Homeಕರ್ನಾಟಕಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ರಾಜ್ಯದಲ್ಲಿ ಬೆಳೆಯುವ ಪ್ರಮುಖ ಬೆಳೆಗಳಿಗೆ ಬೆಂಬಲ ಬೆಲೆ, ಉಗ್ರಾಣ, ಸಾರಿಗೆ, ಅವುಗಳ ಮೇಲಿನ ಬಡ್ಡಿ ರಹಿತ ಸಾಲ ಸೇರಿದಂತೆ ಖರೀದಿ ಕೇಂದ್ರಗಳಲ್ಲಿ ಖರೀದಿ ಮಾಡಲು 5-10 ಸಾವಿರ ಕೋಟಿ ಹಣಕಾಸು ಬೇಡುತ್ತದೆ. ಈ ಹಣಕಾಸು ರಾಜ್ಯ ಸರ್ಕಾರಕ್ಕೆ ಯಾವ ರೀತಿಯಿಂದಲೂ ಹೊರೆಯಲ್ಲ

- Advertisement -
- Advertisement -

ಉದ್ಯೋಗ ಅರಸುತ್ತಾ ಹಳ್ಳಿಯಿಂದ ನಗರದ ಕಡೆಗೆ ವಲಸೆ ಬಂದಿದ್ದ ಕೋಟ್ಯಾಂತರ ಜನರು ಯಾವುದೇ ಸಿದ್ದತೆಗಳಿಲ್ಲದೆ ಸರ್ಕಾರಗಳು ಹೇರಿದ್ದ ಲಾಕ್‌ಡೌನ್‌ನಿಂದಾಗಿ ನಗರದಲ್ಲಿಯೂ ಉದ್ಯೋಗಗಳಿಲ್ಲದೆ ಮತ್ತೇ ತಮ್ಮ ಹಳ್ಳಿಗಳಿಗೆ ಮರಳಿದ್ದಾರೆ. ಇದೆ ಸಮಯದಲ್ಲಿ ಉತ್ತಮ ಮುಂಗಾರು ಮಳೆಯಾದ್ದರಿಂದ ಉತ್ತಮ ಬೆಳೆಯಾಗಿದ್ದು, ಇದೀಗ ಮುಂಗಾರು ಬೆಳೆಗಳು ಮಾರುಕಟ್ಟೆಗೆ ಬರಲು ಪ್ರಾರಂಭವಾಗಿದೆ.

ರಾಜ್ಯದ ಕೆಲವೆಡೆ ಪ್ರವಾಹ ಬಂದು ಬೆಳೆಗಳು ಕೊಚ್ಚಿಕೊಂಡು ಹೋಗಿದೆಯದರೂ, ಉಳಿದ ಕಡೆ ರೈತರಿಗೆ ಉತ್ತಮ ಇಳುವರಿ ಬಂದಿದೆ. ಉತ್ತಮ ಬೆಳೆಯಾದರೆ ಸಾಮಾನ್ಯವಾಗಿ ಬೆಲೆಗಳು ಸಹಜವಾಗಿಯೇ ಇಳಿಯುತ್ತದೆ. ಆದರೆ ತಾನು ಕಷ್ಟ ಪಟ್ಟ ಬೆಳೆದ ಬೆಳೆಗಳನ್ನು ನಷ್ಟಕ್ಕೆ ಮಾರಾಟ ಮಾಡಲಾಗದೆ, ಬೆಳೆಗಳನ್ನು ತನ್ನಲ್ಲಿ ಇಟ್ಟುಕೊಳ್ಳಲೂ ಆಗದೆ ರೈತರು ಕಷ್ಟಕ್ಕ ಸಿಲುಕಿದ್ದಾರೆ. ಈ ಸಮಯದಲ್ಲಿ ಸರ್ಕಾರಗಳು ಖರೀದಿ ಕೇಂದ್ರಗಳನ್ನು ತೆರೆದು ರೈತರ ಬೆಳೆಗಳನ್ನು ಖರೀದಿ ಮಾಡಬೇಕು ಎಂದು ಹೋರಾಟಗಳು ನಡೆಯುತ್ತಿವೆ.

