Homeಮುಖಪುಟಟೊಯೊಟಾ: 5 ನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಪ್ರತಿಭಟನೆ- ದರ್ಪ ತೋರುತ್ತಿರುವ ಕಂಪನಿ ಆಡಳಿತ!

ಟೊಯೊಟಾ: 5 ನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಪ್ರತಿಭಟನೆ- ದರ್ಪ ತೋರುತ್ತಿರುವ ಕಂಪನಿ ಆಡಳಿತ!

ಪ್ರಶ್ನಿಸುವ ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರನ್ನು ಕಂಪನಿ ದಮನಿಸುತ್ತಿದೆ. ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಅದನ್ನೂ ಮೀರಿ ದನಿಯೆತ್ತಿದರೂ ನಮ್ಮ ಸರ್ಕಾರ ಅದಕ್ಕೆ ಬೆಲೆ ಕೊಟ್ಟು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದು ನಮ್ಮ ದೇಶದ ಪರಿಸ್ಥಿತಿ

- Advertisement -
- Advertisement -

ತಮ್ಮ ಮೆಲಿನ ದೌರ್ಜನ್ಯವನ್ನು ಕೊನೆಗೊಳಿಸುವಂತೆ ಮತ್ತು ದಿಢೀರ್ ಎಂದು ಘೋಷಿಸಿರುವ ಲಾಕೌಟ್ ಕ್ರಮವನ್ನು ಹಿಂಪಡೆಯಬೇಕೆಂದು ಟೊಯೊಟಾ ಮೋಟಾರ್ಸ್‌ ಕಾರ್ ಕಂಪನಿಯ ಕಾರ್ಮಿಕರು ಕಳೆದ 5 ದಿನಗಳಿಂದ ಬಿಡದಿಯಲ್ಲಿರುವ ಕಂಪನಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದುವರೆಗೆ ಆಡಳಿತ ಮಂಡಳಿಯು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೋರಾಟನಿರತ ಕಾರ್ಮಿಕರು ಹೇಳುತ್ತಾರೆ.

ರಾಜ್ಯದ ಉಪಮುಖ್ಯಮಂತ್ರಿಗಳಾದ ಅಶ್ವತ್ ನಾರಾಯನ್ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಮಿಕ ಸಚಿವರು ಮತ್ತು ಕಾರ್ಮಿಕ ಕಮಿಷನರ್ ಅವರನ್ನೂ ಭೇಟಿ ಮಾಡಿ ನಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದೇವೆ. ಆದರೆ ಸರ್ಕಾರದ ಕಡೆಯಿಂದಾಗಲೀ ಅಥವಾ ಅಧಿಕಾರಿಗಳ ಕಡೆಯಿಂದಾಗಲೀ ಯಾವುದೇ ಗಮನಾರ್ಹ ಕ್ರಮ ಕೈಗೊಂಡಿಲ್ಲ ಎಂದು ಹೆಸರು ಹೇಳಲಿಚ್ಚಿಸದ ಹೋರಾಟಗಾರರೊಬ್ಬರು ನಾನು ಗೌರಿ.ಕಾಂ ಗೆ ಹೇಳಿದರು.

ಇದನ್ನೂ ಓದಿ: ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಜಪಾನ್ ಮೂಲದ ಕಂಪನಿಯು 1999 ರಿಂದಲೂ ಬಿಡದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಸಾವಿರಾರು ಕಾರ್ಮಿಕರು ಕಳೆದ 20 ವರ್ಷದಿಂದಲೂ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅವೈಜ್ಞಾನಿಕ ಕೆಲಸದ ಸಮಯ ಮತ್ತು ಕೆಲಸದ ಶಿಫ್ಟ್‌, ಪ್ರಶ್ನೆ ಮಾಡುವ ಕಾರ್ಮಿಕರು ಮತ್ತು ಕಾರ್ಮಿಕ ಮುಖಂಡರ ಅಮಾನತು, ಬಂಡವಾಳಶಾಹಿಗಳ ದರ್ಪ, ದಿಢೀರ್ ಲಾಕೌಟ್ ಸೇರಿದಂತೆ ಹತ್ತಾರು ಸಮಸ್ಯೆಗಳನ್ನಿಟ್ಟುಕೊಂಡು ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಟೊಯೊಟಾ ಕಂಪನಿಯ ಸುಮಾರು 3500 ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ…

