Homeಮುಖಪುಟಕ್ಷಮೆ ಕೇಳುವುದಿಲ್ಲ, ದಂಡ ಕಟ್ಟುವುದಿಲ್ಲ: ಕಾಮಿಡಿಯನ್ ಕುನಾಲ್ ಕಮ್ರ

ಕ್ಷಮೆ ಕೇಳುವುದಿಲ್ಲ, ದಂಡ ಕಟ್ಟುವುದಿಲ್ಲ: ಕಾಮಿಡಿಯನ್ ಕುನಾಲ್ ಕಮ್ರ

"ನನ್ನ ಟ್ವೀಟ್‌ಗಳನ್ನು ಹಿಂತೆಗೆದುಕೊಳ್ಳುವ ಅಥವಾ ಅವರಲ್ಲಿ ಕ್ಷಮೆಯಾಚಿಸುವ ಉದ್ದೇಶ ನನಗಿಲ್ಲ. ಅವು ತಮ್ಮಷ್ಟಕ್ಕೇ ಹೇಳಬೇಕಾದುದ್ದನ್ನು ಹೇಳುತ್ತವೆ ಎಂದು ನಾನು ನಂಬುತ್ತೇನೆ"

- Advertisement -
- Advertisement -

ಸುಪ್ರೀಂಕೋರ್ಟ್‌ ಕಾರ್ಯವಿಧಾನವನ್ನು ಟೀಕಿಸಿ ಮಾಡಿರುವ ಟ್ವೀಟ್‌ಗಳನ್ನು ಡಿಲೀಟ್ ಮಾಡುವುದಿಲ್ಲ. ನ್ಯಾಯಾಂಗ ನಿಂದನೆ ಪ್ರಕರಣದ ಸಂಬಂಧ ಕ್ಷಮೆ ಯಾಚಿಸುವುದಿಲ್ಲ, ದಂಡ ಕಟ್ಟುವುದಿಲ್ಲ ಎಂದು ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಮ್ರ ಸ್ಪಷ್ಟಪಡಿಸಿದ್ದಾರೆ.

ವಂಚನೆ ಮತ್ತು ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದನ್ನು ಟೀಕಿಸಿ ಕಮ್ರ ಟ್ವೀಟ್ ಮಾಡಿದ್ದರು. ಈ ಸಂದರ್ಭದಲ್ಲಿ ದೇಶದಲ್ಲಿ ನೂರಾರು ಹೋರಾಟಗಾರರು ಹಲವಾರು ವರ್ಷಗಳಿಂದ ರಾಜಕೀಯ ಖೈದಿಗಳಾಗಿ ಜೈಲಿನಲ್ಲಿದ್ದರೂ ಅವರಿಗೆ ಏಕೆ ಜಾಮೀನು ನೀಡಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಖ್ಯಾತ ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಮ್ರ ಸುಪ್ರೀಂ ತೀರ್ಪನ್ನು ಟ್ರೋಲ್ ಮಾಡಿದ್ದರು.

“ನನ್ನ ಟ್ವೀಟ್‌ಗಳನ್ನು ಹಿಂತೆಗೆದುಕೊಳ್ಳುವ ಅಥವಾ ಅವರಲ್ಲಿ ಕ್ಷಮೆಯಾಚಿಸುವ ಉದ್ದೇಶ ನನಗಿಲ್ಲ. ಅವು ತಮ್ಮಷ್ಟಕ್ಕೇ ಹೇಳಬೇಕಾದುದ್ದನ್ನು ಹೇಳುತ್ತವೆ ಎಂದು ನಾನು ನಂಬುತ್ತೇನೆ” ಎಂದು ಮುಂಬೈ ಮೂಲದ ಕುನಾಲ್ ಕಮ್ರ ಟ್ವೀಟ್‌ ಮಾಡಿದ್ದಾರೆ. ಜೊತೆಗೆ “ವಕೀಲರು ಇಲ್ಲ, ಕ್ಷಮಾಪಣೆ ಇಲ್ಲ, ದಂಡ ಕಟ್ಟಲ್ಲ, ಸಮಯ ಹಾಳು ಮಾಡಲ್ಲ” ಎಂದು ತಮ್ಮ ಪತ್ರದೊಂದಿಗೆ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ಕುನಾಲ್ ಕಮ್ರ ವಿರುದ್ಧ ಎಂಟು ಜನರಿಗೆ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು  ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅನುಮತಿ ನೀಡುವ ಮೂಲಕ, ಕಮ್ರ ತಮಾಷೆಯ ಗೆರೆಯನ್ನು ದಾಟಿದ್ದಾರೆ ಎಂದು ಹೇಳಿದ್ದಾರೆ.

“ಸುಪ್ರೀಂ ಕೋರ್ಟ್ ಮೇಲೆ ಅನ್ಯಾಯವಾಗಿ ಕೆಟ್ಟ ರೀತಿಯಲ್ಲಿ ದಾಳಿ ಮಾಡುವುದು ಶಿಕ್ಷೆಗೆ ಕಾರಣವಾಗುತ್ತದೆ ಎಂದು ಜನರು ಅರ್ಥಮಾಡಿಕೊಳ್ಳುವ ಸಮಯ ಇದು” ಎಂದು ಅಟಾರ್ನಿ ಜನರಲ್ ವೇಣುಗೋಪಾಲ್ ಅವರು  ಕಮ್ರ ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲು ತಮ್ಮ ಅನುಮತಿಯನ್ನು ಕೇಳಿದ ವಕೀಲರಿಗೆ ಉತ್ತರಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

ಈ ವರ್ಷದ ಜನವರಿಯಲ್ಲಿ, ಮುಂಬೈಯಿಂದ ಲಕ್ನೋಗೆ ಇಂಡಿಗೋ ವಿಮಾನದಲ್ಲಿ ಅರ್ನಾಬ್ ಗೋಸ್ವಾಮಿ ಅವರನ್ನು ಪ್ರಶ್ನಿಸಿದ ನಂತರ ಕಮ್ರ ಅವರನ್ನು ಹಲವಾರು ವಿಮಾನಯಾನ ಸಂಸ್ಥೆಗಳು ನಿಷೇಧಿಸಿವೆ.

ಇತ್ತ ಹಲವು ಸಾಮಾಜಿಕ ಹೋರಾಟಗಾರರು, ನೆಟ್ಟಿಗರು “ಕುನಾಲ್ ಕಮ್ರ ಟ್ವೀಟ್ ನಿಮಗೆ ಇಷ್ಟವಾಗದಿದ್ದರೆ ಅದನ್ನು ಓದಬೇಡಿ ಅಷ್ಟೇ” ಅವರ ಮೇಲೆಕೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುತ್ತೀರಿ ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನಿಸುತ್ತಿದ್ದಾರೆ.


ಇದನ್ನೂ ಓದಿ: ಆತನ ಚಾನೆಲ್ ನೋಡುವುದೇ ಇಲ್ಲ: ಅರ್ನಾಬ್‌ಗೆ ಜಾಮೀನು ನೀಡಿದ ನ್ಯಾಯಮೂರ್ತಿ ಹೇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...