Homeಮುಖಪುಟಬಿಹಾರ: ’ಧನ್ಯವಾದ ಯಾತ್ರೆ’ ಕೈಗೊಳ್ಳಲಿರುವ ಎಲ್‌ಜೆಪಿಯ ಚಿರಾಗ್ ಪಾಸ್ವಾನ್!

ಬಿಹಾರ: ’ಧನ್ಯವಾದ ಯಾತ್ರೆ’ ಕೈಗೊಳ್ಳಲಿರುವ ಎಲ್‌ಜೆಪಿಯ ಚಿರಾಗ್ ಪಾಸ್ವಾನ್!

‘ಬಿಹಾರ ಮೊದಲು, ಬಿಹಾರಿ ಮೊದಲು’ ಎಂಬ ಅಭಿಯಾನಕ್ಕೆ 25 ಲಕ್ಷ ಬಿಹಾರ ಮತದಾರರ ಪ್ರೀತಿ ಮತ್ತು ಬೆಂಬಲ ಸಿಕ್ಕಿದೆ. ಅವರಿಗೆ ಧನ್ಯವಾದ ಹೇಳಲು ಧನ್ಯವಾದ ಯಾತ್ರೆ’- ಚಿರಾಗ್ ಪಾಸ್ವಾನ್

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ137 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಕೇವಲ ಒಂದು ಸ್ಥಾನ ಪಡೆದಿರುವ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ನವೆಂಬರ್ ಅಂತ್ಯದಲ್ಲಿ ‘ಧನ್ಯವಾದ ಯಾತ್ರೆ’ ಕೈಗೊಳ್ಳಲಿದ್ದಾರೆ.  ರಾಜ್ಯಾದ್ಯಂತ ‘ಬಿಹಾರ ಮೊದಲು, ಬಿಹಾರಿ ಮೊದಲು’ ಎಂಬ ಅಭಿಯಾನವನ್ನು ಬೆಂಬಲಿಸಿದ್ದಕ್ಕಾಗಿ ಮತದಾರರಿಗೆ ಧನ್ಯವಾದ ಸಲ್ಲಿಸಲು ಈ ಯಾತ್ರೆ ನಡೆಸುವುದಾಗಿ ತಿಳಿಸಿದ್ದಾರೆ.

31 ಕ್ಷೇತ್ರಗಳಲ್ಲಿಎಲ್‌ಜೆಪಿಯು ಮಹಾಘಟಬಂಧನ್ ಅಭ್ಯರ್ಥಿ ಮತ್ತು ಜನತಾದಳ (ಯುನೈಟೆಡ್) ನಡುವಿನ ಗೆಲುವಿನ ಅಂತರಕ್ಕಿಂತ ಹೆಚ್ಚಿನ ಮತ ಗಳಿಸಿದೆ. ಒಟ್ಟು ಎಲ್‌ಜೆಪಿ 25 ಲಕ್ಷ ಮತಗಳನ್ನು ಪಡೆದಿದೆ.

“ನಮ್ಮ ಪಕ್ಷ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲು ನಿರ್ಧರಿಸಿದ್ದು ಇದೇ ಮೊದಲು. ನಮ್ಮ ‘‘ಬಿಹಾರ ಮೊದಲು, ಬಿಹಾರಿ ಮೊದಲು’ ಎಂಬ ಅಭಿಯಾನಕ್ಕೆ 25 ಲಕ್ಷ ಬಿಹಾರ ಮತದಾರರ ಪ್ರೀತಿ ಮತ್ತು ಬೆಂಬಲ ಸಿಕ್ಕಿದೆ. ಜನರು ನೀಡಿದ ಬೆಂಬಲಕ್ಕೆ ಧನ್ಯವಾದ ಹೇಳಲು ನಾನು ರಾಜ್ಯದ ಪ್ರತಿಯೊಂದು ಜಿಲ್ಲೆಗೆ ಭೇಟಿ ನೀಡಲಿದ್ದೇನೆ ”ಎಂದು ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ನಿತೀಶ್ ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು- ಚಿರಾಗ್ ಪಾಸ್ವಾನ್!

ಎಲ್‌ಜೆಪಿಯನ್ನು ಜೆಡಿಯು ಬಹಿರಂಗವಾಗಿಯೇ ಟೀಕಿಸುತ್ತಿರುವ ಈ ಸಮಯದಲ್ಲಿ ಚಿರಾಗ್ ಪಾಸ್ವಾನ್ ಧನ್ಯವಾದ ಯಾತ್ರೆಗೆ ಮುಂದಾಗಿದ್ದಾರೆ. ನವೆಂಬರ್ 20ರ ನಂತರ ಬಿಹಾರ ಖತ್ ಹಬ್ಬ ಮುಗಿದ ಬಳಿಕ ಯಾತ್ರೆ ಪ್ರಾರಂಭವಾಗಲಿದೆ.

137 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸಿದ್ದ ಚಿರಾಗ್ ಪಾಸ್ವಾನ್ ಕೇವಲ 1 ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದ್ದಾರೆ. ಆದರೆ ಇವರ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿದ್ದ ಕನಿಷ್ಟ 20 ಕ್ಷೇತ್ರಗಳಲ್ಲಿ ಜೆಡಿಯು ಸೋತಿರುವುದು ಗಮನಾರ್ಹ. ಆದರೆ ಈ ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಈ ನಡೆಯಿಂದಾಗಿ ಸುಮಾರು 40 ಸ್ಥಾನಗಳನ್ನು ಜೆಡಿಯು ಕಳೆದುಕೊಂಡಿರಬಹುದು. “ಈ ಚುನಾವಣೆಯಲ್ಲಿ ಜೆಡಿಯು ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು” ಎಂದು ಚಿರಾಗ್ ಪಾಸ್ವಾನ್ ಹೇಳಿದ್ದರು.

2015ರ ಚುನಾವಣೆಯಲ್ಲಿ 71 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಯು ಈ ಚುನಾವಣೆಯಲ್ಲಿ 43 ಸ್ಥಾನಗಳಿಗೆ ಕುಸಿದಿದ್ದರೆ, ಆಗ 53 ಸ್ಥಾನಗಳನ್ನು ಹೊಂದಿದ್ದ ಬಿಜೆಪಿ ಈಗ ತನ್ನ ಗೆಲುವನ್ನು 74ಕ್ಕೆ ಹೆಚ್ಚಿಸಿಕೊಂಡಿದೆ. ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾದಳ 75 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.


ಇದನ್ನೂ ಓದಿ: ಬಿಹಾರ: ಈ ಗೆಲುವು ಮೋದಿಯವರದ್ದು; ನಿತೀಶ್‌ಗೆ ಒಳ ಏಟು ನೀಡಿದ ಚಿರಾಗ್ ಪಾಸ್ವಾನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...