Homeಮುಖಪುಟಬಿಹಾರ ವಿಧಾನಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದತ್ತ ಬಿಜೆಪಿ ಚಿತ್ತ!

ಬಿಹಾರ ವಿಧಾನಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದತ್ತ ಬಿಜೆಪಿ ಚಿತ್ತ!

ಅಮಿತ್ ಶಾ ತಿಂಗಳಿಗೆ ಎರಡು ದಿನ ಮತ್ತು ಜೆ.ಪಿ.ನಡ್ಡಾ ಮೂರು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

- Advertisement -
- Advertisement -

ಬಿಹಾರದಲ್ಲಿ ಎನ್‌ಡಿಎ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಬಿಜೆಪಿ ಈಗ ತನ್ನ ಚಿತ್ತವನ್ನು ಸಂಪೂರ್ಣವಾಗಿ ಟಿಎಂಸಿ ಆಡಳಿತರೂಢ ಪಶ್ಚಿಮ ಬಂಗಾಳದತ್ತ ನೆಟ್ಟಿದೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೇಗಾದರೂ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಜೆಪಿ ಶತಪ್ರಯತ್ನ ನಡೆಸುತ್ತಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಧಾನಸಭಾ ಚುನಾವಣೆ ಮುಗಿಯುವವರೆಗೆ ಪ್ರತಿ ತಿಂಗಳು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿದ್ದಾರೆ.

ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ 294 ಸದಸ್ಯರ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಹೀಗಾಗಿ ಬಿಜೆಪಿಯ ಇಬ್ಬರು ಹಿರಿಯ ನಾಯಕರು ಪ್ರತಿ ತಿಂಗಳು ಪ್ರತ್ಯೇಕವಾಗಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ ಚುನಾವಣೆಗೆ ಮುಂಚಿತವಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಲಿದ್ದಾರೆ.

“ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರು ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಪ್ರತಿ ತಿಂಗಳು ಪ್ರತ್ಯೇಕವಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಆದರೆ ದಿನಾಂಕಗಳು ಇನ್ನೂ ಅಂತಿಮಗೊಂಡಿಲ್ಲ. ಅವರ ನಿಯಮಿತ ಭೇಟಿಗಳು ಪಕ್ಷದ ಕಾರ್ಯಕರ್ತರಿಗೆ ಚೈತನ್ಯ ತುಂಬುತ್ತವೆ” ಎಂದು ದಿಲೀಪ್ ಘೋಷ್ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ಪಶ್ಚಿಮ ಬಂಗಾಳದ ವೈಭವ ಮರುಸ್ಥಾಪಿಸುವ ಅಗತ್ಯವಿದೆ: ಗೃಹ ಸಚಿವ ಅಮಿತ್ ಶಾ

After BJP's Dilip Ghosh says will turn Bengal into Gujarat, TMC hits back -  India News
PC: India Today (ದಿಲೀ‌ಪ್ ಘೋಷ್)

2019 ರ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗೆದ್ದ ಬಿಜೆಪಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ಸಿನ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಿದೆ. ಹೀಗಾಗಿ ಈ ಬಾರಿ ಹೇಗಾದರೂ ಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಬಿಜೆಪಿ ಹೊಸ ಪಟ್ಟುಗಳನ್ನು ಹಾಕುತ್ತಿದೆ.

ಅಮಿತ್ ಶಾ ತಿಂಗಳಿಗೆ ಸತತ ಎರಡು ದಿನ ಮತ್ತು ಜೆ.ಪಿ.ನಡ್ಡಾ ಮೂರು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

“ಪಶ್ಚಿಮ ಬಂಗಾಳದ ಜನರು ಕಾಂಗ್ರೆಸ್, ಸಿಪಿಐ (ಎಂ) ಮತ್ತು ಟಿಎಂಸಿಗೆ ಅವಕಾಶಗಳನ್ನು ನೀಡಿದ್ದಾರೆ. ಆದರೆ, ಮೂರೂ ಪಕ್ಷಗಳು ಜನಸಾಮಾನ್ಯರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಲು ವಿಫಲವಾಗಿವೆ, ಅದು ಈಗ ಬಿಜೆಪಿಯಿಂದ ಈಡೇರಲಿದೆ” ಎಂದು ದಿಲೀಪ್ ಘೋಷ್ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಪ್ರವಾಸ: ಬಿಜೆಪಿ ಅಧಿಕಾರಕ್ಕೆ ತರಲು ಪಣತೊಟ್ಟ ಅಮಿತ್ ಶಾ

ಇನ್ನು ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ ರಾಜ್ಯವನ್ನು ಐದು ಸಾಂಸ್ಥಿಕ ವಲಯಗಳಾಗಿ ವಿಂಗಡಿಸಿ ಕೇಂದ್ರ ನಾಯಕರಿಗೆ ಉಸ್ತುವಾರಿ ವಹಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿಯ ಹಿರಿಯ ಮುಖಂಡರಾದ ಸುನಿಲ್ ದಿಯೋಧರ್, ವಿನೋದ್ ತಾವ್ಡೆ, ದುಶ್ಯಂತ್ ಗೌತಮ್, ಹರೀಶ್ ದ್ವಿವೇದಿ ಮತ್ತು ವಿನೋದ್ ಸೊಂಕರ್ ಈ ಉಸ್ತುವಾರಿ ವಹಿಸಿಕೊಂಡಿರುವ ನಾಯಕರು. ಈ ನಾಯಕರು ತಮ್ಮ ತಮ್ಮವಲಯಗಳಲ್ಲಿ ಸರಣಿ ಸಭೆಗಳನ್ನು ನಡೆಸಿ ವಾರದೊಳಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ವರದಿಯನ್ನು ಸಲ್ಲಿಸಲಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೋಲ್ಕತಾ ವಲಯದ ಉಸ್ತುವಾರಿ ವಹಿಸಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಗೌತಮ್ ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ 10 ವರ್ಷಗಳ ಆಡಳಿತವನ್ನು ಕೊನೆಗೊಳಿಸುವುದಾಗಿ ಬಿಜೆಪಿ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...