HomeUncategorizedರಾಹುಲ್ ಗಾಂಧಿ ಪಿಕ್ನಿಕ್ ಹೇಳಿಕೆ; ಹಿರಿಯ ನಾಯಕನಿಂದ ಅಂತರ ಕಾಯ್ದುಕೊಂಡ ಆರ್‌ಜೆಡಿ!

ರಾಹುಲ್ ಗಾಂಧಿ ಪಿಕ್ನಿಕ್ ಹೇಳಿಕೆ; ಹಿರಿಯ ನಾಯಕನಿಂದ ಅಂತರ ಕಾಯ್ದುಕೊಂಡ ಆರ್‌ಜೆಡಿ!

ಚುನಾವಣೆ ನಡೆಯುತ್ತಿದ್ದಾಗ ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿಯವರೊಂದಿಗೆ ಶಿಮ್ಲಾದಲ್ಲಿ ಪಿಕ್ನಿಕ್ ಮಾಡುತ್ತಿದ್ದರು ಎಂದು ಪಕ್ಷದ ಹಿರಿಯ ನಾಯಕ ಶಿವಾನಂದ್ ತಿವಾರಿ ಆಕ್ರೋಶ ವ್ಯಕ್ತಪಡಿಸಿದ್ದರು.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ನಡೆಯುತ್ತಿದ್ದಾಗ ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿಯವರೊಂದಿಗೆ ಶಿಮ್ಲಾದಲ್ಲಿ ಪಿಕ್ನಿಕ್ ಮಾಡುತ್ತಿದ್ದರು ಎಂಬ ಹೇಳಿಕೆ ತಮ್ಮ ಪಕ್ಷದ ಹಿರಿಯ ನಾಯಕನ ಹೇಳಿಕೆಗೆ ಆರ್‌ಜೆಡಿ ಪ್ರತಿಕ್ರಿಯಿಸಿದ್ದು, “ಶಿವಾನಂದ್ ತಿವಾರಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಅದು ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ” ಎಂದು ಆರ್‌ಜೆಡಿ ವಕ್ತಾರ ಚಿತ್ತರಂಜನ್ ಗಗನ್ ಹೇಳಿದ್ದಾರೆ.

“ಶಿವಾನಂದ್ ತಿವಾರಿ ಹಿರಿಯ ನಾಯಕ ಮತ್ತು ನಮಗೆ ರಕ್ಷಕರಾಗಿದ್ದಾರೆ. ಆದರೆ ಅವರು ವ್ಯಕ್ತಪಡಿಸಿದ ಅಭಿಪ್ರಾಯಗಳು ವೈಯಕ್ತಿಕವಾಗಿವೆ. ತೇಜಶ್ವಿ ಯಾದವ್ ಮತ್ತು ಆರ್‌ಜೆಡಿಯ ಇತರ ಹಿರಿಯ ನಾಯಕರು ಚುನಾವಣಾ ಫಲಿತಾಂಶವನ್ನು ವಿಶ್ಲೇಷಿಸುತ್ತಾರೆ” ಎಂದು ಗಗನ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ಆ‌ರ್‌‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ ಅವರಿಗೆ ಆಪ್ತವಾಗಿರುವ ಶಿವಾನಂದ್ ತಿವಾರಿ, “ರಾಹುಲ್ ಗಾಂಧಿ ಬಿಹಾರಕ್ಕೆ ಭೇಟಿ ನೀಡಿ ಮೂರು ದಿನಗಳಲ್ಲಿ, ದಿನಕ್ಕೆ ಎರಡು ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಪ್ರಿಯಾಂಕಾ ಗಾಂಧಿ ಎಲ್ಲೂ ಕಾಣಿಸಲಿಲ್ಲ. ಚುನಾವಣಾ ಉತ್ತುಂಗದಲ್ಲಿದ್ದಾಗ, ಅವರು ಶಿಮ್ಲಾದಲ್ಲಿ ಪ್ರಿಯಾಂಕಾ ಗಾಂಧಿಯವರೊಂದಿಗೆ ಪಿಕ್ನಿಕ್ ಮಾಡುತ್ತಿದ್ದರು” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‌ ಪಕ್ಷದ ಕಳಪೆ ಸಾಧನೆಯ ಕಾರಣಕ್ಕೆ ಮಿತ್ರರಾಷ್ಟ್ರ ಆರ್‌ಜೆಡಿಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದು, 70 ಸ್ಥಾನಗಳನ್ನು ನಡೆಸಿದರೂ 70 ರ್‍ಯಾಲಿಯನ್ನು ನಡೆಸಲಿಲ್ಲ. ಕಾಂಗ್ರೆಸ್ ಅರೆ ಮನಸ್ಸಿನಿಂದ ಹೋರಾಟ ನಡೆಸಿದೆ ಎಂದು ತಿವಾರಿ ಆರೋಪಿಸಿದ್ದರು.

