Homeಮುಖಪುಟಚುನಾವಣಾ ನೀತಿಸಂಹಿತೆಯನ್ನೇ ಧಿಕ್ಕರಿಸಿದ ‘ಮೋದಿ’ ಸಿನಿಮಾ ತಂಡದ ಬೆನ್ನಿಗೆ ಯಾರಿದ್ದಾರೆ?

ಚುನಾವಣಾ ನೀತಿಸಂಹಿತೆಯನ್ನೇ ಧಿಕ್ಕರಿಸಿದ ‘ಮೋದಿ’ ಸಿನಿಮಾ ತಂಡದ ಬೆನ್ನಿಗೆ ಯಾರಿದ್ದಾರೆ?

- Advertisement -
- Advertisement -

ಚುನಾವಣಾ ಆಯೋಗದ ಬಗ್ಗೆ ಬಿಜೆಪಿಗೆ ನಿಜಕ್ಕೂ ಗೌರವ ಇದೆಯಾ? ಮೋದಿಯವರ ಈ ಐದು ವರ್ಷದ ಆಳ್ವಿಕೆಯಲ್ಲಿ ಚುನಾವಣಾ ಆಯೋಗ ತನ್ನ ಸ್ವಾಯತ್ತೆಯನ್ನು ಉಳಿಸಿಕೊಂಡಿದೆಯಾ? ಮುಂಬರುವ ಲೋಕಸಭಾ ಚುನಾವಣೆಯನ್ನು ಆಯೋಗ ಪಾರದರ್ಶಕವಾಗಿ ನಡೆಸುತ್ತಾ?………

ಇಷ್ಟೆಲ್ಲ ಪ್ರಶ್ನೆಗಳು ಹುಟ್ಟಲು ಕಾರಣವಾಗಿರೋದು ಒಂದು ಸಿನಿಮಾ! ಅದು ಸಾಮಾನ್ಯ ಸಿನಿಮಾವಲ್ಲ ಪ್ರಧಾನಿ ಮೋದಿಯವರ ಜೀವನಚರಿತ್ರೆ ಆಧರಿಸಿದ ಸಿನಿಮಾ ‘ಪಿಎಂ ನರೇಂದ್ರ ಮೋದಿ’. ಈ ಸಿನಿಮಾವನ್ನು ಏಪ್ರಿಲ್ 12ಕ್ಕೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಇತ್ತೀಚೆಗೆ ಘೋಷಿಸಿದ ನಂತರ ಚುನಾವಣಾ ಆಯೋಗವನ್ನು ಎಲ್ಲರೂ ಅನುಮಾನದಿಂದ ನೋಡುವಂತಾಗಿದೆ.

ಯಾಕೆಂದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ, ಸದರಿ ಚುನಾವಣೆಯ ಪ್ರಮುಖ ರಾಜಕಾರಣಿಯೊಬ್ಬರ ಸಿನಿಮಾವನ್ನು ಬಿಡುಗಡೆ ಮಾಡುವುದು ಎಷ್ಟು ಸರಿ? ಇದಕ್ಕೆ ಆಯೋಗ ಸಮ್ಮತಿ ನೀಡುತ್ತದೆಯಾ? ಮೊದಲ ಹಂತದ ಮತದಾನ ಚುನಾವಣೆ ಮುಕ್ತಾಯಗೊಂಡ ಮಾರನೇ ದಿನವೆ, ಇನ್ನೂ ಆರು ಹಂತಗಳ ಮತದಾನ ಬಾಕಿ ಇರುವಾಗಲೇ ಸಿನಿಮಾ ಬಿಡುಗಡೆ ಮಾಡುತ್ತೇವೆ ಎಂದು ಚಿತ್ರತಂಡ ಘೋಷಿಸುತ್ತದೆಯೆಂದರೆ, ಆಯೋಗದ ಭಯ ಆ ತಂಡಕ್ಕಿಲ್ಲವೇ? ಅಥವಾ ಆ ಭಯವನ್ನೂ ಮೀರುವ ಅಭಯ ಆ ತಂಡಕ್ಕೆ ಲಭಿಸಿದೆಯೇ? ಈ ಎಲ್ಲಾ ಪ್ರಶ್ನೆಗಳು ಈಗ ದೊಡ್ಡ ಚರ್ಚೆಯಾಗಿ ಬೆಳೆಯುತ್ತಿವೆ.

