Homeಕರ್ನಾಟಕಕಾಲೇಜುಗಳು ಆರಂಭವಾಗಿವೆ, ಆದರೆ ವಿದ್ಯಾರ್ಥಿಗಳು ಪ್ರಯಾಣಿಸಲು ಬಸ್‌ಗಳೇ ಇಲ್ಲ!

ಕಾಲೇಜುಗಳು ಆರಂಭವಾಗಿವೆ, ಆದರೆ ವಿದ್ಯಾರ್ಥಿಗಳು ಪ್ರಯಾಣಿಸಲು ಬಸ್‌ಗಳೇ ಇಲ್ಲ!

ಸರ್ಕಾರ ಏಕಪಕ್ಷೀಯ ತೀರ್ಮಾನಗಳನ್ನು ಕೈಗೊಳ್ಳುವ ಮೂಲಕ, ಮೊದಲೇ ಉನ್ನತ ಶಿಕ್ಷಣ ಪಡೆಯಲು ಆಗದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ಮತ್ತಷ್ಟು ದೂರ ಉಳಿಯುವಂತೆ ಮಾಡುವ ಹುನ್ನಾರ ನಡೆದಿದೆ ಎಂಬ ಆರೋಪವೂ ಇದೆ

- Advertisement -
- Advertisement -

ಕರ್ನಾಟಕದಲ್ಲಿ ಹಲವು ಮುನ್ನೆಚ್ಚರಿಕೆಗಳನ್ನು ಕೈಗೊಂಡ ಬಳಿಕ ಪದವಿ, ಡಿಪ್ಲಮೊ, ಇಂಜಿನಿಯರಿಂಗ್, ವೈದ್ಯಕೀಯ, ಫಾರ್ಮಸಿ ಕಾಲೇಜುಗಳೇನೋ ಆರಂಭವಾಗಿವೆ. ಇದು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾದರೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಮತ್ತಷ್ಟು ಸಂಕಟವನ್ನು ತಂದೊಡ್ಡಿದೆ. ಈವರೆಗೆ ಗ್ರಾಮೀಣ ಭಾಗದಲ್ಲಿ ಬಸ್ ವ್ಯವಸ್ಥೆಯನ್ನೇ ಕಲ್ಪಿಸಿಲ್ಲ. ಇದರ ಪರಿಣಾಮವಾಗಿ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಕಾಲೇಜುಗಳಿಗೆ ಬರಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದ್ದು ಪಾಠ-ಪ್ರವಚನ ಕೇಳಲೂ ಅಡ್ಡಿಯನ್ನುಂಟು ಮಾಡಿದೆ.

ರಾಜ್ಯ ಸರ್ಕಾರ ಕಾಲೇಜುಗಳನ್ನು ಆರಂಭಿಸಿಯೇ ತೀರಬೇಕು ಎಂಬ ಹಟಕ್ಕೆ ಬಿದ್ದಂತೆ ತೀರ್ಮಾನ ಕೈಗೊಂಡಿದೆ. ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳ ಮುಖಂಡರು, ವಿದ್ಯಾರ್ಥಿ, ಪೋಷಕರ ಅಭಿಪ್ರಾಯ ಕೂಡ ಕೇಳಿಲ್ಲ. ಸರ್ಕಾರ ಏಕಪಕ್ಷೀಯ ತೀರ್ಮಾನಗಳನ್ನು ಕೈಗೊಳ್ಳುವ ಮೂಲಕ ಮೊದಲೇ ಉನ್ನತ ಶಿಕ್ಷಣ ಪಡೆಯಲು ಆಗದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ಮತ್ತಷ್ಟು ದೂರ ಉಳಿಯುವಂತೆ ಮಾಡುವ ಹುನ್ನಾರ ನಡೆದಿದೆ ಎಂಬ ಆರೋಪವೂ ಇದೆ.

ಇದನ್ನೂ ಓದಿ: ಜೈಲು ಖೈದಿಗಳ ಮಕ್ಕಳ ಶಿಕ್ಷಣಕ್ಕೆ 20 ಲಕ್ಷ ಮೀಸಲಿಟ್ಟ ಕೇರಳ ಸರ್ಕಾರ!

ರಾಜ್ಯದ ತಾಲೂಕು ಕೇಂದ್ರಗಳು ಮತ್ತು ಹೋಬಳಿ ಕೇಂದ್ರಗಳಲ್ಲಿ ಪದವಿ ಕಾಲೇಜುಗಳನ್ನು ತೆರೆಯಲಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡುವುದು ಸರ್ಕಾರದ ಪ್ರಮುಖ ಉದ್ದೇಶವೂ ಹೌದು. ಆದರೆ ಈಗ ಸರ್ಕಾರ ಕಾಲೇಜುಗಳ ಆರಂಭದ ಬಗ್ಗೆ ತೆಗೆದುಕೊಂಡಿರುವ ನಿರ್ಧಾರ ವೈಜ್ಞಾನಿಕವಾಗಿಲ್ಲ ಹಾಗೂ ಗ್ರಾಮೀಣ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಂತೆ ಕಂಡುಬರುತ್ತಿಲ್ಲ. ಹಾಗೆ ನೋಡಿದರೆ ಮೇಲ್ನೋಟಕ್ಕೆ ಈ ವಿದ್ಯಾರ್ಥಿಗಳನ್ನು ಕಡೆಗಣಿಸಿರುವುದು ಕಾಣುತ್ತದೆ.

