Homeಮುಖಪುಟಬಿಹಾರ: ಸಿಎಂ ನಿತೀಶ್‌ ಅನ್ನು ನಿಯಂತ್ರಿಸುವ ರಿಮೋಟ್ ಬೇರೆಯವರ ಬಳಿಯಿದೆ- ತಾರಿಖ್ ಅನ್ವರ್

ಬಿಹಾರ: ಸಿಎಂ ನಿತೀಶ್‌ ಅನ್ನು ನಿಯಂತ್ರಿಸುವ ರಿಮೋಟ್ ಬೇರೆಯವರ ಬಳಿಯಿದೆ- ತಾರಿಖ್ ಅನ್ವರ್

ಇತ್ತೀಚೆಗೆ ನಿತೀಶ್ ಕುಮಾರ್ ಎನ್‌ಡಿಎ ಮೈತ್ರಿಕೂಟದ ಉತ್ತಮ ನಾಯಕರಾಗಿದ್ದರು. ಆದರೆ ಈ ಬಾರಿಯ ಸಂದರ್ಭ ಮೊದಲಿನಂತಿಲ್ಲ. ಬಿಜೆಪಿಯ ಒಳ ಮರ್ಮದಿಂದ ಅವರನ್ನು ನಿಶಕ್ತಿಗೊಳಿಸಲಾಗಿದೆ

- Advertisement -
- Advertisement -

ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರಾದ ತಾರಿಖ್ ಅನ್ವರ್ ಪ್ರತಿಕ್ರಿಯಿಸಿ, “ನಿತೀಶ್‌ ಮುಖ್ಯಂತ್ರಿಯಾದರೂ, ಅವರನ್ನು ನಿಯಂತ್ರಿಸುವ ರಿಮೋಟ್‌ ಬೇರೆಯವರ ಬಳಿಯಿದೆ” ಎಂದಿದ್ದಾರೆ.

ಈ ಕುರಿತು ಅವರು ನೀಡಿರುವ ಹೇಳಿಕೆಯನ್ನು ಟ್ವೀಟ್ ಮಾಡಿರುವ ಎಎನ್‌ಐ, “ಇತ್ತೀಚೆಗೆ ನಿತೀಶ್ ಕುಮಾರ್ ಎನ್‌ಡಿಎ ಮೈತ್ರಿಕೂಟದ ಉತ್ತಮ ನಾಯಕರಾಗಿದ್ದರು. ಆದರೆ ಈ ಬಾರಿಯ ಸಂದರ್ಭ ಮೊದಲಿನಂತಿಲ್ಲ. ಬಿಜೆಪಿಯ ಒಳ ಮರ್ಮದಿಂದ ಅವರನ್ನು ನಿಶಕ್ತಿಗೊಳಿಸಲಾಗಿದೆ. ಈಗ ಅವರು ಎನ್‌ಡಿಎ ನಾಯಕರಾಗಿ ಅಥವಾ ಬಿಹಾರದ ಮುಖ್ಯಮಂತ್ರಿಯಾದರೂ ಸಹ, ಇವರನ್ನು ನಿಯಂತ್ರಿಸುವ ರಿಮೋಟ್‌ ಬೇರೆಯವರ ಬಳಿಯಿರುತ್ತದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನೆರೆ ಪರಿಹಾರ ಕೊಡದಿದ್ದರೆ ರಾಜ್ಯದಾದ್ಯಂತ ತೀವ್ರ ಹೋರಾಟ – ಕರವೇ ಟಿ.ಎ.ನಾರಾಯಣಗೌಡರು

ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪಿಎಚ್‌‌ಡಿ, ಎಂಫಿಲ್ ಫೆಲೋಶಿಪ್ ಕಡಿತಗೊಳಿಸಿದ ಸರ್ಕಾರ!

