Homeಮುಖಪುಟನರೇಗ ಕಾರ್ಮಿಕರಿಗೆ ದುಡಿಮೆಯ ಹಣ ತಲುಪಿಸುವಲ್ಲಿ ವಿಳಂಬ: ಸಂಶೋಧನಾ ವರದಿ

ನರೇಗ ಕಾರ್ಮಿಕರಿಗೆ ದುಡಿಮೆಯ ಹಣ ತಲುಪಿಸುವಲ್ಲಿ ವಿಳಂಬ: ಸಂಶೋಧನಾ ವರದಿ

ದುಡಿಮೆಯ ಹಣ ಸಿಗದವರಲ್ಲಿ 70% ಜನರಿಗೆ ಹಣ ತಲಪದೆ ಇರುವುದಕ್ಕೆ ಕಾರಣ ಕೂಡಾ ತಿಳಿದಿಲ್ಲ

- Advertisement -
- Advertisement -

ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ಪಾವತಿ ವಿಳಂಬವಾಗುತ್ತಿದೆ, ಕಾರ್ಮಿಕರು ತಮ್ಮ ದುಡಿಮೆಯ ಹಣವನ್ನು ಪಡೆಯಲು ಕಷ್ಟಪಡುತ್ತಿದ್ದಾರೆ, ಎಷ್ಟೋ ಜನಕ್ಕೆ ಈ ಹಣ ಕೊನೆಯ ಹಂತದಲ್ಲಿ ಸರಿಯಾಗಿ ತಲುಪದೆ ವಾಪಾಸಾಗುತ್ತಿದೆ, ದುಡಿಮೆಯ ಹಣ ಸಿಗದವರಲ್ಲಿ 70% ಜನರಿಗೆ ಹಣ ತಲಪದೆ ಇರುವುದಕ್ಕೆ ಕಾರಣ ಕೂಡಾ ತಿಳಿದಿಲ್ಲ ಹೀಗೆ ಹತ್ತು ಹಲವು ಸಂಗತಿಗಳನ್ನು ಬಿಚ್ಚಿಡುತ್ತದೆ ಇತ್ತೀಚೆಗಿನ ಸಂಶೋಧನಾ ವರದಿ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(MNREGA)ಯ ಈ ಯೋಜನೆಯಡಿ ಭಾರತದ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ವರ್ಷಕ್ಕೆ 100 ದಿನಗಳ ಉದ್ಯೋಗವನ್ನು ಒದಗಿಸುತ್ತದೆ. ಕೇಂದ್ರದ ಈ ಜನಪ್ರಿಯ ಯೋಜನೆಯಿಂದ ಹಳ್ಳಿಯಿಂದ ಕೆಲಸ ಹುಡುಕಿ ನಗರಕ್ಕೆ ವಲಸೆ ಬರುವ ಅನಿಶ್ಚಿತತೆ ಸೇರಿದಂತೆ ನಿರುದ್ಯೋಗ ಸಮಸ್ಯೆಗೆ ಕೂಡಾ ತುಸು ಪರಿಹಾರ ಸಿಕ್ಕಿತ್ತು. ಈ ಯೋಜನೆಯಡಿ ದುಡಿದವರಿಗೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್ (ಡಿಬಿಟಿ) ಉಪಕ್ರಮದಡಿಯಲ್ಲಿ ಭಾರತ ಸರ್ಕಾರವು ಪರಿಹಾರವನ್ನು ನೇರವಾಗಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುತ್ತದೆ.

