Homeಕರ್ನಾಟಕಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ಅಗಾಗ ಒಳ್ಳೆಯ ಕಾಮಿಡಿ ಮಾಡುತ್ತೀರಿ, ಹೀಗೆ ನಿಮ್ಮ ಕಾಮಿಡಿ ಮುಂದುವರೆಸಿ, ಇನ್ನಷ್ಟು ಮನರಂಜನೆ ಕೊಡಿ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಹಾಗೂ ಕ್ಯಾಂಪಸ್ ಡೆಮಾಕ್ರಸಿಯನ್ನು ಇನ್ನೂ ಉಳಿಸಿಕೊಂಡಿರುವ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ಹೆಸರನ್ನು ಸ್ವಾಮಿ ವಿವೇಕಾನಂದ ವಿಶ್ವವಿದ್ಯಾನಿಯಲ ಎಂದು ಬದಲಿಸುವುದೆ ಸರಿಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದು, ಇದೀಗ ನೆಟ್ಟಿಗರು ಅವರನ್ನು ತರಾಟೆಗೆ ಪಡೆದಿದ್ದಾರೆ.

1966 ರ ವಿಶೇಷ ಕಾಯ್ದೆಯ ಪ್ರಕಾರ ಹಿಂದುಳಿದ ಪ್ರದೇಶದ ಮತ್ತು ವರ್ಗದ ಮಕ್ಕಳು ದೇಶದ ರಾಜಧಾನಿಯಲ್ಲಿದ್ದು ಅಧ್ಯಯನ ಮಾಡಬೇಕು ಎಂಬ ಉದ್ದೇಶದಿಂದ ಜವಾಹರಲಾಲ್ ವಿಶ್ವವಿದ್ಯಾನಿಲಯವನ್ನು ಪ್ರಾರಂಭಿಸಲಾಗಿತ್ತು. ಆರಂಭದಿಂದಲೇ ಜೆಎನ್‌‌ಯು ಪ್ರಭುತ್ವವನ್ನು ಪ್ರಶ್ನಿಸುತ್ತಲೆ ಬಂದಿರುವ ವಿಶ್ವವಿದ್ಯಾನಿಯಲವಾಗಿದ್ದು ದೇಶಕ್ಕೆ ಹಲವಾರು ಧೀಮಂತ ನಾಯಕರನ್ನು ನೀಡಿದೆ. ಅದರಂತೆ ಸಹಜವಾಗಿಯೆ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕೂಡಾ ಈ ಬಾರಿ ಮಗ್ಗುಲ ಮುಳ್ಳಾಗಿ ಕಾಡಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಬೆಂಬಲಿತರಿಂದ ಅಲ್ಲಿ ಹಲವಾರು ದಾಳಿಗಳಾಗಿದೆ ಎಂದು ಹಲವಾರು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಒಲ್ಲದ ಮನಸ್ಸಿನಿಂದ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಿ.ಟಿ.ರವಿ?

ಇದೀಗ ಬಿಜೆಪಿಯ ನೂತನ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಜೆಎನ್‌ಯು ಹೆಸರನ್ನು ಬದಲಾಯಿಸಬೇಕು ಎಂದು ವಿವಾದ ಮೈಗೆಳೆದಿದ್ದು ಟ್ವೀಟ್ಟರ್‌ನಲ್ಲಿ, “ಸ್ವಾಮಿ ವಿವೇಕಾನಂದರು ಭಾರತ ಎಂಬ ಪರಿಕಲ್ಷನೆಯ ಪರವಾಗಿ ನಿಂತರು. ಅವರ ತತ್ವಶಾಸ್ತ್ರ ಮತ್ತು ಮೌಲ್ಯಾದರ್ಶಗಳೇ ಭಾರತದ ಬಲ ಮತ್ತು ಶಕ್ತಿಯಾಗಿದೆ. ಜೆಎನ್‌ಯು ಹೆಸರನ್ನು ಸ್ವಾಮಿ ವಿವೇಕಾನಂದ ವಿಶ್ವವಿದ್ಯಾನಿಯಲ ಎಂದು ಬದಲಿಸುವುದೆ ಸರಿಯಾಗಿದೆ. ರಾಷ್ಟ್ರಪ್ರೇಮಿ ಸಂತನ ಜೀವನ ತಲೆಮಾರುಗಳ ತನಕ ಪ್ರೇರಣೆ ಆಗಲಿ” ಎಂದು ಬರೆದಿದ್ದಾರೆ.