ಶಿವಾನಂದ್ ತಿವಾರಿ ಟೀಕೆಗೆ ಕಾಂಗ್ರೆಸ್ ಕೂಡಾ ತೀವ್ರವಾಗಿ ಪ್ರತಿಕ್ರಿಯಿಸಿದ್ದು, “ಅವರು ಆರ್‌ಜೆಡಿಯ ಅಧಿಕೃತ ವಕ್ತಾರರಲ್ಲ. ಅವರು ಬಿಜೆಪಿ ಮತ್ತು ಜೆಡಿಯು ಜೊತೆ ಸಂಬಂಧ ಹೊಂದಿದ್ದಾರೆ ಹಾಗೂ ಅವರ ಭಾಷೆಯನ್ನು ಮಾತನಾಡುತ್ತಿದ್ದಾರೆ” ಎಂದು ಎಐಸಿಸಿ ಮಾಧ್ಯಮ ಸಮಿತಿ ಸದಸ್ಯ ಪ್ರೇಮ್ ಚಂದ್ರ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟಿದೆ; ಭಯೋತ್ಪಾದಕರ ಕೇಂದ್ರವಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ

“ಗಿರಿರಾಜ್ ಸಿಂಗ್ ಮತ್ತು ಶಹನಾವಾಜ್ ಹುಸೇನ್ ಅವರ ಭಾಷೆ ಮಾತನಾಡುವ ಆರ್‌ಜೆಡಿ ನಾಯಕ ಕಾಂಗ್ರೆಸ್‌ಗೆ ಸ್ವೀಕಾರಾರ್ಹವಲ್ಲ. ಸಮ್ಮಿಶ್ರ ಧರ್ಮ ಎಂಬುವುದು ಇದೆ ಮತ್ತು ಎಲ್ಲಾ ಪಕ್ಷಗಳು ಇದನ್ನು ಅನುಸರಿಸಬೇಕು” ಎಂದು ಅವರು ಟ್ವೀಟ್ ಮಾಡಿ‌ದ್ದರು.

ಕೊರೊನಾ ನಂತರ ದೇಶದಲ್ಲಿ ನಡೆದ ಮೊದಲ ಚುನಾವಣೆಯಾದ ಬಿಹಾರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಯು ನೇತೃತ್ವದ ಎನ್‌ಡಿಎ ಕೂಟ ಭಾರಿ ಕಷ್ಟ ಪಟ್ಟು ಜಯಗಳಿಸಿದೆ. ಮಹಾಘಟಬಂಧನ್‌ನಲ್ಲಿ ಆರ್‌ಜೆಡಿ ಉತ್ತಮ ಸಾಧನೆ ಮಾಡಿದ್ದು ರಾಜ್ಯದ ಅತೀ ದೊಡ್ಡ ಪಕ್ಷವಾಗಿ ಹೊಮ್ಮಿದೆ. ಕಾಂಗ್ರೆಸ್ ತಮಗೆ ನೀಡಿದ್ದ 70 ಕ್ಷೇತ್ರದಲ್ಲಿ ಕೇವಲ 19 ಸ್ಥಾನಗಳನ್ನು ಗೆದ್ದು ಕಳಪೆ ಸಾಧನೆ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬಿಹಾರದಲ್ಲಿ EVM ಮತಯಂತ್ರಗಳನ್ನು ಕದಿಯುತ್ತಿದ್ದಾರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...