Homeಮುಖಪುಟಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ಮಹಾಘಟಬಂಧನ್‌ಗೆ ಕಾಂಗ್ರೆಸ್ ಪಕ್ಷವೇ ಮುಳುವಾಯಿತು. ಅವರು 70 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ಆದರೆ 70 ಸಾರ್ವಜನಿಕ ರ್ಯಾಲಿಗಳನ್ನೂ ಸಹ ನಡೆಸಲಿಲ್ಲ

- Advertisement -
- Advertisement -

ಬಿಹಾರ ಚುನಾವಣೆಯಲ್ಲಿನ ಸೋಲಿನ ನಂತರ ಮಹಾಘಟಬಂಧನ್ ಸೌಹಾರ್ದತೆಯ ನಡುವಿನ ಬಿರುಕುಗಳು ಭಾನುವಾರ ಬೆಳಕಿಗೆ ಬಂದಿದ್ದು, ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾದಳದ (RJD) ಹಿರಿಯ ಮುಖಂಡರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

“ಮಹಾಘಟಬಂಧನ್‌ಗೆ ಕಾಂಗ್ರೆಸ್ ಪಕ್ಷವೇ ಮುಳುವಾಯಿತು. ಅವರು 70 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ಆದರೆ 70 ಸಾರ್ವಜನಿಕ ರ್ಯಾಲಿಗಳನ್ನೂ ಸಹ ನಡೆಸಲಿಲ್ಲ. ರಾಹುಲ್ ಗಾಂಧಿ ಮೂರು ದಿನಗಳ ಕಾಲ ಬಂದರು, ಪ್ರಿಯಾಂಕಾ ಗಾಂಧಿ ಬರಲೇ ಇಲ್ಲ. ಬಿಹಾರದ ಪರಿಚಯವೇ ಇಲ್ಲದವರು ಇಲ್ಲಿಗೆ ಬಂದರು. ಇದು ಸರಿಯಲ್ಲ” ಎಂದು ಶಿವಾನಂದ್ ತಿವಾರಿ ಅಭಿಪ್ರಾಯ ವ್ಯಕ್ತಪಡಿಸಿದರು.

RJD, ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಮಹಾ ಮೈತ್ರಿ ಅಥವಾ ಮಹಾಘಟಬಂಧನ್‌ ಬಹುಮತದ ಕೊರತೆಯಿಂದಾಗಿ ಸೋಲನ್ನು ಅನುಭವಿಸಿದೆ. ಚುನಾವಣಾ ಎಕ್ಸಿಟ್‌ ಪೋಲ್ ಸಮೀಕ್ಷೆಗಳು ತಲೆಕೆಳಗಾಗಿವೆ.

ಇದನ್ನೂ ಓದಿ: ಬಿಹಾರ: ಕೇವಲ 40 ಸ್ಥಾನ ಪಡೆದ ಜನಾದೇಶವಿಲ್ಲದವರು ಹೇಗೆ ಸಿಎಂ ಆಗುತ್ತಾರೆ?- RJD ಪ್ರಶ್ನೆ

243 ಸ್ಥಾನಗಳ ಪೈಕಿ 70 ಸ್ಥಾನಗಳಲ್ಲಿ ಸ್ಪರ್ಧಿಸಿ ಕೇವಲ 19 ಸ್ಥಾನಗಳನ್ನು ಮಾತ್ರ ಪಡೆದುಕೊಂಡು, ಮೈತ್ರಿಯ ಹಿನ್ನಡೆಗೆ ಕಾರಣವಾಗಿದ್ದಕ್ಕಾಗಿ ಕಾಂಗ್ರೆಸ್ ಪಕ್ಷವು ವ್ಯಾಪಕ ಟೀಕೆಗೆ ಒಳಗಾಯಿತು.

“ಇದು ಬಿಹಾರದಲ್ಲಿ ಮಾತ್ರ ಅಲ್ಲ ಎಂದು ನಾನು ಭಾವಿಸುತ್ತೇನೆ. ಇತರ ರಾಜ್ಯಗಳಲ್ಲಿಯೂ ಸಹ ಕಾಂಗ್ರೆಸ್ ಗರಿಷ್ಠ ಸಂಖ್ಯೆಯ ಸ್ಥಾನಗಳಿಗೆ ಸ್ಪರ್ಧಿಸಲು ಹೆಚ್ಚಿನ ಒತ್ತು ನೀಡುತ್ತದೆ. ಆದರೆ ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುವಲ್ಲಿ ಅವರು ವಿಫಲರಾಗುತ್ತಾರೆ. ಕಾಂಗ್ರೆಸ್ ಈ ಬಗ್ಗೆ ಯೋಚಿಸಬೇಕು” ಎಂದು ತಿವಾರಿ ಹೇಳಿದರು.

ಇದನ್ನೂ ಓದಿ: ಬಿಹಾರ: ಸಿಎಂ ನಿತೀಶ್‌ ಅನ್ನು ನಿಯಂತ್ರಿಸುವ ರಿಮೋಟ್ ಬೇರೆಯವರ ಬಳಿಯಿದೆ- ತಾರಿಖ್ ಅನ್ವರ್

“ಇಲ್ಲಿ ಚುನಾವಣೆಗಳು ಭರದಿಂದ ಸಾಗಿತ್ತು. ಆದರೆ ರಾಹುಲ್ ಗಾಂಧಿ ಶಿಮ್ಲಾದ ಪ್ರಿಯಾಂಕಾ ಜಿ ಅವರ ಮನೆಯಲ್ಲಿ ಪಿಕ್‌ನಿಕ್ ಮಾಡುತ್ತಿದ್ದರು. ಪಕ್ಷವು ಹಾಗೇ ನಡೆಯುತ್ತದೆಯೇ? ಕಾಂಗ್ರೆಸ್ ಪಕ್ಷವನ್ನು ನಡೆಸುತ್ತಿರುವ ರೀತಿ ಬಿಜೆಪಿಗೆ ಲಾಭವಾಗುತ್ತಿದೆ” ಎಂದು ಆರೋಪಿಸಿದರು.

ಇದೇ ರೀತಿಯ ಅಭಿಪ್ರಾಯವನ್ನು RJD ಮುಖಂಡ ತಾರಿಖ್ ಅನ್ವರ್ ಕೂಡ ವ್ಯಕ್ತಪಡಿಸಿದ್ದರು. ನಿನ್ನೆ ಎನ್‌ಡಿಎ ಕೂಡದಿಂದ ನಿತೀಶ್‌ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಒಮ್ಮತದಿಂದ ಘೊಷಿಸಲಾಯಿತು. ಇದಾದ ನಂತರ ಈ ಬಿರುಕು ಬೆಳಕಿಗೆ ಬಂದಿದೆ.


ಇದನ್ನೂ ಓದಿ: ಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...