Homeಮುಖಪುಟಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್- ಅಧಿಕೃತ ಘೋಷಣೆ ಮಾಡಿದ ಎನ್‌ಡಿಎ!

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್- ಅಧಿಕೃತ ಘೋಷಣೆ ಮಾಡಿದ ಎನ್‌ಡಿಎ!

ಈ ನಡುವೆ ಆರ್‌ಜೆಡಿ ಮುಖಂಡರಾದ ಮನೋಜ್ ಝಾ ಮಾತನಾಡಿ, “ಕೇವಲ 40 ಸ್ಥಾನ ಪಡೆದ, ಜನಾದೇಶ ಇಲ್ಲದವರು ಹೇಗೆ ಮುಖ್ಯಮಂತ್ರಿ ಆಗಲು ಸಾಧ್ಯ” ಎಂದು ಪ್ರಶ್ನೆ ಮಾಡಿದ್ದಾರೆ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ಮೈತ್ರಿಕೂಟದ ಎನ್‌ಡಿಎ ಸ್ಪಷ್ಟ ಬಹುಮತಗಳನ್ನು ಗಳಿಸುವ ಮೂಲಕ ರಾಜ್ಯದಲ್ಲಿ ಸರ್ಕಾರವನ್ನು ರಚಿಸಲು ಶಕ್ತವಾಗಿದೆ. ಇಂದು ಬಿಹಾರ ಮುಖ್ಯಮಂತ್ರಿ ಮತ್ತು ಇತರೆ ಅಂಶಗಳನ್ನು ನಿರ್ಧರಿಸಲು ಎನ್‌ಡಿಎ ಸಭೆ ಸೇರಿದೆ. ನಿತೀಶ್‌ ಕುಮಾರ್ ಅವರೇ ಮುಖ್ಯಮಂತ್ರಿ ಎಂಬುದನ್ನು ಬಿಜೆಪಿಯ ಉನ್ನತ ನಾಯಕರು ಸೇರಿದಂತೆ ಬಹುಪಾಲು ನಾಯಕರು ಖಚಿತಪಡಿಸಿದ್ದಾರೆ. ಇದೀಗ ಎನ್‌ಡಿಎ ವತಿಯಿಂದ ಮೈತ್ರಿಕೂಟದ ಎಲ್ಲಾ ಪಕ್ಷಗಳೂ ಸಭೆ ಸೇರಿ ಒಮ್ಮತ ನಿರ್ಧಾರಕ್ಕೆ ಬಂದಿದ್ದು, ನಿತೀಶ್‌ ಕುಮಾರ್ ಬಿಹಾರದ ಮುಖ್ಯಮಂತ್ರಿ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಇದರ ಕುರಿತು ಇಂದು 12.30ಕ್ಕೆ ನಿತೀಶ್‌ ಕುಮಾರ್ ಅವರ ನಿವಾಸದಲ್ಲಿ ಎಲ್ಲಾ ಮುಖಂಡರು ಸಭೆ ಸೇರಿದ್ದರು. ಈ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಮೂಲಕ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಇದ್ದ ಗೊಂದಲ ಮತ್ತು ಊಹಾಪೋಹಗಳಿಗೆ ತೆರೆ ಬಿದ್ದಿದೆ.

ಇದನ್ನೂ ಓದಿ: ಬಿಹಾರ: ಕೇವಲ 40 ಸ್ಥಾನ ಪಡೆದ ಜನಾದೇಶವಿಲ್ಲದವರು ಹೇಗೆ ಸಿಎಂ ಆಗುತ್ತಾರೆ?- RJD ಪ್ರಶ್ನೆ

ಈ ನಡುವೆ ಆರ್‌ಜೆಡಿ ಮುಖಂಡರಾದ ಮನೋಜ್ ಝಾ ಮಾತನಾಡಿ, “ಕೇವಲ 40 ಸ್ಥಾನ ಪಡೆದ, ಜನಾದೇಶ ಇಲ್ಲದವರು ಹೇಗೆ ಮುಖ್ಯಮಂತ್ರಿ ಆಗಲು ಸಾಧ್ಯ” ಎಂದು ಪ್ರಶ್ನೆ ಮಾಡಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಆರ್‌ಜೆಡಿ ಪಕ್ಷವು ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 75 ಸ್ಥಾನಗಳನ್ನು ಗೆದ್ದುಕೊಂಡಿದೆ. ನಂತರದ ಸ್ಥಾನದಲ್ಲಿ ಬಿಜೆಪಿಯು 74 ಸ್ಥಾನಗಳನ್ನು ಗೆದ್ದುಕೊಂಡಿದೆ. ನಿತೀಶ್‌ ಕುಮಾರ್ ನೇತೃತ್ವದ ಜೆಡಿಯು ಪಕ್ಷವು ಕೇವಲ 43 ಸ್ಥಾನಗಳನ್ನು ಗೆದ್ದುಕೊಂಡಿದೆ. ಆದರೆ ಎನ್‌ಡಿಎ ಮೈತ್ರಿ ಪಕ್ಷವು 125 ಸ್ಥಾನಗಳನ್ನು ಗೆದ್ದುಕೊಂಡು ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ 110 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಬಹುಮತದ ಅಂಚಿಗೆ ಬಂದು ಕೆಳಗಿಳಿದಿತ್ತು. ಇದರ ನಡುವೆ ಬಿಹಾರದಲ್ಲಿ ಎಡ ಪಕ್ಷಗಳಾದ ಸಿಪಿಐ (ಎಂ-ಎಲ್) ಬಹುತೇಕ ಮುಂಚೂಣಿಯ ಪಕ್ಷಗಳಾಗಿ ಹೊರಹೊಮ್ಮಿವೆ. ಇನ್ನು ಓವೈಸಿ ನೇತೃತ್ವದ ಪಕ್ಷವು ಸುಮಾರು 5 ಸ್ಥಾನಗಳನ್ನು ಗೆದ್ದುಕೊಂಡಿದೆ.

ಈ ನಡುವೆ ತೇಜಸ್ವಿ ಯಾದವ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮತ ಮರು ಎಣಿಕೆಗೆ ಒತ್ತಾಯಿಸಿ ಅಭಿಯಾನವನ್ನು ಆರಂಭಿಸಿದ್ದಾರೆ. ಮತ್ತೊಂದು ಕಡೆ ಈ ಬಾರಿ ನಿತೀಶ್‌ ಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.


ಇದನ್ನೂ ಓದಿ: ಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...