Homeಮುಖಪುಟವರವರ ರಾವ್ ಸ್ಥಿತಿ ಗಂಭೀರವಾಗಿದೆ; ನಾನಾವತಿ ಆಸ್ಪತ್ರೆಗೆ ದಾಖಲಿಸಿ - ಬಾಂಬೆ ಹೈಕೋರ್ಟ್‌!

ವರವರ ರಾವ್ ಸ್ಥಿತಿ ಗಂಭೀರವಾಗಿದೆ; ನಾನಾವತಿ ಆಸ್ಪತ್ರೆಗೆ ದಾಖಲಿಸಿ – ಬಾಂಬೆ ಹೈಕೋರ್ಟ್‌!

- Advertisement -
- Advertisement -

ಬಂಧನದಲ್ಲಿರುವ ತೆಲುಗು ಕವಿ ವರವರ ರಾವ್ ಅವರನ್ನು 15 ದಿನಗಳ ಕಾಲ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಿ ಎಂದು ಬಾಂಬೆ ಹೈಕೋರ್ಟ್‌ ಅಧಿಕಾರಿಗಳಿಗೆ ತಿಳಿಸಿದ್ದು, ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಹೇಳಿದೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಕಳೆದ 2 ವರ್ಷಗಳಿಂದ ತಲೋಜ ಜೈಲಿನಲ್ಲಿರುವ ಇವರಿಗೆ “ಚಿಕಿತ್ಸೆಯ ಅಗತ್ಯವಿದೆ” ಎಂದು ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಮಾಧವ್ ಜಮ್ದಾರ್ ಅವರ ನೇತೃತ್ವದ ಹೈಕೋರ್ಟ್ ನ್ಯಾಯಪೀಠ ಹೇಳಿದೆ.

ವರವರ ರಾವ್ ಅವರ ವೈದ್ಯಕೀಯ ಪರೀಕ್ಷೆಯ ವಿವರಗಳನ್ನು ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಮಂಗಳವಾರ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿತ್ತು. ವರವರ ರಾವ್ ಅವರನ್ನು ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲು ಅವರ ಪತ್ನಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

80 ವರ್ಷದ ವರವರಾ ರಾವ್ ಅವರನ್ನು 2018 ರ ಜನವರಿಯಲ್ಲಿ ಬಂಧಿಸಿ, ಭಯೋತ್ಪಾದನಾ-ವಿರೋಧಿ ಕಾನೂನಾದ ಯುಎಪಿಎ ಯನ್ನು ದಾಖಲಿಸಲಾಗಿದೆ. ಅನಾರೋಗ್ಯ ಪೀಡಿತರಾದ ಅವರು ನಿರಂತರವಾಗಿ ಸೆರೆವಾಸ ಅನುಭವಿಸುವುದು ಸಂವಿಧಾನದ 21 ನೇ ಪರಿಚ್ಚೇದದ ಉಲ್ಲಂಘನೆಯಾಗಿದೆ ಮತ್ತು ಅದು ಅವರ ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಹೇಳಿತ್ತು.

ಮುಂಬೈ ಬಳಿಯ ತಲೋಜ ಜೈಲಿನಲ್ಲಿರುವ ಪ್ರಕರಣದ ಸಹ-ಆರೋಪಿ ಸ್ಟಾನ್ ಸ್ವಾಮಿ ವಕೀಲರಿಗೆ ಕರೆ ಮಾಡಿ ವರವರ ರಾವ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆಂದು ಇಂದಿರಾ ಜೈಸಿಂಗ್ ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿ: ವರವರ ರಾವ್ ಅನಾರೋಗ್ಯದ ಸ್ಥಿತಿಯನ್ನು ದುರುಪಯೋಗ ಮಾಡುತ್ತಿದ್ದಾರೆ; ಅವರಿಗೆ ಜಾಮಿನು ನೀಡಕೂಡದು: NIA