ಇದನ್ನೂ ಓದಿ: ಕೇಂದ್ರ ಸರ್ಕಾರದೊಂದಿಗೆ ರೈತ ಮುಖಂಡರ ಮಾತುಕತೆ ವಿಫಲ: ನ.26,27ಕ್ಕೆ ದೆಹಲಿ ಚಲೋ

ರೈತ ವಿರೋಧಿ
ಫೋಟೋ ಕೃಪೆ: ಸಿದ್ದೇಶ್ ಎಮ್‌.ಇ

ಅಲ್ಲದೆ ಇದೀಗ ಕೇಂದ್ರ ಹಾಗೂ ರಾಜ್ಯ ಸಕಾರಗಳು ಹಲವಾರು ರೈತ ವಿರೋಧಿ ಕಾಯ್ದೆಗಳನ್ನು ತಂದು ಬೆಂಬಲ ಬೆಲೆಗಳನ್ನು ಇಲ್ಲವಾಗಿಸುತ್ತಿದೆ. ರಾಜ್ಯ ಸೇರಿದಂತೆ ಕೇಂದ್ರ ಸರ್ಕಾರಗಳು ಖರೀದಿ ಕೇಂದ್ರದ ಬಗ್ಗೆ ಯಾವುದೆ ಮಾತೆತ್ತುತ್ತಿಲ್ಲ ಎಂದು ರೈತರು ದೂರುತ್ತಿದ್ದಾರೆ.

ಖರೀದಿ ಕೇಂದ್ರಗಳು ಎಂದರೇನು?

ಮಾರುಕಟ್ಟೆಯಲ್ಲಿ ಬೆಳೆಗಳು ಅಧಿಕವಾಗಿ ಬಂದಾಗ ಸಹಜವಾಗಿ ಬೆಲೆ ಇಳಿದು ಹೋಗುತ್ತದೆ. ಈ ಸಮಯದಲ್ಲಿ ರೈತರಿಗೆ ತಾವು ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ಸಂಕಷ್ಟಕ್ಕೆ ಒಳಗಾಗುತ್ತಾರೆ. ಈ ಸಮಯದಲ್ಲಿ ಸರ್ಕಾರವೆ ಮುಂದೆ ನಿಂತು ಎಪಿಎಂಸಿ ಸೇರಿದಂತೆ ಸರ್ಕಾರಿ ನಿಯಂತ್ರಿತ ಮಾರುಕಟ್ಟೆಗಳಲ್ಲಿ ಬೆಳೆಗಳಿಗೆ ನಿಗದಿತ ಬೆಲೆಯನ್ನು ನೀಡಿ ಖರೀದಿ ಮಾಡುತ್ತದೆ. ಈ ಖರೀದಿ ಕೇಂದ್ರಗಳಲ್ಲಿ ಈ ಬೆಲೆಯೂ ತನ್ನದೆಂದು ದೃಡೀಕರಿಸಲು ರೈತನೂ ತನ್ನ ಬೆಳೆಗಳ ಜೊತೆಗೆ ತನ್ನ ಭೂಮಿಯ ಪತ್ರಗಳನ್ನು ತರಬೇಕಾಗುತ್ತದೆ.

PC : The United Nations

ಭೂಮಿ ಪತ್ರಗಳನ್ನು ತರಬೇಕು ಎನ್ನುವ ನಿಯಮ ಕೆಲವೊಮ್ಮ ರೈತರಿಗೆ ಮಾರಕವಾಗಿಯೂ ಪರಿಣಮಿಸುತ್ತದೆ. ಯಾಕೆಂದರೆ ತನ್ನ ಜಮೀನಲ್ಲದೆ ಇತರರಿಂದ ಗೇಣಿಗೆ ಪಡೆದು ಬೆಳೆದವನು ಅದನ್ನು ಖರೀದಿ ಕೇಂದ್ರದಲ್ಲಿ ಮಾರಲಾಗದೆ ಖಾಸಗಿಯಾಗಿ ಕಡಿಮೆ ಬೆಲೆಗೆ ಮಾರಾಟ ಮಾಡಿ ನಷ್ಟ ಅನುಭವಿಸುತ್ತಾನೆ. ಅಷ್ಟೆ ಅಲ್ಲದೆ ಭೂಮಿ ಪತ್ರವನ್ನು ವ್ಯಾಪಾರಿಗಳು ತಮಗೆ ಬೇಕಾದಂತೆ ಪಡೆದು, ರೈತರಿಂದ ಕಡಿಮೆ ಬೆಳೆಗಳನ್ನು ಖರೀದಿ ಮಾಡಿ ಅದನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುವು ಸಾಧ್ಯತೆ ಕೂಡಾ ಇರುತ್ತೆ.

