Homeಕರ್ನಾಟಕಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ರಾಜ್ಯದಲ್ಲಿ ಬೆಳೆಯುವ ಪ್ರಮುಖ ಬೆಳೆಗಳಿಗೆ ಬೆಂಬಲ ಬೆಲೆ, ಉಗ್ರಾಣ, ಸಾರಿಗೆ, ಅವುಗಳ ಮೇಲಿನ ಬಡ್ಡಿ ರಹಿತ ಸಾಲ ಸೇರಿದಂತೆ ಖರೀದಿ ಕೇಂದ್ರಗಳಲ್ಲಿ ಖರೀದಿ ಮಾಡಲು 5-10 ಸಾವಿರ ಕೋಟಿ ಹಣಕಾಸು ಬೇಡುತ್ತದೆ. ಈ ಹಣಕಾಸು ರಾಜ್ಯ ಸರ್ಕಾರಕ್ಕೆ ಯಾವ ರೀತಿಯಿಂದಲೂ ಹೊರೆಯಲ್ಲ

- Advertisement -
- Advertisement -

ಉದ್ಯೋಗ ಅರಸುತ್ತಾ ಹಳ್ಳಿಯಿಂದ ನಗರದ ಕಡೆಗೆ ವಲಸೆ ಬಂದಿದ್ದ ಕೋಟ್ಯಾಂತರ ಜನರು ಯಾವುದೇ ಸಿದ್ದತೆಗಳಿಲ್ಲದೆ ಸರ್ಕಾರಗಳು ಹೇರಿದ್ದ ಲಾಕ್‌ಡೌನ್‌ನಿಂದಾಗಿ ನಗರದಲ್ಲಿಯೂ ಉದ್ಯೋಗಗಳಿಲ್ಲದೆ ಮತ್ತೇ ತಮ್ಮ ಹಳ್ಳಿಗಳಿಗೆ ಮರಳಿದ್ದಾರೆ. ಇದೆ ಸಮಯದಲ್ಲಿ ಉತ್ತಮ ಮುಂಗಾರು ಮಳೆಯಾದ್ದರಿಂದ ಉತ್ತಮ ಬೆಳೆಯಾಗಿದ್ದು, ಇದೀಗ ಮುಂಗಾರು ಬೆಳೆಗಳು ಮಾರುಕಟ್ಟೆಗೆ ಬರಲು ಪ್ರಾರಂಭವಾಗಿದೆ.

ರಾಜ್ಯದ ಕೆಲವೆಡೆ ಪ್ರವಾಹ ಬಂದು ಬೆಳೆಗಳು ಕೊಚ್ಚಿಕೊಂಡು ಹೋಗಿದೆಯದರೂ, ಉಳಿದ ಕಡೆ ರೈತರಿಗೆ ಉತ್ತಮ ಇಳುವರಿ ಬಂದಿದೆ. ಉತ್ತಮ ಬೆಳೆಯಾದರೆ ಸಾಮಾನ್ಯವಾಗಿ ಬೆಲೆಗಳು ಸಹಜವಾಗಿಯೇ ಇಳಿಯುತ್ತದೆ. ಆದರೆ ತಾನು ಕಷ್ಟ ಪಟ್ಟ ಬೆಳೆದ ಬೆಳೆಗಳನ್ನು ನಷ್ಟಕ್ಕೆ ಮಾರಾಟ ಮಾಡಲಾಗದೆ, ಬೆಳೆಗಳನ್ನು ತನ್ನಲ್ಲಿ ಇಟ್ಟುಕೊಳ್ಳಲೂ ಆಗದೆ ರೈತರು ಕಷ್ಟಕ್ಕ ಸಿಲುಕಿದ್ದಾರೆ. ಈ ಸಮಯದಲ್ಲಿ ಸರ್ಕಾರಗಳು ಖರೀದಿ ಕೇಂದ್ರಗಳನ್ನು ತೆರೆದು ರೈತರ ಬೆಳೆಗಳನ್ನು ಖರೀದಿ ಮಾಡಬೇಕು ಎಂದು ಹೋರಾಟಗಳು ನಡೆಯುತ್ತಿವೆ.

