Homeಮುಖಪುಟಬೆಂಕಿ ಹಚ್ಚಿ ಯುವತಿಯ ಕೊಲೆ; ವಿಡಿಯೋದಲ್ಲಿ ದುಷ್ಕರ್ಮಿಗಳ ಹೆಸರು ಹೇಳಿದರೂ ಆರೋಪಿಗಳ ಬಂಧನವಿಲ್ಲ!

ಬೆಂಕಿ ಹಚ್ಚಿ ಯುವತಿಯ ಕೊಲೆ; ವಿಡಿಯೋದಲ್ಲಿ ದುಷ್ಕರ್ಮಿಗಳ ಹೆಸರು ಹೇಳಿದರೂ ಆರೋಪಿಗಳ ಬಂಧನವಿಲ್ಲ!

ಬಿಹಾರದಲ್ಲೊಂದು ಅಮಾನವೀಯ ಘಟನೆ, ಅನ್ಯಾಯ

- Advertisement -
- Advertisement -

ನಾಲ್ಕು ತಿಂಗಳಲ್ಲಿ ಮದುವೆಯಾಬೇಕಿದ್ದ 20 ವರ್ಷದ ಯುವತಿಯನ್ನು ದುಷ್ಕರ್ಮಿಗಳು ಕಿರುಕುಳ ನೀಡಿ ಸುಟ್ಟು ಹಾಕಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯ ದೆಸಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಯುವತಿಯು ತನ್ನ ಮೇಲೆ ದೌರ್ಜನ್ಯ ಎಸಗಿದವರು ಸತೀಶ್ ರಾಯ್ ಹಾಗೂ ಚಂದನ್ ಕುಮಾರ್‌ ರಾಯ್ ಎಂದು ಹೇಳಿರುವ ವಿಡಿಯೋ ವೈರಲಾಗಿದ್ದರೂ, ಆರೋಪಿಗಳ ಬಂಧನ ಇದುವರೆಗೂ ನಡೆದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಕಾಶ್ಮೀರಿಗಳ 600 ಹೇಬಿಯಸ್ ಕಾರ್ಪಸ್ ವರ್ಷದಿಂದ ಬಾಕಿ, ಅರ್ನಬ್ ಅರ್ಜಿ ಒಂದೇ ದಿನದಲ್ಲಿ ವಿಚಾರಣೆ; ಅನ್ಯಾಯ!

“ಅವಳಿಗೆ ನಾಲ್ಕು ತಿಂಗಳಲ್ಲಿ ಮದುವೆ ನಡೆಯಬೇಕಿತ್ತು. ಆದರೆ ಸತೀಶ್ ಕುಮಾರ್ ರಾಯ್ ಮತ್ತು ಚಂದನ್ ಕುಮಾರ್ ರಾಯ್ ನನ್ನ ಮಗಳನ್ನು ಸುಟ್ಟುಹಾಕಿದರು. ಅವಳು ಕೊನೆಯುಸಿರೆಳೆಯುವ ಮುನ್ನ ವೀಡಿಯೊದಲ್ಲಿ ದುಷ್ಕರ್ಮಿಳ ಹೆಸರು ಹೇಳಿದ್ದಾಳೆ. ಆದರೆ ನಮ್ಮ ಪರವಾಗಿ ಧ್ವನಿ ಎತ್ತುವವರು ಯಾರೂ ಇಲ್ಲ” ಎಂದು ದುಷ್ಕರ್ಮಿಗಳಿಂದ ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಗುಲ್ನಾಜ್ ಖತೂನ್ ಅವರ ತಾಯಿ ಹೇಳುತ್ತಾರೆ.

“ಅವರು ಮೂರು ತಿಂಗಳಿನಿಂದ ಅವಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಮತ್ತು ಹಿಂಬಾಲಿಸುತ್ತಿದ್ದರು” ಎಂದು ಅವರು ಹೇಳಿದರೆ, ಸಂತ್ರಸ್ತೆಯ ತಂಗಿ ಗುಲ್ಶನ್ ಪರ್ವೇಜ್ ಆರೋಪಿಗಳ ಹೆಸರುಗಳನ್ನು ಹೇಳುತ್ತಾರೆ.

