Homeಮುಖಪುಟ’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

ಇನ್ಫೋಸಿಸ್‌‌‌ನ ಮಾಜಿ ನಿರ್ದೇಶಕರೂ ಆಗಿರುವ ಅವರು ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯನ್ನು ಟ್ರೋಲ್ ಮಾಡಲು ಹೋಗಿ ತಾನೆ ನೆಗೆಪಾಟಲಿಗೀಡಾಗಿದ್ದಾರೆ.

- Advertisement -
- Advertisement -

ಬಿಜೆಪಿ ಹಾಗೂ ಪ್ರಧಾನಿ ಮೋದಿಯ ಸಮರ್ಥಕ, ಇನ್ಫೋಸಿಸ್ ಮಾಜಿ ನಿರ್ದೇಶಕ ಮೋಹನ್‌ದಾಸ್‌ ಪೈ, ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯನ್ನು ಟ್ರೋಲ್ ಮಾಡಲು ಹೋಗಿ ತಾನೆ ನೆಗೆಪಾಟಲಿಗೀಡಾಗಿದ್ದಾರೆ.

ದೀಪಾವಳಿ ಹಿನ್ನಲೆಯಲ್ಲಿ ಅಮೆರಿಕದ ಹೊಸ ಚುನಾಯಿತ ಅಧ್ಯಕ್ಷ ಜೋ ಬೈಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ದೀಪಾವಳಿಗೆ ಶುಭಾಶಯ ಕೋರಿ ಕೊನೆಯಲ್ಲಿ “ಸಾಲ್ ಮುಬಾರಕ್”(ಹೊಸವರ್ಷದ ಶುಭಾಶಯ) ಎಂದಿದ್ದರು.

ಆದರೆ ಅದರಲ್ಲಿರುವ “ಸಾಲ್ ಮುಬಾರಕ್” ಎಂಬ ಪದ ಮೋಹನ್‌ದಾಸ್‌ ಪೈ ಅವರಿಗೆ ಅನ್ಯವಾಗಿ ಕಂಡಿದ್ದು, ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ, “ಭಾರತದಲ್ಲಿ ಯಾರೂ ದೀಪಾವಳಿಗೆ ’ಸಾಲ್ ಮುಬಾರಕ್’ ಎಂದು ಶುಭಾಶಯ ಕೊರುವುದಿಲ್ಲ, ಈ ’ನಕಲಿ’ ಶುಭಾಶಯವನ್ನು ಎಲ್ಲಿಂದ ಆಯ್ಕೆ ಮಾಡಿಕೊಂಡಿರಿ” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದರು.

ಇದನ್ನೂ ಓದಿ: ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ದೀಪಾವಳಿಯ ಮರುದಿನ ಗುಜರಾತಿಗಳಿಗೆ ಹೊಸ ವರ್ಷವಾಗಿದ್ದು ಅದನ್ನು ಧರ್ಮಾತೀತವಾಗಿ ಆಚರಿಸುತ್ತಾರೆ. ಈ ಹಿನ್ನಲೆಯಲ್ಲಿ ಅಮೆರಿಕದ ನೂತರ ಚುನಾಯಿತ ಅಧ್ಯಕ್ಷರುಗಳ ಟ್ವೀಟ್‌ಗಳು ಬಂದಿದೆ. ಅಷ್ಟೇ ಅಲ್ಲದೆ ಸ್ವತಃ ಗುಜರಾತಿನವರಾದ ಪ್ರಧಾನಿ ಮೋದಿ ಕೂಡಾ ಹಲವು ವರ್ಷಗಳಿಂದ ’ಸಾಲ್ ಮುಬಾರಕ್’ ಎಂದೇ ಶುಭಾಶಯ ಕೋರಿದ್ದಾರೆ. ಆದರೆ ಇದರ ಅರಿವಿಲ್ಲದ ಮೋಹನ್‌ದಾಸ್‌ ಪೈ ಯಾವುದೊ ಪೂರ್ವಾಗ್ರದಿಂದ ’ಸಾಲ್ ಮುಬಾರಕ್‌‌’ ಎಂಬ ಪದವನ್ನು ಆಕ್ಷೇಪಣೆ ಮಾಡಿ ಟ್ರೋಲ್‌‌ಗೆ ಒಳಗಾಗಿದ್ದಾರೆ.

