Homeಮುಖಪುಟಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ; ಇತರೆ ಅಭ್ಯರ್ಥಿಗಳಿಗೆ ಸವಾಲು ಹಾಕಿದ ಮಂಗಳಮುಖಿಯರು!

ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ; ಇತರೆ ಅಭ್ಯರ್ಥಿಗಳಿಗೆ ಸವಾಲು ಹಾಕಿದ ಮಂಗಳಮುಖಿಯರು!

ಬಿಡುಗಡೆ ಮಾಡಲು ನನ್ನ ಬಳಿ ಯಾವುದೇ ಪ್ರಣಾಳಿಕೆಯಿಲ್ಲ. ಕೇವಲ ಭರವಸೆ ನೀಡುವುದರಿಂದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಧ್ಯಯನ ಮಾಡಿ, ಅವುಗಳನ್ನು ಪರಿಹರಿಸಬೇಕು ಎಂದು ಹೇಳಿದರು.

- Advertisement -
- Advertisement -

ಸಮಾಜದ ನಡುವೆ ಅವಮಾನ ಮತ್ತು ಅಪಹಾಸ್ಯಕ್ಕೊಳಗಾಗಿ ಬದುಕುತ್ತಿರುವ ಟ್ರಾನ್ಸ್‌ಜೆಂಡರ್ (ಮಂಗಳಮುಖಿಯರು) ಸಮುದಾಯ ಇದೀಗ ಸ್ವಲ್ಪಮಟ್ಟಿಗೆ ಎಲ್ಲಾ ಕ್ಷೇತ್ರಗಳಲ್ಲೂ ಗುರುತಿಸಿಕೊಳ್ಳಲು ಆರಂಭಿಸಿದೆ. ತಮ್ಮ ದ್ವಂದ್ವತೆಯ ಅಸ್ಮಿತೆಯನ್ನು ಮೀರಿ ಸಮಕಾಲೀನ ಸಮಾಜದಲ್ಲಿ ಭದ್ರ ನೆಲೆಯೊಂದನ್ನು ಕಂಡುಕೊಳ್ಳಲು ಹವಣಿಸುತ್ತಾ ಎಲ್ಲಿಯಾದರೂ ಅವಕಾಶ ಸಿಕ್ಕರೆ ಅದನ್ನು ಸಂಪೂರ್ಣ ಉಪಯೋಗಿಸಿಕೊಳ್ಳುವತ್ತ ಸಾಗಿದೆ. ಈ ನಿಟ್ಟಿನಲ್ಲಿ ಕೇರಳದ ಎರ್ನಾಕುಳಂ ಮತ್ತು ಕಣ್ಣೂರಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇಬ್ಬರು ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಸೇರಿದವರು ಭಾಗವಹಿಸುತ್ತಿದ್ದು, ಇತರ ಸ್ಪರ್ಧಿಗಳಿಗೆ ಸವಾಲು ಹಾಕಿದ್ದಾರೆ.

ಶೆರಿನ್ ಆಂಟನಿ ಮತ್ತು ಸ್ನೇಹ.ಕೆ ಎನ್ನುವವರು ಇಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭಾಗವಹಿಸುತ್ತಿದ್ದು, ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಹೋರಾಟಗಾರ್ತಿ ಅಖೈ ಪದ್ಮಶಾಲಿ ಇಂದು ಕಾಂಗ್ರೆಸ್‌ಗೆ ಸೇರ್ಪಡೆ