ಇದನ್ನೂ ಓದಿ:ಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ 

ಈ ಕಾರ್ಮಿಕರ ಬಗ್ಗೆ ಲಿಬ್‌ಟೆಕ್ ಇಂಡಿಯಾ ಸಂಸ್ಥೆ, ಬೆಂಗಳೂರಿನ ಅಜೀಂ ಪ್ರೇಂಜಿ ವಿಶ್ವವಿದ್ಯಾನಿಲಯದ ಅನುದಾನದಿಂದ ಸಮೀಕ್ಷೆಯನ್ನು ನಡೆಸಿದ್ದು “ಲೆಂತ್‌ ಆಫ್‌ ದಿ ಲಾಸ್ಟ್ ಮೈಲ್- ನರೇಗ ಪಾವತಿಯಲ್ಲಿನ ವಿಳಂಬ ಮತ್ತು ಅಡಚಣೆಗಳು” ಎಂಬ ಸಂಶೋಧನಾ ವರದಿಯನ್ನು ಬಿಡುಗಡೆ ಮಾಡಿದೆ. ಈ ಸಂಸ್ಥೆ 2018 ರ ಸಪ್ಟೆಂಬರ್‌ ಮತ್ತು ನವೆಂಬರ್‌ ನಡುವೆ ಆಂಧ್ರಪ್ರದೇಶ, ಜಾರ್ಖಂಡ್ ಮತ್ತು ರಾಜಸ್ಥಾನಗಳಲ್ಲಿ ಒಟ್ಟು 1947 ನರೇಗ ಕಾರ್ಮಿಕರನ್ನು ಸಮೀಕ್ಷೆಯಲ್ಲಿ ಒಳಗೊಂಡಿದೆ.

ಸರ್ಕಾರ ಪಾವತಿಸುವ ಹಣವನ್ನು ಪಡೆಯಲು ಬ್ಯಾಂಕು, ಗ್ರಾಹಕ ಸೇವಾಕೇಂದ್ರ, ಇತರ ವ್ಯವಹಾರ ಕೇಂದ್ರ, ಅಂಚೆ ಕಚೇರಿ ಸೇರಿದಂತೆ ಎಟಿಎಂಗಳಲ್ಲಿ ಉದ್ಯೋಗಿಗಳು ಪಡುವ ಕಷ್ಟಗಳ ಬಗ್ಗೆ ಕೂಡಾ ಸಮೀಕ್ಷ ನಡೆಸಲಾಗಿದೆ. ಒಟ್ಟಾರೆಯಾಗಿ, ಪರಿಹಾರ ವಿತರಣೆಯ ಸಮಯದಲ್ಲಿ, ಆಂಧ್ರ ಪ್ರದೇಶದ ಕಾರ್ಮಿಕರು ಕಡಿಮೆ ಕಷ್ಟಗಳನ್ನು ಅನುಭವಿಸಿದರೆ, ಜಾರ್ಖಂಡ್‌‌ನಲ್ಲಿರುವವರು ಹೆಚ್ಚು ಕಷ್ಟಗಳನ್ನು ಎದುರಿಸುತ್ತಾರೆ ಎಂದು ಸಮೀಕ್ಷೆಯು ತಿಳಿಸುತ್ತದೆ.

ಮೂರು ರಾಜ್ಯಗಳಲ್ಲಿ ಆಂಧ್ರಪ್ರದೇಶದಲ್ಲಿ ಮಾತ್ರ ಅಂಚೆ ಕಚೇರಿಗಳನ್ನು ಬಳಕೆ ಮಾಡುತ್ತಿದ್ದು, ಅಲ್ಲಿನ ಸೇವೆಗಳ ಗುಣಮಟ್ಟದಲ್ಲಿದ್ದು ಕಾರ್ಮಿಕರು ಹೆಚ್ಚು ತೃಪ್ತರಾಗಿದ್ದಾರೆ. ಮೂರೂ ರಾಜ್ಯಗಳಲ್ಲಿರುವ ಗ್ರಾಮೀಣ ಬ್ಯಾಂಕುಗಳಲ್ಲೇ ಹೆಚ್ಚು ಜನದಟ್ಟಣೆ ಇರುತ್ತವೆ. ಬ್ಯಾಂಕುಗಳು ತಮ್ಮ ಪಂಚಾಯತ್‌ನಿಂದ ದೂರದಲ್ಲಿರುವುದು ಕಾರ್ಮಿಕರಿಗೆ ಹಣ ಪಡೆಯುವುದು ತ್ರಾಸದಾಯಕವಾಗುತ್ತದೆ. ಅನೇಕ ಸಂದರ್ಭಗಳಲ್ಲಿ, ಕಾರ್ಮಿಕರು ತಮ್ಮ ವೇತನವನ್ನು ಪಡೆಯಲು ಅನೇಕ ಸಾರಿ ಅಲೆದಾಡಬೇಕಾಗುತ್ತದೆ.

