Homeಮುಖಪುಟ’ಗುಂಪು ಹತ್ಯೆ ನಡೆಸುವ ಪಡೆಯನ್ನು ನೇಮಿಸಿಕೊಳ್ಳುತ್ತಿರುವ ಕಪಿಲ್ ಮಿಶ್ರ’: ಆರೋಪ

’ಗುಂಪು ಹತ್ಯೆ ನಡೆಸುವ ಪಡೆಯನ್ನು ನೇಮಿಸಿಕೊಳ್ಳುತ್ತಿರುವ ಕಪಿಲ್ ಮಿಶ್ರ’: ಆರೋಪ

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎಂಬ ಆರೋಪ ಹೊತ್ತಿರುವ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ‘ಹಿಂದೂ ಎಕೋ ಸಿಸ್ಟಮ್‌’ ಎಂಬ ಗೂಗಲ್ ಫಾರ್ಮ್ ಒಂದನ್ನು ಪ್ರಸಾರ ಮಾಡುತ್ತಿದ್ದಾರೆ

- Advertisement -
- Advertisement -

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎಂಬ ಆರೋಪ ಹೊತ್ತಿರುವ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ‘ಹಿಂದೂ ಎಕೋ ಸಿಸ್ಟಮ್‌’ ಗೂಗಲ್ ಫಾರ್ಮ್ ಒಂದನ್ನು ಪ್ರಸಾರ ಮಾಡುತ್ತಿದ್ದು, ಹಲವಾರು ಜನರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈಗಾಗಲೆ 18,000 ಜನರು ಇದಕ್ಕೆ ಸೈನ್ ಅಪ್ ಆಗಿದ್ದಾರೆ ಮತ್ತು ಎರಡು ದಿನಗಳ ನಂತರ ಅವರನ್ನು ಎಸ್ಎಂಎಸ್ ಮತ್ತು ಇಮೇಲ್ ಮೂಲಕ ಸಂಪರ್ಕಿಸಲಾಗುವುದು ಕಪಿಲ್ ಮಿಶ್ರಾ  ಹೇಳಿದ್ದಾರೆ. ಫಾರ್ಮ್ ಬಿಡುಗಡೆಯಾದ ಮೂರು ಗಂಟೆಗಳಲ್ಲಿ 5,000 ಜನರು ತಂಡವನ್ನು ಸೇರಿದ್ದಾರೆ ಎಂದು ಅವರು ಈ ಹಿಂದೆ ಹೇಳಿದ್ದರು.

ಈ ವಿವಾದಿತ ಗೂಗಲ್ ಫಾರ್ಮ್‌ನಲ್ಲಿರುವ ಒಂದು ಪ್ರಶ್ನೆ, “ಗೋರಕ್ಷ, ಗೋ ಸೇವಾ, ಲವ್ ಜಿಹಾದ್ ಹೋರಾಟ, ಘರ್ ವಾಪಸಿ, ಹಲಾಲ್, ಮಂದಿರ ನಿರ್ಮಲ್, ಹಿಂದೂ ಏಕ್ತಾ, ಸಾಮಾನ್ಯ ಸೇವೆ ಇವುಗಳಲ್ಲಿ ನೀವು ಯಾವ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದೀರಿ” ಎಂದು ಅದು ಕೇಳುತ್ತದೆ.

ಇದನ್ನೂ ಓದಿ: ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ಫಾರ್ಮ್ ಪೂರ್ತಿಗೊಳಿಸುವವರು ಪೂರ್ಣ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ವೃತ್ತಿಯಂತಹ ವೈಯಕ್ತಿಕ ಮಾಹಿತಿಯನ್ನು ಭರ್ತಿ ಮಾಡಬೇಕಾಗುತ್ತದೆ. ಫಾರ್ಮ್‌ನ ಕೊನೆಯ ವಿಭಾದಲ್ಲಿ; “ಹೌದು ಕ್ಲಿಕ್ ಮಾಡುವ ಮೂಲಕ, ‘ಹಿಂದೂ ಎಕೋ ಸಿಸ್ಟಮ್’ ತಂಡವನ್ನು ಸೇರಲು ಬದ್ಧನಾಗಿರುತ್ತೇನೆ” ಎಂಬ ಘೋಷಣೆಯಿದೆ.

ಕಪಿಲ್ ಮಿಶ್ರ ಅವರ ಈ ಉಪಕ್ರಮದ ಬಗ್ಗೆ ಪಕ್ಷಕ್ಕೆ ಯಾವುದೆ ಅರಿವಿಲ್ಲ ಎಂದು ದೆಹಲಿ ಬಿಜೆಪಿ ಮಾಧ್ಯಮ ಸೆಲ್‌ ಮುಖ್ಯಸ್ಥ ನವೀನ್ ಕುಮಾರ್‌ ಹೇಳಿದ್ದಾರೆಂದು ದಿ ಪ್ರಿಂಟ್ ವರದಿ ಮಾಡಿದೆ.