ಇಂದು ಬಿಹಾರ ಮುಖ್ಯಮಂತ್ರಿ ಮತ್ತು ಇತರೆ ಅಂಶಗಳನ್ನು ನಿರ್ಧರಿಸಲು ಎನ್‌ಡಿಎ ಸಭೆ ಸೇರಿತ್ತು. ನಿತೀಶ್‌ ಕುಮಾರ್ ಅವರೇ ಮುಖ್ಯಮಂತ್ರಿ ಎಂಬುದನ್ನು ಬಿಜೆಪಿಯ ಉನ್ನತ ನಾಯಕರು ಸೇರಿದಂತೆ ಬಹುಪಾಲು ನಾಯಕರು ಖಚಿತಪಡಿಸಿದ್ದಾರೆ. ಇದೀಗ ಎನ್‌ಡಿಎ ವತಿಯಿಂದ ಮೈತ್ರಿಕೂಟದ ಎಲ್ಲಾ ಪಕ್ಷಗಳೂ ಸಭೆ ಸೇರಿ ಒಮ್ಮತ ನಿರ್ಧಾರಕ್ಕೆ ಬಂದಿದ್ದು, ನಿತೀಶ್‌ ಕುಮಾರ್ ಬಿಹಾರದ ಮುಖ್ಯಮಂತ್ರಿ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಈ ನಡುವೆ ಆರ್‌ಜೆಡಿ ಮುಖಂಡರಾದ ಮನೋಜ್ ಝಾ ಮಾತನಾಡಿ, “ಕೇವಲ 40 ಸೀಟುಗಳನ್ನು ಗೆದ್ದಿರುವವರು ಹೇಗೆ ಮುಖ್ಯಮಂತ್ರಿಯಾಗಲು ಸಾಧ್ಯ? ಜನಾದೇಶವು ಆತನ ವಿರುದ್ಧವಾಗಿದೆ. ಆತ ನಿರ್ಣಾಮವಾಗುತ್ತಾನೆ ಮತ್ತು ಅದನ್ನು ನಿರ್ಧರಿಸಬೇಕಿದೆ. ಬಿಹಾರವು ಸ್ವಯಂಪ್ರೇರಿತವಾಗಿ ತನ್ನ ಪರ್ಯಾಯವನ್ನು ಕಂಡುಕೊಳ್ಳುತ್ತದೆ. ಇದಕ್ಕೆ ಒಂದು ವಾರ ತೆಗೆದುಕೊಳ್ಳಬಹುದು, ಹತ್ತು ದಿನ ಅಥವಾ 1 ತಿಂಗಳು ತೆಗೆದುಕೊಳ್ಳಬಹುದು. ಆದರೆ ಇದು ಖಂಡಿತ ಸಂಭವಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ಬಿಹಾರ ಚುನಾವಣೆಯಲ್ಲಿ ಆರ್‌ಜೆಡಿ ಪಕ್ಷವು ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 75 ಸ್ಥಾನಗಳನ್ನು ಗೆದ್ದುಕೊಂಡಿದೆ. ನಂತರದ ಸ್ಥಾನದಲ್ಲಿ ಬಿಜೆಪಿಯು 74 ಸ್ಥಾನಗಳನ್ನು ಗೆದ್ದುಕೊಂಡಿದೆ. ನಿತೀಶ್‌ ಕುಮಾರ್ ನೇತೃತ್ವದ ಜೆಡಿಯು ಪಕ್ಷವು ಕೇವಲ 43 ಸ್ಥಾನಗಳನ್ನು ಗೆದ್ದುಕೊಂಡಿದೆ. ಆದರೆ ಎನ್‌ಡಿಎ ಮೈತ್ರಿ ಪಕ್ಷವು 125 ಸ್ಥಾನಗಳನ್ನು ಗೆದ್ದುಕೊಂಡು ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.

ತೇಜಸ್ವಿ ಯಾದವ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮತ ಮರು ಎಣಿಕೆಗೆ ಒತ್ತಾಯಿಸಿ ಅಭಿಯಾನವನ್ನು ಆರಂಭಿಸಿದ್ದಾರೆ. ಮತ್ತೊಂದು ಕಡೆ ಈ ಬಾರಿ ನಿತೀಶ್‌ ಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ 110 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಬಹುಮತದ ಅಂಚಿಗೆ ಬಂದು ಕೆಳಗಿಳಿದಿತ್ತು. ಇದರ ನಡುವೆ ಬಿಹಾರದಲ್ಲಿ ಎಡ ಪಕ್ಷಗಳಾದ ಸಿಪಿಐ (ಎಂ-ಎಲ್) ಬಹುತೇಕ ಮುಂಚೂಣಿಯ ಪಕ್ಷಗಳಾಗಿ ಹೊರಹೊಮ್ಮಿವೆ. ಇನ್ನು ಓವೈಸಿ ನೇತೃತ್ವದ ಪಕ್ಷವು ಸುಮಾರು 5 ಸ್ಥಾನಗಳನ್ನು ಗೆದ್ದುಕೊಂಡಿದೆ.


ಇದನ್ನೂ ಓದಿ: ಬಿಹಾರ: ಕೇವಲ 40 ಸ್ಥಾನ ಪಡೆದ ಜನಾದೇಶವಿಲ್ಲದವರು ಹೇಗೆ ಸಿಎಂ ಆಗುತ್ತಾರೆ?- RJD ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...