ಇದನ್ನೂ ಓದಿ: ಕೇಂದ್ರ ಸರ್ಕಾರದೊಂದಿಗೆ ರೈತ ಮುಖಂಡರ ಮಾತುಕತೆ ವಿಫಲ: ನ.26,27ಕ್ಕೆ ದೆಹಲಿ ಚಲೋ

ರೈತ ವಿರೋಧಿ
ಫೋಟೋ ಕೃಪೆ: ಸಿದ್ದೇಶ್ ಎಮ್‌.ಇ

ಅಲ್ಲದೆ ಇದೀಗ ಕೇಂದ್ರ ಹಾಗೂ ರಾಜ್ಯ ಸಕಾರಗಳು ಹಲವಾರು ರೈತ ವಿರೋಧಿ ಕಾಯ್ದೆಗಳನ್ನು ತಂದು ಬೆಂಬಲ ಬೆಲೆಗಳನ್ನು ಇಲ್ಲವಾಗಿಸುತ್ತಿದೆ. ರಾಜ್ಯ ಸೇರಿದಂತೆ ಕೇಂದ್ರ ಸರ್ಕಾರಗಳು ಖರೀದಿ ಕೇಂದ್ರದ ಬಗ್ಗೆ ಯಾವುದೆ ಮಾತೆತ್ತುತ್ತಿಲ್ಲ ಎಂದು ರೈತರು ದೂರುತ್ತಿದ್ದಾರೆ.

ಖರೀದಿ ಕೇಂದ್ರಗಳು ಎಂದರೇನು?

ಮಾರುಕಟ್ಟೆಯಲ್ಲಿ ಬೆಳೆಗಳು ಅಧಿಕವಾಗಿ ಬಂದಾಗ ಸಹಜವಾಗಿ ಬೆಲೆ ಇಳಿದು ಹೋಗುತ್ತದೆ. ಈ ಸಮಯದಲ್ಲಿ ರೈತರಿಗೆ ತಾವು ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ಸಂಕಷ್ಟಕ್ಕೆ ಒಳಗಾಗುತ್ತಾರೆ. ಈ ಸಮಯದಲ್ಲಿ ಸರ್ಕಾರವೆ ಮುಂದೆ ನಿಂತು ಎಪಿಎಂಸಿ ಸೇರಿದಂತೆ ಸರ್ಕಾರಿ ನಿಯಂತ್ರಿತ ಮಾರುಕಟ್ಟೆಗಳಲ್ಲಿ ಬೆಳೆಗಳಿಗೆ ನಿಗದಿತ ಬೆಲೆಯನ್ನು ನೀಡಿ ಖರೀದಿ ಮಾಡುತ್ತದೆ. ಈ ಖರೀದಿ ಕೇಂದ್ರಗಳಲ್ಲಿ ಈ ಬೆಲೆಯೂ ತನ್ನದೆಂದು ದೃಡೀಕರಿಸಲು ರೈತನೂ ತನ್ನ ಬೆಳೆಗಳ ಜೊತೆಗೆ ತನ್ನ ಭೂಮಿಯ ಪತ್ರಗಳನ್ನು ತರಬೇಕಾಗುತ್ತದೆ.

PC : The United Nations

ಭೂಮಿ ಪತ್ರಗಳನ್ನು ತರಬೇಕು ಎನ್ನುವ ನಿಯಮ ಕೆಲವೊಮ್ಮ ರೈತರಿಗೆ ಮಾರಕವಾಗಿಯೂ ಪರಿಣಮಿಸುತ್ತದೆ. ಯಾಕೆಂದರೆ ತನ್ನ ಜಮೀನಲ್ಲದೆ ಇತರರಿಂದ ಗೇಣಿಗೆ ಪಡೆದು ಬೆಳೆದವನು ಅದನ್ನು ಖರೀದಿ ಕೇಂದ್ರದಲ್ಲಿ ಮಾರಲಾಗದೆ ಖಾಸಗಿಯಾಗಿ ಕಡಿಮೆ ಬೆಲೆಗೆ ಮಾರಾಟ ಮಾಡಿ ನಷ್ಟ ಅನುಭವಿಸುತ್ತಾನೆ. ಅಷ್ಟೆ ಅಲ್ಲದೆ ಭೂಮಿ ಪತ್ರವನ್ನು ವ್ಯಾಪಾರಿಗಳು ತಮಗೆ ಬೇಕಾದಂತೆ ಪಡೆದು, ರೈತರಿಂದ ಕಡಿಮೆ ಬೆಳೆಗಳನ್ನು ಖರೀದಿ ಮಾಡಿ ಅದನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುವು ಸಾಧ್ಯತೆ ಕೂಡಾ ಇರುತ್ತೆ.

