Homeಮುಖಪುಟಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಪಟಾಕಿ ನಿಷೇಧ ಸ್ವಾಗತಿಸಿದ್ದ ಐಪಿಎಸ್ ಅಧಿಕಾರಿ ಡಿ.ರೂಪ ವಿರುದ್ಧ ಮಾತನಾಡುವ ಸಂದರ್ಭದಲ್ಲಿ ಕಂಗನಾ ರಾಣಾವತ್ ಮೀಸಲಾತಿಯನ್ನು ಎಳೆದುತಂದು ವಿವಾದಕ್ಕೀಡಾಗಿದ್ದಾರೆ.

- Advertisement -
- Advertisement -

ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧದ ಕುರಿತು ಆರಂಭವಾದ ಚರ್ಚೆ ಕೊನೆಗೆ ಇವು ಮೀಸಲಾತಿಯ ಅಡ್ಡಪರಿಣಾಮಗಳು, ಮೀಸಲಾತಿ ತೆಗೆಯಬೇಕು ಎಂಬಲ್ಲಿಗೆ ಬಂದು ತಲುಪಿವೆ. ಅದರಲ್ಲಿಯೂ ಸದಾ ವಿವಾದದಲ್ಲಿರುವ ಬಾಲಿವುಟ್‌ ನಟಿ ಕಂಗನಾ ರಾಣವತ್ ಮೀಸಲಾತಿಯ ವಿರುದ್ಧ ಟ್ವೀಟ್‌ ಮಾಡುವ ಮೂಲಕ ತೀವ್ರ ಟೀಕೆಗೆ ಒಳಗಾಗಿದ್ದಾರೆ.

ದೀಪಾವಳಿ ಸಂದರ್ಭದಲ್ಲಿ ಕೋವಿಡ್ ಹರಡುವ ಭೀತಿ ಮತ್ತು ಪರಿಸರ ಮಾಲಿನ್ಯದ ದೃಷ್ಟಿಯಿಂದ ಕೆಲ ರಾಜ್ಯಗಳು ಪಟಾಕಿ ನಿಷೇಧ ಹೇರಿದ್ದವು. ಆಗ ಕರ್ನಾಟಕದ ಐಪಿಎಸ್ ಅಧಿಕಾರಿ ಡಿ. ರೂಪರವರು “ಪಟಾಕಿ ನಿಷೇದ ಸರಿಯಾದ ಕ್ರಮ. ಇದನ್ನು ಕೆಲವರು ಹಿಂದೂ ಧರ್ಮದ ವಿರುದ್ಧ ಪಿತೂರಿ ಎನ್ನುತ್ತಿದ್ದಾರೆ. ಹಿಂದೂ ಧರ್ಮದ ಯಾವುದಾದರೂ ಪುರಾತನ ಗ್ರಂಥಗಳಲ್ಲೋ, ಶಾಸ್ತ್ರಗಳಲ್ಲೋ ಪಟಾಕಿ ಉಲ್ಲೇಖ ಇದ್ದರೆ ಕೊಡಿ, ನಾನು ಕ್ಷಮೆ ಕೇಳುತ್ತೇನೆ, ಇಲ್ಲವಾದಲ್ಲಿ ನೀವು ಕ್ಷಮೆ ಕೇಳಿ. ಸ್ವಯಂ ಹಿಂದುತ್ವವಾದಿಗಳು ಅಂದುಕೊಂಡವರು ಇತರ ಹಿಂದುಗಳನ್ನು ದಾರಿತಪ್ಪಿಸಬೇಡಿ” ಎಂದು ಫೇಸ್‌ಬುಕ್‌ನಲ್ಲಿ ದೀರ್ಘ ಪೋಸ್ಟ್ ಒಂದನ್ನು ಹಾಕಿದ್ದರು.