ಪ್ರಜಾತಂತ್ರವನ್ನು ಗೌರವಿಸುವವರ ವಾದ ಇದಾದರೆ, ವ್ಯಕ್ತಿ ಪೂಜೆಯ ಮೋಹಕ್ಕೆ ಸಿಕ್ಕಿರುವ ಕೆಲವರು ಆ ಸಿನಿಮಾಕ್ಕೂ ಬಿಜೆಪಿ ಪಕ್ಷಕ್ಕೂ ಯಾವ ಸಂಬಂಧವೂ ಇಲ್ಲ, ಅಲ್ಲದೇ ಪ್ರಧಾನಿ ಮೋದಿಯವರೇನು ಅದರಲ್ಲಿ ನಟಿಸಿದ್ದಾರಾ? ಹಾಗಾಗಿ ಅದು ಬಿಡುಗಡೆಯಾಗುವುದಕ್ಕೆ ಯಾರೂ ಅಡ್ಡಿಪಡಿಸಬಾರದು ಎಂಬ ವಾದ ಮುಂದಿಡುತ್ತಿದ್ದಾರೆ.

ನಿಜಕ್ಕೂ ಬಿಜೆಪಿ ಪಕ್ಷಕ್ಕೂ ಆ ಸಿನಿಮಾಗೂ ಯಾವ ನಂಟೂ ಇಲ್ಲವೇ? ಬನ್ನಿ ಒಂದೊಂದಾಗಿ ನೋಡೋಣ…..

ಮಹಾರಾಷ್ಟ್ರ ಸಿಎಂ ಫಡ್ನವೀಸ್ ಪೋಸ್ಟರ್ ಬಿಡುಗಡೆ ಮಾಡುತ್ತಿರುವುದು

ನಿರ್ಮಾಣದಿಂದಲೇ ಶುರು ಮಾಡೋಣ. ಆ ಸಿನಿಮಾದ ಮೊದಲ ಪೋಸ್ಟರ್ ಬಿಡುಗಡೆಯಾದದ್ದು ಇದೇ ವರ್ಷದ ಜನವರಿ 7 ರಂದು, ಮುಂಬೈನಲ್ಲಿ. ಬಿಡುಗಡೆ ಮಾಡಿದ್ದು ಮಹಾರಾಷ್ಟ್ರದ ಬಿಜೆಪಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್! ಬಿಜೆಪಿ ನಂಟೇ ಇರದಿದ್ದರೆ ಬಿಜೆಪಿ ರಾಜಕಾರಣಿ ಯಾಕೆ ಬಿಡುಗಡೆ ಮಾಡುತ್ತಿದ್ದರು?

ಇನ್ನು ಸಿನಿಮಾದ ಶೂಟಿಂಗ್ ಶುರುವಾದದ್ದು ಜನವರಿ 28ರಂದು. ಅದಾಗಿ ಸರಿಯಾಗಿ ನಲವತ್ತೆರಡು ದಿನಗಳಿಗೆ ಚಿತ್ರತಂಡ ರಿಲೀಸಿಂಗ್ ದಿನಾಂಕವನ್ನೇ ಪ್ರಕಟಿಸುತ್ತೆ. ಅದ್ಯಾವಾಗ ಏಪ್ರಿಲ್ 12ಕ್ಕೆ. ಅಂದರೆ ಶೂಟಿಂಗ್ ಶುರುವಾಗಿ ಕೇವಲ ಎರಡೂವರೆ ತಿಂಗಳಿಗೆ ಪ್ರಿ-ಪ್ರೊಡಕ್ಷನ್, ಪೋಸ್ಟ್-ಪ್ರೊಡಕ್ಷನ್ ಎಲ್ಲವನ್ನೂ ಮುಗಿಸಿ ಸಿನಿಮಾ ಸಿದ್ಧವಾಗಿಬಿಡುತ್ತೆ! ಬಿಜೆಪಿ ಎದುರಿಸ ಹೊರಟಿರುವ ಚುನಾವಣೆಯೇ ಈ ಸಿನಿಮಾದ ಆತುರದ ಪ್ರೊಡಕ್ಷನ್ ಕೆಲಸಕ್ಕೆ ಕಾರಣವಾ?

