Homeಮುಖಪುಟಯುಪಿ: ಆರೋಪಿ ಸಂಬಂಧಿಕರು ಬೆಂಕಿ ಹಚ್ಚಿದ್ದ ಅತ್ಯಾಚಾರ ಸಂತ್ರಸ್ತೆ ಸಾವು

ಯುಪಿ: ಆರೋಪಿ ಸಂಬಂಧಿಕರು ಬೆಂಕಿ ಹಚ್ಚಿದ್ದ ಅತ್ಯಾಚಾರ ಸಂತ್ರಸ್ತೆ ಸಾವು

ಸಂತ್ರಸ್ತೆ ಸಾವನ್ನಪ್ಪುವ ಮುನ್ನ, ಅತ್ಯಾಚಾರ ಪ್ರಕರಣದ ಆರೋಪಿಯ ಚಿಕ್ಕಪ್ಪ ಮತ್ತು ಆತನ ಐದು ಮಂದಿ ಕುಟುಂಬ ಸದಸ್ಯರು ಮಂಗಳವಾರ ಆಕೆಗೆ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಅತ್ಯಾಚಾರ ಆರೋಪ ಹೊತ್ತ ವ್ಯಕ್ತಿಯ ಕುಟುಂಬದ ಕಿರುಕುಳ ಮತ್ತು ಆರೋಪಿ ಕುಟುಂಬದವರು ಬೆಂಕಿ  ಹಚ್ಚಿದ್ದರು ಎನ್ನಲಾಗಿದ್ದ ಉತ್ತರ ಪ್ರದೇಶದ ಬುಲಂದ್‌ಶಹರ್‌ನ 16 ವರ್ಷದ ಸಂತ್ರಸ್ತೆ ದೆಹಲಿಯ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ.

ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ಮಂಗಳವಾರ ತಿಳಿಸಿದ್ದಾರೆ. ಮಂಗಳವಾರ ಅನುಮಾನಾಸ್ಪದ ರೀತಿಯಲ್ಲಿ ಬಾಲಕಿಯನ್ನು ಸುಟ್ಟಗಾಯಗಳೊಂದಿಗೆ ಚಿಕಿತ್ಸೆಗಾಗಿ ದೆಹಲಿಗೆ ಕರೆತರಲಾಗಿತ್ತು.

ಹಳ್ಳಿಯಲ್ಲಿ ಮಾವಿನ ತೋಟ ಕಾಯಲು ಗ್ರಾಮಕ್ಕೆ ಬಂದಿದ್ದ ವ್ಯಕ್ತಿಯೊಬ್ಬ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿ ತನ್ನಆಗಸ್ಟ್ 15 ರಂದು ದೂರು ದಾಖಲಿಸಿದ್ದರು. ಸಂತ್ರಸ್ತೆ ದೂರಿನ ನಂತರ ಪೊಲೀಸರು ಕ್ರಮ ಕೈಗೊಂಡು ಅದೇ ದಿನ ಆರೋಪಿಗಳನ್ನು ಬಂಧಿಸಿದ್ದರು.

ಆದರೆ ಆರೋಪಿಗಳ ಚಿಕ್ಕಪ್ಪ ಮತ್ತು ಅವರ ಕೆಲವು ಸ್ನೇಹಿತರು, ಕುಟುಂಬ ಸದಸ್ಯರು ಸಂತ್ರಸ್ತೆಯ ಮೇಲೆ ತನ್ನ ದೂರನ್ನು ಹಿಂಪಡೆಯಲು ಮತ್ತು ಆರೋಪಿಯೊಂದಿಗೆ ರಾಜಿ ಮಾಡಿಕೊಳ್ಳಲು ಒತ್ತಡ ಹೇರುತ್ತಿದ್ದರು. ಸಂತ್ರಸ್ತೆಯ ಕುಟುಂಬವು ರಾಜಿ ಮಾಡಿಕೊಳ್ಳಲು ಒಪ್ಪದ ಹಿನ್ನೆಲೆ ಅವರು ಬಾಲಕಿಗೆ ಬೆಂಕಿ ಹಚ್ಚಿದ್ದಾರೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದರು.

