Homeಮುಖಪುಟವಿರೋಧದ ನಡುವೆಯೂ ಎನ್‌ಪಿಆರ್ ಪ್ರಶ್ನಾವಳಿ ಅಂತಿಮಗೊಳಿಸಲಾಗುತ್ತಿದೆ: ಮಾಹಿತಿ ನೀಡಿದ ಆರ್‌ಜಿಐ!

ವಿರೋಧದ ನಡುವೆಯೂ ಎನ್‌ಪಿಆರ್ ಪ್ರಶ್ನಾವಳಿ ಅಂತಿಮಗೊಳಿಸಲಾಗುತ್ತಿದೆ: ಮಾಹಿತಿ ನೀಡಿದ ಆರ್‌ಜಿಐ!

ಕಳೆದ ವರ್ಷ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ದೇಶಾದ್ಯಂತ ಬೃಹತ್ ಹೋರಾಟಗಳು ನಡೆದರೂ, ಸರ್ಕಾರ ಜಾರಿಗೊಳಿಸುವುದಾಗಿ ನಿಶ್ಚಯಿಸಿತ್ತು. ಆದರೆ ಕೊರೊನಾ ಅವೆಲ್ಲವೂಗಳಿಗೂ ವಿರಾಮ ನೀಡಿತ್ತು.

- Advertisement -
- Advertisement -

ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ (ಆರ್‌ಜಿಐ) ಕಚೇರಿಯು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯ (ಎನ್‌ಪಿಆರ್) ವೇಳಾಪಟ್ಟಿ ಅಥವಾ ಪ್ರಶ್ನಾವಳಿಯನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಹೇಳಿದೆ. 2021 ರ ಜನಗಣತಿಯ ಮೊದಲ ಹಂತದ ನಿರೀಕ್ಷಿತ ದಿನಾಂಕದ ಬಗ್ಗೆ ಮಾಹಿತಿ ’ಲಭ್ಯವಿಲ್ಲ’ ಎಂದು ತಿಳಿಸಿದೆ.

ಜನಗಣತಿ 2021 ರ ಮೊದಲ ಹಂತದ ನಿರೀಕ್ಷಿತ ದಿನಾಂಕ ಮತ್ತು ಎನ್‌ಪಿಆರ್ ನವೀಕರಣದ ಬಗ್ಗೆ ಮಾಹಿತಿ ಕೋರಿ ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ದಿ ಹಿಂದೂ ಸಲ್ಲಿಸಿದ ಅರ್ಜಿಗೆ ಆರ್‌ಜಿಐ ಪ್ರತಿಕ್ರಿಯೆ ನೀಡಿದೆ. ಈ ಮೊದಲು 2020 ಏಪ್ರಿಲ್ 1ರಿಂದ ಜನಗಣತಿ ಪ್ರಾರಂಭವಾಗಬೇಕಿತ್ತು. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಮಾರ್ಚ್ 25 ರಂದು ಮುಂದಿನ ಆದೇಶದವರೆಗೆ ಅನಿರ್ದಿಷ್ಟವಾಗಿ ಮುಂದೂಡಲಾಗಿತ್ತು.

ಎನ್‌ಪಿಆರ್ ನವೀಕರಣ ಮತ್ತು ಮೊದಲ ಹಂತದ ಜನಗಣತಿಯ ಮನೆ ಪಟ್ಟಿ ಮತ್ತು ವಸತಿ ಗಣತಿಯನ್ನು ಏಪ್ರಿಲ್-ಸೆಪ್ಟೆಂಬರ್‌ನಿಂದ ಏಕಕಾಲದಲ್ಲಿ ನಡೆಸಬೇಕಾಗಿತ್ತು. ಆದರೆ, ಏಪ್ರಿಲ್ 1ರಂದು ಮೊದಲ ಹಂತದಲ್ಲಿ ಮೇಘಾಲಯ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ ಮತ್ತು ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಪ್ರದೇಶದಲ್ಲಿ ಗಣತಿ ನಡೆಯಬೇಕಿತ್ತು. ಆದರೂ ಹಿಂದೂ ಸಲ್ಲಿಸಿದ್ದ ಆರ್‌ಟಿಐಗೆ ನವೆಂಬರ್ 17 ರಂದು ಉತ್ತರಿಸಿರುವ ಆರ್‌ಜಿಐ ಇನ್ನೂ “ಎನ್‌ಪಿಆರ್ ವೇಳಾಪಟ್ಟಿ ಅಂತಿಮಗೊಳಿಸಲಾಗುತ್ತಿದೆ” ಎಂದು ಉತ್ತರಿಸಿದೆ.