ಪ್ರಕಾಶ್ ಕಮ್ಮರಡಿ

“ಪ್ರತಿ ಬೆಳೆಗೂ ವೈಜ್ಞಾನಿಕ ದರ ನಿಗದಿಪಡಿಸಿ ಅದಕ್ಕಿಂತ ಕಡಿಮೆ ಬೆಲೆಗೆ ಖಾಸಗಿ ಹಾಗೂ ಸರ್ಕಾರಿ ಮಾರುಕಟ್ಟೆಯಲ್ಲಿ ಖರೀದಿ ಮಾಡುವಂತಿಲ್ಲ, ಅದಾಗಿಯೂ ಕಡಿಮೆ ಬೆಲೆ ನಿಗದಿ ಪಡಿಸಿದರೆ ಶಿಕ್ಷೆಗೆ ಒಳಪಡಿಸುವ ಕಾನೂನು ಬಂದರೆ ಈ ಸಮಸ್ಯೆಯ ಪರಿಹಾರವಾಗುತ್ತದೆ” ಎಂದು ಕರ್ನಾಟಕದ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾಗಿರುವ ಪ್ರಕಾಶ್ ಕಮ್ಮರಡಿ ಹೇಳುತ್ತಾರೆ. ಇಂತಹ ಕಾನೂನುಗಳು ರಾಜಸ್ಥಾನ ಹಾಗೂ ಕೇರಳ ಸರ್ಕಾರಗಳು ಮಾಡಿದೆ ಎಂದು ಅವರು ಉಲ್ಲೇಖಿಸುತ್ತಾರೆ.

ಇದನ್ನೂ ಓದಿ: ರೈತಬಂಧು ಪ್ರವಾದಿ ಮುಹಮ್ಮದ್ (ಸ) : ಮಿಸ್ರಿಯಾ ಐ ಪಜೀರ್

ಖರೀದಿ ಕೇಂದ್ರಗಳು ಈ ಸಮಯದಲ್ಲಿ ಯಾಕಿರಬೇಕು?

ಬೆಳೆಗಳು ಕೊಯ್ಲಿಗೆ ಬಂದು ಎಲ್ಲಾ ಕಡೆಯಿಂದಲೂ ಮಾರುಕಟ್ಟೆಗೆ ಬರುತ್ತಿರುವಾಗ ಸಹಜವಾಗಿಯೆ ಬೆಲೆಗಳು ಇಳಿಕೆಯಾಗುತ್ತದೆ. ಇದರ ಲಾಭವನ್ನು ಖಾಸಗಿ ವ್ಯಾಪಾರಿಗಳು ಪಡೆದು ಕೊಳ್ಳುತ್ತಾರೆ. ಕೆಲವೊಮ್ಮ ದರಗಳು ಎಷ್ಟು ಇಳಿದು ಹೋಗತ್ತದೆಯೆಂದರೆ ರೈತನೂ ತನ್ನ ಬೆಳೆಗಳನ್ನು ಇಳಿಸಿದ ಹಮಾಲಿಗೆ ಕೂಡಾ ಕೊಡಲು ದುಡ್ಡು ಇಲ್ಲದಷ್ಟು. ಈ ರೀತಿಯ ಸಮಸ್ಯೆಗಳು ಬರದಂತೆ ತಡೆಯಲು ಸರ್ಕಾರವೆ ಮುಂದೆ ನಿಂತು ರೈತರ ಬೆಳೆಗಳಿಗೆ ಬೆಂಬಲ ಬೆಲೆಯನ್ನು ನೀಡಿ ಖರೀದಿಸುತ್ತದೆ.