ಆದರೆ ಅವರ ಟ್ವೀಟ್‌‌ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜಯ್ ಎಂಬವರು, “ನಿಮಗೆ ಸ್ವಂತಿಕೆ ಎನ್ನೋದು ಇಲ್ವಾ. ಇನ್ನೊಬ್ಬರ ಕೆಲಸವನ್ನು ತಿರುಚುವ ಪ್ರಯತ್ನ ಯಾಕೆ, ಈವಾಗ ನೀವು ಬದಲಾಯಿಸಿದರೆ ಮುಂದೆ ಅವರು ಅಧಿಕಾರಕ್ಕೆ ಬಂದಾಗ ಅವರು ಅದೇ ಮಾಡುತ್ತಾರೆ. ಹೊಸದಾಗಿ ಯೂನಿವರ್ಸಿಟಿ ಕಟ್ಟಿ ಅದಕ್ಕೆ ಹೆಸರಿಡಿ, ಸುಮ್ಮನೆ ಯಾವಾಗಲೂ ಬೆಂಕಿ ಹಚ್ಚುವ ಹೇಳಿಕೆ ಹಾಗೂ ಕೆಲಸಗಳು ಯಾಕೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಸಂಘ ಪರಿವಾರ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ

ಸೂರ್ಯ ಎಂಬವರು, “ಸಾರ್ ಹಾಗೆ ನಿಮ್ಮ ಹೆಸರನ್ನು, ನಿಮ್ಮ ಪಾರ್ಟಿ ಹೆಸರನ್ನು ಬದಲಾಯಿಸಿ ಕೊಂಡು ಬಿಡಿ. ನಮಗೆ ಇನ್ನೂ ಖುಷಿ ಆಗುತ್ತದೆ. ಆನಂತರ ಅಗಾಗ ಒಳ್ಳೆ ಕಾಮಿಡಿ ಮಾಡುತ್ತೀರಿ, ಹೀಗೆ ನಿಮ್ಮ ಕಾಮಿಡಿ ಮುಂದುವರೆಸಿ, ಇನ್ನಷ್ಟು ಮನರಂಜನೆ ಕೊಡಿ” ಎಂದು ವ್ಯಂಗ್ಯವಾಡಿದ್ದಾರೆ.

ನವೀನ್ ಎಂಬವರು, “ಜವಾಹರ ಲಾಲ್ ನೆಹರು ಸಹ ದೇಶ ಕಟ್ಟಿದ್ದಾರೆ ದೇಶಕ್ಕಾಗಿ ದುಡಿದಿದ್ದಾರೆ. ಯಾಕೆ ಅವರ ಹೆಸರು ಹೇಳದೆ ನಿಮ್ಮಿಂದ ರಾಜಕಿಯ ಮಾಡಕ್ಕೆ ಯೋಗ್ಯತೆಯಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಸಂತೋಷ್ ಕುಮಾರ್‌, “ಬರಿ ಹೆಸರು ಬದಲಾಯಿಸುವುದಲ್ಲೇ ನಿಮ್ಮ ಜೀವನ ಕಳೆದು ಹೋಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಭೀಫ್‌ ಖಾದ್ಯದ ಫೋಟೊ ಷೇರ್‌ ಮಾಡಿದ ಸಚಿವ ಸಿ.ಟಿ ರವಿ ; ನೆಟ್ಟಿಗರಿಂದ ಫುಲ್‌ ಟ್ರೋಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...