Homeಮುಖಪುಟಮಧ್ಯಪ್ರದೇಶ: ಹಸುಗಳ ಕಲ್ಯಾಣಕ್ಕಾಗಿ 'ಗೋವು ಸಚಿವ ಸಂಪುಟ' ರಚಿಸಿದ ಮುಖ್ಯಮಂತ್ರಿ!

ಮಧ್ಯಪ್ರದೇಶ: ಹಸುಗಳ ಕಲ್ಯಾಣಕ್ಕಾಗಿ ‘ಗೋವು ಸಚಿವ ಸಂಪುಟ’ ರಚಿಸಿದ ಮುಖ್ಯಮಂತ್ರಿ!

ಅಗರ್ ಮಾಲ್ವಾದಲ್ಲಿನ ಕಾಮಧೇನು ಗೋವು ಅಭರಣ್ಯವು ಭಾರತದ ಮೊದಲ ಹಸು ಅಭಯಾರಣ್ಯವಾಗಿದ್ದು, ಇದನ್ನು ಚೌಹಾಣ್ ಸರ್ಕಾರ 2017 ರಲ್ಲಿ ಸ್ಥಾಪಿಸಿತ್ತು

- Advertisement -
- Advertisement -

ಹಸುಗಳ ರಕ್ಷಣೆ ಮತ್ತು ಕಲ್ಯಾಣಕ್ಕಾಗಿ ಮಧ್ಯಪ್ರದೇಶ ಸರ್ಕಾರ “ಕೌ ಕ್ಯಾಬಿನೆಟ್” ರಚಿಸಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬುಧವಾರ ಟ್ವಿಟ್ಟರ್‌ನಲ್ಲಿ ಪ್ರಕಟಿಸಿದ್ದಾರೆ. ಈ ಸಮಿತಿಯ ನಿಖರವಾದ ಕರ್ತವ್ಯಗಳ ಬಗ್ಗೆ ಇನ್ನೂ ಯಾವುದೇ ವಿವರಗಳನ್ನು ನೀಡಿಲ್ಲ.

ಪಶುಸಂಗೋಪನೆ, ರೈತರು ಮತ್ತು ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳು ಸಂಪುಟದ ಭಾಗವಾಗಲಿವೆ ಎಂದು ಚೌಹಾಣ್ ಹೇಳಿದ್ದಾರೆ.

“ರಾಜ್ಯದಲ್ಲಿ ಜಾನುವಾರುಗಳ ರಕ್ಷಣೆ ಮತ್ತು ಉತ್ತೇಜನಕ್ಕಾಗಿ” ಕ್ಯಾಬಿನೆಟ್ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಚೌಹಾಣ್ ಬರೆದಿದ್ದಾರೆ. “ಪಶುಸಂಗೋಪನೆ, ಅರಣ್ಯ, ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ, ಕಂದಾಯ, ಗೃಹ ಮತ್ತು ರೈತರ ಕಲ್ಯಾಣ ಇಲಾಖೆಯು ಇದರ ಭಾಗವಾಗಲಿವೆ” ಎಂದಿದ್ದಾರೆ.

“ಈ ಸಂಪುಟದ ಮೊದಲ ಸಭೆ ನವೆಂಬರ್ 22 ರಂದು ಮಧ್ಯಾಹ್ನ 12 ಗಂಟೆಗೆ ಗೋಪಾಷ್ಟಮಿ ದಿನ ಅಗರ್ ಮಾಲ್ವಾದ ಗೋವು ಅಭಯಾರಣ್ಯದಲ್ಲಿ ನಡೆಸಲಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕಠಿಣ ಶಿಕ್ಷೆ ಎಂದ ಮಧ್ಯಪ್ರದೇಶ: ರಾಜ್ಯ ಬಿಜೆಪಿ V/S ಕೇಂದ್ರ ಬಿಜೆಪಿ- ದ್ವಂದ್ವ!