“ಮೊದಲಿನಿಂದಲೂ ನಮ್ಮ ಸಮಸ್ಯೆಗಳ ಬಗ್ಗೆ ನಾವು ಪ್ರಶ್ನೆ ಮಾಡುತ್ತಲೇ ಬಂದಿದ್ದೇವೆ. ಆದರೆ ಈ ರೀತಿ ಪ್ರಶ್ನೆ ಮಾಡುವವರ ವಿರುದ್ಧ ಆಡಳಿತ ಮಂಡಳಿಯು ಅನ್-ಆಥರೈಸ್‌ಡ್ ರಜೆಯ ಅಸ್ತ್ರವನ್ನು ಬಳಸಿ ಅವರನ್ನು ಕೆಲಸದಿಂದ ತೆಗೆಯುವ ಹುನ್ನಾರ ಮಾಡುತ್ತಿದೆ. ಜೊತೆಗೆ ಖಾಯಂ ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಕು ಎನ್ನುವ ಉದ್ದೇಶದಿಂದ ಕೆಲಸದ ಸಮಯವನ್ನು ಕಡಿಮೆಗೊಳಿಸಿ, ಉತ್ಪಾದನಾ ಮಟ್ಟವನ್ನು ಹೆಚ್ಚಿಸಬೇಕು ಎಂದು ಹೇಳುತ್ತಿದೆ. ನಿಜಕ್ಕೂ ಇದು ಅಮಾನವೀಯ ಮತ್ತು ಶೋಷಣೆಯಾಗಿದೆ. ಇದರ ಬಗ್ಗೆ ಪ್ರಶ್ನೆ ಮಾಡಿದ ಕಾರ್ಮಿಕ ಸಂಘದ ಪದಾಧಿಕಾರಿಯನ್ನು ಅಮಾನತು ಮಾಡಿದ್ದರು. ಈ ಹಿಂದೆಯೂ ಇದೇ ರೀತಿ ಇಬ್ಬರನ್ನು ಅಮಾನತು ಮಾಡಿದ್ದರು. ಆಡಳಿತದ ಈ ಕ್ರಮವನ್ನು ಕಾರ್ಮಿಕರೆಲ್ಲಾ ಒಟ್ಟಾಗಿ ಪ್ರಶ್ನಿಸಿದೆವು. ಆದರೆ ಇದನ್ನೆ ನೆಪ ಮಾಡಿಕೊಂಡು ‘ಕಾನೂನು ಬಾಹಿರ ಹೋರಾಟ ಮಾಡುತ್ತಿದ್ದಾರೆ ಎಂದು ಆಡಳಿತವು ಲಾಕೌಟ್ ಘೋ‍‍ಷಣೆಯನ್ನು ಮಾಡಿದೆ” ಎಂದು ಹೇಳಿದರು.

ಇದನ್ನೂ ಓದಿ: 40 ಐಟಿಐಗಳ ಖಾಸಗೀಕರಣಕ್ಕೆ ಮುಂದಾದ ಯೋಗಿ ಸರ್ಕಾರ: ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ

“ಈ ಕಂಪನಿಯಲ್ಲಿ ಕಾರ್ಮಿಕರು ರೋಬೋಟ್‌ಗಳಂತೆ ಕೆಲಸ ನಿರ್ವಹಿಸಬೇಕು ಎಂದು ಆಡಳಿತ ಹೇಳುತ್ತದೆ. ಹಾಗಾಗಿಯೇ 2010 ರ ನಂತರ ಇಲ್ಲಿಗೆ ನೇಮಿಸಿಕೊಳ್ಳುವ ಕಾರ್ಮಿಕರನ್ನು ವೈದ್ಯಕೀಯ ಪರೀಕ್ಷೆಯೊಂದಿಗೆ, ಭಾರತೀಯ ಸೇನೆಯಲ್ಲಿ ಮಾಡುವ ದೈಹಿಕ ಪರೀಕ್ಷೆಯನ್ನೂ ಮಾಡಿ ನೇಮಿಸಿಕೊಳ್ಳಲಾಗುತ್ತದೆ. ನಿರ್ಧಿಷ್ಟ ಸಮಯದಲ್ಲಿ ಇಷ್ಟು ದೂರ ಓಡಬೇಕು, ಇಷ್ಟು ಭಾರ ಎತ್ತಬೇಕು ಇನ್ನು ಮುಂತಾದ ಮಾನದಂಡಗಳನ್ನು ನಿಗದಿಪಡಿಸಿ ಕಾರ್ಮಿಕರನ್ನು ನೇಮಿಸಿಕೊಂಡಿದ್ದಾರೆ. ಆದರೆ ಈ ವಿಧಾನದ ಮೂಲಕ ಆಯ್ಕೆಯಾಗಿರುವ ಕಾರ್ಮಿಕರಿಗೂ ಸಹ ಈಗ, ಮೂಳೆ ಸವೆತ, ಮಿದುಳು ಬಳ್ಳಿಯ ಸಮಸ್ಯೆ, ಕಿಡ್ನಿ ಸ್ಟೋನ್ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಿವೆ. ಇದಕ್ಕೆ ಕಾರಣ ಇಲ್ಲಿನ ಅವೈಜ್ಞಾನಿಕ ಕೆಲಸದ ಸಮಯ ಮತ್ತು ಶಿಫ್ಟ್‌ ವ್ಯವಸ್ಥೆ.