ಫೆಬ್ರವರಿ ತಿಂಗಳಲ್ಲಿ ಈಶಾನ್ಯ ದೆಹಲಿಯ ಜಾಫ್ರಾಬಾದ್‌ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ನಡೆದ ರ್‍ಯಾಲಿಯಲ್ಲಿ ಕಪಿಲ್ ಮಿಶ್ರಾ “ಗೋಲಿ ಮಾರೊ ಸಾಲೋ ಕೋ’’ ಎಂಬ ದ್ವೇಷ ಪೂರಿತ ಘೋಷಣೆಯನ್ನು ಕೂಗಿದ್ದರು. ಇದಾಗಿ ಕೆಲವೇ ದಿನದಲ್ಲಿ ಗಲಭೆ ಭುಗಿಲೆದ್ದು 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಹಿಂದೂ ಎಕೊ ಸಿಸ್ಟಮ್‌ ತಂಡದ ಜವಾಬ್ದಾರಿಗಳು ಸ್ಪಷ್ಟವಾಗಿಲ್ಲವಾದರೂ, “ಪ್ರತಿಯೊಬ್ಬ ಸದಸ್ಯರು ಧರ್ಮದ ಹೆಸರಿನಲ್ಲಿ ನೇರವಾಗಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ನ್ಯಾಯಾಲಯಗಳಲ್ಲಿ ಕೆಲಸ ಮಾಡುತ್ತಾರೆ” ಎಂದು ಕಪಿಲ್ ಮಿಶ್ರಾ ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎನ್ನಲಾಗುತ್ತಿರುವ ಆರೋಪ ಹೊತ್ತಿರುವ ಕಪಿಲ್‌ ಮಿಶ್ರ ಅವರ ಈ ಉಪಕ್ರಮವನ್ನು ಹಲವಾರು ಜನರು ಟೀಕಿಸಿದ್ದಾರೆ. ಪ್ರಸಿದ್ದ ಕವಿ ಗೀತರಚನೆಕಾರ ಹುಸೈನ್ ಹೈದರಿ, “ದೇಶದಲ್ಲಿ ನಿರುದ್ಯೋಗ ಕಡಿಮೆ ಮಾಡಲು ಇಲ್ಲಿ ಹಲವಾರು ಉದ್ಯೋಗಗಳು ಸೃಷ್ಟಿಯಾಗಿವೆ, ದಯವಿಟ್ಟು ಅರ್ಜಿ ಸಲ್ಲಿಸಿ” ಎಂದು ವ್ಯಂಗ್ಯವಾಡಿದ್ದಾರೆ.

ಪತ್ರಕರ್ತೆ ಝೋಯಾ ರಸೂಲ್, “ದೆಹಲಿ ಹತ್ಯಾಕಾಂಡಗಳನ್ನು ನಡೆಸಲು ಕಪಿಲ್ ಮಿಶ್ರಾ ತನ್ನ ವಾಟ್ಸಾಪ್ ಗುಂಪುಗಳನ್ನು ನವೀಕರಿಸಲು ಪ್ರಯತ್ನಿಸುತ್ತಿದ್ದಾರೆ. ಈ ಸಮಯದಲ್ಲಿ ಪ್ರತಿಯೊಬ್ಬರು ವಿಶೇಷ ಹಿಂಸಾತ್ಮಕ ಕಾರಣಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಖಂಡಿತ ಇದು ಕಾನೂನುಬದ್ಧವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

“ಅವರು ಗುಂಪು ಹತ್ಯೆ ನಡೆಸುವ ಪಡೆಯನ್ನು ‘ನೇಮಿಸಿಕೊಳ್ಳುತ್ತಿದ್ದಾರೆ’ ಅಷ್ಟೇ” ಎಂದು ಕಿರಣ್ ಎಂಬುವವರು ಅಭಿಪ್ರಾಯ ಪಟ್ಟಿದ್ದಾರೆ.

ಕಪಿಲ್ ಮಿಶ್ರಾ ಎಲ್ಲಾ ಮುಖವಾಡವನ್ನು ಕೈಬಿಟ್ಟು, ನಾಜಿ ನೇಮಕಾತಿ  ಮಾಡುತ್ತಿದ್ದಾರೆ ಎಂದು ಅನುರಾಧ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...