Homeಮುಖಪುಟವರವರ ರಾವ್ ಸ್ಥಿತಿ ಗಂಭೀರವಾಗಿದೆ; ನಾನಾವತಿ ಆಸ್ಪತ್ರೆಗೆ ದಾಖಲಿಸಿ - ಬಾಂಬೆ ಹೈಕೋರ್ಟ್‌!

ವರವರ ರಾವ್ ಸ್ಥಿತಿ ಗಂಭೀರವಾಗಿದೆ; ನಾನಾವತಿ ಆಸ್ಪತ್ರೆಗೆ ದಾಖಲಿಸಿ – ಬಾಂಬೆ ಹೈಕೋರ್ಟ್‌!

- Advertisement -
- Advertisement -

ಬಂಧನದಲ್ಲಿರುವ ತೆಲುಗು ಕವಿ ವರವರ ರಾವ್ ಅವರನ್ನು 15 ದಿನಗಳ ಕಾಲ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಿ ಎಂದು ಬಾಂಬೆ ಹೈಕೋರ್ಟ್‌ ಅಧಿಕಾರಿಗಳಿಗೆ ತಿಳಿಸಿದ್ದು, ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಹೇಳಿದೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಕಳೆದ 2 ವರ್ಷಗಳಿಂದ ತಲೋಜ ಜೈಲಿನಲ್ಲಿರುವ ಇವರಿಗೆ “ಚಿಕಿತ್ಸೆಯ ಅಗತ್ಯವಿದೆ” ಎಂದು ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಮಾಧವ್ ಜಮ್ದಾರ್ ಅವರ ನೇತೃತ್ವದ ಹೈಕೋರ್ಟ್ ನ್ಯಾಯಪೀಠ ಹೇಳಿದೆ.

ವರವರ ರಾವ್ ಅವರ ವೈದ್ಯಕೀಯ ಪರೀಕ್ಷೆಯ ವಿವರಗಳನ್ನು ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಮಂಗಳವಾರ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿತ್ತು. ವರವರ ರಾವ್ ಅವರನ್ನು ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲು ಅವರ ಪತ್ನಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

80 ವರ್ಷದ ವರವರಾ ರಾವ್ ಅವರನ್ನು 2018 ರ ಜನವರಿಯಲ್ಲಿ ಬಂಧಿಸಿ, ಭಯೋತ್ಪಾದನಾ-ವಿರೋಧಿ ಕಾನೂನಾದ ಯುಎಪಿಎ ಯನ್ನು ದಾಖಲಿಸಲಾಗಿದೆ. ಅನಾರೋಗ್ಯ ಪೀಡಿತರಾದ ಅವರು ನಿರಂತರವಾಗಿ ಸೆರೆವಾಸ ಅನುಭವಿಸುವುದು ಸಂವಿಧಾನದ 21 ನೇ ಪರಿಚ್ಚೇದದ ಉಲ್ಲಂಘನೆಯಾಗಿದೆ ಮತ್ತು ಅದು ಅವರ ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಹೇಳಿತ್ತು.

ಮುಂಬೈ ಬಳಿಯ ತಲೋಜ ಜೈಲಿನಲ್ಲಿರುವ ಪ್ರಕರಣದ ಸಹ-ಆರೋಪಿ ಸ್ಟಾನ್ ಸ್ವಾಮಿ ವಕೀಲರಿಗೆ ಕರೆ ಮಾಡಿ ವರವರ ರಾವ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆಂದು ಇಂದಿರಾ ಜೈಸಿಂಗ್ ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿ: ವರವರ ರಾವ್ ಅನಾರೋಗ್ಯದ ಸ್ಥಿತಿಯನ್ನು ದುರುಪಯೋಗ ಮಾಡುತ್ತಿದ್ದಾರೆ; ಅವರಿಗೆ ಜಾಮಿನು ನೀಡಕೂಡದು: NIA

