Homeಮುಖಪುಟಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಪಟಾಕಿ ನಿಷೇಧ ಸ್ವಾಗತಿಸಿದ್ದ ಐಪಿಎಸ್ ಅಧಿಕಾರಿ ಡಿ.ರೂಪ ವಿರುದ್ಧ ಮಾತನಾಡುವ ಸಂದರ್ಭದಲ್ಲಿ ಕಂಗನಾ ರಾಣಾವತ್ ಮೀಸಲಾತಿಯನ್ನು ಎಳೆದುತಂದು ವಿವಾದಕ್ಕೀಡಾಗಿದ್ದಾರೆ.

- Advertisement -
- Advertisement -

ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧದ ಕುರಿತು ಆರಂಭವಾದ ಚರ್ಚೆ ಕೊನೆಗೆ ಇವು ಮೀಸಲಾತಿಯ ಅಡ್ಡಪರಿಣಾಮಗಳು, ಮೀಸಲಾತಿ ತೆಗೆಯಬೇಕು ಎಂಬಲ್ಲಿಗೆ ಬಂದು ತಲುಪಿವೆ. ಅದರಲ್ಲಿಯೂ ಸದಾ ವಿವಾದದಲ್ಲಿರುವ ಬಾಲಿವುಟ್‌ ನಟಿ ಕಂಗನಾ ರಾಣವತ್ ಮೀಸಲಾತಿಯ ವಿರುದ್ಧ ಟ್ವೀಟ್‌ ಮಾಡುವ ಮೂಲಕ ತೀವ್ರ ಟೀಕೆಗೆ ಒಳಗಾಗಿದ್ದಾರೆ.

ದೀಪಾವಳಿ ಸಂದರ್ಭದಲ್ಲಿ ಕೋವಿಡ್ ಹರಡುವ ಭೀತಿ ಮತ್ತು ಪರಿಸರ ಮಾಲಿನ್ಯದ ದೃಷ್ಟಿಯಿಂದ ಕೆಲ ರಾಜ್ಯಗಳು ಪಟಾಕಿ ನಿಷೇಧ ಹೇರಿದ್ದವು. ಆಗ ಕರ್ನಾಟಕದ ಐಪಿಎಸ್ ಅಧಿಕಾರಿ ಡಿ. ರೂಪರವರು “ಪಟಾಕಿ ನಿಷೇದ ಸರಿಯಾದ ಕ್ರಮ. ಇದನ್ನು ಕೆಲವರು ಹಿಂದೂ ಧರ್ಮದ ವಿರುದ್ಧ ಪಿತೂರಿ ಎನ್ನುತ್ತಿದ್ದಾರೆ. ಹಿಂದೂ ಧರ್ಮದ ಯಾವುದಾದರೂ ಪುರಾತನ ಗ್ರಂಥಗಳಲ್ಲೋ, ಶಾಸ್ತ್ರಗಳಲ್ಲೋ ಪಟಾಕಿ ಉಲ್ಲೇಖ ಇದ್ದರೆ ಕೊಡಿ, ನಾನು ಕ್ಷಮೆ ಕೇಳುತ್ತೇನೆ, ಇಲ್ಲವಾದಲ್ಲಿ ನೀವು ಕ್ಷಮೆ ಕೇಳಿ. ಸ್ವಯಂ ಹಿಂದುತ್ವವಾದಿಗಳು ಅಂದುಕೊಂಡವರು ಇತರ ಹಿಂದುಗಳನ್ನು ದಾರಿತಪ್ಪಿಸಬೇಡಿ” ಎಂದು ಫೇಸ್‌ಬುಕ್‌ನಲ್ಲಿ ದೀರ್ಘ ಪೋಸ್ಟ್ ಒಂದನ್ನು ಹಾಕಿದ್ದರು.

