Homeಅಂತರಾಷ್ಟ್ರೀಯಪಾಕ್ ಕದನ ವಿರಾಮ ಉಲ್ಲಂಘನೆ: ಉಭಯ ದೇಶಗಳು ಸಂವಾದ ನಡೆಸಲಿ- ಮೆಹಬೂಬ ಮುಫ್ತಿ

ಪಾಕ್ ಕದನ ವಿರಾಮ ಉಲ್ಲಂಘನೆ: ಉಭಯ ದೇಶಗಳು ಸಂವಾದ ನಡೆಸಲಿ- ಮೆಹಬೂಬ ಮುಫ್ತಿ

ನಿಯಂತ್ರಣ ರೇಖೆಯ ಎರಡೂ ಬದಿಗಳಲ್ಲಿ ಹೆಚ್ಚುತ್ತಿರುವ ಸಾವುನೋವುಗಳನ್ನು ನೋಡಿಕೊಂಡಿರುವುದಕ್ಕೆ ಬೇಸರವಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ ಕುರಿತು ಪ್ರತಿಕ್ರಿಯಿಸಿರುವ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬ ಮುಫ್ತಿ, ಭಾರತ ಮತ್ತು ಪಾಕಿಸ್ತಾನವು ಸಂವಾದದಲ್ಲಿ ತೊಡಗಿ ಈ ಸಮಸ್ಯೆಗಳನ್ನು ಬಗೆಹರಿಸಲು ಕೇಳಿಕೊಂಡರು. ಎರಡೂ ದೇಶಗಳ ವಾಸ್ತವಿಕ ಗಡಿಯಲ್ಲಿ ಸಾವು ನೋವುಗಳು ಹೆಚ್ಚಾಗುತ್ತಿರುವುದು ವಿಷಾದದ ಸಂಗತಿ ಎಂದು ಹೇಳಿದರು.

ಗುಂಡಿನ ದಾಳಿಯಿಂದ ಎರಡೂ ಕಡೆ ಪ್ರಾಣಹಾನಿ ಸಂಭವಿಸಿವೆ. ಮಾಜಿ ಪ್ರಧಾನಿ ಎ.ಬಿ.ವಾಜಪೇಯಿ ಮತ್ತು ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ ಅವರು ಒಪ್ಪಿ, ಜಾರಿಗೆ ತಂದ ಕದನ ವಿರಾಮ ನಿಯಮವನ್ನು ಪುನಃಸ್ಥಾಪಿಸಿ ಪ್ರಾರಂಭಿಸಬೇಕು ಎಂದು  ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಹೇಳಿದರು.

ಇದನ್ನೂ ಓದಿ: ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ: ನಾಲ್ವರು ಯೋಧರೂ ಸೇರಿ 8 ಮಂದಿ ಸಾವು

“ನಿಯಂತ್ರಣ ರೇಖೆಯ ಎರಡೂ ಬದಿಗಳಲ್ಲಿ ಹೆಚ್ಚುತ್ತಿರುವ ಸಾವುನೋವುಗಳನ್ನು ನೋಡಿಕೊಂಡಿರುವುದಕ್ಕೆ ಬೇಸರವಾಗುತ್ತಿದೆ. ಭಾರತೀಯ ಮತ್ತು ಪಾಕಿಸ್ತಾನದ ನಾಯಕತ್ವವು ತಮ್ಮ ರಾಜಕೀಯವನ್ನು ಬಿಟ್ಟು ಮುಂದೆ ಬರಲು ಮತ್ತು ಸಂವಾದವನ್ನು ಪ್ರಾರಂಭಿಸಲು ಸಾಧ್ಯವಾದರೆ, ವಾಜಪೇಯಿ ಜಿ ಮತ್ತು ಮುಷರಫ್ ಸಹಾಬ್ ಅವರ ಆಶಯದ ಕದನ ವಿರಾಮವನ್ನು ನಿಯಮವನ್ನು ಪುನಃ ಪ್ರಾರಂಭಿಸಲು ಇದು ಉತ್ತಮ ಸಮಯವಾಗಿದೆ” ಟ್ವೀಟ್ ಮಾಡಿದ್ದಾರೆ.

ಗುರೇಜ್ ಸೆಕ್ಟರ್‌ನಿಂದ ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ವರೆಗೆ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಪಾಕಿಸ್ತಾನ ಪಡೆಗಳು ನಡೆಸಿದ ಕದನ ವಿರಾಮ ಉಲ್ಲಂಘನೆಯಲ್ಲಿ ಬಿಎಸ್‌ಎಫ್ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಭದ್ರತಾ ಪಡೆಗಳ ಸಿಬ್ಬಂದಿ ಶುಕ್ರವಾರ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಇದನ್ನೂ ಓದಿ: ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ: ಸುಮಲತಾ ಅಂಬರೀಶ್ ವಿರುದ್ಧ ಪ್ರತಾಪ್ ಸಿಂಹ ಹೇಳಿಕೆ…

ಪಾಕಿಸ್ತಾನದ ಗುಂಡಿನ ದಾಳಿಯಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ. ಉರಿಯ ಕಮಲ್‌ಕೋಟ್‌ನಲ್ಲಿ ಇಬ್ಬರು ಮತ್ತು ಬಾಲ್ಕೋಟ್‌ನಲ್ಲಿ ಇನ್ನೊಬ್ಬ ಮಹಿಳೆ ಸಹ ಸಾವನ್ನಪ್ಪಿದ್ದಾರೆ. ಆಕ್ರಮಣದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಒಂದು ವಾರದೊಳಗೆ ನಡೆದ ಎರಡನೇ ಒಳನುಸುಳುವಿಕೆ ಪ್ರಯತ್ನ ಇದಾಗಿದ್ದು. ನವೆಂಬರ್ 7- 8 ರ ಮಧ್ಯರಾತ್ರಿಯಲ್ಲಿ ಮಚಿಲ್ ವಲಯದಲ್ಲಿ ಈ ಹಿಂದೆ ನಡೆದ ದಾಳಿಯಲ್ಲಿ, ಮೂವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು.


ಇದನ್ನೂ ಓದಿ: `ಹುಸಿ ರಾಷ್ಟ್ರೀಯತೆ’ ಎದುರು ಕರ್ನಾಟಕದ ಸುದೀರ್ಘ ಸಂಘರ್ಷ: ಟಿ.ಎ.ನಾರಾಯಣಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...