“ನನ್ನ ತಂಗಿ ಹೋಗಿ ಕಸವನ್ನು ಎಸೆಯುತ್ತಿದ್ದಾಗ ಆರೋಪಿಗಳು ಅವಳಿಗೆ ಕಿರುಕುಳ ನೀಡುತ್ತಿದ್ದರು. ಅಕ್ಟೋಬರ್ 30 ರಂದು ಸಂಜೆ 5 ಗಂಟೆಗೆ ಚಂದನ್ ಕುಮಾರ್ ಮತ್ತು ಸತೀಶ್ ಕುಮಾರ್ ಅವಳ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದರು” ಎಂದು ಪಾಟ್ನಾದಲ್ಲಿ ಕೆಲಸ ಮಾಡುತ್ತಿರುವ ಯುವತಿಯ ಸಹೋದರ ಹೇಳುತ್ತಾರೆ.

ಇದನ್ನೂ ಓದಿ: ಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಟೈಲರ್‌ ಆಗಿದ್ದ ತನ್ನ ತಾಯಿಗೆ ಸಂತ್ರಸ್ಥೆ ಗುಲ್ನಾಜ್ ಸಹಾಯ ಮಾಡುತ್ತಿದ್ದರು. ಅವರ ಮೇಲೆ ದೌರ್ಜನ್ಯ ನಡೆಸಿ ಕೊಲೆ ಮಾಡಿದ ಆರೋಪಿಗಳ ಹೆಸರನ್ನು ಸಂತ್ರಸ್ತೆ ಯುವತಿ ವಿಡಿಯೋದಲ್ಲಿ ಹೇಳಿದ್ದು, ಅಲ್ಲದೆ ಅವರ ಕುಟುಂಬ ಕೂಡಾ ಸ್ಪಷ್ಟವಾಗಿ ಆರೋಪಿಗಳನ್ನು ಹೆಸರಿಸಿದರೂ ಆರೋಪಿಗಳ ಬಂಧನ ಇನ್ನೂ ಆಗಿಲ್ಲ ಎಂದು ಸಬ್‌ರಂಗ್‌ ವರದಿ ಮಾಡಿದೆ.

ಅಷ್ಟೇ ಅಲ್ಲದೆ ಜಸ್ಟಿಸ್ ಫಾರ್ ಗುಲ್ನಾಝ್ (#JusticeForGulnaz) ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುತ್ತಿದ್ದು, ಗುಲ್ನಾಜ್ ಅವರ ತಾಯಿ ತಮ್ಮ ಕುಟುಂಬದೊಂದಿಗೆ ಮೃತದೇಹವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸುತ್ತಿರುವ ವೀಡಿಯೊಗಳು ವೈರಲ್ ಆಗಿದೆ. ಇಷ್ಟಾಗಿಯೂ ಬಿಹಾರದ ಮರು ಚುನಾಯಿತ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಥವಾ ಬಿಹಾರ ಪೊಲೀಸರಿಂದ ಇನ್ನೂ ಯಾವುದೇ ಹೇಳಿಕೆಗಳು ಹೊರ ಬಂದಿಲ್ಲ.

ಎಬಿಪಿ ನ್ಯೂಸ್ ವರದಿಯ ಪ್ರಕಾರ “ಸತೀಶ್ ಯಾದವ್ ಹಳ್ಳಿಯ ಕುಖ್ಯಾತ ಗೂಂಡಾ ಆಗಿದ್ದು, ಯುವತಿಗೆ ಕಿರುಕುಳ ನಿಡುತ್ತಿದ್ದ. ಯುವತಿಯು ಈ ಬಗ್ಗೆ ದೂರಿದಾಗ ನೀಡಿದಾಗ ಸತೀಶ್ ಮತ್ತು ಅವನ ಇಬ್ಬರು ಸಹಚರರು ಗುಲ್ನಾಜ್ ಅವರನ್ನು ಅವರ ಮನೆಯ ಬಳಿ ಜೀವಂತವಾಗಿ ಸುಟ್ಟುಹಾಕಿದರು” ಎಂದು ಹೇಳಿದೆ.

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಮೀಸಲಾತಿ ಮಸಲತ್ತು! ನೈಜ ಹಿಂದುಳಿದವರಿಗೆ ಸಾಮಾಜಿಕ ಅನ್ಯಾಯ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...