ಕೊಚ್ಚಿ ಕಾರ್ಪೊರೇಶನ್‌ನ 26 ನೇ ವಿಭಾಗದಿಂದ ಸ್ಪರ್ಧಿಸಲಿರುವ ಶೆರಿನ್, “ನಮ್ಮ ಸಮುದಾಯದ ಇತರ ಸದಸ್ಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಒಬ್ಬ ಟ್ರಾನ್ಸ್‌ಜೆಂಡರ್ ಮಾತ್ರ ಅರ್ಥಮಾಡಿಕೊಳ್ಳಲು ಸಾಧ್ಯ. ಆದ್ದರಿಂದ, ನಾನು ಸ್ಪರ್ಧಿಸಲು ನಿರ್ಧರಿಸಿದೆ. ಇಲ್ಲಿನ ಜನರು ಜನ ಪ್ರತಿನಿಧಿಗಳ ಕೊರತೆಯಿಂದ ಬೇಸರಗೊಂಡಿದ್ದಾರೆ. ಅವರಿಗೆ ಬದಲಾವಣೆಯ ಅಗತ್ಯವಿದೆ. ಈ ಪ್ರದೇಶದಲ್ಲಿ ವಾಸಿಸುವ ವ್ಯಕ್ತಿಯು ಅದನ್ನು ತರಬಹುದು” ಎಂದು ಸಿಪಿಎಂ ಬೆಂಬಲಿತ ಡೆಮಾಕ್ರಟಿಕ್ ಟ್ರಾನ್ಸ್‌ಜೆಂಡರ್ಸ್ ಫೆಡರೇಶನ್ ಆಫ್ ಕೇರಳದ ರಾಜ್ಯ ಅಧ್ಯಕ್ಷೆ ಶೆರಿನ್ ಹೇಳಿದರು.

“ನಾವು ನೀರಿನ ಸಮಸ್ಯೆಯಿಂದ ಹಿಡಿದು ನಾಗರಿಕ ಮತ್ತು ಅಭಿವೃದ್ಧಿ-ಸಂಬಂಧಿತ ಸಮಸ್ಯೆಗಳವರೆಗೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ನಾನು ಅವುಗಳನ್ನು ನಿವಾರಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಮತದಾರರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿರುವ ಶೆರಿನ್ ಹೇಳಿದರು.

ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಅರಿವಿನ ಲೋಕ ವಿಸ್ತರಿಸುತ್ತಿರುವ ಉಮಾ

ಕಣ್ಣೂರು ವಿಭಾಗದ ಕಿಳುನ್ನಾದಿಂದ (ವಿಭಾಗ 36) ಸ್ಪರ್ಧಿಸುತ್ತಿರುವ ತೊಟ್ಟಡಾದ ಸಮಾಜವಾದಿ ಕಾಲೋನಿಯ ನಿವಾಸಿ ಸ್ನೇಹಾ.ಕೆ, ಮುಖ್ಯವಾಹಿನಿಯ ರಾಜಕೀಯ ಪಕ್ಷಗಳ ಪುರುಷರು ಮತ್ತು ಮಹಿಳೆಯರು ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪ್ರಯತ್ನಿಸಿ ವಿಫಲರಾಗಿದ್ದಾರೆ. ಈಗ ನಮ್ಮ ಸಮುದಾಯವು ಹೆಜ್ಜೆ ಹಾಕುವ ಸಮಯ ಇದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಬಿಡುಗಡೆ ಮಾಡಲು ನನ್ನ ಬಳಿ ಯಾವುದೇ ಪ್ರಣಾಳಿಕೆಯಿಲ್ಲ ಅಥವಾ ಭರವಸೆಗಳಿಲ್ಲ. ಕೇವಲ ಭರವಸೆ ನೀಡುವುದರಿಂದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಬದಲಿಗೆ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಧ್ಯಯನ ಮಾಡಿ, ಅವುಗಳನ್ನು ಪರಿಹರಿಸುವುದು ಅಗತ್ಯವಾಗಿದೆ. ನಮ್ಮ ಕ್ಷೇತ್ರದಲ್ಲಿರುವ ಜನರೆಲ್ಲರೂ ಉತ್ತಮವಾದ ಬೆಂಬಲವನ್ನು ಸೂಚಿಸಿದ್ದಾರೆ” ಎಂದು ಹೇಳಿದರು.


ಇದನ್ನೂ ಓದಿ: ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...