಲ್ಲ. ಆದರೂ ರಾಜ್ಯದ ಹಿತಾಸಕ್ತಿ ವಿಷಯದಲ್ಲಿ ಅವರು ಕೆಲವು ವಿಷಯಗಳಿಂದ ಅಂತರ ಕಾಯ್ದುಕೊಳ್ಳುತ್ತಾರೆ. ಹಾಗಾಗಿ ನೀವು ಎನ್‌ಡಿಎ ಸೇರಿ ರಾಜ್ಯದ ಅಭಿವೃದ್ದಿಗೆ ಸಹಕರಿಸಿ ಮಾಂಜಿ ಮನವಿ ಮಾಡಿದ್ದಾರೆ. 

ಮಾಂಜಿಯವರ ರಾಜಕೀಯ ಪಯಣ

ದಲಿತ ನಾಯಕ ಜತಿನ್ ರಾಮ್ ಮಾಂಜಿ 1980ರಲ್ಲಿ ಕಾಂಗ್ರೆಸ್ ಸೇರುವುದರೊಂದಿಗೆ ತಮ್ಮ ರಾಜಕೀಯ ಜೀವನ ಆರಂಭಿಸಿದರು. ಆದರೆ ನಂತರ ಅವರು ಆರ್‌ಜೆಡಿ ಸೇರಿದರು. ಅಲ್ಲಿಂದಲೂ ಬಿಟ್ಟು ಜೆಡಿಯು ಸೇರಿದರು. ಈ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಅವರಿಗೆ ಮುಖ್ಯಮಂತ್ರಿ ಆಗುವ ಅದೃಷ್ಟ ಒಲಿದು ಬಂತು.

2014 ರಲ್ಲಿ ಅವರು ನಿತೀಶ್ ಕುಮಾರ್‌ರವರ ಜೆಡಿಯು ಪಕ್ಷದಲ್ಲಿದ್ದರು. ಆಗ ನಿತೀಶ್‌ ನರೇಂದ್ರ ಮೋದಿಯವರು ಕಟ್ಟಾ ವಿರೋಧಿಯಾಗಿದ್ದರು. ಅಂತಹ ಸಂದರ್ಭದಲ್ಲಿ 2014ರ ಲೋಕಸಭಾ ಚುನಾವಣೆಯನ್ನು ನಿತೀಶ್ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದರು. ಆದರೆ ಅವರ ಪಕ್ಷದಿಂದ ಕೇವಲ 02 ಅಭ್ಯರ್ಥಿಗಳು ಮಾತ್ರ ಗೆದ್ದು ಜೆಡಿಯು ಸೋಲನ್ನು ಅನುಭವಿಸಿತ್ತು. ಸೋಲಿನ ನೈತಿಕ ಹೊಣೆ ಹೊತ್ತ ನಿತೀಶ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾಂಜಿಯವರನ್ನು ಸಿಎಂ ಕುರ್ಚಿಯಲ್ಲಿ ಕುಳ್ಳಿರಿಸಿದರು.

ಆದರೆ ಸ್ವಲ್ಪ ಸಮಯದಲ್ಲಿ ನಿತೀಶ್ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ವಾಪಸ್ ಬಯಸಿದಾಗ ಆರಂಭದಲ್ಲಿ ಮಾಂಜಿ ನಿರಾಕರಿಸಿದರು. ನಂತರ ಬಲವಂತವಾಗಿ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟರು. ಆಗ ಮಾಂಜಿ ಜೆಡಿಯು ತೊರೆದು ಹಿಂದುಸ್ಥಾನಿ ಅವಾಮ್ ಮೋರ್ಚಾ ಪಕ್ಷ ಕಟ್ಟಿದರು.

2015ರ ಬಿಹಾರ ವಿಧಾನಸಭಾ ಚುನಾವಣೆಯ ನಂತರ ಮಹಾಘಟಬಂಧನ್‌ ಮೈತ್ರಿಯಲ್ಲಿದ್ದ ಮಾಂಜಿ ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಾಗಿ ಮಹಾಘಟಬಂಧನ್ ತೊರೆದರು. ಇತ್ತ ಎನ್‌ಡಿಎ ಮೈತ್ರಿಕೂಟದಿಂದ ಮತ್ತೊಬ್ಬ ದಲಿತ ನಾಯಕ ಚಿರಾಗ್ ಪಾಸ್ವಾನ್ ಹೊರನಡೆದ ಕೂಡಲೇ ನಿತೀಶ್ ಕುಮಾರ್‌ರವರು ಮಾಂಜಿಯವರೊಡನೆ ಮಾತುಕತೆ ನಡೆಸಿ ಜೆಡಿಯು ಕೋಟಾದ 07 ಸ್ಥಾನಗಳನ್ನು ಹಿಂದುಸ್ಥಾನಿ ಅವಾಮ್ ಮೋರ್ಚಾಗೆ ಬಿಟ್ಟುಕೊಟ್ಟರು. ಅದರಲ್ಲಿ ಪಕ್ಷ 04 ಸ್ಥಾನಗಳಲ್ಲಿ ಜಯಗಳಿಸಿ ಎನ್‌ಡಿಎ ಸರಳ ಬಹುಮತ ಮುಟ್ಟಲು ಸಹಕಾರಿಯಾಗಿದೆ.


ಇದನ್ನೂ ಓದಿ: ಬಿಹಾರ ಫಲಿತಾಂಶ ವಿಶ್ಲೇಷಣೆ: ನಿತೀಶ್ ಕಳೆದುಕೊಂಡದ್ದೇನು? ತೇಜಸ್ವಿ ಗಳಿಸಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...