Homeಅಂತರಾಷ್ಟ್ರೀಯಅಮೆರಿಕಾ ಚುನಾವಣೆ: ಸೋಲೊಪ್ಪಿಕೊಳ್ಳುವ ಸನಿಹದಲ್ಲಿ ಡೊನಾಲ್ಡ್‌ ಟ್ರಂಪ್!

ಅಮೆರಿಕಾ ಚುನಾವಣೆ: ಸೋಲೊಪ್ಪಿಕೊಳ್ಳುವ ಸನಿಹದಲ್ಲಿ ಡೊನಾಲ್ಡ್‌ ಟ್ರಂಪ್!

ಭವಿಷ್ಯದಲ್ಲಿ ಏನಾಗುತ್ತದೆಯೋ, ಯಾವ ಆಡಳಿತ ಬರುತ್ತದೋ ಎಂದು ಯಾರಿಗೆ ತಿಳಿದಿದೆ. ಸಮಯ ಎಲ್ಲವನ್ನೂ ಹೇಳುತ್ತದೆ ಎಂದು ನಾನು ಊಹಿಸುತ್ತೇನೆ ಎಂದು ಹೇಳಿದರು.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಕುರಿತು ಇಂದು ಶ್ವೇತಭವನದಲ್ಲಿ ಮಾತನಾಡಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ 2020ರ ಅಧ್ಯಕ್ಷೀಯ ಚುನಾವಣೆಯಲ್ಲಿನ ತಮ್ಮ ಸೋಲನ್ನು ಇನ್ನೇನು ಒಪ್ಪಿಕೊಳ್ಳುವುದರಲ್ಲಿದ್ದರು. ಅಷ್ಟರಲ್ಲಿ ಮಾತು ನಿಲ್ಲಿಸಿ “ಸಮಯ ಎಲ್ಲವನ್ನೂ ಹೇಳುತ್ತದೆ” ಎಂದು ಹೇಳಿದರು.

ಮೊದಲಿನಿಂದಲೂ ತಾನು ಚುನಾವಣೆಯಲ್ಲಿ ಸೋತಿದ್ದೇನೆ ಎಂದು ಒಪ್ಪಿಕೊಳ್ಳಲು ನಿರಾಕರಿಸುತ್ತಿರುವ ಟ್ರಂಪ್, “ಭವಿಷ್ಯದಲ್ಲಿ ಏನಾಗುತ್ತದೆಯೋ, ಯಾವ ಆಡಳಿತ ಬರುತ್ತದೋ ಎಂದು ಯಾರಿಗೆ ತಿಳಿದಿದೆ. ಸಮಯ ಎಲ್ಲವನ್ನೂ ಹೇಳುತ್ತದೆ ಎಂದು ನಾನು ಊಹಿಸುತ್ತೇನೆ. ಆದರೆ ಈ ಆಡಳಿತವು ಲಾಕ್‌ಡೌನ್‌ಗೆ ಹೋಗುವುದಿಲ್ಲ ಎಂದು ನಾನು ನಿಮಗೆ ಹೇಳಬಲ್ಲೆ” ಎಂದು ಹೇಳಿದರು.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಇನ್ನೂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಟ್ರಂಪ್- ಸರಣಿ ಟ್ವೀಟ್!

ಅಮೆರಿಕಾದಲ್ಲಿ 243,000 ಕ್ಕೂ ಹೆಚ್ಚು ಜನರು ಕೊರೊನ ವೈರಸ್ ಸಾಂಕ್ರಾಮಿಕಕ್ಕೆ ತುತ್ತಾಗಿದ್ದು, ಇದಕ್ಕೆ ಆಡಳಿತದ ಪ್ರತಿಕ್ರಿಯೆಯನ್ನು ಕೇಳಿದ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದರು.

“ನೀವು ಚುನಾವಣೆಯಲ್ಲಿ ಸೋತಿದ್ದನ್ನು ಯಾವಾಗ ಒಪ್ಪುತ್ತೀರಿ, ಸರ್?” ಎಂಬ ಪ್ರಶ್ನೆಗಳನ್ನು ಕೇಳುತ್ತಿದ್ದ ಸುದ್ದಿಗಾರರಿಗೆ ಪ್ರತಿಕ್ರಿಯಿಸದೆ ಟ್ರಂಪ್ ಈ ಕಾರ್ಯಕ್ರಮದಿಂದ ಹೊರನಡೆದರು.