ಈ ಕುರಿತು ಟ್ವಿಟ್ಟರ್‌ನಲ್ಲಿ ದೀರ್ಘ ವಾದ – ವಿವಾದ ಆರಂಭವಾಗಿತ್ತು. ಆ ಸಂದರ್ಭದಲ್ಲಿ ತಮ್ಮೊಡನೆ ಅನುಚಿತವಾಗಿ ವರ್ತಿಸಿದರು ಎಂದು ಆರೋಪಿಸಿ ‘ಟ್ರು ಇಂಡೋಲಜಿ’ ಖಾತೆ ಬ್ಲಾಕ್ ಮಾಡುವಂತೆ ಡಿ. ರೂಪರವರು ದೂರು ನೀಡಿದ್ದರು. ಆ ಆಧಾರದಲ್ಲಿ ಟ್ವಿಟ್ಟರ್ ಆ ಖಾತೆಯನ್ನು ಬ್ಲಾಕ್ ಮಾಡಿತ್ತು. ಆಗ ಕೆಲವರು #BringBackTrueIndology ಎಂದು ಟ್ವಿಟ್ಟರ್ ಟ್ರೆಂಡ್ ಮಾಡಿದ್ದರು.

ಆ ಸಮಯದಲ್ಲಿ ಡಿ.ರೂಪರವರ ವಿರುದ್ಧ ಸರಣಿ ಟ್ವೀಟ್‌ಗಳನ್ನು ಮಾಡಿದ ಕಂಗನಾ ರಾಣವತ್ “ನೀವೆಲ್ಲಾ ಮೀಸಲಾತಿ ಅಡ್ಡಪರಿಣಾಮಗಳು” ಎಂದು ಮೂದಲಿಸಿದ್ದಾರೆ. ಯೋಗ್ಯರಲ್ಲದವರಿಗೆ ಅಧಿಕಾರ ದೊರೆತರೆ ಅವರು ಸಮಾಜದಲ್ಲಿನ ಗಾಯಗಳನ್ನು ಶಮನಗೊಳಿಸುವ ಬದಲು ಮತ್ತಷ್ಟು ವ್ರಣಗೊಳಿಸುತ್ತಾರೆ. ರೂಪರವರ ವೈಯಕ್ತಿಕ ಬದುಕಿನ ಬಗ್ಗೆ ನನಗೆ ಹೆಚ್ಚು ತಿಳಿದಿಲ್ಲ, ಆದರೆ ಅವರು ಅಸಾಮರ್ಥ್ಯದಿಂದಾಗಿ ಹತಾಶೆಗೊಳಗಾಗಿರುವುದಂತೂ ಖಾತ್ರಿ ಇದೆ” ಎಂದು ಟ್ವೀಟ್‌ ಮಾಡಿದ್ದರು.

ಕಂಗನಾರವರ ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಜಾತಿ ಪದ್ದತಿ, ಮೀಸಲಾತಿಯ ಬಗ್ಗೆ ಅರಿವಿರದೇ ಏಕೆ ಯಾವಾಗಲೂ ಸಂವಿಧಾನ ಮತ್ತು ಮೀಸಲಾತಿಯ ವಿರುದ್ಧ ಮಾತನಾಡುತ್ತೀರಿ? ಸರಿ ನೀವು ಎಲ್ಲಿಯವರೆಗೂ ಓದಿದ್ದೀರಿ? 16ನೇ ವಯಸ್ಸಿಗೆ ನಾವು SSLC ಓದುತ್ತಿದ್ದಾಗಲೇ ಬಾಲಿವುಡ್ ಪ್ರವೇಶಿಸಿದರೆ ಓದೋಕೆ ಸಮಯವಾದರೂ ಎಲ್ಲಿ ಸಿಗುತ್ತದೆ, ಸ್ವಲ್ಪ ಇತಿಹಾಸ ಓದಿ ಎಂದು ಕಿಡಿಕಾರಿದ್ದಾರೆ.

