Homeಮುಖಪುಟ'ಕರಾಚಿ ಸ್ವೀಟ್ಸ್'‌ ಅಂಗಡಿ ಹೆಸರು ಬದಲಿಸುವಂತೆ ಶಿವಸೇನೆ ಮುಖಂಡನ ಧಮಕಿ!

‘ಕರಾಚಿ ಸ್ವೀಟ್ಸ್’‌ ಅಂಗಡಿ ಹೆಸರು ಬದಲಿಸುವಂತೆ ಶಿವಸೇನೆ ಮುಖಂಡನ ಧಮಕಿ!

ಘಟನೆ ನಡೆದ ಬಳಿಕ ಬೆದರಿಕೆ ಮಣಿದ ಅಂಗಡಿ ಮಾಲೀಕ 'ಕರಾಚಿ' ಎನ್ನುವ ಅಕ್ಷರಗಳು ಕಾಣಿಸದಂತೆ ಪೇಪರ್‌ನಿಂದ ಮುಚ್ಚಿದ್ದಾರೆ.

- Advertisement -
- Advertisement -

‘ಕರಾಚಿ ಸ್ವೀಟ್ಸ್‌ ಅಂಗಡಿ’ಯ ಹೆಸರನ್ನು ಬದಲಾಯಿಸುವಂತೆ ಶಿವಸೇನೆಯ ಮುಖಂಡ ನಿತಿನ್ ನಂದಗಾಂವ್ಕರ್ ಅಂಗಡಿ ಮಾಲೀಕನನ್ನು ಒತ್ತಾಯಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಕರಾಚಿ ಎನ್ನುವುದು ಪಾಕಿಸ್ತಾನದ ಒಂದು ಸ್ಥಳದ ಹೆಸರಾಗಿದೆ. ಹಾಗಾಗಿ ಇದನ್ನು ಬದಲಾಯಿಸಿ, ಮರಾಠಿಯಲ್ಲಿ ಯಾವುದಾದರೂ ಹೆಸರಿಡುವಂತೆ ಶಿವಸೇನೆ ಮುಖಂಡ ಒತ್ತಾಯಿಸುತ್ತಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಎಎನ್‌ಐ, “ಶಿವಸೇನೆಯ ಮುಖಂಡ ನಿತಿನ್ ನಂದಗಾಂವ್ಕರ್ ಅವರ ವೀಡಿಯೋ ವೈರಲ್ ಆಗುತ್ತಿದ್ದು, ಇದರಲ್ಲಿ ಕರಾಚಿ ಎನ್ನುವ ಪದವನ್ನು ಬದಲಾಯಿಸುವಂತೆ ಪಶ್ಚಿಮ ಬಾಂದ್ರಾದಲ್ಲಿರುವ ಸ್ವೀಟ್ಸ್‌ ಅಂಗಡಿಯ ಮಾಲೀಕರನ್ನು ಒತ್ತಾಯಿಸುತ್ತಿದ್ದಾರೆ. ‘ನೀವು ಇದನ್ನು ಮಾಡಲೆಬೇಕು. ನಾವು ನಿಮಗೆ ಕಾಲಾವಕಾಶ ನೀಡುತ್ತೇವೆ. ‘ಕರಾಚಿ’ಗೆ ಬದಲಾಗಿ ಮರಾಠಿಯಲ್ಲಿ ಬೇರೆ ಯಾವುದಾದರೂ ಹೆಸರಿಡಿ’ ಎಂದು ನಿತಿನ್ ವೀಡಿಯೋದಲ್ಲಿ ಹೇಳುತ್ತಿರುವುದು ದಾಖಲಾಗಿದೆ” ಎಂದು ವರದಿ ಮಾಡಿದೆ.

ಇದನ್ನೂ ಓದಿ: ಡಿಸೆಂಬರ್ 7 ರಿಂದ 15 ರವರೆಗೆ ಚಳಿಗಾಲದ ಅಧಿವೇಶನ; ಈ ಬಾರಿಯೂ ರಾಜಧಾನಿಯಲ್ಲೇ ನಡೆಸಲು…


ಈ ಕುರಿತು ಮುಂಬೈ ಮಿರರ್ ವರದಿ ಮಾಡಿ ಈ ವೀಡಿಯೋವನ್ನು ಹಂಚಿಕೊಂಡಿದ್ದು, ಇದರಲ್ಲಿ “ನಿಮಗೆ ಬೇಕಾದ ಹೆಸರಿಗೆ ಅದನ್ನು ಬದಲಾಯಿಸಿ, ಆದರೆ ಅದರಿಂದ ‘ಕರಾಚಿ’ ಪದವನ್ನು ತೆಗೆದುಹಾಕಿ. ನಾನು ಆ ಪದವನ್ನು ದ್ವೇಷಿಸುತ್ತೇನೆ ಮತ್ತು ಪಾಕಿಸ್ತಾನಕ್ಕೆ ಸಂಬಂಧಿಸಿದ ಯಾವುದೇ ಹೆಸರನ್ನು ಮುಂಬೈನಲ್ಲಿ ಬಳಸಲು ಅನುಮತಿಸುವುದಿಲ್ಲ. ಏಕೆಂದರೆ ಅದು ಭಯೋತ್ಪಾದನೆಯನ್ನು ಉತ್ತೇಜಿಸುವ ದೇಶ” ಎಂದು ನಂದಗಾಂವ್ಕರ್ ಹೇಳುವುದನ್ನು ಕೇಳಬಹುದು.

ಘಟನೆ ನಡೆದ ಬಳಿಕ ಬೆದರಿಕೆ ಮಣಿದ ಅಂಗಡಿ ಮಾಲೀಕ ‘ಕರಾಚಿ’ ಎನ್ನುವ ಅಕ್ಷರಗಳು ಕಾಣಿಸದಂತೆ ಪೇಪರ್‌ನಿಂದ ಮುಚ್ಚಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಪಾಕ್ ಹೆಸರುಗಳನ್ನು ದ್ವೇಷಿಸುವ ಪರಿಪಾಠ ಆರಂಭವಾಗಿರುವುದರಿ ಸೂಚನೆ ಇದಾಗಿದೆ. ಪ್ರಸಿದ್ದ ತಿನಿಸು ಮೈಸೂರ್ ಪಾಕ್‌ ನಲ್ಲಿಯೂ ಸಹ ಸದ್ಯದಲ್ಲಿಯೇ ಪಾಕ್ ತೆಗೆಸಲಿದ್ದಾರೆ ಎಂದು ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದನ್ನು ನಾವಿಲ್ಲ ಸ್ಮರಿಸಬಹುದು.


ಇದನ್ನೂ ಓದಿ: 10 ಕೊಟಿ ದಂಡ ಪಾವತಿಸಿದ ಜಯಲಲಿತ ಆಪ್ತೆ ಶಶಿಕಲಾ; ಜನವರಿಯಲ್ಲಿ ಬಿಡುಗಡೆ ಸಾಧ್ಯತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...