ಈ ಹಿಂದೆ, ಟ್ರಂಪ್ ಮತ್ತೊಮ್ಮೆ “ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ” ಎಂದು ಹೊಸ ಟ್ವೀಟ್‌ ಮಾಡಿದ್ದರು. ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿನ ಸೋಲನ್ನು ಟ್ರಂಪ್ ಇನ್ನೂ ಒಪ್ಪಿಕೊಂಡಿಲ್ಲ. ಹಾಗಾಗಿ ತಮ್ಮ ಟ್ವೀಟ್‌ಗಳಲ್ಲಿ ತಮಗೆ “ದೊಡ್ಡ ಗೆಲುವು” ಎಂದು ಹೇಳಿಕೊಳ್ಳುತ್ತಾ, ಡೆಮೋಕ್ರಾಟ್‌ಗಳ ವಿರುದ್ಧ ವಂಚನೆಯ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: ಟ್ರಂಪ್ ನಿರ್ಗಮನದ ದಿನ ಎಣಿಸಲೆಂದೇ ಒಂದು ವೆಬ್‌ಸೈಟ್!

ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡೆನ್ ವಿಜೇತರಾಗಿದ್ದಾರೆ ಎಂದು ಮಾಧ್ಯಮಗಳು ಘೋಷಿಸಿದ ನಂತರವೂ ಟ್ರಂಪ್ ಈ ರೀತಿಯ ಹಕ್ಕುಮಂಡನೆ ಮಾಡುತ್ತಿದ್ದಾರೆ.

ಟ್ರಂಪ್ ಮಂಗಳವಾರ ಮತ್ತೆ “ದೊಡ್ಡ ಗೆಲುವು” ಕುರಿತು ಟ್ವೀಟ್ ಮಾಡಿದ್ದು, ಪ್ರತಿಸ್ಪರ್ಧಿ ಬೈಡೆನ್ ಅವರ ಡೆಮಾಕ್ರಟಿಕ್ ಪಕ್ಷವು ಚುನಾವಣೆಯನ್ನು ಹೈಜಾಕ್ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಟ್ರಂಪ್ ಸೋತರೂ, ಟ್ರಂಪ್‌ಯಿಸಂ ಉಳಿದಿದೆ: ಆದರೂ ಯುವ ಅಮೆರಿಕ ಭರವಸೆ ಮೂಡಿಸಿದೆ

ಯಾವುದೇ ಪುರಾವೆಗಳನ್ನು ಉಲ್ಲೇಖಿಸದೆ, “ನಾವು ದೊಡ್ಡವರಾಗಿದ್ದೇವೆ, ಆದರೆ ಅವರು ಚುನಾವಣೆಯನ್ನು ಹೈಜಾಕ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ನಾವು ಅದನ್ನು ಮಾಡಲು ಎಂದಿಗೂ ಬಿಡುವುದಿಲ್ಲ. ಮತದಾನ ಮುಗಿದ ನಂತರ ಮತ ಚಲಾಯಿಸಲಾಗುವುದಿಲ್ಲ!” ಎಂದು ಮತ್ತೊಂದು ಟ್ವೀಟ್ ಮಾಡಿದ್ದರು.

ಇದೇ ರೀತಿಯ ಆರೋಪಗಳನ್ನು ಮಾಡುತ್ತಾ ಟ್ರಂಪ್ ಸುಮಾರು 30 ಟ್ವೀಟ್‌ಗಳನ್ನು ಮಾಡಿದ್ದಾರೆ. ಅವುಗಳಲ್ಲಿ ಸುಮಾರು 13 ಟ್ವೀಟ್‌ಗಳನ್ನು ಟ್ವಿಟ್ಟರ್‌ ಕಂಪನಿ ಈಗಾಗಲೆ ನಿರ್ಬಂಧಿಸಿದೆ.


ಇದನ್ನೂ ಓದಿ: ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು: ಟ್ರಂಪ್‌ಗೆ ವಿಚ್ಛೇಧನ ನೀಡಲಿರುವ ಮೆಲೆನಿಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...