“ವರವಾರ ರಾವ್ ಅವರನ್ನು ತಲೋಜಾ ಜೈಲಿನಿಂದ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲು ನಾನು ತುರ್ತು ಮಧ್ಯಂತರ ಪರಿಹಾರವನ್ನು ಕೋರುತ್ತೇನೆ. ಅವರ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿರುವುದರಿಂದ ಅವರನ್ನು ಬಿಡುಗಡೆ ಮಾಡಬೇಕು ಎಂಬುದೇ ನನ್ನ ಬಯಕೆಯಾಗಿದೆ” ಎಂದು ವಕೀಲೆ ನ್ಯಾಯಾಲಯಕ್ಕೆ ಹೇಳಿದ್ದರು.

ವರವಾರ ರಾವ್ ಅವರ ಅನಾರೋಗ್ಯಕ್ಕೆ ಚಿಕಿತ್ಸೆ ನೀಡಲು ತಲೋಜಾ ಜೈಲಿನಲ್ಲಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯ ಮೂಲಸೌಕರ್ಯಗಳಿಲ್ಲ ಮತ್ತು ಈ ಸಮಯದಲ್ಲಿ ಅವರು ತಮ್ಮ ಕುಟುಂಬದೊಂದಿಗೆ ಇರಬೇಕಾಗಿದೆ. ಈ ಸ್ಥಿತಿಯಲ್ಲಿ ಅವರು ವಿಚಾರಣೆಗೆ ನಿಲ್ಲಲು ಸಹ ಸಾಧ್ಯವಿಲ್ಲ. ಒಂದು ವೇಳೆ ಅವರು ಜೈಲಿನಲ್ಲಿ ಸತ್ತರೆ ಅದು ಕಸ್ಟಡಿಯಲ್ ಸಾವಾಗುತ್ತದೆ” ಎಂದು ಅವರು ನ್ಯಾಯಾಲಯಕ್ಕೆ ಹೇಳಿದ್ದರು.

ಇದನ್ನೂ ಓದಿ: ಕವಿ ವರವರ ರಾವ್ ಬಿಡುಗಡೆಗೊಳಿಸಿ: ಸಾಹಿತಿ, ಚಿಂತಕರ ಆಗ್ರಹ

ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುತ್ತಿದ್ದು, ಡಿಸೆಂಬರ್ 31, 2017 ರಂದು ಪುಣೆಯ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರಿಂದ ಮರುದಿನ ಭೀಮಾ ಕೊರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ನಡೆಯಿತು ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ, ವರವರ ರಾವ್ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಇದೇ ಪ್ರಕರಣದಲ್ಲಿ ತೀರಾ ಇತ್ತೀಚೆಗೆ ಬಂಧಿಸಲ್ಪಟ್ಟ ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತರಾದ ಫಾದರ್ ಸ್ಟಾನ್ ಸ್ವಾಮಿ, ತನಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಲೋಟಗಳನ್ನು ಹಿಡಿಯಲು ಕೈನಡುಗುತ್ತದೆ, ಆದ್ದರಿಂದ ಸ್ಟ್ರಾ ಬಳಸಿ ನೀರು ಕುಡಿಯಲು ಅನುಮತಿ ನೀಡಬೇಕು ಎಂದು ವಿನಂತಿಸಿಕೊಂಡಿದ್ದರು, ಆದರೆ ಎನ್ಐಎ ಇದಕ್ಕೆ ಪ್ರತಿಕ್ರಿಯಿಸಲು 20 ದಿನಗಳ ಕಾಲಾವಕಾಶ ಕೇಳಿತ್ತು.


ಇದನ್ನೂ ಓದಿ: ನಿರಂಕುಶಾಧಿಕಾರ ಎಂಬ ತೋಳ ಮತ್ತು ಕುರಿಮರಿಗಳಂತಿರುವ ಸಾಮಾನ್ಯರು: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...