ಈ ಕುರಿತು ಟ್ವಿಟ್ಟರ್‌ನಲ್ಲಿ ದೀರ್ಘ ವಾದ – ವಿವಾದ ಆರಂಭವಾಗಿತ್ತು. ಆ ಸಂದರ್ಭದಲ್ಲಿ ತಮ್ಮೊಡನೆ ಅನುಚಿತವಾಗಿ ವರ್ತಿಸಿದರು ಎಂದು ಆರೋಪಿಸಿ ‘ಟ್ರು ಇಂಡೋಲಜಿ’ ಖಾತೆ ಬ್ಲಾಕ್ ಮಾಡುವಂತೆ ಡಿ. ರೂಪರವರು ದೂರು ನೀಡಿದ್ದರು. ಆ ಆಧಾರದಲ್ಲಿ ಟ್ವಿಟ್ಟರ್ ಆ ಖಾತೆಯನ್ನು ಬ್ಲಾಕ್ ಮಾಡಿತ್ತು. ಆಗ ಕೆಲವರು #BringBackTrueIndology ಎಂದು ಟ್ವಿಟ್ಟರ್ ಟ್ರೆಂಡ್ ಮಾಡಿದ್ದರು.

ಆ ಸಮಯದಲ್ಲಿ ಡಿ.ರೂಪರವರ ವಿರುದ್ಧ ಸರಣಿ ಟ್ವೀಟ್‌ಗಳನ್ನು ಮಾಡಿದ ಕಂಗನಾ ರಾಣವತ್ “ನೀವೆಲ್ಲಾ ಮೀಸಲಾತಿ ಅಡ್ಡಪರಿಣಾಮಗಳು” ಎಂದು ಮೂದಲಿಸಿದ್ದಾರೆ. ಯೋಗ್ಯರಲ್ಲದವರಿಗೆ ಅಧಿಕಾರ ದೊರೆತರೆ ಅವರು ಸಮಾಜದಲ್ಲಿನ ಗಾಯಗಳನ್ನು ಶಮನಗೊಳಿಸುವ ಬದಲು ಮತ್ತಷ್ಟು ವ್ರಣಗೊಳಿಸುತ್ತಾರೆ. ರೂಪರವರ ವೈಯಕ್ತಿಕ ಬದುಕಿನ ಬಗ್ಗೆ ನನಗೆ ಹೆಚ್ಚು ತಿಳಿದಿಲ್ಲ, ಆದರೆ ಅವರು ಅಸಾಮರ್ಥ್ಯದಿಂದಾಗಿ ಹತಾಶೆಗೊಳಗಾಗಿರುವುದಂತೂ ಖಾತ್ರಿ ಇದೆ” ಎಂದು ಟ್ವೀಟ್‌ ಮಾಡಿದ್ದರು.

ಕಂಗನಾರವರ ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಜಾತಿ ಪದ್ದತಿ, ಮೀಸಲಾತಿಯ ಬಗ್ಗೆ ಅರಿವಿರದೇ ಏಕೆ ಯಾವಾಗಲೂ ಸಂವಿಧಾನ ಮತ್ತು ಮೀಸಲಾತಿಯ ವಿರುದ್ಧ ಮಾತನಾಡುತ್ತೀರಿ? ಸರಿ ನೀವು ಎಲ್ಲಿಯವರೆಗೂ ಓದಿದ್ದೀರಿ? 16ನೇ ವಯಸ್ಸಿಗೆ ನಾವು SSLC ಓದುತ್ತಿದ್ದಾಗಲೇ ಬಾಲಿವುಡ್ ಪ್ರವೇಶಿಸಿದರೆ ಓದೋಕೆ ಸಮಯವಾದರೂ ಎಲ್ಲಿ ಸಿಗುತ್ತದೆ, ಸ್ವಲ್ಪ ಇತಿಹಾಸ ಓದಿ ಎಂದು ಕಿಡಿಕಾರಿದ್ದಾರೆ.

