Homeಮುಖಪುಟಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

ಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

- Advertisement -
- Advertisement -

ಅನುವಾದ – ದಿನೇಶ್ ಕೆ.ಎನ್ |

ವಾಸ್ತವ ಅಂಕಿ ಅಂಶ ಕೊಡದೆ, ದತ್ತಾಂಶ ತಿದ್ದುಪಡಿ ಮಾಡಲು ಮುಂದಾದ ಮೋದಿ ಸರ್ಕಾರ

ಅಂಕಿ ಅಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಸರ್ಕಾರವು ರಾಜಕೀಯ ಹಸ್ತಕ್ಷೇಪ ಮಾಡುತ್ತಿರುವುದನ್ನು ವಿರೋಧಿಸಿ, ಅವುಗಳ ಸಾಂಸ್ಥಿಕ ಸ್ವಾತಂತ್ರ್ಯವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ಜಗತ್ತಿನ 108 ಅರ್ಥಶಾಸ್ತ್ರಜ್ಞರು, ಸಾಮಾಜಿಕ ವಿಜ್ಞಾನಿಗಳು ದನಿ ಎತ್ತಿದ್ದಾರೆ. ಜಿಡಿಪಿ ದರ ಪರಿಕ್ಷರಣೆ ಮತ್ತು ಎನ್.ಎಸ್.ಎಸ್.ಓ ಡಾಟಾ ತಿದ್ದುಪಡಿ ವಿವಾದದ ಹಿನ್ನೆಲೆಯಲ್ಲಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಲವು ಆಯಾಮಗಲ್ಲಿ ಆರ್ಥಿಕ ಮತ್ತು ಸಾಮಾಜಿಕ ಮಾನದಂಡಗಳ ಆಧಾರದಲ್ಲಿ ಸಮಗ್ರ, ನಂಬಿಕಾರ್ಹವಾದ ಮಾಹಿತಿ ಒದಗಿಸುವ ಕಾರಣಕ್ಕಾಗಿಯೇ ಭಾರತೀಯ ಸಾಂಖ್ಯಿಕ ಸಂಸ್ಥೆಗಳು ದೊಡ್ಡಮಟ್ಟದ ಖ್ಯಾತಿಯನ್ನು ಪಡೆದಿದ್ದವು. ಈ ಹಿಂದೆ ಕೆಲವೊಮ್ಮೆ ಅವರ ಅಂದಾಜುಗಳ ಗುಣಮಟ್ಟದಲ್ಲಿ ಟೀಕೆಗಳು ಬಂದಿದ್ದರೂ, ನಿರ್ಣಯ ತಗೆದುಕೊಳ್ಳುವಾಗ ರಾಜಕೀಯ ಹಸ್ತಕ್ಷೇಪದ ಆರೋಪಗಳು ಕೇಳಿಬಂದಿರಲಿಲ್ಲ ಎಂದು ಜಂಟಿ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ತಮಗೆ ಅನಾನುಕೂಲವಾಗಲಿದೆ ಎಂಬ ಕಾರಣಕ್ಕಾಗಿಯೇ ಡಾಟಾವನ್ನು ತಡೆಯಿಡಿಯುವ/ನಿಗ್ರಹಿಸುವ ಪ್ರವೃತ್ತಿಯನ್ನು ವಿರೋಧಿಸಬೇಕಿದೆ. ಜೊತೆಗೆ ಸಮಗ್ರತೆಯಿಂದ ಎಲ್ಲಾ ಮಾಹಿತಿಗಳು ಸಾರ್ವಜನಿಕರಿಗೆ ಸುಲಭವಾಗಿ ಸಿಗುವ ರೀತಿಯಲ್ಲಿ ಸಾರ್ವಜನಿಕ ಸಾಂಖ್ಯಿಕ ಸಂಸ್ಥೆಗಳಿಗೆ ಸ್ವಾತಂತ್ರ್ಯ ಇರಬೇಕೆಂದು ಸರ್ಕಾರವನ್ನು ಒತ್ತಾಯಿಸಲು ವೃತ್ತಿಪರ ಅರ್ಥಶಾಸ್ತ್ರಜ್ಞರು, ಸಂಖ್ಯಾತಜ್ಞರು ಮತ್ತು ಸ್ವತಂತ್ರ ಸಂಶೋಧಕರು ಒಟ್ಟಾಗಿ ದನಿ ಎತ್ತಬೇಕೆಂದು ಮನವಿ ಮಾಡಿದ್ದಾರೆ.