ಇದನ್ನೂ ಓದಿ: ಎಲ್ಐಸಿ ಖಾಸಗೀಕರಣ ಪ್ರಸ್ತಾಪ : ಕೇಂದ್ರದ ವಿರುದ್ಧ ಅಧಿಕಾರಿಗಳು, ನೌಕರರ ಪ್ರತಿಭಟನೆ

“ಈ ಪ್ರತಿಭಟನೆಗೆ ತತ್‌ಕ್ಷಣದ ಕಾರಣ, ಪದಾಧಿಕಾರಿಗಳ ಅಮಾನತುಗೊಳಿಸುವಿಕೆ ಮತ್ತು ಕಂಪನಿ ಲಾಕೌಟ್ ಕ್ರಮವಾಗಿದ್ದು, ಧೀರ್ಘಕಾಲಿಕವಾಗಿ ನಮ್ಮಲ್ಲಿ ಹತ್ತಾರು ಸಮಸ್ಯೆಗಳಿವೆ. ಇವುಗಳಿಗೆ ನ್ಯಾಯ ಸಿಗುವವರೆಗೂ ನಾವು ನ್ಯಾಯಯುತವಾಗಿ ಅಹೋರಾತ್ರಿ ಧರಣಿ ಮಾಡುತ್ತೇವೆ” ಎಂದು ಹೇಳಿದರು.

ಕಂಪನಿಯ ಲಾಕ್‌ ಔಟ್ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಅಧಿಕಾರಿಗಳು, “ಕಾರ್ಮಿಕರು ಕಾನೂನು ಬಾಹಿರ ಹೋರಾಟವನ್ನು ಮಾಡಿದ್ದಕ್ಕಾಗಿ ಈ ಕಂಪನಿಯನ್ನು ಲಾಕ್‌ ಔಟ್ ಮಾಡಲಾಗುತ್ತಿದೆ” ಎಂದಿದ್ದಾರೆ.

