Homeಮುಖಪುಟಬೆಂಕಿ ಹಚ್ಚಿ ಯುವತಿಯ ಕೊಲೆ; ವಿಡಿಯೋದಲ್ಲಿ ದುಷ್ಕರ್ಮಿಗಳ ಹೆಸರು ಹೇಳಿದರೂ ಆರೋಪಿಗಳ ಬಂಧನವಿಲ್ಲ!

ಬೆಂಕಿ ಹಚ್ಚಿ ಯುವತಿಯ ಕೊಲೆ; ವಿಡಿಯೋದಲ್ಲಿ ದುಷ್ಕರ್ಮಿಗಳ ಹೆಸರು ಹೇಳಿದರೂ ಆರೋಪಿಗಳ ಬಂಧನವಿಲ್ಲ!

ಬಿಹಾರದಲ್ಲೊಂದು ಅಮಾನವೀಯ ಘಟನೆ, ಅನ್ಯಾಯ

- Advertisement -
- Advertisement -

ನಾಲ್ಕು ತಿಂಗಳಲ್ಲಿ ಮದುವೆಯಾಬೇಕಿದ್ದ 20 ವರ್ಷದ ಯುವತಿಯನ್ನು ದುಷ್ಕರ್ಮಿಗಳು ಕಿರುಕುಳ ನೀಡಿ ಸುಟ್ಟು ಹಾಕಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯ ದೆಸಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಯುವತಿಯು ತನ್ನ ಮೇಲೆ ದೌರ್ಜನ್ಯ ಎಸಗಿದವರು ಸತೀಶ್ ರಾಯ್ ಹಾಗೂ ಚಂದನ್ ಕುಮಾರ್‌ ರಾಯ್ ಎಂದು ಹೇಳಿರುವ ವಿಡಿಯೋ ವೈರಲಾಗಿದ್ದರೂ, ಆರೋಪಿಗಳ ಬಂಧನ ಇದುವರೆಗೂ ನಡೆದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಕಾಶ್ಮೀರಿಗಳ 600 ಹೇಬಿಯಸ್ ಕಾರ್ಪಸ್ ವರ್ಷದಿಂದ ಬಾಕಿ, ಅರ್ನಬ್ ಅರ್ಜಿ ಒಂದೇ ದಿನದಲ್ಲಿ ವಿಚಾರಣೆ; ಅನ್ಯಾಯ!

“ಅವಳಿಗೆ ನಾಲ್ಕು ತಿಂಗಳಲ್ಲಿ ಮದುವೆ ನಡೆಯಬೇಕಿತ್ತು. ಆದರೆ ಸತೀಶ್ ಕುಮಾರ್ ರಾಯ್ ಮತ್ತು ಚಂದನ್ ಕುಮಾರ್ ರಾಯ್ ನನ್ನ ಮಗಳನ್ನು ಸುಟ್ಟುಹಾಕಿದರು. ಅವಳು ಕೊನೆಯುಸಿರೆಳೆಯುವ ಮುನ್ನ ವೀಡಿಯೊದಲ್ಲಿ ದುಷ್ಕರ್ಮಿಳ ಹೆಸರು ಹೇಳಿದ್ದಾಳೆ. ಆದರೆ ನಮ್ಮ ಪರವಾಗಿ ಧ್ವನಿ ಎತ್ತುವವರು ಯಾರೂ ಇಲ್ಲ” ಎಂದು ದುಷ್ಕರ್ಮಿಗಳಿಂದ ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಗುಲ್ನಾಜ್ ಖತೂನ್ ಅವರ ತಾಯಿ ಹೇಳುತ್ತಾರೆ.

“ಅವರು ಮೂರು ತಿಂಗಳಿನಿಂದ ಅವಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಮತ್ತು ಹಿಂಬಾಲಿಸುತ್ತಿದ್ದರು” ಎಂದು ಅವರು ಹೇಳಿದರೆ, ಸಂತ್ರಸ್ತೆಯ ತಂಗಿ ಗುಲ್ಶನ್ ಪರ್ವೇಜ್ ಆರೋಪಿಗಳ ಹೆಸರುಗಳನ್ನು ಹೇಳುತ್ತಾರೆ.