ಸುರೇಶ್ ಕಂಜರ್ಪಣೆ

ಪ್ರತಿ ಕೊಯ್ಲಿನ ಸಮಯದಲ್ಲಿ ಸರ್ಕಾರ ಬೆಲೆಗಳಿಗೆ ಸರಿಯಾದ ದರ ನಿಗದಿಪಡಿಸಿ ಅವುಗಳನ್ನು ಖರೀದಿ ಮಾಡಿದರೆ, ರೈತರನ್ನು ವ್ಯಾಪಾರಿಗಳಿಂದ ಕಾಪಾಡಿದಂತಾಗುತ್ತದೆ. “ಬಿತ್ತನೆ ಎಷ್ಟಾಗಿದೆ, ಅಂದಾಜು ಎಷ್ಟು ಬೆಳೆಗಳು, ಎಷ್ಟು ಪ್ರಮಾಣದಲ್ಲಿ, ಯಾವಾಗ ಮಾರುಕಟ್ಟೆಗೆ ಬರುತ್ತದೆ ಎಂದು ಸರ್ಕಾರಕ್ಕೆ ತಿಳಿದಿರುತ್ತದೆ. ಆವಾಗಲೇ ಖರೀದಿ ಕೇಂದ್ರಗಳಿಗೆ ತಯಾರಿ ಮಾಡುವ ಸಮಯಾವಕಾಶಗಳು ಅದಕ್ಕೆ ಇರುತ್ತದೆ. ಆದರೆ ಸರ್ಕಾರಕ್ಕೆ ಆ ಇಚ್ಛಾಶಕ್ತಿ ಇಲ್ಲದೆ ಇರುವುದು ದುರಂತವಾಗಿದೆ” ಎಂದು ಕೃಷಿ ತಜ್ಞ ಸುರೇಶ್ ಕಂಜರ್ಪಣೆ ಹೇಳುತ್ತಾರೆ.

ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಿರುವುದೇನು?

ಇದುವರೆಗೂ ಸರ್ಕಾರ ಕೇವಲ 26 ಪ್ರಮುಖ ಬೆಲೆಗಳಿಗಷ್ಟೆ ಬೆಂಬಲ ಬೆಲೆ ನೀಡುತ್ತಿತ್ತು. ಇದೀಗ ಹೊಸತಾಗಿ ತರುತ್ತಿರುವ ಕಾಯ್ದೆಯಲ್ಲಿ ಅವುಗಳ ಸಂಖ್ಯೆಯನ್ನು ಇನ್ನೂ ಇಳಿಸುತ್ತಿದೆ. ಅಲ್ಲದೆ ಎಪಿಎಂಸಿ ಸೇರಿದಂತೆ ಕೆಲವು ಮಾರುಕಟ್ಟೆಗಳಲ್ಲಿ ಮಾತ್ರ ಖರೀದಿ ಕೇಂದ್ರಗಳಿವೆ. ಅವುಗಳು ಹೆಚ್ಚಿನವು ಜಿಲ್ಲಾ ಕೇಂದ್ರಗಳಲ್ಲಿ ಇದರಿಂದಾಗಿ ಸಣ್ಣಪುಟ್ಟ ರೈತರಿಗೆ ತಾವು ಬೆಳೆದ ಬೆಳೆಗಳನ್ನು ಅಲ್ಲಿವರೆಗೆ ಸಾಗಾಟ ಮಾಡುವುದು ದುಬಾರಿ ಎಣಿಸುತ್ತದೆ. ಅಷ್ಟೇ ಅಲ್ಲದೆ ಸರ್ಕಾರ ಕೂಡಾ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಮೀನಾಮೇಷ ಎಣಿಸುತ್ತದೆ. ಇವುಗಳಿಂದಾಗಿ ರೈತನು ಮತ್ತಷ್ಟು ಕಷ್ಟಕ್ಕೆ ಒಳಗಾಗುತ್ತಾನೆ.

ಇದನ್ನೂ ಓದಿ: ರಾಜಸ್ಥಾನ: ವಿಮಾ ಕಂಪನಿ, ಬ್ಯಾಂಕ್ ವಿರುದ್ಧ ಸತತ 3 ವರ್ಷ ಹೋರಾಡಿ ವಿಮಾ ಹಕ್ಕು ಪಡೆದ ರೈತರು!