ಪ್ರಕಾಶ್ ಕಮ್ಮರಡಿ

“ಪ್ರತಿ ಬೆಳೆಗೂ ವೈಜ್ಞಾನಿಕ ದರ ನಿಗದಿಪಡಿಸಿ ಅದಕ್ಕಿಂತ ಕಡಿಮೆ ಬೆಲೆಗೆ ಖಾಸಗಿ ಹಾಗೂ ಸರ್ಕಾರಿ ಮಾರುಕಟ್ಟೆಯಲ್ಲಿ ಖರೀದಿ ಮಾಡುವಂತಿಲ್ಲ, ಅದಾಗಿಯೂ ಕಡಿಮೆ ಬೆಲೆ ನಿಗದಿ ಪಡಿಸಿದರೆ ಶಿಕ್ಷೆಗೆ ಒಳಪಡಿಸುವ ಕಾನೂನು ಬಂದರೆ ಈ ಸಮಸ್ಯೆಯ ಪರಿಹಾರವಾಗುತ್ತದೆ” ಎಂದು ಕರ್ನಾಟಕದ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾಗಿರುವ ಪ್ರಕಾಶ್ ಕಮ್ಮರಡಿ ಹೇಳುತ್ತಾರೆ. ಇಂತಹ ಕಾನೂನುಗಳು ರಾಜಸ್ಥಾನ ಹಾಗೂ ಕೇರಳ ಸರ್ಕಾರಗಳು ಮಾಡಿದೆ ಎಂದು ಅವರು ಉಲ್ಲೇಖಿಸುತ್ತಾರೆ.

ಇದನ್ನೂ ಓದಿ: ರೈತಬಂಧು ಪ್ರವಾದಿ ಮುಹಮ್ಮದ್ (ಸ) : ಮಿಸ್ರಿಯಾ ಐ ಪಜೀರ್

ಖರೀದಿ ಕೇಂದ್ರಗಳು ಈ ಸಮಯದಲ್ಲಿ ಯಾಕಿರಬೇಕು?

ಬೆಳೆಗಳು ಕೊಯ್ಲಿಗೆ ಬಂದು ಎಲ್ಲಾ ಕಡೆಯಿಂದಲೂ ಮಾರುಕಟ್ಟೆಗೆ ಬರುತ್ತಿರುವಾಗ ಸಹಜವಾಗಿಯೆ ಬೆಲೆಗಳು ಇಳಿಕೆಯಾಗುತ್ತದೆ. ಇದರ ಲಾಭವನ್ನು ಖಾಸಗಿ ವ್ಯಾಪಾರಿಗಳು ಪಡೆದು ಕೊಳ್ಳುತ್ತಾರೆ. ಕೆಲವೊಮ್ಮ ದರಗಳು ಎಷ್ಟು ಇಳಿದು ಹೋಗತ್ತದೆಯೆಂದರೆ ರೈತನೂ ತನ್ನ ಬೆಳೆಗಳನ್ನು ಇಳಿಸಿದ ಹಮಾಲಿಗೆ ಕೂಡಾ ಕೊಡಲು ದುಡ್ಡು ಇಲ್ಲದಷ್ಟು. ಈ ರೀತಿಯ ಸಮಸ್ಯೆಗಳು ಬರದಂತೆ ತಡೆಯಲು ಸರ್ಕಾರವೆ ಮುಂದೆ ನಿಂತು ರೈತರ ಬೆಳೆಗಳಿಗೆ ಬೆಂಬಲ ಬೆಲೆಯನ್ನು ನೀಡಿ ಖರೀದಿಸುತ್ತದೆ.