ಎಸ್.ಎಫ್.ಐ ತುಮಕೂರು ಜಿಲ್ಲಾಧ್ಯಕ್ಷ ಹಾಗು ವಿದ್ಯಾರ್ಥಿ ನಾಯಕ ಈ.ಶಿವಣ್ಣ ನಾನುಗೌರಿ.ಕಾಂ ಜೊತೆ ಮಾತನಾಡಿ “ಗ್ರಾಮೀಣ ಭಾಗದಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲ. ಒಂದೆರಡು ಬಸ್‌ಗಳನ್ನು ಬಿಟ್ಟಿದ್ದಾರೆ. ಅವು ಯಾವುದೋ ಸಮಯಕ್ಕೆ ಬರುತ್ತವೆ-ಹೋಗುತ್ತವೆ. ಹಾಗಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಸಮಸ್ಯೆಯಾಗುತ್ತದೆ. ಇದರಲ್ಲಿ ಗ್ರಾಮೀಣ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಹುನ್ನಾರವೂ ನಡೆಯುತ್ತಿದೆ. ಖಾಸಗಿ ಬಸ್ ಮತ್ತು ಸರ್ಕಾರಿ ಬಸ್‌ಗಳನ್ನು ಮೊದಲು ಇದ್ದ ರೀತಿಯಲ್ಲಿ ಬಿಟ್ಟರೆ ಮಾತ್ರ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಸಾಧ್ಯ” ಎಂದು ಹೇಳಿದರು.

ಇದನ್ನೂ ಓದಿ: ಮಗು ಕನಸು ಕಾಣುವ-ಚಿಂತಿಸುವ ಭಾಷೆಯಲ್ಲಿ ಶಿಕ್ಷಣ ನೀಡಬೇಕು ಎಂಬ ಹೋರಾಟದ ಸುತ್ತ..

“ಈ ಸಂಬಂಧ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಶೇ. 50ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಹಾಸ್ಟೆಲ್ ಗಳಲ್ಲಿ ಉಳಿದು ಕೊಳ್ಳಲು ಅವಕಾಶ ಕಲ್ಪಿಸಿದೆ. ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಬಂದು ಹಾಸ್ಟೆಲ್ ಸೇರಿಕೊಂಡು ಓದುವ ಕನಸಿನೊಂದಿಗೆ ಬಂದಿರುವ ವಿದ್ಯಾರ್ಥಿಗಳಿಗೆ ಈ ಸುತ್ತೋಲೆ ಬರಸಿಡಿಲು ಬಡಿದಂತೆ ಆಗಿದೆ. ಸರ್ಕಾರ ಅವರ ಉನ್ನತ ಶಿಕ್ಷಣದ ಕನಸಿಗೆ ತಣ್ಣೀರು ಎರೆಚಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಎಲ್ಲಿ ಹೋಗಬೇಕು. ಅವರು ವ್ಯಾಸಂಗ ಮಾಡಬಾರದೆ? ಚುನಾವಣೆಯಲ್ಲಿ ಸಾವಿರಾರು ಜನ ಸೇರುತ್ತಾರೆ. ಅಲ್ಲಿ ಶೇ. 50 ರ ನೀತಿ ಅನ್ವಯವಾಗುವುದಿಲ್ಲವೇ? ಸ್ಯಾನಿಟೈಜ್ ಮಾಡುವುದಿಲ್ಲ, ಮಾಸ್ಕ್ ಇರುವುದಿಲ್ಲ, ದೈಹಿಕ ಅಂತರವನ್ನು ಕೇಳುವಂತೆಯೇ ಇಲ್ಲ. ರಾಜಕಾರಣಿಗಳು ನಡೆಸುವ ಸಭೆ -ಸಮಾರಂಭಗಳಿಗೆ ಯಾವುದೇ ನಿಯಮಗಳು ಅನ್ವಯವಾಗುವುದಿಲ್ಲ. ವಿದ್ಯಾರ್ಥಿಗಳಿಗೆ ಮಾತ್ರ ನಿಯಮಗಳನ್ನು ವಿಧಿಸಿ ಶಿಕ್ಷಣದಿಂದ ದೂರ ಉಳಿಯುವಂತೆ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 175ಕ್ಕೂ ಹೆಚ್ಚು ತಾಲೂಕು ಕೇಂದ್ರಗಳಿವೆ. ಪ್ರತಿಯೊಂದು ತಾಲೂಕು ಕೇಂದ್ರದಲ್ಲೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪಿಸಲಾಗಿದೆ. ಹೋಬಳಿ ಮಟ್ಟದಲ್ಲೂ ಕಾಲೇಜುಗಳಿವೆ. ವಿದ್ಯಾರ್ಥಿಗಳು ನಿತ್ಯವೂ ಕಾಲೇಜುಗಳಿಗೆ ತಲುಪಲು ಯಾವುದೇ ವ್ಯವಸ್ಥೆ ಕಲ್ಪಿಸಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಬಸ್‌ಗಳ ಸಂಚಾರವೂ ಇಲ್ಲ. ಅವುಗಳ ಓಡಾಟಕ್ಕೆ ಅನುಮತಿಯನ್ನೂ ನೀಡಿಲ್ಲ. ಪ್ರಯಾಣಿಕರ ಸಂಖ್ಯೆ ಆಧರಿಸಿ ಕೆಎಸ್ಆರ್.ಟಿ.ಸಿ ಬಸ್ ಬಿಡಲಾಗಿದೆ. ಅದೂ ರಾಜ್ಯ ಹೆದ್ದಾರಿಗಳಲ್ಲಿ ಮಾತ್ರ ಬಸ್‌ಗಳು ಸಂಚರಿಸುತ್ತವೆ. ಹಾಗಾಗಿ ವಿದ್ಯಾರ್ಥಿಗಳು ಹೇಗೆ ತರಗತಿಗಳಿಗೆ ಹಾಜರಾಗಬೇಕು ಎಂಬ ಬಗ್ಗೆ ಸರ್ಕಾರ ಚಿಂತನೆ ನಡೆಸಿದಂತೆ ಇಲ್ಲ.

