Homeಮುಖಪುಟಛತ್ ಪೂಜೆಗೆ ದೆಹಲಿ ಸರ್ಕಾರ ನಿರ್ಬಂಧ, ಹಸ್ತಕ್ಷೇಪ ಮಾಡಲ್ಲ ಎಂದ ಹೈಕೋರ್ಟ್

ಛತ್ ಪೂಜೆಗೆ ದೆಹಲಿ ಸರ್ಕಾರ ನಿರ್ಬಂಧ, ಹಸ್ತಕ್ಷೇಪ ಮಾಡಲ್ಲ ಎಂದ ಹೈಕೋರ್ಟ್

ನ. 20ರಂದು ಸಾರ್ವಜನಿಕ ಸ್ಥಳಗಳಲ್ಲಿ ಛತ್‌ ಪೂಜೆಗೆ ಅವಕಾಶ ನೀಡುವುದಿಲ್ಲ ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ನವೆಂಬರ್ 10 ರಂದು ಆದೇಶಿಸಿತ್ತು

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ದೆಹಲಿಯ ಸಾರ್ವಜನಿಕ ಸ್ಥಳಗಳಲ್ಲಿ, ಕೊಳಗಳು ಮತ್ತು ನದಿ ತೀರಗಳಲ್ಲಿ ಛತ್ ಪೂಜಾ ಆಚರಣೆಯನ್ನು ನಿಷೇಧಿಸುವ ಆಪ್ ಸರ್ಕಾರದ ನಿರ್ಧಾರಕ್ಕೆ ಮಧ್ಯ ಪ್ರವೇಶಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿ, ಅರ್ಜಿ ವಜಾಗೊಳಿಸಿದೆ.

ರಾಷ್ಟ್ರದ ರಾಜಧಾನಿಯಲ್ಲಿ ಈಗಾಗಲೇ ಕೊರೊನಾ ಸೋಂಕಿನ ಮೂರನೇ ಅಲೆ ವ್ಯಾಪಿಸುತ್ತಿದ್ದು, ದೊಡ್ಡ ಸಭೆ, ಸಂಭ್ರಮಾಚರಣೆಗಳಿಗೆ ಅವಕಾಶ ನೀಡುವುದರಿಂದ ಜನರು “ಸೂಪರ್ ಸ್ಪ್ರೆಡರ್ಸ್” ಆಗುತ್ತಾರೆ ಎಂದು ಹೈಕೋರ್ಟ್ ಹೇಳಿದೆ.

ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ) ಅಧ್ಯಕ್ಷರು ನವೆಂಬರ್ 10 ರಂದು, ನ. 20ರಂದು ಸಾರ್ವಜನಿಕ ಸ್ಥಳಗಳಲ್ಲಿ ಛತ್‌ ಪೂಜೆಗೆ ಅವಕಾಶ ನೀಡುವುದಿಲ್ಲ ಎಂದು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ದುರ್ಗಾ ಜನ್ ಸೇವಾ ಟ್ರಸ್ಟ್ ಸಲ್ಲಿಸಿದ್ದಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸುಬ್ರಮಣಿಯಂ ಪ್ರಸಾದ್ ಅವರ ನ್ಯಾಯಪೀಠ ಅರ್ಜಿ ವಜಾಗೊಳಿಸಿತು.

ಇದನ್ನೂ ಓದಿ: ಬಿಬಿಎಂಪಿ ಗೆದ್ದರೆ ದೆಹಲಿ ಮಾದರಿಯ ’ಮೊಹಲ್ಲಾ ಕ್ಲಿನಿಕ್’ ಆರಂಭ: ಆಮ್ ಆದ್ಮಿ ಪಕ್ಷ

ಛತ್ ಪೂಜೆಗೆ 1,000 ಜನರ ಸಭೆ ನಡೆಸಲು ದುರ್ಗಾ ಜನ್ ಸೇವಾ ಟ್ರಸ್ಟ್ ಅನುಮತಿ ಕೋರಿತು. ಇದಕ್ಕೆ ನ್ಯಾಯಪೀಠ, “ಮದುವೆಗಳಲ್ಲಿ ಪಾಲ್ಗೊಳ್ಳುವ ಅತಿಥಿಗಳ ಸಂಖ್ಯೆಯನ್ನು 50ಕ್ಕೆ ಸೀಮಿತಗೊಳಿಸಿ ಇಂದು ದೆಹಲಿ ಸರ್ಕಾರವು ಆದೇಶ ಹೊರಡಿಸಿರುವಾಗ, ನಿಮಗೆ ಛತ್ ಪೂಜೆಗೆ ಬೇಕಾಗಿರುವುದು 1,000 ವ್ಯಕ್ತಿಗಳು ಮಾತ್ರ. ಹೇಗೆ ಬರುತ್ತಾರೆ?” ಎಂದು ವ್ಯಂಗ್ಯವಾಡಿದೆ.

ದೆಹಲಿಯಲ್ಲಿ ಸೋಂಕು ಹರಡುತ್ತಿರುವುದನ್ನು ಪರಿಗಣಿಸಿ ಅಧಿಕಾರಿಗಳು ಈ ಆದೇಶವನ್ನು ಅಂಗೀಕರಿಸಿದ್ದಾರೆ ಹಾಗಾಗಿ ಅರ್ಜಿಯು ಅರ್ಹವಲ್ಲ ಎಂದು ನ್ಯಾಯಪೀಠ ಹೇಳಿದೆ.

ದೆಹಲಿಯಲ್ಲಿ ಸೋಂಕಿನ ಪ್ರಮಾಣವು ಪ್ರತಿದಿನ 7,800 ರಿಂದ 8,593 ರ ನಡುವೆ ಸುಳಿದಾಡುತ್ತಿದೆ. ಸಾವಿನ ಪ್ರಮಾಣವು ಎರಡು ಅಂಕಿ ಅಂಶಗಳಲ್ಲಿದೆ. 42,000 ಸಕ್ರಿಯ ಪ್ರಕರಣಗಳಿವೆ. ಅರ್ಜಿದಾರರು ನಗರದ ಪ್ರಸ್ತುತ ಪರಿಸ್ಥಿತಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕಾಗಿತ್ತು. ಇಂತಹ ಸನ್ನಿವೆಶದಲ್ಲಿ ಅರ್ಜಿ ಅರ್ಹವಲ್ಲ” ಎಂದು ಹೈಕೋರ್ಟ್‌ ತಿಳಿಸಿದೆ.

‌ಛತ್ ಪೂಜೆಯನ್ನು ರಾಜಧಾನಿಯಲ್ಲಿ ಸಾವಿರಾರು ಮಂದಿ ಆಚರಿಸುತ್ತಾರೆ, ವಿಶೇಷವಾಗಿ ಬಿಹಾರ ಮತ್ತು ಪೂರ್ವ ಉತ್ತರ ಪ್ರದೇಶದಿಂದ ರಾಜಧಾನಿಗೆ ವಲಸೆ ಬಂದಿರುವ ಜನರು ಈ ಆಚರಣೆಯಲ್ಲಿ ತೊಡಗುತ್ತಾರೆ.


ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ 3ನೇ ಅಲೆ ವ್ಯಾಪಕವಾಗಿದೆ- ಸತ್ಯೇಂದರ್‌ ಜೈನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...