Homeಅಂತರಾಷ್ಟ್ರೀಯಅಮೆರಿಕಾ ಚುನಾವಣೆ: ಸೋಲೊಪ್ಪಿಕೊಳ್ಳುವ ಸನಿಹದಲ್ಲಿ ಡೊನಾಲ್ಡ್‌ ಟ್ರಂಪ್!

ಅಮೆರಿಕಾ ಚುನಾವಣೆ: ಸೋಲೊಪ್ಪಿಕೊಳ್ಳುವ ಸನಿಹದಲ್ಲಿ ಡೊನಾಲ್ಡ್‌ ಟ್ರಂಪ್!

ಭವಿಷ್ಯದಲ್ಲಿ ಏನಾಗುತ್ತದೆಯೋ, ಯಾವ ಆಡಳಿತ ಬರುತ್ತದೋ ಎಂದು ಯಾರಿಗೆ ತಿಳಿದಿದೆ. ಸಮಯ ಎಲ್ಲವನ್ನೂ ಹೇಳುತ್ತದೆ ಎಂದು ನಾನು ಊಹಿಸುತ್ತೇನೆ ಎಂದು ಹೇಳಿದರು.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಕುರಿತು ಇಂದು ಶ್ವೇತಭವನದಲ್ಲಿ ಮಾತನಾಡಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ 2020ರ ಅಧ್ಯಕ್ಷೀಯ ಚುನಾವಣೆಯಲ್ಲಿನ ತಮ್ಮ ಸೋಲನ್ನು ಇನ್ನೇನು ಒಪ್ಪಿಕೊಳ್ಳುವುದರಲ್ಲಿದ್ದರು. ಅಷ್ಟರಲ್ಲಿ ಮಾತು ನಿಲ್ಲಿಸಿ “ಸಮಯ ಎಲ್ಲವನ್ನೂ ಹೇಳುತ್ತದೆ” ಎಂದು ಹೇಳಿದರು.

ಮೊದಲಿನಿಂದಲೂ ತಾನು ಚುನಾವಣೆಯಲ್ಲಿ ಸೋತಿದ್ದೇನೆ ಎಂದು ಒಪ್ಪಿಕೊಳ್ಳಲು ನಿರಾಕರಿಸುತ್ತಿರುವ ಟ್ರಂಪ್, “ಭವಿಷ್ಯದಲ್ಲಿ ಏನಾಗುತ್ತದೆಯೋ, ಯಾವ ಆಡಳಿತ ಬರುತ್ತದೋ ಎಂದು ಯಾರಿಗೆ ತಿಳಿದಿದೆ. ಸಮಯ ಎಲ್ಲವನ್ನೂ ಹೇಳುತ್ತದೆ ಎಂದು ನಾನು ಊಹಿಸುತ್ತೇನೆ. ಆದರೆ ಈ ಆಡಳಿತವು ಲಾಕ್‌ಡೌನ್‌ಗೆ ಹೋಗುವುದಿಲ್ಲ ಎಂದು ನಾನು ನಿಮಗೆ ಹೇಳಬಲ್ಲೆ” ಎಂದು ಹೇಳಿದರು.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಇನ್ನೂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಟ್ರಂಪ್- ಸರಣಿ ಟ್ವೀಟ್!

ಅಮೆರಿಕಾದಲ್ಲಿ 243,000 ಕ್ಕೂ ಹೆಚ್ಚು ಜನರು ಕೊರೊನ ವೈರಸ್ ಸಾಂಕ್ರಾಮಿಕಕ್ಕೆ ತುತ್ತಾಗಿದ್ದು, ಇದಕ್ಕೆ ಆಡಳಿತದ ಪ್ರತಿಕ್ರಿಯೆಯನ್ನು ಕೇಳಿದ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದರು.

“ನೀವು ಚುನಾವಣೆಯಲ್ಲಿ ಸೋತಿದ್ದನ್ನು ಯಾವಾಗ ಒಪ್ಪುತ್ತೀರಿ, ಸರ್?” ಎಂಬ ಪ್ರಶ್ನೆಗಳನ್ನು ಕೇಳುತ್ತಿದ್ದ ಸುದ್ದಿಗಾರರಿಗೆ ಪ್ರತಿಕ್ರಿಯಿಸದೆ ಟ್ರಂಪ್ ಈ ಕಾರ್ಯಕ್ರಮದಿಂದ ಹೊರನಡೆದರು.

