Homeಕರ್ನಾಟಕ'ಮರಾಠರು ತಲತಲಾಂತರದಿಂದ ಇಲ್ಲಿಯೇ ಇದ್ದಾರೆ'- ಯಡಿಯೂರಪ್ಪ ಹೇಳಿಕೆಗೆ ನೆಟ್ಟಿಗರ ಆಕ್ರೋಶ!

‘ಮರಾಠರು ತಲತಲಾಂತರದಿಂದ ಇಲ್ಲಿಯೇ ಇದ್ದಾರೆ’- ಯಡಿಯೂರಪ್ಪ ಹೇಳಿಕೆಗೆ ನೆಟ್ಟಿಗರ ಆಕ್ರೋಶ!

ಈ ರಾಜ್ಯದಲ್ಲಿ ಅದೆಷ್ಟೋ ಸಣ್ಣ ಸಣ್ಣ ಜಾತಿಗಳು ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದೆ. ಅವರೆಲ್ಲರ ಮೂಲ ಕರ್ನಾಟಕ. ಅವರಿಗೇಕೆ ಈ ವಿಶೇಷ ಸವಲತ್ತಿಲ್ಲ? ಎಂದು ಆಕ್ರೋಶ ಹೊರಹಾಕಿದ್ದಾರೆ.

- Advertisement -
- Advertisement -

ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ ವ್ಯಾಪಕ ವಿರೋಧಕ್ಕೆ ಒಳಗಾಗಿದ್ದ ಯಡಿಯೂರಪ್ಪ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, “‘ಮರಾಠರು ತಲತಲಾಂತರದಿಂದ ಇಲ್ಲಿಯೇ ಇದ್ದಾರೆ” ಎಂದು ಹೇಳಿದ್ದಾರೆ. ಇದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ಕರ್ನಾಟಕ ಮುಖ್ಯಮಂತ್ರಿಯವರ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದ್ದು, “ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲು ಉದ್ದೇಶಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಖರೀದಿ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ: ಸಿದ್ದರಾಮಯ್ಯ ಆರೋಪ

ಮತ್ತೊಂದು ಟ್ವೀಟ್‌ನಲ್ಲಿ, “‘ಮರಾಠರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ- ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ” ಎಂದು ಬರೆಯಲಾಗಿದೆ.

ಯಡಿಯೂರಪ್ಪನವರು ಈ ನಿಲುವು ತೆಗೆದುಕೊಂಡಾಗಿನಿಂದಲೂ ವಿರೋಧ ಪಕ್ಷಗಳು ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಈ ಟ್ವೀಟ್ ಮಾಡಿದಮೇಲೆ ನೇರವಾಗಿಯೇ ಇದಕ್ಕೆ ರೀಟ್ವೀಟ್ ಮಾಡಿ ಸಾಮಾಜಿಕ ಮಾಧ್ಯಮ ಬಳಕೆದಾರರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ #StopMarathaDevelopmentAuthority #ಮಾರಾಠ_ಅಭಿವೃದ್ಧಿ_ಪ್ರಾಧಿಕಾರ_ನಿಲ್ಲಿಸಿ ಎನ್ನುವ ಅಭಿಯಾನ ಆರಂಭವಾಗಿದೆ.

ಇದನ್ನೂ ಓದಿ: ರಾಯಚೂರು ನಗರಸಭೆ: ಸರ್ಕಾರದ ಅನುದಾನ ಬಳಕೆ ಮಾರ್ಗಸೂಚಿ ಉಲ್ಲಂಘನೆ – ಭ್ರಷ್ಟಾಚಾರದ ವಾಸನೆ!