ಮೀಸಲಾತಿಯ ಬಗ್ಗೆ ನಿಮಗೆ ಮಾತನಾಡುವ ಹಕ್ಕಿಲ್ಲ. ಇಂದು ಮೀಸಲಾತಿ ಆಧಾರದಲ್ಲಿ ಉನ್ನತ ಹುದ್ದೆಗಳಿಗೆ ಬರುವವರು ಸಹ ಸಾಕಷ್ಟು ಪ್ರತಿಭಾವಂತರು, ಕಠಿಣ ಶ್ರಮ ಹಾಕುವವರಾಗಿದ್ದಾರೆ. ಮೀಸಲಾತಿ ಪಡೆಯುವವರ ಕಟ್‌ಆಫ್ ಅಂಕ ಕೂಡ ಸಾಮಾನ್ಯ ವರ್ಗದ ಅಭ್ಯರ್ಥಿಗಳ ಸನಿಹವೇ ಇರುತ್ತದೆ. ಅಷ್ಟಿಲ್ಲದೇ ಯಾವ ಹುದ್ದೆ ಸಹ ಪಡೆಯಲು ಸಾಧ್ಯವಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಿ. ಒಬ್ಬ ಐಪಿಎಸ್ ಅಧಿಕಾರಿಯ ವಿರುದ್ಧ ಮಾತನಾಡುವ ನೀವು ಅದೇ ಐಪಿಎಸ್ ಪಾಸು ಮಾಡುವ ಸಾಮರ್ಥ್ಯ ಹೊಂದಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಇನ್ನು ಡಿ.ರೂಪರವರು ಬ್ರಾಹ್ಮಣ ಸಮುದಾಯದವರು. ಇಷ್ಟು ಕನಿಷ್ಠ ಜ್ಞಾನವಿಲ್ಲದೆ ನೀವು ಏಕೆ ಮೀಸಲಾತಿಯನ್ನು ದೂರುತ್ತೀರಿ? ಅವರು 2000ನೇ ಇಸವಿಯ ಯುಪಿಎಸ್ಸಿ ಪರೀಕ್ಷೆಯಲ್ಲಿ ಆಲ್ ಇಂಡಿಯಾ 43ನೇ ರ್ಯಾಂಕ್ ಪಡೆದಿದ್ದಾರೆ. ಸ್ವಲ್ಪ ತಿಳಿದು ನಂತರ ಟ್ವೀಟ್‌ ಮಾಡಿ ಎಂದು ವಿವೇಕ್ ಎಂಡಲಾ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲರೂ ಮೀಸಲಾತಿ ಕೊನೆಗೊಳಿಸುವುದರ ಕುರಿತು ಮಾತನಾಡುತ್ತಾರೆ. ಏಕೆ ಯಾರೋಬ್ಬರು ಜಾತಿಪದ್ದತಿ ಕೊನೆಗೊಳಿಸುವುದರ ಬಗ್ಗೆ ಮಾತನಾಡುವುದಿಲ್ಲ. ಕಂಗನಾ ಮೇಡಂ ನೀವ್ಯಾಕೆ ಮಾತನಾಡುವುದಿಲ್ಲ ಎಂದು ಚೇ ಗುವೆರಾ ಎಂಬುವವರು ಪ್ರಶ್ನಿಸಿದ್ದಾರೆ.

ನೀವು ಯಾವ ಮೀಸಲಾತಿ ಕುರಿತು ಮಾತನಾಡುತ್ತಿದ್ದೀರಿ? ನಿನ್ನೆ ಓದಿದ ವರದಿಯಲ್ಲಿ 21 ಭ್ರಷ್ಟ ಅಧಿಕಾರಿಗಳ ಪೈಕಿ ದಲಿತರ ಸಂಖ್ಯೆ ಕೇವಲ 02. ಹೀಗಿರುವಾಗ ಜಾತಿಪದ್ದತಿ ಇರುವವರೆಗೂ ಮೀಸಲಾತಿ ದಲಿತರ ಹಕ್ಕು ಎಂದು ಶರೀಫ್ ಗಬೇರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಒಟ್ಟಿನಲ್ಲಿ ಪಟಾಕಿ ನಿಷೇಧದ ವಿಷಯಕ್ಕೆ ಕಂಗನಾ ರಾಣವತ್ ತಪ್ಪು ರೀತಿಯಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸ್ವಲ್ಪವು ಪರಿಶೀಲಿಸದೇ ಮೀಸಲಾತಿ ವಿರುದ್ಧ ಮಾತನಾಡುವ ಮೂಲಕ ತಮ್ಮ ಅಹಂಕಾರವನ್ನು ಪ್ರದರ್ಶಿಸಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.


ಇದನ್ನೂ ಓದಿ; ಸಮುದಾಯಗಳ ನಡುವೆ ದ್ವೇಷ ಬಿತ್ತುವ ಆರೋಪ: ಕಂಗನಾ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...