ಸುರೇಶ್ ಕಂಜರ್ಪಣೆ

ಪ್ರತಿ ಕೊಯ್ಲಿನ ಸಮಯದಲ್ಲಿ ಸರ್ಕಾರ ಬೆಲೆಗಳಿಗೆ ಸರಿಯಾದ ದರ ನಿಗದಿಪಡಿಸಿ ಅವುಗಳನ್ನು ಖರೀದಿ ಮಾಡಿದರೆ, ರೈತರನ್ನು ವ್ಯಾಪಾರಿಗಳಿಂದ ಕಾಪಾಡಿದಂತಾಗುತ್ತದೆ. “ಬಿತ್ತನೆ ಎಷ್ಟಾಗಿದೆ, ಅಂದಾಜು ಎಷ್ಟು ಬೆಳೆಗಳು, ಎಷ್ಟು ಪ್ರಮಾಣದಲ್ಲಿ, ಯಾವಾಗ ಮಾರುಕಟ್ಟೆಗೆ ಬರುತ್ತದೆ ಎಂದು ಸರ್ಕಾರಕ್ಕೆ ತಿಳಿದಿರುತ್ತದೆ. ಆವಾಗಲೇ ಖರೀದಿ ಕೇಂದ್ರಗಳಿಗೆ ತಯಾರಿ ಮಾಡುವ ಸಮಯಾವಕಾಶಗಳು ಅದಕ್ಕೆ ಇರುತ್ತದೆ. ಆದರೆ ಸರ್ಕಾರಕ್ಕೆ ಆ ಇಚ್ಛಾಶಕ್ತಿ ಇಲ್ಲದೆ ಇರುವುದು ದುರಂತವಾಗಿದೆ” ಎಂದು ಕೃಷಿ ತಜ್ಞ ಸುರೇಶ್ ಕಂಜರ್ಪಣೆ ಹೇಳುತ್ತಾರೆ.

ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಿರುವುದೇನು?

ಇದುವರೆಗೂ ಸರ್ಕಾರ ಕೇವಲ 26 ಪ್ರಮುಖ ಬೆಲೆಗಳಿಗಷ್ಟೆ ಬೆಂಬಲ ಬೆಲೆ ನೀಡುತ್ತಿತ್ತು. ಇದೀಗ ಹೊಸತಾಗಿ ತರುತ್ತಿರುವ ಕಾಯ್ದೆಯಲ್ಲಿ ಅವುಗಳ ಸಂಖ್ಯೆಯನ್ನು ಇನ್ನೂ ಇಳಿಸುತ್ತಿದೆ. ಅಲ್ಲದೆ ಎಪಿಎಂಸಿ ಸೇರಿದಂತೆ ಕೆಲವು ಮಾರುಕಟ್ಟೆಗಳಲ್ಲಿ ಮಾತ್ರ ಖರೀದಿ ಕೇಂದ್ರಗಳಿವೆ. ಅವುಗಳು ಹೆಚ್ಚಿನವು ಜಿಲ್ಲಾ ಕೇಂದ್ರಗಳಲ್ಲಿ ಇದರಿಂದಾಗಿ ಸಣ್ಣಪುಟ್ಟ ರೈತರಿಗೆ ತಾವು ಬೆಳೆದ ಬೆಳೆಗಳನ್ನು ಅಲ್ಲಿವರೆಗೆ ಸಾಗಾಟ ಮಾಡುವುದು ದುಬಾರಿ ಎಣಿಸುತ್ತದೆ. ಅಷ್ಟೇ ಅಲ್ಲದೆ ಸರ್ಕಾರ ಕೂಡಾ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಮೀನಾಮೇಷ ಎಣಿಸುತ್ತದೆ. ಇವುಗಳಿಂದಾಗಿ ರೈತನು ಮತ್ತಷ್ಟು ಕಷ್ಟಕ್ಕೆ ಒಳಗಾಗುತ್ತಾನೆ.

ಇದನ್ನೂ ಓದಿ: ರಾಜಸ್ಥಾನ: ವಿಮಾ ಕಂಪನಿ, ಬ್ಯಾಂಕ್ ವಿರುದ್ಧ ಸತತ 3 ವರ್ಷ ಹೋರಾಡಿ ವಿಮಾ ಹಕ್ಕು ಪಡೆದ ರೈತರು!