ಕೋಡಿಹಳ್ಳಿ ಚಂದ್ರಶೇಖರ್‌‌

“ಕಟಾವಿಗೆ ಬಂದಂತಹ ಎಲ್ಲಾ ಬೆಳೆಗಳು ’ಕನಿಷ್ಠ ಮಾರಾಟ ದರ’ದ ಒಳಗಡೆ ಖರೀದಿಯಾಗಬೇಕು. ಈ ಕನಿಷ್ಠ ಮಾರಾಟ ದರದ ನೀಡದಿದ್ದರೆ ಎರಡು ವರ್ಷ ಜೈಲು ಶಿಕ್ಷೆಯ ಕಾನೂನು ಆಗಬೇಕು. ಅಷ್ಟೇ ಅಲ್ಲದೆ ಜಿಲ್ಲಾ ಕೇಂದ್ರದಲ್ಲಿ ಇರುವ ಖರೀದಿ ಕೇಂದ್ರಗಳನ್ನು ಹೋಬಳಿ ಮಟ್ಟದಲ್ಲಿ ತೆರೆಯಬೇಕು” ಎಂದು ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್‌ ಹೇಳುತ್ತಾರೆ.

ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಹೇಳುವಂತೆ, “ರಾಜ್ಯ ಸರ್ಕಾರ ಖರೀದಿ ಕೇಂದ್ರ ಸರ್ಕಾರ ತೆರೆಯಲು ಈಗಲೇ ಸಿದ್ದತೆ ನಡೆಸಬೇಕು. ರೈತನು ತನ್ನ ಬೆಳೆಯನ್ನು ಸಾಗಿಸುವ ಸಾರಿಗೆ ವೆಚ್ಚವನ್ನು ಸರ್ಕಾರವೆ ಹೊರಬೇಕು. ಆಗ ಖರೀದಿ ಕೇಂದ್ರಗಳಿಗೆ ತನ್ನ ಬೆಳೆಗಳನ್ನು ಸಾಗಿಸಲು ಸಾಧ್ಯವಾಗುತ್ತದೆ. ರೈತ ತಂದ ಬೆಳೆಗಳನ್ನು ಕೂಡಿಡುವ ವ್ಯವಸ್ಥೆಯನ್ನು ಕೂಡಾ ಸರ್ಕಾರ ಮಾಡಬೇಕು. ಈ ಕೂಡಿಟ್ಟ ಬೆಳೆಗಳ ಆಧಾರದಲ್ಲಿ ಅಡಮಾನ ಸಾಲವನ್ನು ಶೂನ್ಯ ಬಡ್ಡ ದರದಲ್ಲಿ ಸರ್ಕಾರ ನೀಡಬೇಕು” ಎಂದು ಹೇಳುತ್ತಾರೆ.

PC: Tribune India

ರಾಜ್ಯದಲ್ಲಿ ಬೆಳೆಯುವ ಪ್ರಮುಖ ಬೆಳೆಗಳಿಗೆ ಬೆಂಬಲ ಬೆಲೆ, ಉಗ್ರಾಣ, ಸಾರಿಗೆ, ಅವುಗಳ ಮೇಲಿನ ಬಡ್ಡಿ ರಹಿತ ಸಾಲ ಸೇರಿದಂತೆ ಖರೀದಿ ಕೇಂದ್ರಗಳಲ್ಲಿ ಖರೀದಿ ಮಾಡಲು 5-10 ಸಾವಿರ ಕೋಟಿ ಹಣಕಾಸು ಬೇಡುತ್ತದೆ. “ಈ ಹಣಕಾಸು ಒದಗಿಸುವುದು ರಾಜ್ಯ ಸರ್ಕಾರಕ್ಕೆ ಯಾವ ರೀತಿಯಿಂದಲೂ ಹೊರೆಯಾಗುವುದಿಲ್ಲ, ಆದರೆ ಸರ್ಕಾರ ಇಚ್ಚಾಶಕ್ತಿ ತೋರಿಸಬೇಕಷ್ಟೆ” ಎಂದು ಅವರು ಪ್ರಕಾಶ್ ಕಮ್ಮರಡಿ ಹೇಳುತ್ತಾರೆ.


ಇದನ್ನೂ ಓದಿ: ಡೇರಿ ಫಾರಂ, ಗೋಶಾಲೆಗಳಿಗೆ ಅನುಮತಿ ಕಡ್ಡಾಯ: ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ರೈತರ ಬದುಕಿಗೆ ಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...