Homeಕರ್ನಾಟಕ'ಮರಾಠರು ತಲತಲಾಂತರದಿಂದ ಇಲ್ಲಿಯೇ ಇದ್ದಾರೆ'- ಯಡಿಯೂರಪ್ಪ ಹೇಳಿಕೆಗೆ ನೆಟ್ಟಿಗರ ಆಕ್ರೋಶ!

‘ಮರಾಠರು ತಲತಲಾಂತರದಿಂದ ಇಲ್ಲಿಯೇ ಇದ್ದಾರೆ’- ಯಡಿಯೂರಪ್ಪ ಹೇಳಿಕೆಗೆ ನೆಟ್ಟಿಗರ ಆಕ್ರೋಶ!

ಈ ರಾಜ್ಯದಲ್ಲಿ ಅದೆಷ್ಟೋ ಸಣ್ಣ ಸಣ್ಣ ಜಾತಿಗಳು ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದೆ. ಅವರೆಲ್ಲರ ಮೂಲ ಕರ್ನಾಟಕ. ಅವರಿಗೇಕೆ ಈ ವಿಶೇಷ ಸವಲತ್ತಿಲ್ಲ? ಎಂದು ಆಕ್ರೋಶ ಹೊರಹಾಕಿದ್ದಾರೆ.

- Advertisement -
- Advertisement -

ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ ವ್ಯಾಪಕ ವಿರೋಧಕ್ಕೆ ಒಳಗಾಗಿದ್ದ ಯಡಿಯೂರಪ್ಪ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, “‘ಮರಾಠರು ತಲತಲಾಂತರದಿಂದ ಇಲ್ಲಿಯೇ ಇದ್ದಾರೆ” ಎಂದು ಹೇಳಿದ್ದಾರೆ. ಇದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ಕರ್ನಾಟಕ ಮುಖ್ಯಮಂತ್ರಿಯವರ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದ್ದು, “ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲು ಉದ್ದೇಶಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಖರೀದಿ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ: ಸಿದ್ದರಾಮಯ್ಯ ಆರೋಪ

ಮತ್ತೊಂದು ಟ್ವೀಟ್‌ನಲ್ಲಿ, “‘ಮರಾಠರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ- ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ” ಎಂದು ಬರೆಯಲಾಗಿದೆ.

ಯಡಿಯೂರಪ್ಪನವರು ಈ ನಿಲುವು ತೆಗೆದುಕೊಂಡಾಗಿನಿಂದಲೂ ವಿರೋಧ ಪಕ್ಷಗಳು ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಈ ಟ್ವೀಟ್ ಮಾಡಿದಮೇಲೆ ನೇರವಾಗಿಯೇ ಇದಕ್ಕೆ ರೀಟ್ವೀಟ್ ಮಾಡಿ ಸಾಮಾಜಿಕ ಮಾಧ್ಯಮ ಬಳಕೆದಾರರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ #StopMarathaDevelopmentAuthority #ಮಾರಾಠ_ಅಭಿವೃದ್ಧಿ_ಪ್ರಾಧಿಕಾರ_ನಿಲ್ಲಿಸಿ ಎನ್ನುವ ಅಭಿಯಾನ ಆರಂಭವಾಗಿದೆ.

ಇದನ್ನೂ ಓದಿ: ರಾಯಚೂರು ನಗರಸಭೆ: ಸರ್ಕಾರದ ಅನುದಾನ ಬಳಕೆ ಮಾರ್ಗಸೂಚಿ ಉಲ್ಲಂಘನೆ – ಭ್ರಷ್ಟಾಚಾರದ ವಾಸನೆ!