ಈ ಹಿಂದೆ, ಟ್ರಂಪ್ ಮತ್ತೊಮ್ಮೆ “ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ” ಎಂದು ಹೊಸ ಟ್ವೀಟ್‌ ಮಾಡಿದ್ದರು. ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿನ ಸೋಲನ್ನು ಟ್ರಂಪ್ ಇನ್ನೂ ಒಪ್ಪಿಕೊಂಡಿಲ್ಲ. ಹಾಗಾಗಿ ತಮ್ಮ ಟ್ವೀಟ್‌ಗಳಲ್ಲಿ ತಮಗೆ “ದೊಡ್ಡ ಗೆಲುವು” ಎಂದು ಹೇಳಿಕೊಳ್ಳುತ್ತಾ, ಡೆಮೋಕ್ರಾಟ್‌ಗಳ ವಿರುದ್ಧ ವಂಚನೆಯ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: ಟ್ರಂಪ್ ನಿರ್ಗಮನದ ದಿನ ಎಣಿಸಲೆಂದೇ ಒಂದು ವೆಬ್‌ಸೈಟ್!

ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡೆನ್ ವಿಜೇತರಾಗಿದ್ದಾರೆ ಎಂದು ಮಾಧ್ಯಮಗಳು ಘೋಷಿಸಿದ ನಂತರವೂ ಟ್ರಂಪ್ ಈ ರೀತಿಯ ಹಕ್ಕುಮಂಡನೆ ಮಾಡುತ್ತಿದ್ದಾರೆ.

ಟ್ರಂಪ್ ಮಂಗಳವಾರ ಮತ್ತೆ “ದೊಡ್ಡ ಗೆಲುವು” ಕುರಿತು ಟ್ವೀಟ್ ಮಾಡಿದ್ದು, ಪ್ರತಿಸ್ಪರ್ಧಿ ಬೈಡೆನ್ ಅವರ ಡೆಮಾಕ್ರಟಿಕ್ ಪಕ್ಷವು ಚುನಾವಣೆಯನ್ನು ಹೈಜಾಕ್ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಟ್ರಂಪ್ ಸೋತರೂ, ಟ್ರಂಪ್‌ಯಿಸಂ ಉಳಿದಿದೆ: ಆದರೂ ಯುವ ಅಮೆರಿಕ ಭರವಸೆ ಮೂಡಿಸಿದೆ

ಯಾವುದೇ ಪುರಾವೆಗಳನ್ನು ಉಲ್ಲೇಖಿಸದೆ, “ನಾವು ದೊಡ್ಡವರಾಗಿದ್ದೇವೆ, ಆದರೆ ಅವರು ಚುನಾವಣೆಯನ್ನು ಹೈಜಾಕ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ನಾವು ಅದನ್ನು ಮಾಡಲು ಎಂದಿಗೂ ಬಿಡುವುದಿಲ್ಲ. ಮತದಾನ ಮುಗಿದ ನಂತರ ಮತ ಚಲಾಯಿಸಲಾಗುವುದಿಲ್ಲ!” ಎಂದು ಮತ್ತೊಂದು ಟ್ವೀಟ್ ಮಾಡಿದ್ದರು.

ಇದೇ ರೀತಿಯ ಆರೋಪಗಳನ್ನು ಮಾಡುತ್ತಾ ಟ್ರಂಪ್ ಸುಮಾರು 30 ಟ್ವೀಟ್‌ಗಳನ್ನು ಮಾಡಿದ್ದಾರೆ. ಅವುಗಳಲ್ಲಿ ಸುಮಾರು 13 ಟ್ವೀಟ್‌ಗಳನ್ನು ಟ್ವಿಟ್ಟರ್‌ ಕಂಪನಿ ಈಗಾಗಲೆ ನಿರ್ಬಂಧಿಸಿದೆ.


ಇದನ್ನೂ ಓದಿ: ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು: ಟ್ರಂಪ್‌ಗೆ ವಿಚ್ಛೇಧನ ನೀಡಲಿರುವ ಮೆಲೆನಿಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...