Homeಮುಖಪುಟ’ಗುಂಪು ಹತ್ಯೆ ನಡೆಸುವ ಪಡೆಯನ್ನು ನೇಮಿಸಿಕೊಳ್ಳುತ್ತಿರುವ ಕಪಿಲ್ ಮಿಶ್ರ’: ಆರೋಪ

’ಗುಂಪು ಹತ್ಯೆ ನಡೆಸುವ ಪಡೆಯನ್ನು ನೇಮಿಸಿಕೊಳ್ಳುತ್ತಿರುವ ಕಪಿಲ್ ಮಿಶ್ರ’: ಆರೋಪ

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎಂಬ ಆರೋಪ ಹೊತ್ತಿರುವ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ‘ಹಿಂದೂ ಎಕೋ ಸಿಸ್ಟಮ್‌’ ಎಂಬ ಗೂಗಲ್ ಫಾರ್ಮ್ ಒಂದನ್ನು ಪ್ರಸಾರ ಮಾಡುತ್ತಿದ್ದಾರೆ

- Advertisement -
- Advertisement -

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎಂಬ ಆರೋಪ ಹೊತ್ತಿರುವ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ‘ಹಿಂದೂ ಎಕೋ ಸಿಸ್ಟಮ್‌’ ಗೂಗಲ್ ಫಾರ್ಮ್ ಒಂದನ್ನು ಪ್ರಸಾರ ಮಾಡುತ್ತಿದ್ದು, ಹಲವಾರು ಜನರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈಗಾಗಲೆ 18,000 ಜನರು ಇದಕ್ಕೆ ಸೈನ್ ಅಪ್ ಆಗಿದ್ದಾರೆ ಮತ್ತು ಎರಡು ದಿನಗಳ ನಂತರ ಅವರನ್ನು ಎಸ್ಎಂಎಸ್ ಮತ್ತು ಇಮೇಲ್ ಮೂಲಕ ಸಂಪರ್ಕಿಸಲಾಗುವುದು ಕಪಿಲ್ ಮಿಶ್ರಾ  ಹೇಳಿದ್ದಾರೆ. ಫಾರ್ಮ್ ಬಿಡುಗಡೆಯಾದ ಮೂರು ಗಂಟೆಗಳಲ್ಲಿ 5,000 ಜನರು ತಂಡವನ್ನು ಸೇರಿದ್ದಾರೆ ಎಂದು ಅವರು ಈ ಹಿಂದೆ ಹೇಳಿದ್ದರು.

ಈ ವಿವಾದಿತ ಗೂಗಲ್ ಫಾರ್ಮ್‌ನಲ್ಲಿರುವ ಒಂದು ಪ್ರಶ್ನೆ, “ಗೋರಕ್ಷ, ಗೋ ಸೇವಾ, ಲವ್ ಜಿಹಾದ್ ಹೋರಾಟ, ಘರ್ ವಾಪಸಿ, ಹಲಾಲ್, ಮಂದಿರ ನಿರ್ಮಲ್, ಹಿಂದೂ ಏಕ್ತಾ, ಸಾಮಾನ್ಯ ಸೇವೆ ಇವುಗಳಲ್ಲಿ ನೀವು ಯಾವ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದೀರಿ” ಎಂದು ಅದು ಕೇಳುತ್ತದೆ.

ಇದನ್ನೂ ಓದಿ: ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ಫಾರ್ಮ್ ಪೂರ್ತಿಗೊಳಿಸುವವರು ಪೂರ್ಣ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ವೃತ್ತಿಯಂತಹ ವೈಯಕ್ತಿಕ ಮಾಹಿತಿಯನ್ನು ಭರ್ತಿ ಮಾಡಬೇಕಾಗುತ್ತದೆ. ಫಾರ್ಮ್‌ನ ಕೊನೆಯ ವಿಭಾದಲ್ಲಿ; “ಹೌದು ಕ್ಲಿಕ್ ಮಾಡುವ ಮೂಲಕ, ‘ಹಿಂದೂ ಎಕೋ ಸಿಸ್ಟಮ್’ ತಂಡವನ್ನು ಸೇರಲು ಬದ್ಧನಾಗಿರುತ್ತೇನೆ” ಎಂಬ ಘೋಷಣೆಯಿದೆ.

ಕಪಿಲ್ ಮಿಶ್ರ ಅವರ ಈ ಉಪಕ್ರಮದ ಬಗ್ಗೆ ಪಕ್ಷಕ್ಕೆ ಯಾವುದೆ ಅರಿವಿಲ್ಲ ಎಂದು ದೆಹಲಿ ಬಿಜೆಪಿ ಮಾಧ್ಯಮ ಸೆಲ್‌ ಮುಖ್ಯಸ್ಥ ನವೀನ್ ಕುಮಾರ್‌ ಹೇಳಿದ್ದಾರೆಂದು ದಿ ಪ್ರಿಂಟ್ ವರದಿ ಮಾಡಿದೆ.

