Homeಅಂತರಾಷ್ಟ್ರೀಯಚೀನಾ ಪ್ರಸ್ತಾಪಿತ ಒಪ್ಪಂದಕ್ಕೆ ಸಹಿ ಹಾಕಿದ 15 ರಾಷ್ಟ್ರಗಳು; ಹೊರಗುಳಿದ ಭಾರತ!

ಚೀನಾ ಪ್ರಸ್ತಾಪಿತ ಒಪ್ಪಂದಕ್ಕೆ ಸಹಿ ಹಾಕಿದ 15 ರಾಷ್ಟ್ರಗಳು; ಹೊರಗುಳಿದ ಭಾರತ!

ಚೀನಾದಿಂದ ಬಹಳ ಅಗ್ಗದ ದರದಲ್ಲಿ ಕಳಪೆ ಉತ್ಪನ್ನಗಳು ರಫ್ತಾಗುವುತ್ತಿವೆ ಎಂದು ಆರೋಪಿಸಿದ್ದ ಭಾರತ ಈ ಒಪ್ಪಂದಕ್ಕೆ ಸಹಿ ಹಾಕದಿರಲು ಕಳೆದ ವರ್ಷ ನಿರ್ಧರಿಸಿತ್ತು

- Advertisement -
- Advertisement -

ಅಮೆರಿಕಾ ವಿರುದ್ಧ ತನ್ನ ಶಕ್ತಿ ಪ್ರದರ್ಶನ ಮಾಡುತ್ತಿರುವ ಚೀನಾ, ಏಷ್ಯಾದ ಪ್ರಮುಖ ರಾಷ್ಟ್ರಗಳನ್ನು ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಆರ್​ಸಿಇಪಿ ವ್ಯಾಪಾರ ಒಪ್ಪಂದ ಸಾಕಾರಗೊಂಡಿದೆ. ಏಷ್ಯಾದ 15 ಪ್ರಮುಖ ರಾಷ್ಟ್ರಗಳು ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರತ್ವ (RCEP) ಒಪ್ಪಂದಕ್ಕೆ ಸಹಿ ಹಾಕಿವೆ.

ಭಾರತ ಕೂಡ ಈ ಒಪ್ಪಂದಕ್ಕೆ ಸಹಿ ಹಾಕಬೇಕಿತ್ತು. ಆದರೆ, ಚೀನಾದಿಂದ ಬಹಳ ಅಗ್ಗದ ದರದಲ್ಲಿ ಕಳಪೆ ಉತ್ಪನ್ನಗಳು ರಫ್ತಾಗುವುತ್ತಿವೆ ಎಂದು ಆರೋಪಿಸಿದ್ದ ಭಾರತ ಈ ಒಪ್ಪಂದಕ್ಕೆ ಸಹಿ ಹಾಕದಿರಲು ಕಳೆದ ವರ್ಷ ನಿರ್ಧರಿಸಿತ್ತು. ಹಾಗಾಗಿ ಭಾರತ ಈ ಒಪ್ಪಂದಕ್ಕೆ ಸಹಿ ಹಾಕಿಲ್ಲ.

ಇದನ್ನೂ ಓದಿ: ಭಾರತೀಯ ರೈತರಿಗೆ ಅಮೇರಿಕಾ-ಭಾರತ ಮುಕ್ತ ವ್ಯಾಪಾರ ಒಪ್ಪಂದ ತಂದೊಡ್ಡುವ ಅಪಾಯಗಳು

ಜಪಾನ್, ದಕ್ಷಿಣ ಕೊರಿಯಾ, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಸೇರಿದಂತೆ 15 ರಾಷ್ಟ್ರಗಳು ಚೀನಾ ಪ್ರಸ್ತಾಪಿಸಿದ್ದ RCEP ಒಪ್ಪಂದಕ್ಕೆ ಸಹಿ ಹಾಕಿವೆ.

2012ರಲ್ಲಿ ಮೊದಲ ಬಾರಿಗೆ ಈ ಆರ್​ಸಿಇಪಿ ಒಪ್ಪಂದದ ಪ್ರಸ್ತಾವವಾಗಿದ್ದು. ಎಂಟು ವರ್ಷಗಳ ನಿರಂತರ ಚರ್ಚೆಗಳ ಬಳಿಕ 15 ರಾಷ್ಟ್ರಗಳು ಸಹಿ ಹಾಕಿವೆ. ಈ ವರ್ಷ ಕೊರೊನಾ ಸೋಂಕಿನಿಂದಾಗಿ ಆರ್ಥಿಕತೆ ಸಂಕಷ್ಟಕ್ಕೊಳಗಾಗಿದ್ದರಿಂದ ಒಪ್ಪಂದ ಸಾಕಾರಗೊಳ್ಳಲು ಮುಖ್ಯ ಕಾರಣ ಎನ್ನಲಾಗಿದೆ.

ಆರ್‌ಸಿಇಪಿ ಒಪ್ಪಂದಕ್ಕೆ ಸಹಿಹಾಕಿರುವ ದೇಶಗಳು ತಮ್ಮ ಉತ್ಪನ್ನಗಳನ್ನ ಸುಲಭವಾಗಿ ರಫ್ತು ಮಾಡಲು ಸಾಧ್ಯವಾಗುತ್ತದೆ. ಎಲ್ಲರಿಗೂ ಸಮಾನ ನಿಯಮಾವಳಿಗಳು ಇರುತ್ತವೆ. ಮ್ಯಾನುಫ್ಯಾಕ್ಚರಿಂಗ್ ಉದ್ಯಮ ಪ್ರಬಲವಾಗಿರುವ ಚೀನಾಗೆ ಈ ಒಪ್ಪಂದದಿಂದ ಅತಿಹೆಚ್ಚು ಲಾಭ ಸಿಗುವ ನಿರೀಕ್ಷೆ ಇದೆ. ಆರ್​ಸಿಇಪಿ ಮೂಲಕ ಚೀನಾದ ಪ್ರಭಾವ ಇನ್ನಷ್ಟು ಹೆಚ್ಚಾಗುತ್ತದೆ. ಟ್ರಾನ್ಸ್-ಪೆಸಿಫಿಕ್ ಒಪ್ಪಂದದಿಂದ ಅಮೆರಿಕ ಹಿಂದೆ ಸರಿದಿರುವ ಹಿನ್ನೆಲೆಯಲ್ಲಿ ಏಷ್ಯಾದ ಮೇಲೆ ಚೀನಾದ ಹಿಡಿತ ಇನ್ನಷ್ಟು ಹೆಚ್ಚಾಗಲಿದೆ.

ಇದನ್ನೂ ಓದಿ: ಬಿಳೇಮನಿಯ ಕರೀ ಒಪ್ಪಂದ : ಟ್ರಂಪ್‌ನಿಂದ ಭಾರತಕ್ಕಾಗುವ ಅಪಾಯಗಳೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...