ಇದನ್ನೂ ಓದಿ: ಜನಗಣತಿ ಮತ್ತು NPR ಪ್ರತ್ಯೇಕವಾಗಿರಲಿ: ಕೇಂದ್ರಕ್ಕೆ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳಿಂದ ಪತ್ರ

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಿಂದಾಗಿ ಎನ್‌ಪಿಆರ್ ನವೀಕರಣವನ್ನು 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿರೋಧಿಸಿವೆ. 2003ರಲ್ಲಿ ರೂಪಿಸಲಾದ ಪೌರತ್ವ ನಿಯಮಗಳ ಪ್ರಕಾರ, ಭಾರತೀಯ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಐಸಿ) ಅಥವಾ ಎನ್‌ಆರ್‌ಸಿಗೆ ಎನ್‌ಪಿಆರ್ ಮೊದಲ ಹೆಜ್ಜೆಯಾಗಿದೆ.

2010ರಲ್ಲಿ ಎನ್‌ಪಿಆರ್ ಮೊದಲ ಬಾರಿಗೆ ಸಂಗ್ರಹಿಸಲಾಯಿತು, ನಂತರ 2015 ರಲ್ಲಿ ಎನ್‌ಪಿಆರ್ ನವೀಕರಿಸಲಾಯಿತು. ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನದಂತಹ ಕೆಲವು ರಾಜ್ಯಗಳು ಹೊಸ ಎನ್‌ಪಿಆರ್‌ನಲ್ಲಿ ಕೇಳಲಾದ ಹೆಚ್ಚುವರಿ ಪ್ರಶ್ನೆಗಳಿಗೆ ಆಕ್ಷೇಪ ವ್ಯಕ್ತಪಡಿಸಿವೆ. ಉದಾಹರಣೆಗೆ “ತಂದೆ ಮತ್ತು ತಾಯಿಯ ಹುಟ್ಟಿದ ದಿನಾಂಕ ಮತ್ತು ಹುಟ್ಟಿದ ಸ್ಥಳ, ಕೊನೆಯ ವಾಸಸ್ಥಳ ಮತ್ತು ಮಾತೃಭಾಷೆ” ಈ ಪ್ರಶ್ನೆಗಳಿಗೆ ಹಲವು ರಾಜ್ಯಗಳು ಆಕ್ಷೇಪಿಸಿವೆ.

2019 ರಲ್ಲಿ, ಟ್ರಯಲ್ ಎನ್‌ಪಿಆರ್ ಫಾರ್ಮ್ 21 ಮಾನದಂಡಗಳಲ್ಲಿ 30 ಲಕ್ಷ ಜನರಿಂದ “ತಂದೆ ಮತ್ತು ತಾಯಿಯ ಹುಟ್ಟಿದ ಸ್ಥಳ, ಕೊನೆಯ ವಾಸಸ್ಥಳ” ಕುರಿತು ನಿರ್ದಿಷ್ಟ ವಿವರಗಳನ್ನು ಕೋರಿ ಆಧಾರ್ (ಐಚ್ಛಿಕ) , ಮತದಾರರ ಗುರುತಿನ ಚೀಟಿ, ಮೊಬೈಲ್ ಫೋನ್ ಮತ್ತು ಚಾಲನಾ ಪರವಾನಗಿ ಸಂಖ್ಯೆಗಳ ವಿವರಗಳನ್ನು ಸಂಗ್ರಹಿಸಿದೆ. 2010 ಮತ್ತು 2015 ರಲ್ಲಿ, ಎನ್‌ಪಿಆರ್ 14 ಮಾನದಂಡಗಳಲ್ಲಿ ವಿವರಗಳನ್ನು ಸಂಗ್ರಹಿಸಿತ್ತು.