ಫೆಬ್ರವರಿ ತಿಂಗಳಲ್ಲಿ ಈಶಾನ್ಯ ದೆಹಲಿಯ ಜಾಫ್ರಾಬಾದ್‌ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ನಡೆದ ರ್‍ಯಾಲಿಯಲ್ಲಿ ಕಪಿಲ್ ಮಿಶ್ರಾ “ಗೋಲಿ ಮಾರೊ ಸಾಲೋ ಕೋ’’ ಎಂಬ ದ್ವೇಷ ಪೂರಿತ ಘೋಷಣೆಯನ್ನು ಕೂಗಿದ್ದರು. ಇದಾಗಿ ಕೆಲವೇ ದಿನದಲ್ಲಿ ಗಲಭೆ ಭುಗಿಲೆದ್ದು 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಹಿಂದೂ ಎಕೊ ಸಿಸ್ಟಮ್‌ ತಂಡದ ಜವಾಬ್ದಾರಿಗಳು ಸ್ಪಷ್ಟವಾಗಿಲ್ಲವಾದರೂ, “ಪ್ರತಿಯೊಬ್ಬ ಸದಸ್ಯರು ಧರ್ಮದ ಹೆಸರಿನಲ್ಲಿ ನೇರವಾಗಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ನ್ಯಾಯಾಲಯಗಳಲ್ಲಿ ಕೆಲಸ ಮಾಡುತ್ತಾರೆ” ಎಂದು ಕಪಿಲ್ ಮಿಶ್ರಾ ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎನ್ನಲಾಗುತ್ತಿರುವ ಆರೋಪ ಹೊತ್ತಿರುವ ಕಪಿಲ್‌ ಮಿಶ್ರ ಅವರ ಈ ಉಪಕ್ರಮವನ್ನು ಹಲವಾರು ಜನರು ಟೀಕಿಸಿದ್ದಾರೆ. ಪ್ರಸಿದ್ದ ಕವಿ ಗೀತರಚನೆಕಾರ ಹುಸೈನ್ ಹೈದರಿ, “ದೇಶದಲ್ಲಿ ನಿರುದ್ಯೋಗ ಕಡಿಮೆ ಮಾಡಲು ಇಲ್ಲಿ ಹಲವಾರು ಉದ್ಯೋಗಗಳು ಸೃಷ್ಟಿಯಾಗಿವೆ, ದಯವಿಟ್ಟು ಅರ್ಜಿ ಸಲ್ಲಿಸಿ” ಎಂದು ವ್ಯಂಗ್ಯವಾಡಿದ್ದಾರೆ.

ಪತ್ರಕರ್ತೆ ಝೋಯಾ ರಸೂಲ್, “ದೆಹಲಿ ಹತ್ಯಾಕಾಂಡಗಳನ್ನು ನಡೆಸಲು ಕಪಿಲ್ ಮಿಶ್ರಾ ತನ್ನ ವಾಟ್ಸಾಪ್ ಗುಂಪುಗಳನ್ನು ನವೀಕರಿಸಲು ಪ್ರಯತ್ನಿಸುತ್ತಿದ್ದಾರೆ. ಈ ಸಮಯದಲ್ಲಿ ಪ್ರತಿಯೊಬ್ಬರು ವಿಶೇಷ ಹಿಂಸಾತ್ಮಕ ಕಾರಣಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಖಂಡಿತ ಇದು ಕಾನೂನುಬದ್ಧವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

“ಅವರು ಗುಂಪು ಹತ್ಯೆ ನಡೆಸುವ ಪಡೆಯನ್ನು ‘ನೇಮಿಸಿಕೊಳ್ಳುತ್ತಿದ್ದಾರೆ’ ಅಷ್ಟೇ” ಎಂದು ಕಿರಣ್ ಎಂಬುವವರು ಅಭಿಪ್ರಾಯ ಪಟ್ಟಿದ್ದಾರೆ.

ಕಪಿಲ್ ಮಿಶ್ರಾ ಎಲ್ಲಾ ಮುಖವಾಡವನ್ನು ಕೈಬಿಟ್ಟು, ನಾಜಿ ನೇಮಕಾತಿ  ಮಾಡುತ್ತಿದ್ದಾರೆ ಎಂದು ಅನುರಾಧ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...