ಇದನ್ನೂ ಓದಿ: ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಜಾರ್ಖಂಡ್‌‌ನಲ್ಲಿ 42% ಮತ್ತು ರಾಜಸ್ಥಾನದಲ್ಲಿ 38% ಜನರು ಬ್ಯಾಂಕುಗಳಿಂದ ತಮ್ಮ ವೇತನವನ್ನು ಪಡೆಯಲು 4 ಗಂಟೆಗಳಿಗಿಂತ ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತಾರೆ. ಇದಕ್ಕೆ ವಿರುದ್ಧವಾಗಿ, ಇದು ಆಂಧ್ರಪ್ರದೇಶದಲ್ಲಿ ಕೇವಲ 2% ಜನರಿಗಷ್ಟೇ ಆಗುತ್ತದೆ. ಒಟ್ಟಾರೆಯಾಗಿ, ಅಂದಾಜು 45% ಜನರು ತಮ್ಮ ಹಣ ಪಡೆಯಲು ಬ್ಯಾಂಕ್‌ಗೆ ಅನೇಕ ಬಾರಿ ಭೇಟಿ ನೀಡಬೇಕಾಗುತ್ತದೆ.

ಗ್ರಾಹಕ ಸೇವಾ ಕೇಂದ್ರ ಹಾಗೂ ಇತರ ವ್ಯವಹಾರ ಕೇಂದ್ರಗಳು ಬ್ಯಾಂಕಿಗಿಂತಲೂ ಉತ್ತಮ ಪರ್ಯಾಯವಾಗಿ ಕಾಣಿಸಿಕೊಂಡಿದ್ದರೂ, ಅಂದಾಜು 40% ಜನರು ಬಯೋ ಮೆಟ್ರಿಕ್ ವೈಫಲ್ಯದಿಂದಾಗಿ ಅನೇಕ ಬಾರಿ ಅಲ್ಲಿಗೆ ಭೇಟಿ ನೀಡಬೇಕಾಗುತ್ತದೆ. ಈ ಕೇಂದ್ರಗಳಲ್ಲಿ ಪಾಸ್‌ಬುಕ್ ಅಪ್ಡೇಟ್ ಸೌಲಭ್ಯವನ್ನು ಹೊಂದಿಲ್ಲ. ಇದಕ್ಕೆ ಹೋಲಿಸಿದರೆ, ಆಂದ್ರ ಪ್ರದೇಶದಲ್ಲಿ ಅಂಚೆ ಖಾತೆಗಳನ್ನು ಹೊಂದಿರುವ ಜನರು ತಮ್ಮ ಪ್ರತಿ ವಹಿವಾಟಿಗೆ ಪಾಸ್‌ಬುಕ್‌ಗಳನ್ನು ನವೀಕರಿಸುತ್ತಾರೆ. ಆಂಧ್ರ ಪ್ರದೇಶದಲ್ಲಿ ಗ್ರಾಹಕ ಸೇವಾ ಕೇಂದ್ರದಲ್ಲಿ ಹಣ ಪಡೆದಾಗ ರಶೀದಿಗಳನ್ನು ಪಡೆದರೆ, ಜಾರ್ಖಂಡ್ ಮತ್ತು ರಾಜಸ್ಥಾನ್‌ಗಳಲ್ಲಿ ರಶೀದಿಗಳನ್ನು ವಿರಳವಾಗಿ ನೀಡಲಾಗುತ್ತದೆ.

ಈ ಗ್ರಾಹಕ ಸೇವಾ ಕೇಂದ್ರಗಳಲ್ಲಿ ಕೆಲವು ಕಾರ್ಮಿಕರಿಂದ ಅಲ್ಲಿ ವಹಿವಾಟು ನಡೆಸಲು ಶುಲ್ಕ ಪಡೆಯುತ್ತಾರೆ. ಜಾರ್ಖಂಡ್‌ನಲ್ಲಿ ಇದು ಅತ್ಯಧಿಕವಾಗಿದ್ದು, ಅಲ್ಲಿ 45% ಜನರಿಗೆ ಶುಲ್ಕ ವಿಧಿಸಲಾಗುತ್ತದೆ. ಇದರಾಚೆಗೂ ಕಾರ್ಮಿಕರು ಹೆಚ್ಚು ನಂಬಿಕೆ ಉಳಿಸಿರುವ ಸಂಸ್ಥೆಯಾಗಿ ಬ್ಯಾಂಕುಗಳು ಉಳಿದಿವೆ ಎಂದು ಸಮೀಕ್ಷಯು ಉಲ್ಲೇಖಿಸಿದೆ.