ಅಗರ್ ಮಾಲ್ವಾದಲ್ಲಿನ ಕಾಮಧೇನು ಗೋವು ಅಭರಣ್ಯವು ಭಾರತದ ಮೊದಲ ಹಸು ಅಭಯಾರಣ್ಯವಾಗಿದ್ದು, ಇದನ್ನು ಚೌಹಾಣ್ ಸರ್ಕಾರ 2017 ರಲ್ಲಿ ಸ್ಥಾಪಿಸಿತು. ಇದನ್ನು ಮಧ್ಯಪ್ರದೇಶ ಗೋವು ಸಂವರ್ಧನ ಮಂಡಳಿಯು 32 ಕೋಟಿ ರೂಪಾಯಿಯಲ್ಲಿ ಅಭಿವೃದ್ಧಿ ಪಡಿಸಿತ್ತು.

472 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಅಭಯಾರಣ್ಯವನ್ನು ನಂತರ ಆರ್ಥಿಕ ಬಿಕ್ಕಟ್ಟಿನಿಂದ ಖಾಸಗೀಕರಣಗೊಳಿಸಲಾಯಿತು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಮಧ್ಯಪ್ರದೇಶದ ಬಿಜೆಪಿ ವಕ್ತಾರ ದೀಪಕ್ ವಿಜಯವರ್ಗಿಯಾ “ಗೋವು ಕ್ಯಾಬಿನೆಟ್ ರಚಿಸುವ ನಿರ್ಧಾರವು ಹಸುಗಳ ಸಾಮರ್ಥ್ಯ ಮತ್ತು ಅದರ ಮೂಲಕ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಮೂಲಕ ಗ್ರಾಮೀಣ ಉದ್ಯೋಗದ ಪರ್ಯಾಯ ಮೂಲವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ” ಎಂದು ಹೇಳಿದ್ದಾರೆ.

“ಉದ್ಯೋಗವನ್ನು ಒದಗಿಸುವ ಏಕೈಕ ಪರಿಹಾರ ಕೈಗಾರಿಕೀಕರಣ ಒಂದೇ ಅಲ್ಲ” ಎಂದು ವಿಜಯವರ್ಗಿಯಾ ಹೇಳಿದರು. “ಹಸುಗಳನ್ನು ಸುತ್ತುವರೆದಿರುವ ಆರ್ಥಿಕತೆಯು ಸುಸ್ಥಿರವಾಗಿದ್ದು, ಇದು 2,000 ವರ್ಷಗಳಿಂದಲೂ ನಡೆಯುತ್ತಿದೆ. ಈ ಕ್ಯಾಬಿನೆಟ್ ಮೂಲಕ, ಗ್ರಾಮೀಣ ವ್ಯವಸ್ಥೆಯಲ್ಲಿ ಆದಾಯವನ್ನು ಹೆಚ್ಚಿಸಲು ಗೋವು-ಆರ್ಥಿಕತೆಯನ್ನು ಅಭಿವೃದ್ಧಿಪಡಿಸಲು ಸರ್ಕಾರವು ಸುಸ್ಥಿರ ಮೂಲಸೌಕರ್ಯಗಳನ್ನು ಒದಗಿಸುತ್ತದೆ” ಎಂದಿದ್ದಾರೆ.

ಇನ್ನು ಈ ಕುರಿತು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಕೂಡ ಪ್ರತಿಕ್ರಿಯೆ ನೀಡಿದ್ದು, “ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು 15 ತಿಂಗಳು ಗೊವುಗಳಿಗೆ ಆಶ್ರಯ ತಾಣ ನಿರ್ಮಿಸುವ ಬಗ್ಗೆ ಮಾತನಾಡಿದವು. ಆದರೆ  ಅವರಿಂದ 15 ಗೋವು ಆಶ್ರಯ ತಾಣಗಳನ್ನು ನಿರ್ಮಿಸಲಾಗಲಿಲ್ಲ” ಎಂದು ಟೀಕಿಸಿದ್ದಾರೆ.


ಇದನ್ನೂ ಓದಿ: ಜೈಲಿನಲ್ಲಿರುವ ಸ್ಟ್ಯಾನ್‌ ಸ್ವಾಮಿಗೆ ಅಗತ್ಯ ಸೌಲಭ್ಯ ಖಚಿತ ಪಡಿಸಲು NHRC ಮಧ್ಯಪ್ರವೇಶಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...