ಯಶಸ್ ಎಂಬುವವರು ಟ್ವೀಟ್ ಮಾಡಿ, “ಈ ರಾಜ್ಯದಲ್ಲಿ ಅದೆಷ್ಟೋ ಸಣ್ಣ ಸಣ್ಣ ಜಾತಿಗಳು ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದೆ ಅವರೆಲ್ಲರದು ಮೂಲ ಕರ್ನಾಟಕವೇ, ಅವರಿಗೇಕೆ ಈ ವಿಶೇಷ ಸವಲತ್ತಿಲ್ಲ? ಸರಕಾರದಿಂದ ಏನಾದರೂ ಸವಲತ್ತು ಸಿಗಬೇಕಾದರೆ ಒಂದು ನೀವು ರಾಜಕೀಯವಾಗಿ ಗಟ್ಟಿಯಾಗಿರಬೇಕು ಇಲ್ಲ ಆ ಜಾತಿ ಹೆಚ್ಚಿರುವ ಜಾಗದಲ್ಲಿ ಉಪಚುನಾವಣೆ ಆಗಬೇಕು. ರಾಜಕೀಯ ನಾಯಕರೇ ಇಲ್ಲದ ಜಾತಿಯ ಕತೆಯೇನು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಪ್ರವೀಣ್ ಎಂಬುವವರು ಟ್ವೀಟ್ ಮಾಡಿ ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರಿಗೆ ಸಂಬಳ ನೀಡದಿರುವುದನ್ನು ಉಲ್ಲೇಖಿಸಿ, “ಕೆ ಎಸ್‌ ಆರ್‌ ಟಿ ಸಿ ನೌಕರರು?” ಎಂದು ಅವರ ಗತಿಯೇನು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಅವಿನಾಶ್ ಶೆಟ್ಟಿ ಎಂಬುವವರು ಟ್ವೀಟ್ ಮಾಡಿ, “ತಲ‌ತಲಾಂತರಗಳಿಂದ ವಾಸವಾಗಿರುವವರಿಗೆ ಸಿಗುವ ಬೆಲೆ ಇಲ್ಲಿಯವರೇ ಆಗಿರುವ ನಮಗೆ ತುಳುವರಿಗಿಲ್ಲ” ಎಂದು ತುಳುವ ಜನಾಂಗವನ್ನು ಕಡೆಗಣಿಸಿರುವುದನ್ನು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ಇದಕ್ಕೆ ಸಂಬಂಧಿಸಿದಂತೆ ನಿನ್ನೆ ಸಿದ್ದಗಂಗಾ ಕ್ಷೇತ್ರದ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯಿಸಿ, “ಲಿಂಗಾಯತ-ವೀರಶೈವ ಅಭಿವೃದ್ಧಿ ನಿಗಮ ಸ್ಥಾಪಿಸಿರುವ ವಿಷಯ ಮಾಧ್ಯಮಗಳಿಂದ ಗೊತ್ತಾಗಿದೆ. ಇದು ಅಚ್ಚರಿ ಉಂಟು ಮಾಡಿದೆ. ಎಲ್ಲಾ ಸಮಾಜ ಮತ್ತು ಜಾತಿಗಳಲ್ಲೂ ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಅಂಥವರ ನೆರವಿಗೆ ಸರ್ಕಾರ ಬರಬೇಕಾಗಿತ್ತು. ಕಷ್ಟದಲ್ಲಿರುವವರಿಗೆ ನೆರವಾಗುವುದಕ್ಕೆ ಒತ್ತುಕೊಟ್ಟರೆ ಒಳ್ಳೆಯದು. ಎಲ್ಲಾ ಸಮಾಜದಲ್ಲೂ ಕಡು ಬಡವರು ಇದ್ದಾರೆ. ಅವರ ಸಹಾಯಕ್ಕೆ ಸರ್ಕಾರ ಬರಬೇಕಾಗಿತ್ತು. ಈ ಶ್ರೇಣೀಕೃತ ವ್ಯವಸ್ಥೆಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವವರು ಎಲ್ಲಾ ಜಾತಿಗಳಲ್ಲೂ ಇದ್ದಾರೆ. ಆರ್ಥಿಕವಾಗಿ ಕಷ್ಟ ದಲ್ಲಿರುವವರಿಗೆ ಉದ್ಯೋಗದಲ್ಲಿ ಅವಕಾಶ ಕಲ್ಪಿಸುವ ವ್ಯವಸ್ಥೆ ಮಾಡಿದರೆ ಒಳ್ಳೆಯದು. ಆರ್ಥಿಕವಾಗಿ ಬಲಿಷ್ಠವಾದರೆ ಆ ಕುಟುಂಬಗಳು ಮೇಲೆ ಬರುತ್ತವೆ. ಲಿಂಗಾಯತ-ವೀರಶೈವ ಅಭಿವೃದ್ಧಿ ನಿಗಮ ಮಾಡಿರುವುದು ಆಶ್ಚರ್ಯ ತಂದಿದೆ. ಹೀಗೆ ಜಾತಿಗೊಂದು ನಿಗಮ ಮಾಡುತ್ತಾ ಹೋದರೆ ಮಿತಿಯೇ ಇರುವುದಿಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ರಾಜ್ಯ ಸರ್ಕಾರದ ಈ ಧೋರಣೆಗೆ ಸಂಬಂಧಿಸಿದಂತೆ ಫೇಸ್‌ಬುಕ್‌ನಲ್ಲಿಯೂ ಸಹ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ಭ್ರಷ್ಟಾಚಾರ ತನಿಖೆಗೆ ಅಡ್ಡಿ ಏಕೆ? : ಹೆಚ್.ಕೆ.ಪಾಟೀಲ್‍ರವರ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...