ಇದನ್ನೂ ಓದಿ: ಭಾರತದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯ ಮೇಲೆ RCEP ಪರಿಣಾಮಗಳು – ಡಾ. ಬಿ.ಸಿ.ಬಸವರಾಜ್

 

ನರೇಗ
PC: PTI

ಆಧಾರ್ ಆಧಾರಿತ ಪಾವತಿ ಮತ್ತು ಕೇಂದ್ರೀಕರಣ ವ್ಯವಸ್ಥೆಯಿಂದಾಗಿ ಕಾರ್ಮಿಕರಿಗೆ ಕೆಲವೊಮ್ಮೆ ತಮ್ಮ ವೇತನ ಎಲ್ಲಿ ಬರುತ್ತದೆ ಎಂಬ ಮಾಹಿತಿಯಾಗಲೀ ಮತ್ತು ಅವರ ಪಾವತಿಗಳನ್ನು ತಿರಸ್ಕರಿಸುವುದರ ಬಗ್ಗೆ ಸ್ವಲ್ಪವು ಸುಳಿವು ಹೊಂದಿರುವುದಿಲ್ಲ ಎಂದು ಸಮೀಕ್ಷೆಯು ಹೇಳುತ್ತದೆ. ಸರಿಯಾದ ಖಾತೆ ಸಂಖ್ಯೆಗಳು ಇಲ್ಲದಿರುವುದು ಹಾಗೂ ಈ ಸಂಖ್ಯೆಗಳಿಗೆ ಆಧಾರ್‌‌ ಮ್ಯಾಪಿಂಗ್‌‌ನ ತಾಂತ್ರಿಕ ಅಡಚಣೆಯಿಂದಾಗಿ ಇವರ ಪಾವತಿಯನ್ನು ತಿರಸ್ಕರಿಸಲಾಗುತ್ತಿದೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ಜುಲೈ 2020 ರಂತೆ, ಕಳೆದ ಐದು ವರ್ಷಗಳಲ್ಲಿ, ಸುಮಾರು ರೂ. 4,800 ಕೋಟಿ ಮೌಲ್ಯದ ಪಾವತಿಗಳನ್ನು ಭಾರತದಾದ್ಯಂತ ತಿರಸ್ಕರಿಸಲಾಗಿದೆ ಮತ್ತು ಸುಮಾರು 1,274 ಕೋಟಿ ರೂ.ಗಳನ್ನು ಕಾರ್ಮಿಕರಿಗೆ ಪಾವತಿಸಲು ಬಾಕಿ ಇದೆ. ಒಟ್ಟಾರೆ ಬ್ಯಾಂಕಿಂಗ್ ಬಗ್ಗೆ ಮತ್ತು ತಮ್ಮ ಹಕ್ಕುಗಳ ಬಗ್ಗೆ ಇವರಲ್ಲಿ ಜಾಗೃತಿ ಕಡಿಮೆಯಾಗಿದೆ. ಈ ಎಲ್ಲಾ ಅನಾನುಕೂಲತೆಗಳ ಹೊರತಾಗಿಯೂ ಕಾರ್ಮಿಕರು ಬ್ಯಾಂಕ್‌ಗಳಿಗೆ ತಮ್ಮ ಆದ್ಯತೆ ನೀಡುತ್ತಾರೆ. ಸಂಬಳ ಪಡೆಯುವಲ್ಲಿ ತೊಂದರೆ ಆದವರಲ್ಲಿ ಕೇವಲ 28% ಜನರಷ್ಟೇ ದೂರು ನೀಡುತ್ತಾರೆ ಎಂದು ಸಮೀಕ್ಷೆ ತಿಳಿಸುತ್ತದೆ. ಬಹುತೇಕ ಮಂದಿ ಕಾರ್ಮಿಕರಿಗೆ ಮೌಖಿಕ ದೂರು ನೀಡಲು ಮಾತ್ರ ಸಾಧ್ಯವಾಗುತ್ತದೆ ಎಂದು ಕೂಡ ವರದಿ ತಿಳಿಸಿದೆ.

ಇದನ್ನೂ ಓದಿ: ಮಹಿಳಾ ರೈತರ ಹಿತದೃಷ್ಟಿಗೆ ಮಾರಕವಾದ ಕೃಷಿ ಕಾಯ್ದೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...