Homeಮುಖಪುಟಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

ಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

- Advertisement -
- Advertisement -

ಅನುವಾದ – ದಿನೇಶ್ ಕೆ.ಎನ್ |

ವಾಸ್ತವ ಅಂಕಿ ಅಂಶ ಕೊಡದೆ, ದತ್ತಾಂಶ ತಿದ್ದುಪಡಿ ಮಾಡಲು ಮುಂದಾದ ಮೋದಿ ಸರ್ಕಾರ

ಅಂಕಿ ಅಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಸರ್ಕಾರವು ರಾಜಕೀಯ ಹಸ್ತಕ್ಷೇಪ ಮಾಡುತ್ತಿರುವುದನ್ನು ವಿರೋಧಿಸಿ, ಅವುಗಳ ಸಾಂಸ್ಥಿಕ ಸ್ವಾತಂತ್ರ್ಯವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ಜಗತ್ತಿನ 108 ಅರ್ಥಶಾಸ್ತ್ರಜ್ಞರು, ಸಾಮಾಜಿಕ ವಿಜ್ಞಾನಿಗಳು ದನಿ ಎತ್ತಿದ್ದಾರೆ. ಜಿಡಿಪಿ ದರ ಪರಿಕ್ಷರಣೆ ಮತ್ತು ಎನ್.ಎಸ್.ಎಸ್.ಓ ಡಾಟಾ ತಿದ್ದುಪಡಿ ವಿವಾದದ ಹಿನ್ನೆಲೆಯಲ್ಲಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಲವು ಆಯಾಮಗಲ್ಲಿ ಆರ್ಥಿಕ ಮತ್ತು ಸಾಮಾಜಿಕ ಮಾನದಂಡಗಳ ಆಧಾರದಲ್ಲಿ ಸಮಗ್ರ, ನಂಬಿಕಾರ್ಹವಾದ ಮಾಹಿತಿ ಒದಗಿಸುವ ಕಾರಣಕ್ಕಾಗಿಯೇ ಭಾರತೀಯ ಸಾಂಖ್ಯಿಕ ಸಂಸ್ಥೆಗಳು ದೊಡ್ಡಮಟ್ಟದ ಖ್ಯಾತಿಯನ್ನು ಪಡೆದಿದ್ದವು. ಈ ಹಿಂದೆ ಕೆಲವೊಮ್ಮೆ ಅವರ ಅಂದಾಜುಗಳ ಗುಣಮಟ್ಟದಲ್ಲಿ ಟೀಕೆಗಳು ಬಂದಿದ್ದರೂ, ನಿರ್ಣಯ ತಗೆದುಕೊಳ್ಳುವಾಗ ರಾಜಕೀಯ ಹಸ್ತಕ್ಷೇಪದ ಆರೋಪಗಳು ಕೇಳಿಬಂದಿರಲಿಲ್ಲ ಎಂದು ಜಂಟಿ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ತಮಗೆ ಅನಾನುಕೂಲವಾಗಲಿದೆ ಎಂಬ ಕಾರಣಕ್ಕಾಗಿಯೇ ಡಾಟಾವನ್ನು ತಡೆಯಿಡಿಯುವ/ನಿಗ್ರಹಿಸುವ ಪ್ರವೃತ್ತಿಯನ್ನು ವಿರೋಧಿಸಬೇಕಿದೆ. ಜೊತೆಗೆ ಸಮಗ್ರತೆಯಿಂದ ಎಲ್ಲಾ ಮಾಹಿತಿಗಳು ಸಾರ್ವಜನಿಕರಿಗೆ ಸುಲಭವಾಗಿ ಸಿಗುವ ರೀತಿಯಲ್ಲಿ ಸಾರ್ವಜನಿಕ ಸಾಂಖ್ಯಿಕ ಸಂಸ್ಥೆಗಳಿಗೆ ಸ್ವಾತಂತ್ರ್ಯ ಇರಬೇಕೆಂದು ಸರ್ಕಾರವನ್ನು ಒತ್ತಾಯಿಸಲು ವೃತ್ತಿಪರ ಅರ್ಥಶಾಸ್ತ್ರಜ್ಞರು, ಸಂಖ್ಯಾತಜ್ಞರು ಮತ್ತು ಸ್ವತಂತ್ರ ಸಂಶೋಧಕರು ಒಟ್ಟಾಗಿ ದನಿ ಎತ್ತಬೇಕೆಂದು ಮನವಿ ಮಾಡಿದ್ದಾರೆ.