ಜಿಲ್ಲೆಯ ಕಾರ್ಮಿಕ ಕಮಿಷನರ್ ಅವರ ಕೇಛೇರಿಯಲ್ಲಿ ಸಂದಾನಕ್ಕೆಂದು ಕರೆದಿದ್ದಾಗಲೂ ಸಹ ಕಂಪನಿಯು ತನ್ನ ದರ್ಪವನ್ನು ತೋರಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಈ ಬಹುರಾಷ್ಟ್ರೀಯ ಕಂಪನಿಯು ದೇಶದ ಎಲ್ಲಾ ಕಾನೂನುಗಳನ್ನೂ ಸಾರಾಸಗಟಾಗಿ ಉಲ್ಲಂಘಿಸಿ ನಮ್ಮ ಕಾರ್ಮಿಕರನ್ನ ಶೋಷಣೆ ಮಾಡುತ್ತಿದೆ. ಆರಂಭದಲ್ಲಿ ಖಾಸಗೀಕರಣ, ಅಭಿವೃದ್ಧಿ, ನಮ್ಮ ದೇಶದ ಕಾರ್ಮಿಕರಿಗೆ ಉದ್ಯೋಗಾವಕಾಶ ನೀಡುತ್ತೇವೆ ಎಂದು ಹೇಳಿಕೊಂಡು ಬಂದು, ಕಾಲ ಸಂದಂತೆ ಇಂತಹ ಸಮಸ್ಯೆಗಳನ್ನು ಸೃಷ್ಟಿಸುತ್ತವೆ. ಇದಕ್ಕೆ ಸರ್ಕಾರಗಳು ಸೊಪ್ಪು ಹಾಕುತ್ತವೆ. 1992 ರ ನಂತರ ದೇಶದ ಅಭಿವೃದ್ಧಿಯ ಹೆಸರಿನಲ್ಲಿ ಇಂತಹ ಬಹುರಾಷ್ಟ್ರೀಯ ಕಂಪನಿಗಳಿಗೆ ನಮ್ಮ ದೇಶದಲ್ಲಿ ಜಾಗ ಕೊಡಲಾಗಿದೆ. ಅಂದಿನಿಂದಲೂ ಇಂತಹ ಸಮಸ್ಯೆಗಳನ್ನು ಸಾವಿರಾರು ಕಂಪನಿಗಳ ಕಾರ್ಮಿಕರು ಎದುರಿಸುತ್ತಲೇ ಇದ್ದಾರೆ. ಆದರೆ ತಮ್ಮ ಕೆಲಸ ಕಳೆದುಕೊಂಡು ಬೀದಿಗೆ ಬರುವ ಭಯಕ್ಕೆ ಅವರ್ಯಾರೂ ದನಿಯೆತ್ತುತ್ತಿಲ್ಲ. ಪ್ರಶ್ನಿಸುವ ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರನ್ನು ಕಂಪನಿ ದಮನಿಸುತ್ತಿದೆ. ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಅದನ್ನೂ ಮೀರಿ ದನಿಯೆತ್ತಿದರೂ ನಮ್ಮ ಸರ್ಕಾರ ಅದಕ್ಕೆ ಬೆಲೆ ಕೊಟ್ಟು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದು ನಮ್ಮ ದೇಶದ ಪರಿಸ್ಥಿತಿ.

ಇದನ್ನೂ ಓದಿ: ಕುಸಿಯುತ್ತಿರುವ ಕಣ್ವ ಸಾಮ್ರಾಜ್ಯ: ಆತಂಕದಲ್ಲಿ ಲಕ್ಷಾಂತರ ಕಾರ್ಮಿಕರು

ಹಿಂದೆಂದಿಗಿಂತಲೂ ಇಂದು ಈ ಖಾಸಗೀಕರಣ ಮತ್ತು ಬಹುರಾಷ್ಟ್ರೀಯ ಕಂಪನಿಗಳನ್ನು ನಮ್ಮ ದೇಶದ ಕಡೆ ಸೆಳೆದು ಅಭಿವೃದ್ಧಿ ಮಾಡಬೇಕು ಎನ್ನುವ ಯೋಚನೆ ಸರ್ಕಾರದ ಮತ್ತು ಸೋ ಕಾಲ್ಡ್‌ ಜನರಿಂದ ಕೇಳಿಬರುತ್ತಿದೆ. ಆದರೆ ಇದರ ಪರಿಣಾಮಗಳು ಏನಿರಬಹುದು ಎಂಬುದಕ್ಕೆ ಒಂದು ಸಣ್ಣ ಉದಾಹರಣೆ ಇದಾಗಿದೆ.

ಈಗಾಗಲೇ ಈ ಟೊಯೊಟಾ ಕಾರ್ಮಿಕರ ಸಮಸ್ಯೆಗಳಿಗೆ ರಾಜ್ಯದ ಕೆಲವು ಕಾರ್ಮಿಕ ಸಂಘಟನೆಗಳು, ರೈತ ಸಂಘಟನೆಗಳು ಬೆಂಬಲ ನೀಡಿವೆ. ಕಾರ್ಮಿಕರ ಈ ಸಮಸ್ಯೆಗಳನ್ನು ಸರ್ಕಾರ ಮತ್ತು ಆಡಳಿತ ಮಂಡಳಿ ಈ ಕೂಡಲೇ ಬಗೆಹರಿಸದಿದ್ದರೆ ಇನ್ನೂ ತೀವ್ರವಾದ ಪ್ರತಿಭಟನೆಯನ್ನು ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿವೆ.


ಇದನ್ನೂ ಓದಿ: ಎಎಪಿ ಪ್ರಣಾಳಿಕೆ ಬಿಡುಗಡೆ : ಸ್ವಚ್ಚತೆ, ಶಿಕ್ಷಣ, ಆರೋಗ್ಯಕ್ಕೆ ಒತ್ತು, ಪೌರಕಾರ್ಮಿಕರು ಮೃತಪಟ್ಟಲ್ಲಿ ಒಂದು ಕೋಟಿ ಪರಿಹಾರ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...