“ನನ್ನ ತಂಗಿ ಹೋಗಿ ಕಸವನ್ನು ಎಸೆಯುತ್ತಿದ್ದಾಗ ಆರೋಪಿಗಳು ಅವಳಿಗೆ ಕಿರುಕುಳ ನೀಡುತ್ತಿದ್ದರು. ಅಕ್ಟೋಬರ್ 30 ರಂದು ಸಂಜೆ 5 ಗಂಟೆಗೆ ಚಂದನ್ ಕುಮಾರ್ ಮತ್ತು ಸತೀಶ್ ಕುಮಾರ್ ಅವಳ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದರು” ಎಂದು ಪಾಟ್ನಾದಲ್ಲಿ ಕೆಲಸ ಮಾಡುತ್ತಿರುವ ಯುವತಿಯ ಸಹೋದರ ಹೇಳುತ್ತಾರೆ.

ಇದನ್ನೂ ಓದಿ: ಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಟೈಲರ್‌ ಆಗಿದ್ದ ತನ್ನ ತಾಯಿಗೆ ಸಂತ್ರಸ್ಥೆ ಗುಲ್ನಾಜ್ ಸಹಾಯ ಮಾಡುತ್ತಿದ್ದರು. ಅವರ ಮೇಲೆ ದೌರ್ಜನ್ಯ ನಡೆಸಿ ಕೊಲೆ ಮಾಡಿದ ಆರೋಪಿಗಳ ಹೆಸರನ್ನು ಸಂತ್ರಸ್ತೆ ಯುವತಿ ವಿಡಿಯೋದಲ್ಲಿ ಹೇಳಿದ್ದು, ಅಲ್ಲದೆ ಅವರ ಕುಟುಂಬ ಕೂಡಾ ಸ್ಪಷ್ಟವಾಗಿ ಆರೋಪಿಗಳನ್ನು ಹೆಸರಿಸಿದರೂ ಆರೋಪಿಗಳ ಬಂಧನ ಇನ್ನೂ ಆಗಿಲ್ಲ ಎಂದು ಸಬ್‌ರಂಗ್‌ ವರದಿ ಮಾಡಿದೆ.

ಅಷ್ಟೇ ಅಲ್ಲದೆ ಜಸ್ಟಿಸ್ ಫಾರ್ ಗುಲ್ನಾಝ್ (#JusticeForGulnaz) ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುತ್ತಿದ್ದು, ಗುಲ್ನಾಜ್ ಅವರ ತಾಯಿ ತಮ್ಮ ಕುಟುಂಬದೊಂದಿಗೆ ಮೃತದೇಹವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸುತ್ತಿರುವ ವೀಡಿಯೊಗಳು ವೈರಲ್ ಆಗಿದೆ. ಇಷ್ಟಾಗಿಯೂ ಬಿಹಾರದ ಮರು ಚುನಾಯಿತ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಥವಾ ಬಿಹಾರ ಪೊಲೀಸರಿಂದ ಇನ್ನೂ ಯಾವುದೇ ಹೇಳಿಕೆಗಳು ಹೊರ ಬಂದಿಲ್ಲ.

ಎಬಿಪಿ ನ್ಯೂಸ್ ವರದಿಯ ಪ್ರಕಾರ “ಸತೀಶ್ ಯಾದವ್ ಹಳ್ಳಿಯ ಕುಖ್ಯಾತ ಗೂಂಡಾ ಆಗಿದ್ದು, ಯುವತಿಗೆ ಕಿರುಕುಳ ನಿಡುತ್ತಿದ್ದ. ಯುವತಿಯು ಈ ಬಗ್ಗೆ ದೂರಿದಾಗ ನೀಡಿದಾಗ ಸತೀಶ್ ಮತ್ತು ಅವನ ಇಬ್ಬರು ಸಹಚರರು ಗುಲ್ನಾಜ್ ಅವರನ್ನು ಅವರ ಮನೆಯ ಬಳಿ ಜೀವಂತವಾಗಿ ಸುಟ್ಟುಹಾಕಿದರು” ಎಂದು ಹೇಳಿದೆ.

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಮೀಸಲಾತಿ ಮಸಲತ್ತು! ನೈಜ ಹಿಂದುಳಿದವರಿಗೆ ಸಾಮಾಜಿಕ ಅನ್ಯಾಯ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...