“ವರವಾರ ರಾವ್ ಅವರನ್ನು ತಲೋಜಾ ಜೈಲಿನಿಂದ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲು ನಾನು ತುರ್ತು ಮಧ್ಯಂತರ ಪರಿಹಾರವನ್ನು ಕೋರುತ್ತೇನೆ. ಅವರ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿರುವುದರಿಂದ ಅವರನ್ನು ಬಿಡುಗಡೆ ಮಾಡಬೇಕು ಎಂಬುದೇ ನನ್ನ ಬಯಕೆಯಾಗಿದೆ” ಎಂದು ವಕೀಲೆ ನ್ಯಾಯಾಲಯಕ್ಕೆ ಹೇಳಿದ್ದರು.

ವರವಾರ ರಾವ್ ಅವರ ಅನಾರೋಗ್ಯಕ್ಕೆ ಚಿಕಿತ್ಸೆ ನೀಡಲು ತಲೋಜಾ ಜೈಲಿನಲ್ಲಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯ ಮೂಲಸೌಕರ್ಯಗಳಿಲ್ಲ ಮತ್ತು ಈ ಸಮಯದಲ್ಲಿ ಅವರು ತಮ್ಮ ಕುಟುಂಬದೊಂದಿಗೆ ಇರಬೇಕಾಗಿದೆ. ಈ ಸ್ಥಿತಿಯಲ್ಲಿ ಅವರು ವಿಚಾರಣೆಗೆ ನಿಲ್ಲಲು ಸಹ ಸಾಧ್ಯವಿಲ್ಲ. ಒಂದು ವೇಳೆ ಅವರು ಜೈಲಿನಲ್ಲಿ ಸತ್ತರೆ ಅದು ಕಸ್ಟಡಿಯಲ್ ಸಾವಾಗುತ್ತದೆ” ಎಂದು ಅವರು ನ್ಯಾಯಾಲಯಕ್ಕೆ ಹೇಳಿದ್ದರು.

ಇದನ್ನೂ ಓದಿ: ಕವಿ ವರವರ ರಾವ್ ಬಿಡುಗಡೆಗೊಳಿಸಿ: ಸಾಹಿತಿ, ಚಿಂತಕರ ಆಗ್ರಹ

ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುತ್ತಿದ್ದು, ಡಿಸೆಂಬರ್ 31, 2017 ರಂದು ಪುಣೆಯ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರಿಂದ ಮರುದಿನ ಭೀಮಾ ಕೊರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ನಡೆಯಿತು ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ, ವರವರ ರಾವ್ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಇದೇ ಪ್ರಕರಣದಲ್ಲಿ ತೀರಾ ಇತ್ತೀಚೆಗೆ ಬಂಧಿಸಲ್ಪಟ್ಟ ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತರಾದ ಫಾದರ್ ಸ್ಟಾನ್ ಸ್ವಾಮಿ, ತನಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಲೋಟಗಳನ್ನು ಹಿಡಿಯಲು ಕೈನಡುಗುತ್ತದೆ, ಆದ್ದರಿಂದ ಸ್ಟ್ರಾ ಬಳಸಿ ನೀರು ಕುಡಿಯಲು ಅನುಮತಿ ನೀಡಬೇಕು ಎಂದು ವಿನಂತಿಸಿಕೊಂಡಿದ್ದರು, ಆದರೆ ಎನ್ಐಎ ಇದಕ್ಕೆ ಪ್ರತಿಕ್ರಿಯಿಸಲು 20 ದಿನಗಳ ಕಾಲಾವಕಾಶ ಕೇಳಿತ್ತು.


ಇದನ್ನೂ ಓದಿ: ನಿರಂಕುಶಾಧಿಕಾರ ಎಂಬ ತೋಳ ಮತ್ತು ಕುರಿಮರಿಗಳಂತಿರುವ ಸಾಮಾನ್ಯರು: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...