ಕೋಡಿಹಳ್ಳಿ ಚಂದ್ರಶೇಖರ್‌‌

“ಕಟಾವಿಗೆ ಬಂದಂತಹ ಎಲ್ಲಾ ಬೆಳೆಗಳು ’ಕನಿಷ್ಠ ಮಾರಾಟ ದರ’ದ ಒಳಗಡೆ ಖರೀದಿಯಾಗಬೇಕು. ಈ ಕನಿಷ್ಠ ಮಾರಾಟ ದರದ ನೀಡದಿದ್ದರೆ ಎರಡು ವರ್ಷ ಜೈಲು ಶಿಕ್ಷೆಯ ಕಾನೂನು ಆಗಬೇಕು. ಅಷ್ಟೇ ಅಲ್ಲದೆ ಜಿಲ್ಲಾ ಕೇಂದ್ರದಲ್ಲಿ ಇರುವ ಖರೀದಿ ಕೇಂದ್ರಗಳನ್ನು ಹೋಬಳಿ ಮಟ್ಟದಲ್ಲಿ ತೆರೆಯಬೇಕು” ಎಂದು ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್‌ ಹೇಳುತ್ತಾರೆ.

ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಹೇಳುವಂತೆ, “ರಾಜ್ಯ ಸರ್ಕಾರ ಖರೀದಿ ಕೇಂದ್ರ ಸರ್ಕಾರ ತೆರೆಯಲು ಈಗಲೇ ಸಿದ್ದತೆ ನಡೆಸಬೇಕು. ರೈತನು ತನ್ನ ಬೆಳೆಯನ್ನು ಸಾಗಿಸುವ ಸಾರಿಗೆ ವೆಚ್ಚವನ್ನು ಸರ್ಕಾರವೆ ಹೊರಬೇಕು. ಆಗ ಖರೀದಿ ಕೇಂದ್ರಗಳಿಗೆ ತನ್ನ ಬೆಳೆಗಳನ್ನು ಸಾಗಿಸಲು ಸಾಧ್ಯವಾಗುತ್ತದೆ. ರೈತ ತಂದ ಬೆಳೆಗಳನ್ನು ಕೂಡಿಡುವ ವ್ಯವಸ್ಥೆಯನ್ನು ಕೂಡಾ ಸರ್ಕಾರ ಮಾಡಬೇಕು. ಈ ಕೂಡಿಟ್ಟ ಬೆಳೆಗಳ ಆಧಾರದಲ್ಲಿ ಅಡಮಾನ ಸಾಲವನ್ನು ಶೂನ್ಯ ಬಡ್ಡ ದರದಲ್ಲಿ ಸರ್ಕಾರ ನೀಡಬೇಕು” ಎಂದು ಹೇಳುತ್ತಾರೆ.

PC: Tribune India

ರಾಜ್ಯದಲ್ಲಿ ಬೆಳೆಯುವ ಪ್ರಮುಖ ಬೆಳೆಗಳಿಗೆ ಬೆಂಬಲ ಬೆಲೆ, ಉಗ್ರಾಣ, ಸಾರಿಗೆ, ಅವುಗಳ ಮೇಲಿನ ಬಡ್ಡಿ ರಹಿತ ಸಾಲ ಸೇರಿದಂತೆ ಖರೀದಿ ಕೇಂದ್ರಗಳಲ್ಲಿ ಖರೀದಿ ಮಾಡಲು 5-10 ಸಾವಿರ ಕೋಟಿ ಹಣಕಾಸು ಬೇಡುತ್ತದೆ. “ಈ ಹಣಕಾಸು ಒದಗಿಸುವುದು ರಾಜ್ಯ ಸರ್ಕಾರಕ್ಕೆ ಯಾವ ರೀತಿಯಿಂದಲೂ ಹೊರೆಯಾಗುವುದಿಲ್ಲ, ಆದರೆ ಸರ್ಕಾರ ಇಚ್ಚಾಶಕ್ತಿ ತೋರಿಸಬೇಕಷ್ಟೆ” ಎಂದು ಅವರು ಪ್ರಕಾಶ್ ಕಮ್ಮರಡಿ ಹೇಳುತ್ತಾರೆ.


ಇದನ್ನೂ ಓದಿ: ಡೇರಿ ಫಾರಂ, ಗೋಶಾಲೆಗಳಿಗೆ ಅನುಮತಿ ಕಡ್ಡಾಯ: ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ರೈತರ ಬದುಕಿಗೆ ಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...