 

ಇದೀಗ ಮೋಹನ್‌ದಾಸ್‌ ಪೈ ಅವರನ್ನು ಟ್ವಿಟ್ಟರಿಗರು ತರಾಟೆಗೆ ಪಡೆದು, ಟ್ರೋಲ್ ಮಾಡುತ್ತಿದ್ದಾರೆ. ಪತ್ರಕರ್ತೆ ಸಂಧ್ಯಾ, “ಮಾನ್ಯ ಪೈ ಅವರೇ, ಕುಟುಂಬ ಹಾಗೂ ಸ್ನೇಹಿತರ ಸುತ್ತ ನಿಮ್ಮನ್ನು ಮೂರ್ಖರನ್ನಾಗಿ ಮಾಡಿಕೊಳ್ಳುವುದು ಸರಿ. ಯಾಕೆಂದರೆ ಅವರಿಗೆ ನಿಮ್ಮ ಬಗ್ಗೆ ಗೊತ್ತಿದೆ. ಆದರೆ ಅದನ್ನು ಅಮೆರಿಕದ ಚುನಾಯಿತ ಉಪಾಧ್ಯಕ್ಷೆಯ ಮುಂದೆ ಮಾಡಬೇಕೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಪತ್ರಕರ್ತೆ ಸುಜಾತ ಆನಂದನ್, ಹಿಲರಿ ಕ್ಲಿಂಟನ್ ಅವರ  “ಸಾಲ್ ಮುಬಾರಕ್” ಶುಭಾಶಯವಿರುವ ಟ್ವೀಟನ್ನು ರೀಟ್ವೀಟ್ ಮಾಡಿ, “ಮೋಹನ್ ದಾಸ್ ಪೈ ಅವರೆ ಇದು ನಿಮಗಾಗಿ ಪ್ರೀತಿಯಿಂದ, ಅಂಕಲ್ ’ಪಿ’ ಆಕಾಶದಲ್ಲಿದ್ದಾರೆ” ಎಂದು ಚುಚ್ಚಿದ್ದಾರೆ.

ಉದ್ಯಮಿ ಸುಭಜಿತ್ ರಾಯ್, “ಸಾಲ್ ಮುಬಾರಕ್ ಎನ್ನುವುದು ಗುಜರಾತಿಗಳ ಶುಭಾಶಯ. ಗುಜರಾತಿ ಹೊಸ ವರ್ಷದ ಶುಭಕೋರಲು ಬಳಸಲಾಗುತ್ತದೆ, ಇದು ದೀಪಾವಳಿಯ ನಂತರದ ದಿನ ಬರುರುತ್ತದೆ. ನಿಮಗಿದು ತಿಳಿದಿರಲಿ ಎಂದು ಹಾರೈಸುತ್ತೇನೆ” ಎಂದು ಸಾಲ್ ಮುಬಾರಕ್ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ಸಾಮಾಜಿಕ ಕಾರ್ಯಕರ್ತೆ ಸಂಜುಕ್ತಾ ಬಸು ಪ್ರಧಾನಿ ಮೋದಿ ಈ ಹಿಂದೆ ಸಾಲ್ ಮುಬಾರಕ್ ಎಂದು ಶುಭಾಶಯ ಕೋರಿರುವ ಟ್ವೀಟ್‌‌ನ ಸ್ಕ್ರೀನ್ ಶಾರ್ಟ್ ಹಾಕಿ, “ಇದು ತುಂಬಾ ಕೆಟ್ಟದಾಗಿದೆ. ಮೊದಿ ಪ್ರತಿ ವರ್ಷ ಸಾಲ್ ಮುಬಾರಕ್ ಹೇಳುತ್ತಾರೆ. ಪಾಪಾದ ಮೋಹನ್ ದಾಸ್ ಜೊ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಬಗ್ಗೆ ಮಾತನಡುತ್ತಿರಲು ಕಾರಣ, ಅವರಿಬ್ಬರು ’ನಮಸ್ತೆ ಟ್ರಂಪ್ ಮತ್ತು ಹೌಡಿ ಮೋದಿ’ಯನ್ನು ಸೋಲಿಸಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಪನ್ಸ್ಟಾರ್‌ ಎನ್ನುವ ಟ್ವಿಟ್ಟರ್‌ ಹ್ಯಾಂಡಲ್, “ಕ್ಷಮಿಸಿ ಮೋಹನ್‌ದಾಸ್‌ ಪೈ, ಭಾರತದ ಕೆಲವರು ಸಾಲ್ ಮುಬಾರಕ್‌ ಎಂದೇ ಶುಭಾಶಯ ಕೋರಿದ್ದಾರೆ. ಬಹುಷಃ ಕಮಲಾ ಹ್ಯಾರಿಸ್ ಆ ’ನಕಲಿ ಶುಭಾಶಯ’ ವನ್ನು ಇಲ್ಲಿಂದಲೇ ತೆಗೆದು ಕೊಂಡಿದ್ದಾರೆ” ಎಂದು ಪ್ರಧಾನಿ ಮೋದಿ ಮಾಡಿರುವ ಟ್ವೀಟ್‌‌ನ ಸ್ಕ್ರೀನ್ ಶಾರ್ಟ್ ಹಾಕಿದ್ದಾರೆ.

ಇದನ್ನೂ ಓದಿ: ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...