Homeಮುಖಪುಟದಳಪತಿ ವಿಜಯ್ ಹೆಸರಿನ ರಾಜಕೀಯ ಪಕ್ಷದ ಅಧ್ಯಕ್ಷರಿಗೆ ಕೊಲೆ ಬೆದರಿಕೆ!

ದಳಪತಿ ವಿಜಯ್ ಹೆಸರಿನ ರಾಜಕೀಯ ಪಕ್ಷದ ಅಧ್ಯಕ್ಷರಿಗೆ ಕೊಲೆ ಬೆದರಿಕೆ!

ವಿಜಯ್ ಹೆಸರಿನ ಪಕ್ಷದ ಅಧ್ಯಕ್ಷ ಆರ್.ಕೆ.ರಾಜ ಬಿಡುಗಡೆ ಮಾಡಿರುವ 50 ಸೆಕೆಂಡುಗಳ ವಿಡಿಯೋದಲ್ಲಿ, ವಿಜಯ್ ಮಕ್ಕಳ್ ಇಯಕ್ಕಂ ಅಧ್ಯಕ್ಷ ಬುಸ್ಸಿ ಆನಂದ್ ತಮ್ಮ ವಿರುದ್ಧ ಮಾರಣಾಂತಿಕ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ವಿಜಯ್ ಫೋಟೋಗಳನ್ನು ಪೋಸ್ಟರ್ ಮತ್ತು ಬ್ಯಾನರ್‌ಗಳಲ್ಲಿ ಬಳಸಿದ್ದಕ್ಕಾಗಿ ನಟ ವಿಜಯ್ ಅಭಿಮಾನಿ ಸಂಘದ ಸದಸ್ಯರಿಂದ ಕೊಲೆ ಬೆದರಿಕೆ ಬಂದಿರುವುದಾಗಿ ಅಖಿಲ ಭಾರತ ದಳಪತಿ ವಿಜಯ್ ಮಕ್ಕಳ್ ಇಯಕ್ಕಂ ಅಧ್ಯಕ್ಷ ಆರ್.ಕೆ.ರಾಜ ಅಲಿಯಾಸ್ ಪದ್ಮನಾಥನ್ ಅವರು ಮಾತನಾಡಿರುವ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಆರೋಪಿಸಿದ್ದಾರೆ.

ಈ ಹಿಂದೆ ವಿಜಯ್ ತಂದೆ ಎಸ್.ಎ.ಚಂದ್ರಶೇಖರ್, ಅಖಿಲ ಭಾರತ ದಳಪತಿ ವಿಜಯ್ ಮಕ್ಕಳ್ ಇಯಕ್ಕಂ ರಾಜಕೀಯ ಪಕ್ಷವನ್ನು ನೋಂದಾಯಿಸಲು ಭಾರತದ ಚುನಾವಣಾ ಆಯೋಗಕ್ಕೆ ಪತ್ರಗಳನ್ನು ಸಲ್ಲಿಸಿ, ಆರ್.ಕೆ.ರಾಜ ಅವರನ್ನು ಅದರ ಅಧ್ಯಕ್ಷರನ್ನಾಗಿ ಹೆಸರಿಸಿದ್ದರು.

ಇದನ್ನೂ ಓದಿ: ತಮಿಳು ನಟ ವಿಜಯ್ ಹೆಸರಿನಲ್ಲಿ ರಾಜಕೀಯ ಪಕ್ಷ ನೋಂದಣಿ: ವಿಜಯ್ ಪ್ರತಿಕ್ರಿಯೆ ಏನು?

ಈ ಬೆಳವಣಿಗೆಯ ವರದಿಗಳ ನಂತರ ಹೇಳಿಕೆ ನೀಡಿದ ವಿಜಯ್,  ಪಕ್ಷಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿ, ಅವರ ಅಭಿಮಾನಿಗಳನ್ನು ಅದರಿಂದ ದೂರವಿರಲು ಕೇಳಿಕೊಂಡಿದ್ದರು. ಮತ್ತು ಅವರ ಹೆಸರು ಅಥವಾ ಚಿತ್ರಗಳನ್ನು ಬಳಸಿದರೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದರು.

ಆರ್.ಕೆ.ರಾಜ ಬಿಡುಗಡೆ ಮಾಡಿರುವ 50 ಸೆಕೆಂಡುಗಳ ವಿಡಿಯೋದಲ್ಲಿ, ವಿಜಯ್ ಮಕ್ಕಳ್ ಇಯಕ್ಕಂ ಅಧ್ಯಕ್ಷ ಬುಸ್ಸಿ ಆನಂದ್ ತಮ್ಮ ವಿರುದ್ಧ ಮಾರಣಾಂತಿಕ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಎಂಬುದಾಗಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಬಯೋಪಿಕ್ ವಿವಾದ: ‘800’ ಚಿತ್ರ ಕೈಬಿಡುವಂತೆ ವಿಜಯ್ ಸೇತುಪತಿಗೆ ಪತ್ರ ಬರೆದ ಮುತ್ತಯ್ಯ ಮುರುಳೀಧರನ್!

“ನನಗೆ ಏನಾದರೂ ಸಂಭವಿಸಿದಲ್ಲಿ, ಅದಕ್ಕೆ ಆನಂದ್ ಜವಾಬ್ದಾರನಾಗಿರುತ್ತಾನೆ” ಎಂದು ಅವರು ವೈರಲ್ ವೀಡಿಯೊದಲ್ಲಿ ಹೇಳಿದ್ದಾರೆ. ಪೊಲೀಸರು ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದೂ ಹೇಳಿದ್ದಾರೆ.

ಆದಾಗ್ಯೂ, ರಾಜಾ ವಿರುದ್ಧ ರಿಯಲ್ ಎಸ್ಟೇಟ್ ವಂಚನೆ ಪ್ರಕರಣ ದಾಖಲಾಗಿದ್ದು, ಆತನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಆದರೆ ಆತ ಎಲ್ಲಿಯೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತಾವು ಅಧ್ಯಕ್ಷರಾಗಿ ಘೋಷಣೆಯಾದಾಗಿನಿಂದ ಬೇರೆ-ಬೇರೆ ಕಡೆಗಳಿಂದ ತೊಂದರೆ ಎದುರಿಸುತ್ತಿದ್ದಾರೆ ಎಂದು ರಾಜಾ ಹೇಳಿದ್ದಾರೆ.


ಇದನ್ನೂ ಓದಿ: ಸಾಲ ತೀರಿಸುತ್ತೇನೆ, ನನ್ನ ವಿರುದ್ಧದ ಪ್ರಕರಣ ಕೈಬಿಡಿ: ವಿಜಯ್ ಮಲ್ಯ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...