2016-17 ರ ಅನಾಣ್ಯೀಕರಗೊಂಡ ವರ್ಷದಲ್ಲಿ ಸಿಎಸ್‍ಓ( ಕೇಂದ್ರೀಯ ಅಂಕಿಅಂಶಗಳ ಕಛೇರಿ) ಜಿಡಿಪಿ ಬೆಳವಣಿಗೆ ದರವನ್ನು 1.1% ರಷ್ಟು ಹೆಚ್ಚಳ ಮಾಡುವ ಮೂಲಕ 8.2% ರಷ್ಟು ಸಾಧಿಸಲಾಗಿದ್ದು ಈ ದಶಕದಲ್ಲೇ ಹೆಚ್ಚಿನಷ್ಟು ಬೆಳವಣಿಗೆ ಆಗಿದೆ ಎಂದು ಹೇಳಿತ್ತು. ಆದರೆ ಜಗತ್ತಿನ ಹಲವು ಅರ್ಥಶಾಸ್ತ್ರಜ್ಞರು ಇದಕ್ಕೆ ದಾಖಲೆ ಸಮೇತ ಭಿನ್ನಮತ ವ್ಯಕ್ತಪಡಿಸಿದ್ದರು. ಅದೇ ರೀತಿಯಲ್ಲಿ ಎನ್‍ಎಸ್‍ಎಸ್‍ಓ ನಡೆಸುವ ಆವರ್ತಕ ಕಾರ್ಮಿಕ ಬಲ ಸಮೀಕ್ಷೆಯನ್ನು ನಿಷ್ಕ್ರಿಯಗೊಳಿಸಿದ್ದಲ್ಲದೇ 2017-18ರ ಸಾಲಿನ ವರದಿಯನ್ನು ಸಹ ಸರ್ಕಾರ ತಡೆಹಿಡಿದಿದೆ. ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಂಕಿಅಂಶಗಳ ಆಯೋಗದ ಅಧ್ಯಕ್ಷರಾಗಿದ್ದ ಪಿ.ಸಿ ಮೋಹನನ್ ಮತ್ತು ಜೆ.ವಿ ಮೀನಾಕ್ಷಿರವರು ರಾಜೀನಾಮೆ ನೀಡಿದ್ದು ದೊಡ್ಡ ಸುದ್ದಿಯಾಗಿತ್ತು.

ದೇಶದ ಒಳಗಿನ ವಿಷಯಗಳ ವಿಷಯದಲ್ಲಿ ತಲೆಹಾಕಿ ಮೋದಿ ಸ್ವಾಯುತ್ತತೆಯನ್ನು, ದೇಶದ ಸ್ವಾಸ್ಥ್ಯವನ್ನು ಹಾಳು ಮಾಡಿದ್ದಲ್ಲದೇ ಈಗ ಅಂಕಿ ಅಂಶಗಳ ವಿಚಾರಕ್ಕೂ ಕೈ ಹಾಕಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜಾಕಲು ಮುಂದಾಗಿದ್ದಾರೆ. ಈಗ ಭಾರತದ ಅಪಾಯಕಾರಿ ಬೆಳವಣಿಗೆಗಳ ವಿರುದ್ಧದ ಜಂಟಿ ಹೇಳಿಕೆ ಹೊರಡಿಸಿರುವ ಅರ್ಥಶಾಸ್ತ್ರಜ್ಞರಲ್ಲಿ ಐಐಎಂ-ಎ ನ ರಾಕೇಶ್ ಬಸಂತ್, ಮೆಸಾಚುಯೇಟ್ಸ್ ವಿ.ವಿಯ ಜೇಮ್ಸ್ ಬಾಯ್ಸೆ, ಹಾರ್ವಡ್ ವಿ.ವಿಯ ಎಮಿಲಿ ಬ್ರೆಜ, ದೆಹಲಿ ವಿ.ವಿ ಸತೀಶ್ ದೇಶಪಾಂಡೆ, ಯುನಿವರ್ಸಿಟ್ ಆಫ್ ಬ್ರಿಟಿಷ್ ಕೊಲಂಬಿಯಾದ ಪೇಟ್ರೀಕ್ ಫ್ರಾನ್ಸಿಸ್, ಮುಂಬೈನ ಟಿಸ್ಸ್‍ನ ಆರ್ ರಾಮ್‍ಕುಮಾರ್, ಐಐಎಂ-ಬಿಯ ಹೇಮಾ ಸ್ವಾಮಿನಾಥನ್ ಮತ್ತು ಜೆ.ಎನ್.ಯುನ ರೋಹಿತ್ ಅಜಾದ್‍ರವರು ಸಹಿ ಹಾಕಿದ ಪ್ರಮುಖರಾಗಿದ್ದಾರೆ.

ಸುಪ್ರೀಂ ಕೋರ್ಟ್‍ನ ಜಡ್ಜ್‍ಗಳು ಬಂದು ದೇಶ ಅಪಾಯದಲ್ಲಿದೆ ಎಂದು ಪತ್ರಿಕಾಗೋಷ್ಠಿ ನಡೆಸಿದರು. ಸಿಬಿಐ ಅಧಿಕಾರಿಗಳು ರಾಜಿನಾಮೇ ಕೊಟ್ಟರು. ಆರ್‍ಬಿಐ ತನ್ನ ಅನುಮತಿ ನೀಡದೆಯೂ ಸಹ ಮೋದಿ ನೋಟು ರದ್ಧತಿ ಘೋಷಿಸಿದರು. ಈಗ ಅರ್ಥಶಾಸ್ತ್ರಜ್ಞರು ಮೋದಿ ಆಡಳಿತದಲ್ಲಿ ಎಲ್ಲವೂ ಸರಿಇಲ್ಲ ಎನ್ನುತ್ತಿದ್ದಾರೆ ಮಾತ್ರವಲ್ಲ ಇದರ ವಿರುದ್ಧ ಪ್ರತಿಭಟಿಸುವಂತೆ ಕರೆ ನೀಡುತ್ತಿದ್ದಾರೆ ಅಂದರೆ ನೀವೇ ಅರ್ಥ ಮಾಡಿಕೊಳ್ಳಿ ದೇಶದ ಪರಿಸ್ಥಿತಿಯನ್ನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...