2016-17 ರ ಅನಾಣ್ಯೀಕರಗೊಂಡ ವರ್ಷದಲ್ಲಿ ಸಿಎಸ್‍ಓ( ಕೇಂದ್ರೀಯ ಅಂಕಿಅಂಶಗಳ ಕಛೇರಿ) ಜಿಡಿಪಿ ಬೆಳವಣಿಗೆ ದರವನ್ನು 1.1% ರಷ್ಟು ಹೆಚ್ಚಳ ಮಾಡುವ ಮೂಲಕ 8.2% ರಷ್ಟು ಸಾಧಿಸಲಾಗಿದ್ದು ಈ ದಶಕದಲ್ಲೇ ಹೆಚ್ಚಿನಷ್ಟು ಬೆಳವಣಿಗೆ ಆಗಿದೆ ಎಂದು ಹೇಳಿತ್ತು. ಆದರೆ ಜಗತ್ತಿನ ಹಲವು ಅರ್ಥಶಾಸ್ತ್ರಜ್ಞರು ಇದಕ್ಕೆ ದಾಖಲೆ ಸಮೇತ ಭಿನ್ನಮತ ವ್ಯಕ್ತಪಡಿಸಿದ್ದರು. ಅದೇ ರೀತಿಯಲ್ಲಿ ಎನ್‍ಎಸ್‍ಎಸ್‍ಓ ನಡೆಸುವ ಆವರ್ತಕ ಕಾರ್ಮಿಕ ಬಲ ಸಮೀಕ್ಷೆಯನ್ನು ನಿಷ್ಕ್ರಿಯಗೊಳಿಸಿದ್ದಲ್ಲದೇ 2017-18ರ ಸಾಲಿನ ವರದಿಯನ್ನು ಸಹ ಸರ್ಕಾರ ತಡೆಹಿಡಿದಿದೆ. ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಂಕಿಅಂಶಗಳ ಆಯೋಗದ ಅಧ್ಯಕ್ಷರಾಗಿದ್ದ ಪಿ.ಸಿ ಮೋಹನನ್ ಮತ್ತು ಜೆ.ವಿ ಮೀನಾಕ್ಷಿರವರು ರಾಜೀನಾಮೆ ನೀಡಿದ್ದು ದೊಡ್ಡ ಸುದ್ದಿಯಾಗಿತ್ತು.

ದೇಶದ ಒಳಗಿನ ವಿಷಯಗಳ ವಿಷಯದಲ್ಲಿ ತಲೆಹಾಕಿ ಮೋದಿ ಸ್ವಾಯುತ್ತತೆಯನ್ನು, ದೇಶದ ಸ್ವಾಸ್ಥ್ಯವನ್ನು ಹಾಳು ಮಾಡಿದ್ದಲ್ಲದೇ ಈಗ ಅಂಕಿ ಅಂಶಗಳ ವಿಚಾರಕ್ಕೂ ಕೈ ಹಾಕಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜಾಕಲು ಮುಂದಾಗಿದ್ದಾರೆ. ಈಗ ಭಾರತದ ಅಪಾಯಕಾರಿ ಬೆಳವಣಿಗೆಗಳ ವಿರುದ್ಧದ ಜಂಟಿ ಹೇಳಿಕೆ ಹೊರಡಿಸಿರುವ ಅರ್ಥಶಾಸ್ತ್ರಜ್ಞರಲ್ಲಿ ಐಐಎಂ-ಎ ನ ರಾಕೇಶ್ ಬಸಂತ್, ಮೆಸಾಚುಯೇಟ್ಸ್ ವಿ.ವಿಯ ಜೇಮ್ಸ್ ಬಾಯ್ಸೆ, ಹಾರ್ವಡ್ ವಿ.ವಿಯ ಎಮಿಲಿ ಬ್ರೆಜ, ದೆಹಲಿ ವಿ.ವಿ ಸತೀಶ್ ದೇಶಪಾಂಡೆ, ಯುನಿವರ್ಸಿಟ್ ಆಫ್ ಬ್ರಿಟಿಷ್ ಕೊಲಂಬಿಯಾದ ಪೇಟ್ರೀಕ್ ಫ್ರಾನ್ಸಿಸ್, ಮುಂಬೈನ ಟಿಸ್ಸ್‍ನ ಆರ್ ರಾಮ್‍ಕುಮಾರ್, ಐಐಎಂ-ಬಿಯ ಹೇಮಾ ಸ್ವಾಮಿನಾಥನ್ ಮತ್ತು ಜೆ.ಎನ್.ಯುನ ರೋಹಿತ್ ಅಜಾದ್‍ರವರು ಸಹಿ ಹಾಕಿದ ಪ್ರಮುಖರಾಗಿದ್ದಾರೆ.

ಸುಪ್ರೀಂ ಕೋರ್ಟ್‍ನ ಜಡ್ಜ್‍ಗಳು ಬಂದು ದೇಶ ಅಪಾಯದಲ್ಲಿದೆ ಎಂದು ಪತ್ರಿಕಾಗೋಷ್ಠಿ ನಡೆಸಿದರು. ಸಿಬಿಐ ಅಧಿಕಾರಿಗಳು ರಾಜಿನಾಮೇ ಕೊಟ್ಟರು. ಆರ್‍ಬಿಐ ತನ್ನ ಅನುಮತಿ ನೀಡದೆಯೂ ಸಹ ಮೋದಿ ನೋಟು ರದ್ಧತಿ ಘೋಷಿಸಿದರು. ಈಗ ಅರ್ಥಶಾಸ್ತ್ರಜ್ಞರು ಮೋದಿ ಆಡಳಿತದಲ್ಲಿ ಎಲ್ಲವೂ ಸರಿಇಲ್ಲ ಎನ್ನುತ್ತಿದ್ದಾರೆ ಮಾತ್ರವಲ್ಲ ಇದರ ವಿರುದ್ಧ ಪ್ರತಿಭಟಿಸುವಂತೆ ಕರೆ ನೀಡುತ್ತಿದ್ದಾರೆ ಅಂದರೆ ನೀವೇ ಅರ್ಥ ಮಾಡಿಕೊಳ್ಳಿ ದೇಶದ ಪರಿಸ್ಥಿತಿಯನ್ನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...