ಇದನ್ನೂ ಓದಿ: ಕೊರೊನಾ ನಂತರ 1.10 ಕೋಟಿ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ- ಯುನೆಸ್ಕೋ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಇಲ್ಲ. ನಗರದ ಹಾಸ್ಟೆಲ್‌ಗಳಲ್ಲಿದ್ದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆಯೂ ಇಲ್ಲ. ಅರ್ಧ ಮಂದಿಗೆ ಮಾತ್ರ ಹಾಸ್ಟೆಲ್‌ನಲ್ಲಿ ಉಳಿದುಕೊಳ್ಳಲು ಮತ್ತು ಊಟ ನೀಡುವಂತಹ ಕ್ರಮ ಕೈಗೊಂಡಿರುವ ಸರ್ಕಾರ, ವಿದ್ಯಾರ್ಥಿಗಳನ್ನು ಮೂಲಭೂತ ಹಕ್ಕುಗಳಿಂದ ವಂಚಿತರನ್ನಾಗಿಸಿದೆ. ಅವರ ಶಿಕ್ಷಣದ ಹಕ್ಕನ್ನು ಕಸಿದುಕೊಂಡಿದೆ. ಮಾನವ ಹಕ್ಕುಗಳ ಉಲ್ಲಂಘನೆ ಮಾಡಿದೆ. ಲಾಭ ಬರುವಂತಿದ್ದರೆ ಎಷ್ಟು ಜನ ಬೇಕಾದರೂ ಸೇರಬಹುದು. ಬಸ್‌ಗಳಲ್ಲಿ ದೈಹಿಕ ಅಂತರ ಕಾಪಾಡದೆಯೂ ಇರಬಹುದು. ಇದು ನ್ಯಾಯವೇ? ಎಂಬ ಪ್ರಶ್ನೆ ಎದುರಾಗಿದೆ.

ಕಾಲೇಜುಗಳ ಆರಂಭಕ್ಕೆ ವಿದ್ಯಾರ್ಥಿ ಸಂಘಟನೆಗಳಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದು, “ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು. ಉಚಿತವಾಗಿ ಬಸ್‌ನಲ್ಲಿ ಸಂಚರಿಸಲು ಅವಕಾಶ ಕಲ್ಪಿಸಬೇಕು. ಮಾಸ್ಕ್, ಸ್ಯಾನಿಟೈಜರ್ ವ್ಯವಸ್ಥೆಯನ್ನು ಸರ್ಕಾರವೇ ನೀಡಬೇಕು. ಕೊರೊನ ಸೋಂಕಿನಿಂದ ಕೆಲಸ, ಉದ್ಯೋಗ ಕಳೆದುಕೊಂಡ ಆರ್ಥಿಕ ಸಂಕಷ್ಟದಲ್ಲಿರುವ ಜನರ ನೆರವಿಗೆ ಸರ್ಕಾರ ಬರಬೇಕು. ಶುಲ್ಕವನ್ನು ವಾಪಸ್ ನೀಡಬೇಕು” ಎಂದು ವಿದ್ಯಾರ್ಥಿ ಸಂಘಟನೆಗಳು ಆಗ್ರಹಿಸಿವೆ


ಇದನ್ನೂ ಓದಿ: ದಮನಿತರಿಗೆ ಶಿಕ್ಷಣಕ್ರಮ ಹೇಗಿರಬೇಕು?: ಪಾಲೊ ಫ್ರೇರಿಯ ‘ಪೆಡಗಾಗಿ ಆಫ್ ದಿ ಅಪ್ರೆಸ್ಡ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...