ಇನ್ನು ಸಿನಿಮಾ ರಿಲೀಸ್ ಆಗುತ್ತಿರೋದು ಹಿಂದಿ ಭಾಷೆಯಲ್ಲಿ ಮಾತ್ರ ಎಂದು ತಿಳಿದು ಬಂದಿದೆ. ಆದರೆ ಪೋಸ್ಟರ್ ರಿಲೀಸ್ ಆಗಿರೋದು 23 ಭಾರತೀಯ ಭಾಷೆಗಳಲ್ಲಿ. ಸಿನಿಮಾವೇ ತಯಾರಾಗದ ಭಾಷೆಯಲ್ಲೂ ಪೋಸ್ಟರ್‌ಗಳ ಅಗತ್ಯವೇನಿತ್ತು? ಇದು ಪ್ರಚಾರ ತಂತ್ರದ ಭಾಗ ಎನಿಸುವುದಿಲ್ಲವೇ, ಸಿನಿಮಾ ಪ್ರಚಾರವಲ್ಲ, ರಾಜಕೀಯ ಪ್ರಚಾರ!

ಇನ್ನು ಈ ಸಿನಿಮಾ ತಯಾರಕರ ವಿಚಾರಕ್ಕೆ ಬರೋಣ. ಮೊದಲು ನಟನಿಂದಲೇ ಶುರು ಮಾಡೋಣ. ಇದರಲ್ಲಿ ಮೋದಿಯವರ ಪಾತ್ರ ಮಾಡುತ್ತಿರೋದು ಬಾಲಿವುಡ್ ನಟ ವಿವೇಕ್ ಒಬೆರಾಯ್. ಈತ ಬಿಜೆಪಿಯ ಅಧಿಕೃತ ಸದಸ್ಯನಲ್ಲದೇ ಹೋದರು, ಬಿಜೆಪಿಯ ರೆಗ್ಯುಲರ್ ಸ್ಟಾರ್ ಪ್ರಚಾರಕ. 2014ರಲ್ಲಿ ಈತ ಮೋದಿಯವರ ಬಿಜೆಪಿ ಪರವಾಗಿ ಮಹಾರಾಷ್ಟ್ರದ ನಕ್ಸಲ್‌ಪೀಡಿತ ಜಿಲ್ಲೆಯಾದ ಗಡ್ಚರೋಲಿಯಲ್ಲಿ ಮತ್ತು ಉತ್ತರಪ್ರದೇಶದ ಘಜಿಯಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿಗಳಿಗಾಗಿ ಮತ ಯಾಚಿಸಿದ್ದರು.

