Homeಮುಖಪುಟಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ತೆರಳಿರುವ ಪ್ರಧಾನಿ ಮೋದಿ

ಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ತೆರಳಿರುವ ಪ್ರಧಾನಿ ಮೋದಿ

ನಿನ್ನೆಯಷ್ಟೇ ಉತ್ತರ ಜಮ್ಮು ಕಾಶ್ಮೀರದ ಹಲವಾರು ಪ್ರದೇಶಗಳಲ್ಲಿ ಪಾಕಿಸ್ತಾನ ಸೈನ್ಯವು ಕದನ ವಿರಾಮ ಉಲ್ಲಂಘನೆ ಮಾಡಿದ್ದರಿಂದ ಐದು ಸೈನಿಕರು ಸೇರಿದಂತೆ ಹನ್ನೊಂದು ಜನರು ಸಾವನ್ನಪ್ಪಿದ್ದಾರೆ.

- Advertisement -
- Advertisement -

ಸತತ ಏಳನೇ ವರ್ಷವೂ ಪ್ರಧಾನಿ ನರೇಂದ್ರ ಮೋದಿ ಸೈನಿಕರೊಂದಿಗೆ ದೀಪಾವಳಿ ಆಚರಿಸಲಿದ್ದು, ಈ ಬಾರಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಸೈನಿಕರು ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಜವಾನರೊಂದಿಗೆ ಕಳೆಯಲಿದ್ದಾರೆ. ಲಾಂಗ್‌ವಾಲಾದಲ್ಲಿ ಕಾರ್ಯಕ್ರಮ ಆಯೋಜನೆಯಾಗಿದ್ದು, ಇದು ಮೂಲತಃ ಬಿಎಸ್‌ಎಫ್ ಪೋಸ್ಟ್‌ ಆಗಿದ್ದು, 1971 ರ ಇಂಡೋ-ಪಾಕಿಸ್ತಾನ ಯುದ್ಧದ ಸಮಯ ಪಶ್ಚಿಮ ದಿಕ್ಕಿನಲ್ಲಿ ಭಾರತದ ಒಂದು ಪ್ರಮುಖ ಆಯಕಟ್ಟಿನ ಪ್ರದೇಶವಾಗಿತ್ತು.

ನಿನ್ನೆಯಷ್ಟೇ ಉತ್ತರ ಜಮ್ಮು ಕಾಶ್ಮೀರದ ಹಲವಾರು ಪ್ರದೇಶಗಳಲ್ಲಿ ಪಾಕಿಸ್ತಾನ ಸೈನ್ಯವು ಕದನ ವಿರಾಮ ಉಲ್ಲಂಘನೆ ಮಾಡಿದ್ದರಿಂದ ಐದು ಸೈನಿಕರು ಸೇರಿದಂತೆ ಹನ್ನೊಂದು ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ: ಐವರು ಯೋಧರೂ ಸೇರಿ 8 ಮಂದಿ ಸಾವು

ಪ್ರಧಾನಿ ಮೋದಿಯೊಂದಿಗೆ ಬಿಎಸ್ಎಫ್ ಮಹಾನಿರ್ದೇಶಕ ರಾಕೇಶ್ ಅಸ್ತಾನಾ, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಎಂ.ಎಂ.ನಾರ್ವಾನೆ ಇರಲಿದ್ದಾರೆ. ಈ ಬಗ್ಗೆ ಪ್ರಧಾನಿ ನಿನ್ನೆ ಟ್ವೀಟ್ ಮಾಡಿ ಗಡಿಯಲ್ಲಿ ನಮ್ಮನ್ನು ರಕ್ಷಿಸುವವ ಸೈನಿಕರಿಗಾಗಿ ಹಣತೆಯನ್ನು ಬೆಳಗಿಸುವಂತೆ ಕೇಳಿಕೊಂಡಿದ್ದರು.

ಈ ವರ್ಷ ಪ್ರಧಾನಿಯು ಸೈನಿಕರೊಂದಿಗೆ ನಡೆಸುವ ಎರಡನೇ ಸಂವಹನವಾಗಿದೆ ಇದು. ಕಳೆದ ಜೂನ್‌ 14 ರಂದು ಗಾಲ್ವನ್ ಕಣಿವೆಯಲ್ಲಿ ನಡೆದ ಹಿಂಸಾಚಾರದಿಂದಾಗಿ ಭಾರತೀಯ ಸೈನ್ಯದ 20 ಸೈನಿಕರು ಸಾವನ್ನಪ್ಪಿದ ನಂತರ ಜುಲೈನಲ್ಲಿ ಲಡಾಖ್‌‌ನಲ್ಲಿ ಸೈನಿಕರನ್ನು ಭೇಟಿಯಾಗಿದ್ದರು.

ಇದು ಸೈನಿಕರೊಂದಿಗೆ ಪ್ರಧಾನ ಮಂತ್ರಿ ಆಚರಿಸುತ್ತಿರುವ ಏಳನೇ ದೀಪಾವಳಿಯಾಗಲಿದೆ; 2014 ರಲ್ಲಿ ಅವರ ಮೊದಲ ದೀಪಾವಳಿ ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್‌ನಲ್ಲಿ ಆಚರಿಸಿದ್ದರು. ಕಳೆದ ವರ್ಷ ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಗೆ ದೀಪಾವಳಿ ಆಚರಿಸಲು ತೆರಳಿದ್ದರು.

ಇದನ್ನೂ ಓದಿ: ಲಡಾಖ್‌ನಿಂದ ಚೀನಾ ಸೈನ್ಯವನ್ನು ಯಾವಾಗ ಹೊರಗೆ ಹಾಕುತ್ತೀರಿ: ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. I am wondering, if the purpose of this Media, which claims to be part of “Naanu Gauri” movement, is to “report” Modi’s daily routine, just like any other Media, without any critical reflections, why should Gauri’s name be used?

  2. Thank you Sir. I read the write-up once again, but this time with a hermeneutic of ‘reading between lines’, after being cautioned by you. In my ‘scond’ reading, I could indeed make sense of the critical tone. However, I still believe that the spirit of “Naanu Gauri” movement demands a more overtly vocal tone in our criticism against the fascist hypocricy so that it invokes and evokes every “common” reader.
    Thanks again. Much appreciations for your response.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...