Homeಅಂತರಾಷ್ಟ್ರೀಯಚೀನಾ ಪ್ರಸ್ತಾಪಿತ ಒಪ್ಪಂದಕ್ಕೆ ಸಹಿ ಹಾಕಿದ 15 ರಾಷ್ಟ್ರಗಳು; ಹೊರಗುಳಿದ ಭಾರತ!

ಚೀನಾ ಪ್ರಸ್ತಾಪಿತ ಒಪ್ಪಂದಕ್ಕೆ ಸಹಿ ಹಾಕಿದ 15 ರಾಷ್ಟ್ರಗಳು; ಹೊರಗುಳಿದ ಭಾರತ!

ಚೀನಾದಿಂದ ಬಹಳ ಅಗ್ಗದ ದರದಲ್ಲಿ ಕಳಪೆ ಉತ್ಪನ್ನಗಳು ರಫ್ತಾಗುವುತ್ತಿವೆ ಎಂದು ಆರೋಪಿಸಿದ್ದ ಭಾರತ ಈ ಒಪ್ಪಂದಕ್ಕೆ ಸಹಿ ಹಾಕದಿರಲು ಕಳೆದ ವರ್ಷ ನಿರ್ಧರಿಸಿತ್ತು

- Advertisement -
- Advertisement -

ಅಮೆರಿಕಾ ವಿರುದ್ಧ ತನ್ನ ಶಕ್ತಿ ಪ್ರದರ್ಶನ ಮಾಡುತ್ತಿರುವ ಚೀನಾ, ಏಷ್ಯಾದ ಪ್ರಮುಖ ರಾಷ್ಟ್ರಗಳನ್ನು ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಆರ್​ಸಿಇಪಿ ವ್ಯಾಪಾರ ಒಪ್ಪಂದ ಸಾಕಾರಗೊಂಡಿದೆ. ಏಷ್ಯಾದ 15 ಪ್ರಮುಖ ರಾಷ್ಟ್ರಗಳು ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರತ್ವ (RCEP) ಒಪ್ಪಂದಕ್ಕೆ ಸಹಿ ಹಾಕಿವೆ.

ಭಾರತ ಕೂಡ ಈ ಒಪ್ಪಂದಕ್ಕೆ ಸಹಿ ಹಾಕಬೇಕಿತ್ತು. ಆದರೆ, ಚೀನಾದಿಂದ ಬಹಳ ಅಗ್ಗದ ದರದಲ್ಲಿ ಕಳಪೆ ಉತ್ಪನ್ನಗಳು ರಫ್ತಾಗುವುತ್ತಿವೆ ಎಂದು ಆರೋಪಿಸಿದ್ದ ಭಾರತ ಈ ಒಪ್ಪಂದಕ್ಕೆ ಸಹಿ ಹಾಕದಿರಲು ಕಳೆದ ವರ್ಷ ನಿರ್ಧರಿಸಿತ್ತು. ಹಾಗಾಗಿ ಭಾರತ ಈ ಒಪ್ಪಂದಕ್ಕೆ ಸಹಿ ಹಾಕಿಲ್ಲ.

ಇದನ್ನೂ ಓದಿ: ಭಾರತೀಯ ರೈತರಿಗೆ ಅಮೇರಿಕಾ-ಭಾರತ ಮುಕ್ತ ವ್ಯಾಪಾರ ಒಪ್ಪಂದ ತಂದೊಡ್ಡುವ ಅಪಾಯಗಳು

ಜಪಾನ್, ದಕ್ಷಿಣ ಕೊರಿಯಾ, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಸೇರಿದಂತೆ 15 ರಾಷ್ಟ್ರಗಳು ಚೀನಾ ಪ್ರಸ್ತಾಪಿಸಿದ್ದ RCEP ಒಪ್ಪಂದಕ್ಕೆ ಸಹಿ ಹಾಕಿವೆ.

2012ರಲ್ಲಿ ಮೊದಲ ಬಾರಿಗೆ ಈ ಆರ್​ಸಿಇಪಿ ಒಪ್ಪಂದದ ಪ್ರಸ್ತಾವವಾಗಿದ್ದು. ಎಂಟು ವರ್ಷಗಳ ನಿರಂತರ ಚರ್ಚೆಗಳ ಬಳಿಕ 15 ರಾಷ್ಟ್ರಗಳು ಸಹಿ ಹಾಕಿವೆ. ಈ ವರ್ಷ ಕೊರೊನಾ ಸೋಂಕಿನಿಂದಾಗಿ ಆರ್ಥಿಕತೆ ಸಂಕಷ್ಟಕ್ಕೊಳಗಾಗಿದ್ದರಿಂದ ಒಪ್ಪಂದ ಸಾಕಾರಗೊಳ್ಳಲು ಮುಖ್ಯ ಕಾರಣ ಎನ್ನಲಾಗಿದೆ.

ಆರ್‌ಸಿಇಪಿ ಒಪ್ಪಂದಕ್ಕೆ ಸಹಿಹಾಕಿರುವ ದೇಶಗಳು ತಮ್ಮ ಉತ್ಪನ್ನಗಳನ್ನ ಸುಲಭವಾಗಿ ರಫ್ತು ಮಾಡಲು ಸಾಧ್ಯವಾಗುತ್ತದೆ. ಎಲ್ಲರಿಗೂ ಸಮಾನ ನಿಯಮಾವಳಿಗಳು ಇರುತ್ತವೆ. ಮ್ಯಾನುಫ್ಯಾಕ್ಚರಿಂಗ್ ಉದ್ಯಮ ಪ್ರಬಲವಾಗಿರುವ ಚೀನಾಗೆ ಈ ಒಪ್ಪಂದದಿಂದ ಅತಿಹೆಚ್ಚು ಲಾಭ ಸಿಗುವ ನಿರೀಕ್ಷೆ ಇದೆ. ಆರ್​ಸಿಇಪಿ ಮೂಲಕ ಚೀನಾದ ಪ್ರಭಾವ ಇನ್ನಷ್ಟು ಹೆಚ್ಚಾಗುತ್ತದೆ. ಟ್ರಾನ್ಸ್-ಪೆಸಿಫಿಕ್ ಒಪ್ಪಂದದಿಂದ ಅಮೆರಿಕ ಹಿಂದೆ ಸರಿದಿರುವ ಹಿನ್ನೆಲೆಯಲ್ಲಿ ಏಷ್ಯಾದ ಮೇಲೆ ಚೀನಾದ ಹಿಡಿತ ಇನ್ನಷ್ಟು ಹೆಚ್ಚಾಗಲಿದೆ.

ಇದನ್ನೂ ಓದಿ: ಬಿಳೇಮನಿಯ ಕರೀ ಒಪ್ಪಂದ : ಟ್ರಂಪ್‌ನಿಂದ ಭಾರತಕ್ಕಾಗುವ ಅಪಾಯಗಳೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...