ಬಿಜೆಪಿ ಕಮಲ ಲಾಂಛನದೊಂದಿಗೆ ಪ್ರಮಾಣವಚನದಲ್ಲಿ

ಇನ್ನು ಮೋದಿಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭಕ್ಕೂ ಈತನಿಗೆ ಆತ್ಮೀಯ ಆಹ್ವಾನವಿತ್ತು. ಅವತ್ತಿನ ಸಮಾರಂಭದಲ್ಲಿ ವಿವೇಕ್ ಒಬೆರಾಯ್ ಅಲ್ಲದೆ ಬೇರೆ ಸಾಕಷ್ಟು ಸಿನಿಮಾ ನಟರು ಭಾಗವಹಿಸಿದ್ದರು ಎಂದು ತಳ್ಳಿಹಾಕಲಿಕ್ಕಾಗುವುದಿಲ್ಲ. ಯಾಕೆಂದರೆ ವಿವೇಕ್ ಅವತ್ತು ತನ್ನ ಎದೆಯ ಮೇಲೆ ಬಿಜೆಪಿ ಚಿಹ್ನೆಯಾದ ಕಮಲದ ಗುರುತನ್ನು ಧರಿಸಿ ಬಿಜೆಪಿ ಜೊತೆಗಿನ ತನ್ನ ನಿಕಟತೆಯನ್ನು ಪ್ರದರ್ಶಿಸಿದ್ದರು. ಅಂದಹಾಗೆ ವಿವೇಕ್ ಒಬೆರಾಯ್ 2013ರಲ್ಲೇ (ಅಂದರೆ ಮೋದಿಯವರು 2014ರ ಚುನಾವಣಾ ತಯಾರಿಯಲ್ಲಿದ್ದಾಗಲೇ) ಮೋದಿ ಕುರಿತ ಸಿನಿಮಾದಲ್ಲಿ ಮೋದಿ ಪಾತ್ರ ಮಾಡುತ್ತಿರುವುದಾಗಿ ಹೇಳಿದ್ದಾಗಿ ಔಟ್‌ಲುಕ್ ವರದಿ ಮಾಡಿತ್ತು. ಅಂದರೆ ವಿವೇಕ್‌ನ ಪ್ರಕಾರ ಮೋದಿ ಸಿನಿಮಾ ಚುನಾವಣಾ ಸಂದರ್ಭದಲ್ಲೇ ಕದಲಿಕೆ ಕಾಣುತ್ತದೆ ಎಂಬುದು ಇದರಿಂದ ಅರ್ಥವಾಗುತ್ತೆ.

ಈಗ ನಿರ್ಮಾಪಕರ ವಿಚಾರಕ್ಕೆ ಬಂದರೆ, ಈ ಸಿನಿಮಾದ ಇಬ್ಬರು ನಿರ್ಮಾಪಕರಲ್ಲಿ ಒಬ್ಬರು ಈ ವಿವೇಕ್‌ನ ತಂದೆ ಸುರೇಶ್ ಒಬೆರಾಯ್! ಈತ 2004ರಲ್ಲಿ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ವೆಂಕಯ್ಯ ನಾಯ್ಡು ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು. ಅಲ್ಲಿಂದ ಇಲ್ಲಿವರೆಗೂ ಸುರೇಶ್, ಬಿಜೆಪಿ ಸಕ್ರಿಯ ಸದಸ್ಯ ಮತ್ತು ಮಗನಂತೆ  ತಾನೂ ಬಿಜೆಪಿಯ ಸ್ಟಾರ್ ಪ್ರಚಾರಕ!