ಇದನ್ನೂ ಓದಿ: ಉತ್ತರಪ್ರದೇಶ: ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡದ ಕಾರಣಕ್ಕೆ ದಲಿತ ಬಾಲಕಿಗೆ ಬೆಂಕಿಹಚ್ಚಿದ ಕ್ರೂರಿ!

ಸಂತ್ರಸ್ತೆ ಸಾಯುವ ಮುನ್ನ ತನ್ನ ಹೇಳಿಕೆಯಲ್ಲಿ, ಅತ್ಯಾಚಾರ ಪ್ರಕರಣದ ಆರೋಪಿಗಳ ಚಿಕ್ಕಪ್ಪ ಮತ್ತು ಆತನ ಇತರ ಐದು ಮಂದಿ ಕುಟುಂಬ ಸದಸ್ಯರು ಮಂಗಳವಾರ ಆಕೆಗೆ ಬೆಂಕಿ ಹಚ್ಚಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಜಹಾಂಗೀರಾಬಾದ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ಕುಟುಂಬ ಕೊಲೆ ಪ್ರಕರಣ ದಾಖಲಿಸಿದೆ. ನಂತರ ಮೂವರನ್ನು ಬಂಧಿಸಲಾಗಿದೆ. ಸರಿಯಾಗಿ ಕರ್ತವ್ಯ ನಿರ್ವಹಣೆ ಮಾಡದ ಸಬ್ ಇನ್ಸ್‌ಪೆಕ್ಟರ್ ವಿನಾಯಕಾಂತ್ ಗೌತಮ್ ಮತ್ತು ಬೀಟ್ ಕಾನ್‌ಸ್ಟೆಬಲ್ ವಿಕ್ರಾಂತ್ ತೋಮರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಸಂತೋಷ್‌ಕುಮಾರ್‌ ಸಿಂಗ್‌ ತಿಳಿಸಿದ್ದಾರೆ.

ಮೊದಲು ಸಂತ್ರಸ್ತ ಬಾಲಕಿ ತನಗೆ ತಾನೇ ತಾನೇ ಬೆಂಕಿ ಹಚ್ಚಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ, ನಂತರ ಬಾಲಕಿ ಮೇಲೆ ಆರೋಪಿಗಳ ಕುಟುಂಬ ಸದಸ್ಯರು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಬುಲಂದ್‌ಶಹರ್) ಎಸ್.ಕೆ.ಸಿಂಗ್ ತಿಳಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ದೇಶದಲ್ಲಿ ತೀವ್ರ ತರಹದ ಪ್ರತಿಭಟನೆಗೆ ಸಾಕ್ಷಿಯಾಗಿತ್ತು. ಆದರೂ ಕೂಡ ಸರ್ಕಾರ ಮಹಿಳೆಯರ ಸುರಕ್ಷತೆ ಬಗ್ಗೆ ಯಾವುದೇ ಕಾಳಜಿ ವಹಿಸುತ್ತಿಲ್ಲ ಎಂದು ಆರೋಪಿಸಲಾಗುತ್ತಿದೆ.

ದಿನೇ ದಿನೇ ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಘಟನೆಗಳು ವರದಿಯಾಗುತ್ತಲೇ ಇವೆ. ರಾಮನ ನಾಡು ಎಂದು ಕರೆಸಿಕೊಳ್ಳುವಲ್ಲಿ ಮಹಿಳೆಯರಿಗೆ ಸುರಕ್ಷತೆ ಕನಸಿನ ಮಾತಾಗಿದೆ ಎಂದು ಸಾಮಾಜಿಕ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; 6 ವರ್ಷದ ನಂತರ ಅಪರಾಧಿಗೆ ಮರಣದಂಡನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...