ಇದನ್ನೂ ಓದಿ: ಗಾಂಧಿ ನೆನಪಿನಲ್ಲಿ ರಾಜ್ಯದ್ಯಂತ ಉಪವಾಸ ಸತ್ಯಾಗ್ರಹ : NPR ಜಾರಿಗೊಳಿಸದಂತೆ ತಡೆಯುವ ಪ್ರತಿಜ್ಞೆ

“ಜನನ, ಮರಣ ಮತ್ತು ವಲಸೆಯ ಕಾರಣದಿಂದಾಗಿ ಆಗುವ ಬದಲಾವಣೆಗಳನ್ನು ಸಂಯೋಜಿಸಲು” ಮತ್ತು “ಆಧಾರ್ ವೈಯಕ್ತಿಕ ದತ್ತಾಂಶ ಆದರೆ ಎನ್‌ಪಿಆರ್ ಕುಟುಂಬವಾರು ದತ್ತಾಂಶವನ್ನು ಒಳಗೊಂಡಿರುತ್ತದೆ” ಎಂದು ಗೃಹ ಸಚಿವಾಲಯ ಎನ್‌ಪಿಆರ್ ಅನ್ನು ನವೀಕರಿಸುವ ಅವಶ್ಯಕತೆಯಿದೆ ಎಂದು ಈ ವರ್ಷದ ಆರಂಭದಲ್ಲಿ ಸಂಸದೀಯ ಸಮಿತಿಗೆ ತಿಳಿಸಿತು.

ಕೇಂದ್ರ ಸರ್ಕಾರ 2021ರ ಜನಗಣತಿ ಮತ್ತು ರಾಷ್ಟ್ರೀಯ ಜನಗಣತಿ ನೊಂದಣಿ (ಎನ್‌ಪಿಆರ್) ಪಕ್ರಿಯೆಗಳನ್ನು ಒಟ್ಟಿಗೆ ನಡೆಸಲು ನಿಶ್ಚಯಿಸಿರುವುದು ಹಲವು ವಲಯಗಳಿಂದ ಟೀಕೆಗೆ ಗುರಿಯಾಗಿದೆ. ಎನ್‌ಪಿಆರ್ ಪ್ರಕ್ರಿಯೆಯು ಎನ್‌ಆರ್‌ಸಿ (ರಾಷ್ಟ್ರೀಯ ನಾಗರಿಕರ ನೋಂದಣಿ) ಪ್ರಕ್ರಿಯೆಗೆ ಪೂರ್ವಭಾವಿ ಅಭ್ಯಾಸ ಎಂದು ಹಲವು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆಗಳು ದಾಖಲಾಗಿದ್ದವು. ಬೃಹತ್ ಹೋರಾಟಗಳು ಭುಗಿಲೆದ್ದರು ಸರ್ಕಾರ ಜಾರಿಗೊಳಿಸುವುದಾಗಿ ನಿಶ್ಚಯಿಸಿತ್ತು. ಆದರೆ ಕೊರೊನಾ ಅವೆಲ್ಲವೂಗಳಿಗೂ ವಿರಾಮ ನೀಡಿದೆ.

ಮಹಾತ್ಮ ಗಾಂಧೀಜಿಯವರು ನಡೆಸಿದ ದಂಡಿ (ಉಪ್ಪಿನ) ಸತ್ಯಾಗ್ರಹದ 90ನೇ ವರ್ಷಾಚರಣೆಯ ಸ್ಫೂರ್ತಿಯಲ್ಲಿ ಸಂವಿಧಾನ ಹಾಗೂ ಪೌರತ್ವದ ಹಕ್ಕುಗಳನ್ನು ಉಳಿಸಿಕೊಳ್ಳಲು ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಿ, NPR ಜಾರಿಗೊಳಿಸದಂತೆ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಲಾಗಿತ್ತು.


ಇದನ್ನೂ ಓದಿ: ನಿರ್ಣಾಯಕ ಹಂತದತ್ತ ಎನ್‌ಪಿಆರ್ ಹೋರಾಟ: ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...