ಸುರೇಶ್ ಒಬೆರಾಯ್ 2004ರಲ್ಲಿ ಬಿಜೆಪಿ ಸೇರ್ಪಡೆ

ಇನ್ನು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿರೋದು ಓಮಂಗ್ ಕುಮಾರ್ ಎಂಬ ಪ್ರತಿಭಾವಂತ ನಿರ್ದೇಶಕ. ಜೀವನಚರಿತ್ರೆಗಳನ್ನು ಚಿತ್ರವಾಗಿಸುವುದರಲ್ಲಿ ನಿಸ್ಸೀಮ. ಈ ಹಿಂದೆ ‘ಸರಬ್ಜಿತ್’ ಮತ್ತು ‘ಮೇರಿ ಕೋಮ್’ ಚಿತ್ರಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದವರು. ಇವರು ನಟ, ನಿರ್ಮಾಪಕನಷ್ಟು ಬಿಜೆಪಿ ಸಖ್ಯ ಹೊಂದಿಲ್ಲವಾದರು ಇವರ ‘ಸರಬ್ಜಿತ್’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ್ದು ಬಿಜೆಪಿಯ ಅಮಿತ್ ಶಾ ಮತ್ತು ನಿತಿನ್ ಗಡ್ಕರಿ. ಅಷ್ಟಕ್ಕೇ ಆತನಿಗೆ ಬಿಜೆಪಿ ನಂಟು ಥಳುಕು ಹಾಕಲಾಗದು. ಆದರೂ ಮೋದಿಯವರ ಬಯೋಪಿಕ್ ತಯಾರಾದ ಸಂದರ್ಭ, ಧಾವಂತ, ರಾಜಕೀಯ ಲಿಂಕ್‌ಗಳನ್ನು ಗಮನಿಸಿದರೆ ಒಮಂಗ್‌ನ ಈ ಸಣ್ಣ ನಂಟನ್ನೂ ಅನುಮಾನದಿಂದಲೇ ನೋಡಬೇಕಾಗುತ್ತೆ. ಅಂದಹಾಗೆ, 2015ರಲ್ಲಿ ಈತನ ‘ಮೇರಿ ಕೋಮ್’ ಸಿನಿಮಾಗೆ ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಲಭಿಸಿತ್ತು. ಇವೆಲ್ಲವೂ ಕಾಕತಾಳೀಯ ಎನ್ನುವಂತೆ ಕಂಡರೂ, ನಂಬಲು ಹರಸಾಹಸ ಪಡುವಂಥ ವಾತಾವರಣ ಈಗ ದೇಶದಲ್ಲಿ ನಿರ್ಮಾಣವಾಗಿದೆ.

ಒಮಂಗ್ ಕುಮಾರ್ ಅಮಿತ ಶಾ, ಗಡ್ಕರಿ ಜೊತೆ

ಆದರ್ಶ ರಾಜಕಾರಣ ಮಾಡುವುದೇ ನಿಜವಾದರೆ ಮೋದಿಯವರ ಮೇಲೆ ಈಗ ದೊಡ್ಡ ಹೊರೆ ಇದೆ. ಅದು ಅವರದೇ ಸಿನಿಮಾ ಆಗಿರೋದ್ರಿಂದ ಅವರ ಅನುಮತಿ ಅತ್ಯಮೂಲ್ಯ, ಕಥೆಗೂ ಮತ್ತು ಬಿಡುಗಡೆಗೂ. ಅವರು ಈ ಕೂಡಲೇ ಸಿನಿಮಾ ತಂಡಕ್ಕೆ ‘ಚುನಾವಣಾ ನೀತಿ ಸಂಹಿತೆ ಮುಗಿಯವವರೆಗೆ ರಿಲೀಸ್ ಮಾಡಬೇಡಿ’ ಎಂದು ಹೇಳಬೇಕಿದೆ. ಅದನ್ನು ಬಿಟ್ಟು, ಇದು ಸಿನಿಮಾ ತಂಡಕ್ಕೂ ಚುನಾವಣಾ ಆಯೋಗಕ್ಕು ಸಂಬಂಧಿಸಿದ ವಿಷಯ ನಾನೇಗೆ ಮಧ್ಯಪ್ರವೇಶಿಸಲಿ ಎಂಬ ಕುಂಟು ನೆಪ ಹೇಳಿದರೆ, ಆ ಸಿನಿಮಾದಿಂದ ಲಾಭ ಪಡೆಯಲು ಅವರು ಯೋಚಿಸಿದ್ದಾರೆ ಎಂದು ಸಂಶಯಕ್ಕೆ ಆಸ್ಪದವಿಲ್ಲದಂತೆ ಸಾಬೀತಾಗುತ್ತೆ.

ಯಾಕೆಂದರೆ, ಮಧ್ಯಪ್ರದೇಶ, ರಾಜಸ್ಥಾನ್ ಮತ್ತು ಉತ್ತರಾಖಂಡ್ ರಾಜ್ಯಗಳ ಚುನಾವಣಾ ಸೋಲುಗಳ ನಂತರ ತನ್ನ ವರ್ಚಸ್ಸು ವೃದ್ದಿಸಿಕೊಳ್ಳುವ ಯಾವ ಅವಕಾಶವನ್ನೂ ಕಳೆದುಕೊಳ್ಳುವ ಸ್ಥಿತಿಯಲ್ಲಿ ಬಿಜೆಪಿ ಇಲ್ಲ……

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...