ಯಶಸ್ ಎಂಬುವವರು ಟ್ವೀಟ್ ಮಾಡಿ, “ಈ ರಾಜ್ಯದಲ್ಲಿ ಅದೆಷ್ಟೋ ಸಣ್ಣ ಸಣ್ಣ ಜಾತಿಗಳು ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದೆ ಅವರೆಲ್ಲರದು ಮೂಲ ಕರ್ನಾಟಕವೇ, ಅವರಿಗೇಕೆ ಈ ವಿಶೇಷ ಸವಲತ್ತಿಲ್ಲ? ಸರಕಾರದಿಂದ ಏನಾದರೂ ಸವಲತ್ತು ಸಿಗಬೇಕಾದರೆ ಒಂದು ನೀವು ರಾಜಕೀಯವಾಗಿ ಗಟ್ಟಿಯಾಗಿರಬೇಕು ಇಲ್ಲ ಆ ಜಾತಿ ಹೆಚ್ಚಿರುವ ಜಾಗದಲ್ಲಿ ಉಪಚುನಾವಣೆ ಆಗಬೇಕು. ರಾಜಕೀಯ ನಾಯಕರೇ ಇಲ್ಲದ ಜಾತಿಯ ಕತೆಯೇನು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಪ್ರವೀಣ್ ಎಂಬುವವರು ಟ್ವೀಟ್ ಮಾಡಿ ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರಿಗೆ ಸಂಬಳ ನೀಡದಿರುವುದನ್ನು ಉಲ್ಲೇಖಿಸಿ, “ಕೆ ಎಸ್‌ ಆರ್‌ ಟಿ ಸಿ ನೌಕರರು?” ಎಂದು ಅವರ ಗತಿಯೇನು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಅವಿನಾಶ್ ಶೆಟ್ಟಿ ಎಂಬುವವರು ಟ್ವೀಟ್ ಮಾಡಿ, “ತಲ‌ತಲಾಂತರಗಳಿಂದ ವಾಸವಾಗಿರುವವರಿಗೆ ಸಿಗುವ ಬೆಲೆ ಇಲ್ಲಿಯವರೇ ಆಗಿರುವ ನಮಗೆ ತುಳುವರಿಗಿಲ್ಲ” ಎಂದು ತುಳುವ ಜನಾಂಗವನ್ನು ಕಡೆಗಣಿಸಿರುವುದನ್ನು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ಇದಕ್ಕೆ ಸಂಬಂಧಿಸಿದಂತೆ ನಿನ್ನೆ ಸಿದ್ದಗಂಗಾ ಕ್ಷೇತ್ರದ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯಿಸಿ, “ಲಿಂಗಾಯತ-ವೀರಶೈವ ಅಭಿವೃದ್ಧಿ ನಿಗಮ ಸ್ಥಾಪಿಸಿರುವ ವಿಷಯ ಮಾಧ್ಯಮಗಳಿಂದ ಗೊತ್ತಾಗಿದೆ. ಇದು ಅಚ್ಚರಿ ಉಂಟು ಮಾಡಿದೆ. ಎಲ್ಲಾ ಸಮಾಜ ಮತ್ತು ಜಾತಿಗಳಲ್ಲೂ ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಅಂಥವರ ನೆರವಿಗೆ ಸರ್ಕಾರ ಬರಬೇಕಾಗಿತ್ತು. ಕಷ್ಟದಲ್ಲಿರುವವರಿಗೆ ನೆರವಾಗುವುದಕ್ಕೆ ಒತ್ತುಕೊಟ್ಟರೆ ಒಳ್ಳೆಯದು. ಎಲ್ಲಾ ಸಮಾಜದಲ್ಲೂ ಕಡು ಬಡವರು ಇದ್ದಾರೆ. ಅವರ ಸಹಾಯಕ್ಕೆ ಸರ್ಕಾರ ಬರಬೇಕಾಗಿತ್ತು. ಈ ಶ್ರೇಣೀಕೃತ ವ್ಯವಸ್ಥೆಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವವರು ಎಲ್ಲಾ ಜಾತಿಗಳಲ್ಲೂ ಇದ್ದಾರೆ. ಆರ್ಥಿಕವಾಗಿ ಕಷ್ಟ ದಲ್ಲಿರುವವರಿಗೆ ಉದ್ಯೋಗದಲ್ಲಿ ಅವಕಾಶ ಕಲ್ಪಿಸುವ ವ್ಯವಸ್ಥೆ ಮಾಡಿದರೆ ಒಳ್ಳೆಯದು. ಆರ್ಥಿಕವಾಗಿ ಬಲಿಷ್ಠವಾದರೆ ಆ ಕುಟುಂಬಗಳು ಮೇಲೆ ಬರುತ್ತವೆ. ಲಿಂಗಾಯತ-ವೀರಶೈವ ಅಭಿವೃದ್ಧಿ ನಿಗಮ ಮಾಡಿರುವುದು ಆಶ್ಚರ್ಯ ತಂದಿದೆ. ಹೀಗೆ ಜಾತಿಗೊಂದು ನಿಗಮ ಮಾಡುತ್ತಾ ಹೋದರೆ ಮಿತಿಯೇ ಇರುವುದಿಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ರಾಜ್ಯ ಸರ್ಕಾರದ ಈ ಧೋರಣೆಗೆ ಸಂಬಂಧಿಸಿದಂತೆ ಫೇಸ್‌ಬುಕ್‌ನಲ್ಲಿಯೂ ಸಹ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ಭ್ರಷ್ಟಾಚಾರ ತನಿಖೆಗೆ ಅಡ್ಡಿ ಏಕೆ? : ಹೆಚ್.ಕೆ.ಪಾಟೀಲ್‍ರವರ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...