ಮೀಸಲಾತಿಯ ಬಗ್ಗೆ ನಿಮಗೆ ಮಾತನಾಡುವ ಹಕ್ಕಿಲ್ಲ. ಇಂದು ಮೀಸಲಾತಿ ಆಧಾರದಲ್ಲಿ ಉನ್ನತ ಹುದ್ದೆಗಳಿಗೆ ಬರುವವರು ಸಹ ಸಾಕಷ್ಟು ಪ್ರತಿಭಾವಂತರು, ಕಠಿಣ ಶ್ರಮ ಹಾಕುವವರಾಗಿದ್ದಾರೆ. ಮೀಸಲಾತಿ ಪಡೆಯುವವರ ಕಟ್‌ಆಫ್ ಅಂಕ ಕೂಡ ಸಾಮಾನ್ಯ ವರ್ಗದ ಅಭ್ಯರ್ಥಿಗಳ ಸನಿಹವೇ ಇರುತ್ತದೆ. ಅಷ್ಟಿಲ್ಲದೇ ಯಾವ ಹುದ್ದೆ ಸಹ ಪಡೆಯಲು ಸಾಧ್ಯವಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಿ. ಒಬ್ಬ ಐಪಿಎಸ್ ಅಧಿಕಾರಿಯ ವಿರುದ್ಧ ಮಾತನಾಡುವ ನೀವು ಅದೇ ಐಪಿಎಸ್ ಪಾಸು ಮಾಡುವ ಸಾಮರ್ಥ್ಯ ಹೊಂದಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಇನ್ನು ಡಿ.ರೂಪರವರು ಬ್ರಾಹ್ಮಣ ಸಮುದಾಯದವರು. ಇಷ್ಟು ಕನಿಷ್ಠ ಜ್ಞಾನವಿಲ್ಲದೆ ನೀವು ಏಕೆ ಮೀಸಲಾತಿಯನ್ನು ದೂರುತ್ತೀರಿ? ಅವರು 2000ನೇ ಇಸವಿಯ ಯುಪಿಎಸ್ಸಿ ಪರೀಕ್ಷೆಯಲ್ಲಿ ಆಲ್ ಇಂಡಿಯಾ 43ನೇ ರ್ಯಾಂಕ್ ಪಡೆದಿದ್ದಾರೆ. ಸ್ವಲ್ಪ ತಿಳಿದು ನಂತರ ಟ್ವೀಟ್‌ ಮಾಡಿ ಎಂದು ವಿವೇಕ್ ಎಂಡಲಾ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲರೂ ಮೀಸಲಾತಿ ಕೊನೆಗೊಳಿಸುವುದರ ಕುರಿತು ಮಾತನಾಡುತ್ತಾರೆ. ಏಕೆ ಯಾರೋಬ್ಬರು ಜಾತಿಪದ್ದತಿ ಕೊನೆಗೊಳಿಸುವುದರ ಬಗ್ಗೆ ಮಾತನಾಡುವುದಿಲ್ಲ. ಕಂಗನಾ ಮೇಡಂ ನೀವ್ಯಾಕೆ ಮಾತನಾಡುವುದಿಲ್ಲ ಎಂದು ಚೇ ಗುವೆರಾ ಎಂಬುವವರು ಪ್ರಶ್ನಿಸಿದ್ದಾರೆ.

ನೀವು ಯಾವ ಮೀಸಲಾತಿ ಕುರಿತು ಮಾತನಾಡುತ್ತಿದ್ದೀರಿ? ನಿನ್ನೆ ಓದಿದ ವರದಿಯಲ್ಲಿ 21 ಭ್ರಷ್ಟ ಅಧಿಕಾರಿಗಳ ಪೈಕಿ ದಲಿತರ ಸಂಖ್ಯೆ ಕೇವಲ 02. ಹೀಗಿರುವಾಗ ಜಾತಿಪದ್ದತಿ ಇರುವವರೆಗೂ ಮೀಸಲಾತಿ ದಲಿತರ ಹಕ್ಕು ಎಂದು ಶರೀಫ್ ಗಬೇರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಒಟ್ಟಿನಲ್ಲಿ ಪಟಾಕಿ ನಿಷೇಧದ ವಿಷಯಕ್ಕೆ ಕಂಗನಾ ರಾಣವತ್ ತಪ್ಪು ರೀತಿಯಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸ್ವಲ್ಪವು ಪರಿಶೀಲಿಸದೇ ಮೀಸಲಾತಿ ವಿರುದ್ಧ ಮಾತನಾಡುವ ಮೂಲಕ ತಮ್ಮ ಅಹಂಕಾರವನ್ನು ಪ್ರದರ್ಶಿಸಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.


ಇದನ್ನೂ ಓದಿ; ಸಮುದಾಯಗಳ ನಡುವೆ ದ್ವೇಷ ಬಿತ್ತುವ ಆರೋಪ: ಕಂಗನಾ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...